ವಿಜಯಪುರ | ನಾನಾ ಬೇಡಿಕೆ ಈಡೇರಿಕೆಗೆ ಆಗ್ರಹಿಸಿ ಆಶಾ ಕಾರ್ಯಕರ್ತೆಯರ ಸಂಘ ಪ್ರತಿಭಟನೆ

Date:

ಕನಿಷ್ಠ 10 ಸಾವಿರ ರೂ. ಗೌರವಧನ ಸೇರಿದಂತೆ ನಾನಾ ಬೇಡಿಕೆಗಳ ಈಡೇರಿಕೆಗೆ ಆಗ್ರಹಿಸಿ ರಾಜ್ಯ ಸಂಯುಕ್ತ ಆಶಾ ಕಾರ್ಯಕರ್ತೆಯರ ಸಂಘದ ನೇತೃತ್ವದಲ್ಲಿ ವಿಜಯಪುರದಲ್ಲಿ ಧರಣಿ ನಡೆಸಲಾಯಿತು.

ನಗರದ ಡಾ.ಬಿ.ಆ‌ರ್.ಅಂಬೇಡ್ಕರ್ ವೃತ್ತದಲ್ಲಿ ಹಮ್ಮಿಕೊಂಡ ಧರಣಿಯಲ್ಲಿ ನೂರಾರು ಆಶಾ ಕಾರ್ಯಕರ್ತೆಯರು ಭಾಗವಹಿಸಿ ಬೇಡಿಕೆ ಈಡೇರಿಸುವಂತೆ ಘೋಷಣೆ ಕೂಗಿದರು.

ಎಐಕೆಕೆಎಂಎಸ್ ಸಂಘಟನೆ ರಾಜ್ಯ ಕಾರ್ಯದರ್ಶಿ ಬಿ.ಭಗವಾನ್ ರೆಡ್ಡಿ ಮಾತನಾಡಿ, “ಕಳೆದ ಜನವರಿ ತಿಂಗಳಲ್ಲಿ ಬೆಂಗಳೂರಿನಲ್ಲಿ ಹೋರಾಟ ನಡೆಸಿದಾಗ ಕನಿಷ್ಠ 10 ಸಾವಿರ ರೂ.ಗೌರವದ ಗ್ಯಾರಂಟಿ ಕೊಡುತ್ತೇವೆ. ಬಜೆಟ್‌ನಲ್ಲೂ ಘೋಷಣೆ ಮಾಡುವುದಾಗಿ ಸರಕಾರ ಭರವಸೆ ನೀಡಿತ್ತು. ಈವರೆಗೂ ಈಡೇರಿಸಿಲ್ಲ.” ಎಂದು ದೂರಿದರು. “ಗ್ರಾಮೀಣ ಪ್ರದೇಶದಲ್ಲಿ ಆರೋಗ್ಯ ಸೇವೆಯಲ್ಲಿರುವ ಆಶಾ ಕಾರ್ಯ ಕರ್ತೆಯರಿಗೆ ಸರಕಾರ ಕೊಟ್ಟ ಮಾತಿನಂತೆ ನಡೆದುಕೊಳ್ಳಬೇಕು. ಇಲ್ಲದಿದ್ದರೆ ರಾಜ್ಯವ್ಯಾಪಿ ಹೋರಾಟ ತೀವ್ರಗೊಳಿಸಲಾಗುವುದು” ಎಂದು ಆಕ್ರೋಶ ವ್ಯಕ್ತಪಡಿಸಿದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ಜಿಲ್ಲಾ ಮುಖಂಡ ಭರತ್‌ ಕುಮಾರ್ ಎಚ್ ಟಿ ಮಾತನಾಡಿ,‌ “ರಾಜ್ಯ ಹಾಗೂ ಕೇಂದ್ರ ಸರಕಾರಗಳು ‘ದುಡಿಯುವ ವರ್ಗದ ಹಿತಾಸಕ್ತಿ ಕಾಪಾಡುತ್ತಿಲ್ಲ. ಆಶಾ ಕಾರ್ಯಕರ್ತೆಯರಿಗೆ ನ್ಯಾಯಯುತವಾಗಿ 10 ಸಾವಿರ ರೂ. ಕನಿಷ್ಠ ವೇತನ ಕೂಡಲೇ ಜಾರಿಗೊಳಿಸಬೇಕು” ಎಂದರು.

ಇದನ್ನೂ ಓದಿ: ವಿಜಯಪುರ | ಶಿಥಿಲಗೊಂಡಿರುವ ಬಂಗಾರ ಗುಂಡಿಯ ಸರ್ಕಾರಿ ಶಾಲೆ: ಜೀವ ಭಯದಲ್ಲಿ ಶಿಕ್ಷಕರು, ವಿದ್ಯಾರ್ಥಿಗಳು!

ಜಿ ಜಿ ಗಾಂಧಿ ಮಾತನಾಡಿ, “ಒಂದು ಕುಟುಂಬ ಜೀವನ ನಿರ್ವಹಿಸಲು ಕನಿಷ್ಠ 25,000 ರೂ. ಅವಶ್ಯ ಇದೆ. ಆದರೆ, ಗ್ರಾಮೀಣ ಪ್ರದೇಶದಲ್ಲಿ ವೈದ್ಯರಂತೆ ಪ್ರಥಮ ಚಿಕಿತ್ಸೆ ಮಾಡುತ್ತ ಕಾರ್ಯ ನಿರ್ವಹಿಸುತ್ತಿರುವ ಆಶಾ ಕಾರ್ಯಕರ್ತೆಯರಿಗೆ ಕನಿಷ್ಠ ಪ್ರೋತ್ಸಾಹ ಧನ ಕೊಡುತ್ತಿಲ್ಲ. ಹೆಚ್ಚು ಕೆಲಸ ತೆಗೆದುಕೊಂಡು ಕನಿಷ್ಠ ವೇತನ ನೀಡದ ಸರಕಾರದ ಕ್ರಮ ಖಂಡನೀಯ” ಎಂದರು.

ಧರಣಿಯಲ್ಲಿ ಯುವಜನ ಸಂಘಟನೆಯ ರಾಜ್ಯ ಕಾರ್ಯದರ್ಶಿ ಸಿದ್ದಲಿಂಗಬಾಗೇವಾಡಿ, ಶಿವಬಾಳಮ್ಮ ಕೊಂಡಗುಳಿ, ಶಿವರಂಜಿನಿ, ಆಶಾ ಕಾರ್ಯಕರ್ತೆಯರಾದ ನಿರ್ಮಲಾ, ಜಯಶ್ರೀ ಕುಂಬಾರ, ಮೆಹರುನ್ನಿಸಾ ಜಬನೂರು, ಮಲ್ಲಮ್ಮ, ರೇಣುಕಾ ಕಲಗುಟಕರ, ಲಕ್ಷ್ಮೀ ಸೀಮೆಕೇರಿ ಇತರರು ಇದ್ದರು.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಸಿಂಧನೂರು | ರೀಲ್ಸ್ ಮಾಡಲು ಹೋದ ಯುವಕ ನೀರು ಪಾಲು

ರೀಲ್ಸ್ ಮಾಡುವ ಉದ್ದೇಶದಿಂದ ಸ್ನೇಹಿತರಿಗೆ ವಿಡಿಯೋ ಮಾಡಲು ಹೇಳಿ ಈಜಲು ನದಿಗೆ...

ಗದಗ | ಆದ್ಯ ವಚನಕಾರ ದೇವರ ದಾಸಿಮಯ್ಯ: ರಾಘವೇಂದ್ರ ಕೊಪ್ಪಳ

"ಆದ್ಯ ವಚನಕಾರ ನೇಕಾರ ಸಂತ ದೇವರ ದಾಸಿಮಯ್ಯನವರು 10 ನೇ ಶತಮಾನದಲ್ಲಿ...

ಮಾರ್ಚ್ 25ರಂದು ಬೆಂಗಳೂರಿನ ಫ್ರೀಡಂ ಪಾರ್ಕ್ನಲ್ಲಿ ಬಲಗೈ ಜಾತಿಗಳ ಬೃಹತ್ ಹೋರಾಟ

ಬಾಗೇಪಲ್ಲಿ:-ಕರ್ನಾಟಕ ರಾಜ್ಯ ಬಲಗೈ ಜಾತಿಗಳ ಮಹಾ ಒಕ್ಕೂಟದ ವತಿಯಿಂದ ಒಳ ಮೀಸಲಾತಿ...

ಯುಪಿಎಸ್ಸಿ ರ‍್ಯಾಂಕ್‌ ವಿಜೇತ ವರುಣ್ ಗೌಡಗೆ ಸನ್ಮಾನ

ಕೋಲಾರ: ಯುಪಿಎಸ್ಸಿ ಪರೀಕ್ಷೆಯಲ್ಲಿ 462 ನೇ ರ‍್ಯಾಂಕ್‌ ಪಡದ ತಾಲೂಕಿನ ತ್ಯಾವನಹಳ್ಳಿ...