ವಿಜಯಪುರ | ಎಸ್‌ಡಿಪಿಐ ನೂತನ ಜಿಲ್ಲಾಧ್ಯಕ್ಷರಾಗಿ ಅತಾವುಲ್ಲಾ ದ್ರಾಕ್ಷಿ ಆಯ್ಕೆ

Date:

ವಿಜಯಪುರ ಜಿಲ್ಲೆಯ ಸೋಶಿಯಲ್ ಡೆಮಾಕ್ರಟಿಕ್ ಪಾರ್ಟಿ ಆಫ್ ಇಂಡಿಯಾ ಪಕ್ಷದ 2024-27ರ ಅವಧಿಗೆ ಜಿಲ್ಲೆಯ ನೂತನ ಅಧ್ಯಕ್ಷರಾಗಿ ಅತಾವುಲ್ಲಾ ದ್ರಾಕ್ಷಿ ಅವರು ಆಯ್ಕೆಯಾದರು.

ಇನ್ನು ಎಸ್‌ಡಿಪಿಐ ಉಪಾಧ್ಯಕ್ಷರಾಗಿ ಸಮೀರ್ ಹುಣಸಗಿ ಮತ್ತು ನಾಜಿಯಾ ಮುಲ್ಲಾ , ಜಿಲ್ಲಾ ಪ್ರಧಾನ  ಕಾರ್ಯದರ್ಶಿಗಳಾಗಿ ನಿಸಾರ್ ಅಹ್ಮದ್ ಮನಿಯಾರ್ ಮತ್ತು ಮೆಹಬೂಬ್ ಕೋಲಾರ್ , ಕಾರ್ಯದರ್ಶಿಯಾಗಿ ಅಡ್ವೋಕೇಟ್ ಸಮೀಉಲ್ಲಾ ಬಡೇಘರ್ , ಕೋಶಾಧಿಕಾರಿಯಾಗಿ ಇಸಾಕ್  ಸಯ್ಯದ್ ಹಾಗೂ ಸಮಿತಿ ಸದಸ್ಯರುಗಳಾಗಿ ಅಡ್ವೋಕೇಟ್ ಗೌಸ್ ಜಕಾತಿ, ಎಜಾಜ್ ಮನಿಯಾರ್, ಮುನಾಫ್ ಪಠಾಣ, ಸೈಫನ್ ಮುಲ್ಲಾ, ಉಮರಖಾನ್ ಪಠಾಣ್ , ಯಾಸಿರ್ ಇನಾಮದಾರ್, ನಾಮನಿರ್ದೇಶಿತ ಸದಸ್ಯರಾಗಿ ಉಮರ್ ಪುಣೇಕರ್ ರವರು ಆಯ್ಕೆಯಾದರು.

ಪಕ್ಷದ ವಿಜಯಪುರ ಜಿಲ್ಲಾ ಕಚೇರಿಯಲ್ಲಿ ನಡೆದ ಸಭೆಯನ್ನುದ್ದೇಶಿಸಿ ಮಾತನಾಡಿದ ರಾಜ್ಯ ಪ್ರಧಾನ ಕಾರ್ಯದರ್ಶಿ ಆಫ್ಸರ್ ಕೊಡ್ಲಿಪೇಟೆ, ಬಾಗಲಕೋಟೆಯ ಜಮಖಂಡಿಯಲ್ಲಿ ನಡೆದಿದ್ದ ಬಂದೂಕು ತರಬೇತಿಗೆ ಸಂಬಂಧಿಸಿದಂತೆ ಕೇವಲ 27 ಜನರ ವಿರುದ್ಧ FIR ದಾಖಲಿಸಿ ಕೈ ತೊಳೆದುಕೊಂಡಿರುವ ಸರ್ಕಾರ ಯಾಕೆ ಈ ಪ್ರಕರಣವನ್ನು NIA ತನಿಖೆ ವಹಿಸಿಲ್ಲ? ಬಂದೂಕು ತರಬೇತಿಯಂತಹ ಶಿಬಿರದ ಮೂಲಕ ಭಯವನ್ನು ಹುಟ್ಟಿಸುವ ಕೆಲಸ ನಡೆಯುತ್ತಿದ್ದರೂ ಗೃಹ ಇಲಾಖೆ ಏನು ಮಾಡುತ್ತಿದೆ? ಎಂದು ಪ್ರಶ್ನಿಸಿದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ಸನಾತನ ಸಂಸ್ಥೆಯ ಕಾರ್ಯಕರ್ತರು 2017ರ ಸೆಪ್ಟೆಂಬರ್ 5 ರಂದು ದಿಟ್ಟ ಪತ್ರಕರ್ತೆಯಾಗಿದ್ದ ಗೌರಿ ಲಂಕೇಶರನ್ನು ಗುಂಡಿಕ್ಕಿ ಹತ್ಯೆಗೈದಿದ್ದ ಪ್ರಕರಣದ ಪ್ರಮುಖ ಆರೋಪಿ ಪರಶುರಾಮ್ ವಾಗ್ಮೋರೆಗೆ ಇದೇ ರೀತಿಯ ಬಂದೂಕು ತರಬೇತಿ ನೀಡಲಾಗಿತ್ತು ಎಂದು SIT ತನಿಖೆಯಿಂದ ತಿಳಿದುಬಂದಿದೆ. ಈತ ವಿಚಾರವಾದಿ ನರೇಂದ್ರ ದಾಬೋಲ್ಕರ್ ರನ್ನು ಗುಂಡಿಕ್ಕಿ ಕೊಂದ ಪ್ರಮುಖ ಆರೋಪಿ ಕೂಡ ಆಗಿದ್ದಾನೆ. ಇವನಿಗೂ ಈಗ ಬಂದೂಕು ತರಬೇತಿ ನೀಡುತ್ತಿರುವವರಿಗೂ ಸಂಬಂಧವಿದೆಯೇ ಎಂಬ ಬಗ್ಗೆ ಪೊಲೀಸ್‌ ಇಲಾಖೆ ಉನ್ನತ ಮಟ್ಟದ ತನಿಖೆ ಮಾಡಬೇಕು. ಗೌರಿ ಲಂಕೇಶ್ ಕೊಲೆ ಪ್ರಕರಣದ ಆರೋಪಿಗಳಿಗೆ  ಜಾಮೀನು ಮಂಜೂರುಗೊಳಿಸಿರುವುದು ಸ್ವೀಕಾರಾರ್ಹವಲ್ಲ. ಜನಪರ ಹೋರಾಟಗಾರರ ಸಾಲು ಸಾಲು ಜಾಮೀನು ಅರ್ಜಿಗಳು ಧೂಳು ಮುಕ್ಕುತ್ತಿವೆ. ಆದರೆ ಗೌರಿಹತ್ಯೆ ಆರೋಪಿಗಳಿಗೆ ಸುಲಭದಲ್ಲಿ ಜಾಮೀನು ದೊರಕುತ್ತಿರುವುದು ವಿಷಾದನೀಯ. ಗೌರಿಹತ್ಯೆ ಆರೋಪಿಗಳಿಗೆ ನೀಡಿರುವ ಜಾಮೀನು ಇವರಲ್ಲಿ ಇನ್ನಷ್ಟು ಕೊಲೆಗಳನ್ನು ನಡೆಸಲು ಧೈರ್ಯ ನೀಡಿದಂತಾಗುತ್ತದೆ ಹಾಗಾಗಿ ಜಾಮೀನು ರದ್ದು ಮಾಡಬೇಕು ಎಂದು ಆಗ್ರಹಿಸಿದರು.

ಈ ಸುದ್ದಿ ಓದಿದ್ದೀರಾ?: ವಿಜಯಪುರ | ತೋಟಗಾರಿಕಾ ಬೆಳೆಗಳ ತ್ವರಿತ ಸಾಗಣೆಗೆ ರೈಲುಸೇವೆ ಒದಗಿಸಲು ಸಚಿವ ವಿ. ಸೋಮಣ್ಣಗೆ ಮನವಿ

ಕಾರ್ಯಕ್ರಮದಲ್ಲಿ ನೂತನ ಅಧ್ಯಕ್ಷರಾಗಿ ಅತಾವುಲ್ಲಾ ದ್ರಾಕ್ಷಿ ಸಮೀರ್ ಹುಣಸಗಿ, ನಾಜಿಯಾ ಮುಲ್ಲಾ, ಇಸಾಕ್  ಸಯ್ಯದ್, ಇತರ ಪಕ್ಷದ ಮುಖಂಡರು ಸೇರಿದಂತೆ ಹಲವು ಕಾರ್ಯಕರ್ತರು ಇದ್ದರು.

WhatsApp Image 2025 11 17 at 3.21.17 PM
ಈ ದಿನ ಡೆಸ್ಕ್
+ posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಸಿಂಧನೂರು | ರೀಲ್ಸ್ ಮಾಡಲು ಹೋದ ಯುವಕ ನೀರು ಪಾಲು

ರೀಲ್ಸ್ ಮಾಡುವ ಉದ್ದೇಶದಿಂದ ಸ್ನೇಹಿತರಿಗೆ ವಿಡಿಯೋ ಮಾಡಲು ಹೇಳಿ ಈಜಲು ನದಿಗೆ...

ಗದಗ | ಆದ್ಯ ವಚನಕಾರ ದೇವರ ದಾಸಿಮಯ್ಯ: ರಾಘವೇಂದ್ರ ಕೊಪ್ಪಳ

"ಆದ್ಯ ವಚನಕಾರ ನೇಕಾರ ಸಂತ ದೇವರ ದಾಸಿಮಯ್ಯನವರು 10 ನೇ ಶತಮಾನದಲ್ಲಿ...

ಮಾರ್ಚ್ 25ರಂದು ಬೆಂಗಳೂರಿನ ಫ್ರೀಡಂ ಪಾರ್ಕ್ನಲ್ಲಿ ಬಲಗೈ ಜಾತಿಗಳ ಬೃಹತ್ ಹೋರಾಟ

ಬಾಗೇಪಲ್ಲಿ:-ಕರ್ನಾಟಕ ರಾಜ್ಯ ಬಲಗೈ ಜಾತಿಗಳ ಮಹಾ ಒಕ್ಕೂಟದ ವತಿಯಿಂದ ಒಳ ಮೀಸಲಾತಿ...

ಯುಪಿಎಸ್ಸಿ ರ‍್ಯಾಂಕ್‌ ವಿಜೇತ ವರುಣ್ ಗೌಡಗೆ ಸನ್ಮಾನ

ಕೋಲಾರ: ಯುಪಿಎಸ್ಸಿ ಪರೀಕ್ಷೆಯಲ್ಲಿ 462 ನೇ ರ‍್ಯಾಂಕ್‌ ಪಡದ ತಾಲೂಕಿನ ತ್ಯಾವನಹಳ್ಳಿ...