ವಿಜಯಪುರ | ಕಾಂತರಾಜ ವರದಿ ಜಾರಿಯಾಗದಂತೆ ಪಟ್ಟಭದ್ರರಿಂದ ಪ್ರಯತ್ನ: ಮಾಜಿ ಶಾಸಕ ರಾಜು ಆಲಗೂರ

Date:

ಕಾಂತರಾಜ ಆಯೋಗದ ವರದಿಯನ್ನು ಜಾರಿಗೊಳಸದ ಹಾಗೆ ಕೆಲ ಪಟ್ಟ ಭದ್ರತಾ ಶಕ್ತಿಗಳು ತೆರೆಮರೆಯಲ್ಲಿ ಕೆಲಸ ಮಾಡುತ್ತಿವೆ ಎಂದು ಮಾಜಿ ಶಾಸಕ ರಾಜು ಆಲಗೂರ ಹೇಳಿದರು.

ವಿಜಯಪುರ ಜಿಲ್ಲೆ ಚಡಚಣ ಪಟ್ಟಣದ ಪ್ರವಾಸಿ ಮಂದಿರದಲ್ಲಿ ಆಯೋಜಿಸಲಾಗಿದ್ದ ಶೋಷಿತ ವರ್ಗಗಳ ಜನಜಾಗೃತಿ ಸಭೆಯಲ್ಲಿ ಅವರು ಮಾತನಾಡಿದರು.

ಹಿಂದುಳಿದ ವರ್ಗಗಳಿಗೆ ಸಾಮಾಜಿಕ ನ್ಯಾಯ ಕೊಡಲು ಪೂರಕವಾದ ಕಾಂತರಾಜ್ ವರದಿಯನ್ನು ರಾಜ್ಯ ಸರ್ಕಾರ ತಕ್ಷಣ ಜಾರಿಗೊಳಿಸಬೇಕೆಂದು ಆಗ್ರಹಿಸಿದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ಆಯೋಗದ ವರದ ಅತ್ಯಂತ ನಿಖರವಾಗಿದೆ. ಸಾಕಷ್ಟು ಶ್ರಮವಹಿಸಿ ವರದಿ ಸಿದ್ಧಪಡಿಸಿದ್ದಾರೆ. ರಾಜಕೀಯ, ಆರ್ಥಿಕ ,ಶೈಕ್ಷಣಿಕ ಅವಕಾಶಗಳು ಶೋಷಿತ ಸಮಾಜಗಳಿಗೆ ಲಭಿಸಿಲ್ಲ. ಮುಖ್ಯಮಂತ್ರಿ ಸಿದ್ದರಾಮಯ್ಯ ಹೊರತು ಯಾರಿಂದಲೂ ಈ ವರದಿ ಜಾರಿ ಮಾಡಲು ಸಾಧ್ಯವಿಲ್ಲ. ಹೀಗಾಗಿ ಅವರ ಅವಧಿಯಲ್ಲಿ ಈ ವರದಿ ಅನುಷ್ಠಾನಗೊಳ್ಳಬೇಕಿದೆ. ಇಲ್ಲವಾದರೆ ಹೋರಾಟ ನಡೆಸುವುದು ಅನಿವಾರ್ಯವಾಗುತ್ತದೆ ಎಂದು ಆಲಗೂರು ಎಚ್ಚರಿಕೆ ನೀಡಿದರು.

WhatsApp Image 2024 11 16 at 11.59.39 AM

ಮಾಜಿ ಶಾಸಕ ಶರಣಪ್ಪ ಸುಣಗಾರ ಮಾತನಾಡಿ, 185 ಕೋಟಿಯನ್ನು ಕಾಂತರಾಜ್ ಆಯೋಗದ ವರದಿಯ ಸಮೀಕ್ಷೆ ಗಾಗಿ ಖರ್ಚು ಮಾಡಲಾಗಿದೆ. ಐದಾರು ವರ್ಷ ಕಷ್ಟಪಟ್ಟು ಸಮೀಕ್ಷೆ ನಡೆಸಿ, ರಾಜ್ಯದ ಜನರ ದುಡ್ಡಲ್ಲಿ ಆಯೋಗ ಕೆಲಸ ಮಾಡಿದೆ. 15 ಸಾವಿರ ನೌಕರರು ಮನೆ ಮನೆಗೆ ಹೋಗಿ ಕೆಲಸ ಮಾಡಿದ್ದಾರೆ. ಈ ಆಯೋಗದ ವರದಿ ಸಾಮಾಜಿಕ ಮತ್ತು ಶೈಕ್ಷಣಿಕ ಜೊತೆಗೆ ಆರ್ಥಿಕ ಸ್ಥಿತಿಗತಿಗಳನ್ನು ಎತ್ತಿ ಹಿಡಿದಿದೆ ಎಂದು ತಿಳಿಸಿದರು.

ಶೋಷಿತ ವರ್ಗದವರ ಕಲ್ಯಾಣಕ್ಕಾಗಿ ಕಾಂತರಾಜ್ ವರದಿ ಜಾರಿಗೊಳಿಸಬೇಕು. ಇಲ್ಲದಿದ್ದರೆ ಬೆಂಗಳೂರಿನ ವಿಧಾನಸೌಧ ಅಥವಾ ಚಳಿಗಾಲದ ಅಧಿವೇಶನದಲ್ಲಿ ವರದಿ ಜಾರಿಗೊಳಿಸುವ ಕೇಂದ್ರ ಆಗ್ರಿಹಿಸಿ ಮುತ್ತಿಗೆ ಹಾಕಲಾಗುವುದೆಂದು ಅಹಿಂದ ಸಂಘಟನೆಯ ಜಿಲ್ಲಾ ಮುಖಂಡರಾದ ಎಸ್ ಎಂ ಪಾಟೀಲ್ ಗಣಿಹಾರ್ ತಿಳಿಸಿದರು.

ಈ ಸಂದರ್ಭದಲ್ಲಿ ಮುಖಂಡರಾದ ಸುರೇಶ ಗೌಡ, ಸೋಮನಾಥ ಕಳ್ಳಿಮನಿ, ಚಂದ್ರಶೇಖರ ಕೊಡಬಾಗಿ, ಸುರೇಶ ಗೌಡ ಪಾಟೀಲ, ಸುರೇಶ ಗುಣಸಗಿ, ಎಂಜಿ ಯಂಕಂಚಿ, ರಾಜಶ್ರೀ ಯರನಾಳ, ಮಲ್ಲು ಬಿದರಿ, ಪ್ರಭುಗೌಡ ಪಾಟೀಲ, ಜಟ್ಟಪ್ಪ ಬನಸೋಡೆ, ನಾಗರಾಜ ಲಂಬು, ಅಡವೆಪ್ಪ ಸಾಲಗಲ್ಲ, ಸಂಜು ಕಾಂಬೋಗಿ , ಮಹಾದೇವ ಹಿರೆಕುರುಬರ, ಕಾಮೇಶ್ ಪಾಟೀಲ, ಪ್ರಭು ಕೋಳಿ, ರಾಜು ಶಿಂಗೆ, ರಫೀಕ್ ಮಕಾನದಾರ, ರಮೇಶ್ ಜೂಡಪಕರ, ದಶರಥ ಬನಸೋಡೆ ಇತರರು ಉಪಸ್ಥಿತರಿದ್ದರು.

WhatsApp Image 2025 11 17 at 3.21.38 PM
ಈ ದಿನ ಡೆಸ್ಕ್
+ posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಸಿಂಧನೂರು | ರೀಲ್ಸ್ ಮಾಡಲು ಹೋದ ಯುವಕ ನೀರು ಪಾಲು

ರೀಲ್ಸ್ ಮಾಡುವ ಉದ್ದೇಶದಿಂದ ಸ್ನೇಹಿತರಿಗೆ ವಿಡಿಯೋ ಮಾಡಲು ಹೇಳಿ ಈಜಲು ನದಿಗೆ...

ಗದಗ | ಆದ್ಯ ವಚನಕಾರ ದೇವರ ದಾಸಿಮಯ್ಯ: ರಾಘವೇಂದ್ರ ಕೊಪ್ಪಳ

"ಆದ್ಯ ವಚನಕಾರ ನೇಕಾರ ಸಂತ ದೇವರ ದಾಸಿಮಯ್ಯನವರು 10 ನೇ ಶತಮಾನದಲ್ಲಿ...

ಮಾರ್ಚ್ 25ರಂದು ಬೆಂಗಳೂರಿನ ಫ್ರೀಡಂ ಪಾರ್ಕ್ನಲ್ಲಿ ಬಲಗೈ ಜಾತಿಗಳ ಬೃಹತ್ ಹೋರಾಟ

ಬಾಗೇಪಲ್ಲಿ:-ಕರ್ನಾಟಕ ರಾಜ್ಯ ಬಲಗೈ ಜಾತಿಗಳ ಮಹಾ ಒಕ್ಕೂಟದ ವತಿಯಿಂದ ಒಳ ಮೀಸಲಾತಿ...

ಯುಪಿಎಸ್ಸಿ ರ‍್ಯಾಂಕ್‌ ವಿಜೇತ ವರುಣ್ ಗೌಡಗೆ ಸನ್ಮಾನ

ಕೋಲಾರ: ಯುಪಿಎಸ್ಸಿ ಪರೀಕ್ಷೆಯಲ್ಲಿ 462 ನೇ ರ‍್ಯಾಂಕ್‌ ಪಡದ ತಾಲೂಕಿನ ತ್ಯಾವನಹಳ್ಳಿ...