ವಿಜಯಪುರ | ಮೂಲದಲ್ಲಿ ಮಾನವರೆಲ್ಲರೂ ಬುಡಕಟ್ಟು ಜನಾಂಗದವರು: ಸಾಹಿತಿ ಮೋಹನ್ ಕಟ್ಟಿಮನಿ

Date:

ಮಾನವರೆಲ್ಲರೂ ಮೂಲದಲ್ಲಿ ಬುಡಕಟ್ಟು ಜನಾಂಗದವರು. ವಿಶಿಷ್ಟ ಸಂಸ್ಕೃತಿಯ ಮೂಲಕ ಭಾರತ ಆಚಾರ ವಿಚಾರಗಳನ್ನು ಮೈಗೂಡಿಸಿಕೊಂಡು ಬದುಕು ನಡೆಸುವ‌ ಜನಾಂಗ ಬುಡಕಟ್ಟು ಜನಾಂಗವಾಗಿದೆ ಎಂದು ಸಾಹಿತಿ ಮೋಹನ್ ಕಟ್ಟಿಮನಿ ಅಭಿಪ್ರಾಯಪಟ್ಟರು.

ವಿಜಯಪುರ ಜಿಲ್ಲೆಯ ಕೋಲ್ಹಾರ ಪಟ್ಟಣದ ಸಂಗಮೇಶ್ವರ ಮಹಾವಿದ್ಯಾಲಯದಲ್ಲಿ ಜಿಲ್ಲಾ ಕನ್ನಡ ಜಾನಪದ ಪರಿಷತ್ ಮತ್ತು ತಾಲೂಕು ಘಟಕದಿಂದ ಏರ್ಪಡಿಸಿದ್ದ ‘ವಿಶ್ವ ಬುಡಕಟ್ಟು’ ದಿನಾಚರಣೆಯಲ್ಲಿ ಬುಡಕಟ್ಟು ಕಲಾವಿದರ ಸ್ಥಿತಿ-ಗತಿ ಕುರಿತು ಉಪನ್ಯಾಸ ನೀಡಿ ಮಾತನಾಡಿದರು.

“ಬುಡಕಟ್ಟು ಜನರ ಬದುಕು ಸುಧಾರಣೆಯಾಗಬೇಕು. ಬುಡಕಟ್ಟು ಕಲಾವಿದರು ಸಂಕಷ್ಟದಲ್ಲಿದ್ದಾರೆ” ಎಂದು ಹೇಳಿದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ಪ್ರಾಚಾರ್ಯ ಎ ಡಿ ಚೌಹಾಣ್ ಮಾತನಾಡಿ, “ಬುಡಕಟ್ಟು ಜನಾಂಗ ಉಡುಗೆ, ತೊಡುಗೆ, ಆಚಾರ, ವಿಚಾರ, ನಂಬಿಕೆ, ಸಂಪ್ರದಾಯಗಳಲ್ಲಿ ವಿಶಿಷ್ಟತೆ ಉಳಿಸಿಕೊಂಡು ಬಂದಿದೆ. ಲಿಪಿ ಇಲ್ಲದ ಭಾಷೆಯನ್ನು ಉಳಿಸಿ ಬೆಳೆಸುತ್ತಾ ಕಷ್ಟದಲ್ಲಿ ಬದುಕುತ್ತಿದ್ದಾರೆ.
ಸರ್ಕಾರ ಬುಡಕಟ್ಟು ಜನಾಂಗದವರಿಗೆ ವಿಶೇಷ ಸವಲತ್ತು ನೀಡಬೇಕು” ಎಂದರು.

ಕನ್ನಡ ಜಾನಪದ ಪರಿಷತ್ ಜಿಲ್ಲಾ ಘಟಕಾಧ್ಯಕ್ಷ ಬಾಳನ ಗೌಡ ಪಾಟೀಲ ಮಾತನಾಡಿ, “ಬುಡಕಟ್ಟು ಜನಾಂಗದ ಜಾನಪದ ಕಲಾವಿದರ ಕುರಿತು ಸಂಶೋಧನೆ ನಡೆಸಬೇಕು. ಬುಡಕಟ್ಟು ಕಲಾವಿದರು ಸರ್ಕಾರದ ಸೌಲಭ್ಯದಿಂದ ವಂಚಿತರಾಗಿದ್ದಾರೆ. ಕಲಾವಿದರ ಅಂಕಿ ಸಂಖ್ಯೆ ಕುರಿತು ನಮ್ಮ ಪರಿಷತ್ ಸಮೀಕ್ಷೆ ನಡೆಸಲು ಮುಂದಾಗಿದೆ. ಬುಡಕಟ್ಟು ಕಲಾವಿದರಿಗೆ ನಾವು ಕಲಾವಿದರ ಗುರುತಿನ ಪತ್ರ ನೀಡುತ್ತಿದ್ದೇವೆ” ಎಂದರು.

ಚುಟುಕು ಸಾಹಿತ್ಯ ಪರಿಷತ್ ಜಿಲ್ಲಾಧ್ಯಕ್ಷ ಜಗದೀಶ್ ಸಾಲಳ್ಳಿ, ಕನ್ನಡ ಜಾನಪದ ಪರಿಷತ್ತು ಕೊಲ್ಹಾರ ತಾಲೂಕು ಅಧ್ಯಕ್ಷ ಮಲ್ಲಪ್ಪ ಗಣಿ ಮಾತನಾಡಿದರು.

ಬುಡಕಟ್ಟು(ಲಂಬಾಣಿ) ಕಲಾವಿದರಾದ ವಾಲುಬಾಯಿ ಲಮಾಣಿ ಅವರನ್ನು ಸನ್ಮಾನಿಸಲಾಯಿತು. ಇದೇ ವೇಳೆ ಲಂಬಾಣಿ ಪದ, ರಿವಾಯತ್ ಪದ, ಹಂತಿ ಪದ ಪ್ರದರ್ಶನ ನೀಡಿದರು.

ಈ ಸುದ್ದಿ ಓದಿದ್ದೀರಾ? ಬಳ್ಳಾರಿ | ತುಂಗಭದ್ರಾ ಅಣೆಕಟ್ಟಿನ ಹಾನಿಗೊಳಗಾದ ಗೇಟನ್ನು ತಕ್ಷಣವೇ ದುರಸ್ಥಿ ಮಾಡಲು ರೈತ ಸಂಘ ಮನವಿ

ಹೇಮಾ-ವೇಮ ಶಿಕ್ಷಣ ಸಂಸ್ಥೆ ಕಾರ್ಯದರ್ಶಿ ಮಲ್ಲಿಕಾರ್ಜುನ್ ಗಣಿ, ಪರಿಷತ್ ಕೊಡುಗೆ ವಲಯ ಅಧ್ಯಕ್ಷ ದುಂಡಯ್ಯ ಮಠಪತಿ ಹಾಗೂ ಪರಿಷತ್ ಪದಾಧಿಕಾರಿಗಳಾದ ಮೌಲಾಸಾಹೇಬ್ ಜಾಹಿರ್ದಾರ್, ಭೀಮಸಿ ಬೀಳಗಿ, ಕಲಾವಿದರಾದ ಶ್ರೀಶೈಲ್ ಬಾಟಿ, ಪವಡೆಪ್ಪ ಗೋಳಸಂಗಿ, ಅಜಿಜ ಸಾಬ ಜಹಗಿರ್ದಾರ, ಮಂಜುನಾಥ ಯಂದಗೇರಿ, ಮಂಜುನಾಥ ಮಟ್ಯಾಳ, ವಿಜಯಲಕ್ಷ್ಮಿ ಡಂಬಳ ಇದ್ದರು.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಸಿಂಧನೂರು | ರೀಲ್ಸ್ ಮಾಡಲು ಹೋದ ಯುವಕ ನೀರು ಪಾಲು

ರೀಲ್ಸ್ ಮಾಡುವ ಉದ್ದೇಶದಿಂದ ಸ್ನೇಹಿತರಿಗೆ ವಿಡಿಯೋ ಮಾಡಲು ಹೇಳಿ ಈಜಲು ನದಿಗೆ...

ಗದಗ | ಆದ್ಯ ವಚನಕಾರ ದೇವರ ದಾಸಿಮಯ್ಯ: ರಾಘವೇಂದ್ರ ಕೊಪ್ಪಳ

"ಆದ್ಯ ವಚನಕಾರ ನೇಕಾರ ಸಂತ ದೇವರ ದಾಸಿಮಯ್ಯನವರು 10 ನೇ ಶತಮಾನದಲ್ಲಿ...

ಮಾರ್ಚ್ 25ರಂದು ಬೆಂಗಳೂರಿನ ಫ್ರೀಡಂ ಪಾರ್ಕ್ನಲ್ಲಿ ಬಲಗೈ ಜಾತಿಗಳ ಬೃಹತ್ ಹೋರಾಟ

ಬಾಗೇಪಲ್ಲಿ:-ಕರ್ನಾಟಕ ರಾಜ್ಯ ಬಲಗೈ ಜಾತಿಗಳ ಮಹಾ ಒಕ್ಕೂಟದ ವತಿಯಿಂದ ಒಳ ಮೀಸಲಾತಿ...

ಯುಪಿಎಸ್ಸಿ ರ‍್ಯಾಂಕ್‌ ವಿಜೇತ ವರುಣ್ ಗೌಡಗೆ ಸನ್ಮಾನ

ಕೋಲಾರ: ಯುಪಿಎಸ್ಸಿ ಪರೀಕ್ಷೆಯಲ್ಲಿ 462 ನೇ ರ‍್ಯಾಂಕ್‌ ಪಡದ ತಾಲೂಕಿನ ತ್ಯಾವನಹಳ್ಳಿ...