ವಿಜಯಪುರ | ಪ್ರತಿಷ್ಠಿತ ವಲಯಗಳ ಹಿಂದೆ ಕಾರ್ಮಿಕರ ಶ್ರಮ, ತ್ಯಾಗವಿದೆ: ಮಲ್ಲಿಕಾರ್ಜುನ ಎಚ್ ಟಿ

Date:

ವಿಶ್ವದಾದ್ಯಂತ ರೈಲ್ವೆ, ಗಾಜು, ಬಟ್ಟೆ, ಹಳಿ ನಿರ್ಮಾಣ, ಗಣಿ ಸೇರಿದಂತೆ ಪ್ರತಿಷ್ಠಿತ ಕೈಗಾರಿಕಾ ವಲಯಗಳ ಹಿಂದೆ ಅನೇಕ ಕಾರ್ಮಿಕರ ಶ್ರಮ, ತ್ಯಾಗವಿದೆ ಅಂತಹವರನ್ನು ಇಂದು ಪ್ರತಿಯೊಬ್ಬರೂ ಸ್ಮರಿಸಿಕೊಳ್ಳಬೇಕು ಎಂದು ಆಲ್ ಇಂಡಿಯಾ ಯುನೈಟೆಡ್ ಟ್ರೇಡ್ ಯೂನಿಯನ್ ಸೆಂಟರ್ (ಎಐಯುಟಿಯುಸಿ) ಜಿಲ್ಲಾಧ್ಯಕ್ಷ ಮಲ್ಲಿಕಾರ್ಜುನ ಎಚ್ ಟಿ ಹೇಳಿದರು.

ವಿಜಯಪುರ ನಗರದ ಬುದ್ಧವಿಹಾರದಲ್ಲಿ ಹಮ್ಮಿಕೊಳ್ಳಲಾಗಿದ್ದ ವಿಶ್ವ ಕಾರ್ಮಿಕ ದಿನಾಚರಣೆ ಕಾರ್ಯಕ್ರಮ ಉದ್ಘಾಟಿಸಿ ಮಾತನಾಡಿದ ಅವರು, “ವಿವಿಧ ಅಪಾಯಕಾರಿ ಕಾರ್ಖಾನೆಗಳಲ್ಲಿ ದಿನಕ್ಕೆ 14 ರಿಂದ 18 ಗಂಟೆಗಳವರೆಗೆ ಕಾರ್ಮಿಜನನಕರನ್ನು ದುಡಿಸಿಕೊಳ್ಳುವ ಮಾನವ ವಿರೋಧಿ ಪರಿಸ್ಥಿತಿ ಇತ್ತು. ಇದರ ವಿರುದ್ಧ ಅಮೆರಿಕ ದೇಶದ ಕಾರ್ಮಿಕ ಸಂಘಟನೆಗಳ ನಾಯಕರು ಸಮರ ಸಾರಿದರು. ದಿನಕ್ಕೆ 8 ಗಂಟೆಗಳ ಕೆಲಸದ ಬೇಡಿಕೆ ಇಟ್ಟರು. 8 ಗಂಟೆ ಕೆಲಸ, 8 ಗಂಟೆ ವಿಶ್ರಾಂತಿ, 8 ಗಂಟೆ ಮನರಂಜನೆ ಎಂಬ ಬೇಡಿಕೆಗಳನ್ನು ಈಡೇರಿಸಿಕೊಳ್ಳಲು ನೂರಾರು ಜನ ನಾಯಕರು ತಮ್ಮ ಅಮೂಲ್ಯ ಪ್ರಾಣ ತ್ಯಾಗ ಮಾಡಿದರು. ಅವರನೆಲ್ಲ ನಾವಿಂದು ಸ್ಮರಿಸಬೇಕು” ಎಂದರು.

ಎಐಕೆಕೆಎಂಎಸ್ ರಾಜ್ಯ ಕಾರ್ಯದರ್ಶಿ ಬಿ ಭಗವಾನ ರೆಡ್ಡಿ ಮಾತನಾಡಿ, “ಇಂದಿನ ಬಂಡವಾಳಶಾಹಿಗಳು ಪುನಃ ಕಾರ್ಮಿಕ ವಿರೋಧಿ ನಿಲುವು ವ್ಯಕ್ತಪಡಿಸುತ್ತಿದ್ದಾರೆ. ಇನ್ಫೋಸಿಸ್ ನಾರಾಯಣಮೂರ್ತಿಯವರು ವಾರಕ್ಕೆ 70 ಗಂಟೆ ಕೆಲಸ ಮಾಡುವಂತೆ ಹೇಳ್ತಾ ಇರೋದು ಆಧುನಿಕ ಜೀತ ಪದ್ಧತಿಯನ್ನು ಸೂಚಿಸುತ್ತದೆ. ಇಂತಹ ಕಾರ್ಮಿಕ ವಿರೋಧಿ ನೀತಿ ಖಂಡನೀಯ. ಇದರ ವಿರುದ್ಧ ಪ್ರಬಲ ಚಳವಳಿ ಕಟ್ಟಲು ಯುವಕರು ಮುಂದೆ ಬರಬೇಕೆಂದು” ಕರೆ ನೀಡಿದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ಇದನ್ನೂ ಓದಿ: ವಿಜಯಪುರ | ಬಸವ ವೃತ್ತದಲ್ಲಿ ದವಿಪ ವತಿಯಿಂದ ʼಬಸವ ಜಯಂತಿʼ ಆಚರಣೆ

ಈ ವೇಳೆ ಎಐಯುಟಿಯುಸಿ ಜಿಲ್ಲಾ ಮುಖಂಡರಾದ ಮಾದೇವಿ ಧರ್ಮಶೆಟ್ಟಿ, ಮಲ್ಲಿಕಾರ್ಜುನ ಹಿರೇಮಠ, ನಿಂಗಮ್ಮ ಮಠ, ಸಾವಿತ್ರಿ ನಾಗರತ್ತಿ, ಚಾಂದ ಶಶಿಕಲಾ ಮ್ಯಾಗೇರಿ, ಮಮದಾಪೂರ, ಆಲಮಟ್ಟಿ ಗಾರ್ಡನ್ ನೌಕರರು, ಬಿಸಿಯೂಟ-ವಸತಿ ನಿಲಯದ ಕಾರ್ಮಿಕರು ಇದ್ದರು.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಸಿಂಧನೂರು | ರೀಲ್ಸ್ ಮಾಡಲು ಹೋದ ಯುವಕ ನೀರು ಪಾಲು

ರೀಲ್ಸ್ ಮಾಡುವ ಉದ್ದೇಶದಿಂದ ಸ್ನೇಹಿತರಿಗೆ ವಿಡಿಯೋ ಮಾಡಲು ಹೇಳಿ ಈಜಲು ನದಿಗೆ...

ಗದಗ | ಆದ್ಯ ವಚನಕಾರ ದೇವರ ದಾಸಿಮಯ್ಯ: ರಾಘವೇಂದ್ರ ಕೊಪ್ಪಳ

"ಆದ್ಯ ವಚನಕಾರ ನೇಕಾರ ಸಂತ ದೇವರ ದಾಸಿಮಯ್ಯನವರು 10 ನೇ ಶತಮಾನದಲ್ಲಿ...

ಮಾರ್ಚ್ 25ರಂದು ಬೆಂಗಳೂರಿನ ಫ್ರೀಡಂ ಪಾರ್ಕ್ನಲ್ಲಿ ಬಲಗೈ ಜಾತಿಗಳ ಬೃಹತ್ ಹೋರಾಟ

ಬಾಗೇಪಲ್ಲಿ:-ಕರ್ನಾಟಕ ರಾಜ್ಯ ಬಲಗೈ ಜಾತಿಗಳ ಮಹಾ ಒಕ್ಕೂಟದ ವತಿಯಿಂದ ಒಳ ಮೀಸಲಾತಿ...

ಯುಪಿಎಸ್ಸಿ ರ‍್ಯಾಂಕ್‌ ವಿಜೇತ ವರುಣ್ ಗೌಡಗೆ ಸನ್ಮಾನ

ಕೋಲಾರ: ಯುಪಿಎಸ್ಸಿ ಪರೀಕ್ಷೆಯಲ್ಲಿ 462 ನೇ ರ‍್ಯಾಂಕ್‌ ಪಡದ ತಾಲೂಕಿನ ತ್ಯಾವನಹಳ್ಳಿ...