ವಿಜಯಪುರ | ‌ʼಶೋಷಣೆ ರಹಿತ ಸಮಾಜದ ಕನಸು ಕಂಡಿದ್ದವರು ಭಗತ್‌ಸಿಂಗ್ʼ

Date:

ಕ್ರಾಂತಿಕಾರಿ ಭಗತ್‌ಸಿಂಗ್ ಕೇವಲ ಸ್ವಾತಂತ್ರ್ಯದ ಕನಸು ಕಾಣಲಿಲ್ಲ, ಬದಲಾಗಿ ಬ್ರಿಟಿಷರ ನಂತರ ದೇಶದಲ್ಲಿ ಶೋಷಣೆ ರಹಿತ ಸಮಾಜವನ್ನು ಸ್ಥಾಪಿಸುವ ಕನಸು ಕಂಡಿದ್ದರು ಎಂದು ಆಲ್‌ ಇಂಡಿಯಾ ಡೆಮಾಕ್ರಟಿಕ್‌ ಯೂತ್‌ ಆರ್ಗನೈಸೇಷನ್‌ (ಎಐಡಿವೈಒ) ರಾಜ್ಯ ಕಾರ್ಯದರ್ಶಿ ಸಿದ್ದಲಿಂಗ ಬಾಗೇವಾಡಿ ಹೇಳಿದರು.

ವಿಜಯಪುರ ನಗರದ ಬೇಗಂ ತಲಾಬ್ ಪಾರ್ಕ್‌ನಲ್ಲಿ ಎಐಡಿವೈಒ ಸಂಘಟನೆ ವತಿಯಿಂದ ಹಮ್ಮಿಕೊಂಡಿದ್ದ ಭಗತ್‌ಸಿಂಗ್ ಹುತಾತ್ಮ ದಿನಾಚರಣೆ ಕಾರ್ಯಕ್ರಮದಲ್ಲಿ ಅವರು ಮಾತನಾಡಿದರು. ಸ್ವಾತಂತ್ರ್ಯ ಸಂಗ್ರಾಮದ ಮಹಾನ್ ಶಹೀದ್ ಭಗತಸಿಂಗ್. ಗಾಂಧೀಜಿ ಸಂಧಾನಪರ ಪಂಥದ ನಾಯಕರಾದರೆ, ಭಗತಸಿಂಗ್ ನೇತಾಜಿ ಅವರು ಸಂಧಾನರಹಿತ ಪಂಥದ ಅಗ್ರಗಣ್ಯ ನಾಯಕರಾಗಿದ್ದರು. ಇರ್ವಿನ್ ಒಪ್ಪಂದದಲ್ಲಿ ಗಾಂಧೀಜಿಯವರು ಭಗತಸಿಂಗ್, ಸುಖದೇವ, ರಾಜಗುರು ಅವರ ಹೆಸರನ್ನು ಸೇರಿಸದೆ ಇದ್ದಾಗ ನೇತಾಜಿ ಅವರು ಹೆಸರು ಸೇರಿಸಲು ಒತ್ತಾಯಿಸಿದರು. ಆದರೆ ಗಾಂಧೀಜಿ ಭಗತಸಿಂಗ್ ಹಾಗೂ ಅವರ ಅನುಯಾಯಿಗಳನ್ನು ಗೂಂಡಾಗಿರಿಯ ಸಂಕೇತವೆಂದು ಕರೆದರು. ಆದರೆ, ನೇತಾಜೆ ಭಗತ್ ಸಿಂಗ್ ಅವರನ್ನು ದೇಶದ ಸ್ವಾಭಿಮಾನದ ಸಂಕೇತ. ದೇಶದ ಕ್ರಾಂತಿಯ ಸಂಕೇತ ಎಂದು ಕರೆದರು” ಎಂದರು.

ಎಐಡಿವೈಒ ಜಿಲ್ಲಾ ಕಾರ್ಯದರ್ಶಿ ಸಿದ್ರಾಮ ಹಿರೇಮಠ ಮಾತನಾಡಿ, “ಈ ದೇಶದಲ್ಲಿ ಮಾನವನಿಂದ ಮಾನವನ
ಶೋಷಣೆ ಕೊನೆಗೊಂಡು ಎಲ್ಲರೂ ಶಿಕ್ಷಣ, ಉದ್ಯೋಗ ಭದ್ರತೆ ಪಡೆಯುವಂತಾಗಲಿ ಎಂಬ ಕನಸನ್ನು ಭಗತ್‌ಸಿಂಗ್ ಕಂಡರು. ಅಂತಹ ಸಮಾಜವಾದಿ ಭಾರತದ ಕನಸನ್ನು ನನಸು ಮಾಡುವ ಜವಾಬ್ದಾರಿ ಇಂದು ನಮ್ಮ ಮೇಲಿದೆ. ಇಂದಿನ ಯುವಜನರು ಅವರ ಆದರ್ಶವನ್ನು ಮೈಗೂಡಿಸಿಕೊಳ್ಳಬೇಕು. ಇಂದು ಸಮಾಜದಲ್ಲಿ ಯುವಜನರು ಆನ್‌ಲೈನ್ ಗೇಮ್, ಅಶ್ಲೀಲ ಸಿನಿಮಾ-ಸಾಹಿತ್ಯಗಳಿಗೆ ಬಲಿಯಾಗುತ್ತಿದ್ದಾರೆ. ಈ ಬಂಡವಾಳಶಾಹಿ ವ್ಯವಸ್ಥೆಯ ಆಳ್ವಿಕರು ಯುವಜನರ ಬೆನ್ನೆಲುಬು ಮುರಿಯುವ ಹುನ್ನಾರಗಳನ್ನು ಮಾಡುತ್ತಿದ್ದಾರೆ. ಯುವಜನರು ಜಾತಿ-ಧರ್ಮಗಳ ಮೂಲಕ ಒಡೆಯದೆ ಒಗ್ಗಟ್ಟಾಗಿ ಈ ವ್ಯವಸ್ಥೆಯನ್ನು, ಈ ಹುನ್ನಾರವನ್ನು ಸೋಲಿಸಬೇಕೆಂದು” ಕರೆ ನೀಡಿದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ಇದನ್ನೂ ಓದಿ: ವಿಜಯಪುರ | ಏ.1ರಿಂದ ₹10,000 ಗೌರವಧನ ನೀಡುವಂತೆ ಆಶಾ ಕಾರ್ಯಕರ್ತೆಯರ ಆಗ್ರಹ

ಜಿಲ್ಲಾ ಅಧ್ಯಕ್ಷ ಶ್ರೀಕಾಂತ ಕೊಂಡಗೂಳಿ, ಉಪಾಧ್ಯಕ್ಷ ಅಶೋಕದೇಸಾಯಿ, ರಮೇಶ, ವಿರೂಪಾಕ್ಷಿ ಮುಂತಾದವರು ಪಾಲ್ಗೊಂಡಿದ್ದರು.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಸಿಂಧನೂರು | ರೀಲ್ಸ್ ಮಾಡಲು ಹೋದ ಯುವಕ ನೀರು ಪಾಲು

ರೀಲ್ಸ್ ಮಾಡುವ ಉದ್ದೇಶದಿಂದ ಸ್ನೇಹಿತರಿಗೆ ವಿಡಿಯೋ ಮಾಡಲು ಹೇಳಿ ಈಜಲು ನದಿಗೆ...

ಗದಗ | ಆದ್ಯ ವಚನಕಾರ ದೇವರ ದಾಸಿಮಯ್ಯ: ರಾಘವೇಂದ್ರ ಕೊಪ್ಪಳ

"ಆದ್ಯ ವಚನಕಾರ ನೇಕಾರ ಸಂತ ದೇವರ ದಾಸಿಮಯ್ಯನವರು 10 ನೇ ಶತಮಾನದಲ್ಲಿ...

ಮಾರ್ಚ್ 25ರಂದು ಬೆಂಗಳೂರಿನ ಫ್ರೀಡಂ ಪಾರ್ಕ್ನಲ್ಲಿ ಬಲಗೈ ಜಾತಿಗಳ ಬೃಹತ್ ಹೋರಾಟ

ಬಾಗೇಪಲ್ಲಿ:-ಕರ್ನಾಟಕ ರಾಜ್ಯ ಬಲಗೈ ಜಾತಿಗಳ ಮಹಾ ಒಕ್ಕೂಟದ ವತಿಯಿಂದ ಒಳ ಮೀಸಲಾತಿ...

ಯುಪಿಎಸ್ಸಿ ರ‍್ಯಾಂಕ್‌ ವಿಜೇತ ವರುಣ್ ಗೌಡಗೆ ಸನ್ಮಾನ

ಕೋಲಾರ: ಯುಪಿಎಸ್ಸಿ ಪರೀಕ್ಷೆಯಲ್ಲಿ 462 ನೇ ರ‍್ಯಾಂಕ್‌ ಪಡದ ತಾಲೂಕಿನ ತ್ಯಾವನಹಳ್ಳಿ...