ವಿಜಯಪುರ | ಬ್ರಿಜ್‌ ಭೂಷಣ್‌ ಬಂಧನಕ್ಕೆ ಭೀಮ್‌ ಆರ್ಮಿ ಆಗ್ರಹ

Date:

ಮಹಿಳಾ ಕುಸ್ತಿ ಪಟುಗಳಿಗೆ ಲೈಂಗಿಕ ಕಿರುಕುಳ ನೀಡಿದ ಬಿಜೆಪಿಯ ಲೋಕಸಭಾ ಸದಸ್ಯ ರಾಷ್ಟೀಯ ಕುಸ್ತಿ ಒಕ್ಕೂಟದ ಅಧ್ಯಕ್ಷ ‌ಬ್ರಿಜ್ ಭೂಷಣ್ ಶರಣ್ ಸಿಂಗ್‌ನನ್ನು ಭಾರತ ಸರ್ಕಾರ ಕೂಡಲೇ ಬಂಧಿಸುವಂತೆ ಆಗ್ರಹಿಸಿ ವಿಜಯಪುರ ಪಟ್ಟಣದ ಭೀಮ್ ಆರ್ಮಿ ಕರ್ನಾಟಕ ಏಕತಾ ಮಿಷನ್ ಸಂಘಟನೆಯ ಕಾರ್ಯಕರ್ತರು ಜಿಲ್ಲಾಧಿಕಾರಿ ಮೂಲಕ ರಾಷ್ಟ್ರಪತಿಗೆ ಮನವಿ‌ ಸಲ್ಲಿಸಿದರು.

ಭೀಮ್ ಆರ್ಮಿ ಕರ್ನಾಟಕ ಏಕತಾ ಮಿಷನ್‌ ಸಂಘಟನೆಯ ರಾಜ್ಯಾದ್ಯಕ್ಷ ಮತೀನ ಕುಮಾರ ಮಾತನಾಡಿ, “ಮೋದಿ ಅವರು ಭಾಷಣಗಳಲ್ಲಿ ಭೇಟಿ ಬಜಾವೋ ಭೇಟಿ ಪಡಾವೋ ಎಂದು ಬೊಗಳೆ ಬಿಡುತ್ತಾರೆ. ಈ ದೇಶದ ದಲಿತ ಹೆಣ್ಣುಮಕ್ಕಳ ಮೇಲೆ ಅತ್ಯಾಚಾರ, ದೌರ್ಜನ್ಯ ನಡೆದರೂ ಮಾತನಾಡದ ಪ್ರಧಾನಿ, ಮಹಿಳಾ ಕುಸ್ತಿಪಟುಗಳ ಮೇಲೆ ಲೈಂಗಿಕ ಕಿರುಕುಳ ನೀಡುತ್ತಿದ್ದಾರೆಂದು ತಿಂಗಳಿಂದ ಪ್ರತಿಭಟನೆ ಮಾಡುತ್ತಿದ್ದರೂ ನ್ಯಾಯ ಒದಗಿಸುವಂತಹ ಕ್ರಮ ಕೈಗೊಳ್ಳದ ಮೋದಿಗೆ ಧಿಕ್ಕಾರವಿರಲಿ” ಎಂದು ಆಕ್ರೋಶ ವ್ಯಕ್ತಪಡಿಸಿದರು.

“ಅಪರಾಧಿ ಬ್ರಿಜ್ ಭೂಷಣ್ ಸಿಂಗ್‌ನನ್ನು ಕೂಡಲೇ ಬಂಧಿಸಬೇಕು. ಇಲ್ಲದಿದ್ದಲ್ಲಿ ಇಡೀ ರಾಜ್ಯಾದ್ಯಂತ ಪ್ರತಿಭಟನೆಗೆ ಕರೆ ನೀಡಿ ಮೋದಿ ಸರ್ಕಾರಕ್ಕೆ ತಕ್ಕ ಪಾಠ ಕಲಿಸಬೇಕಾಗುತ್ತದೆ” ಎಂದು ಎಚ್ಚರಿಕೆ ನೀಡಿದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ಭೀಮ್ ಆರ್ಮಿ ಕರ್ನಾಟಕ ಏಕತಾ ಮೀಷನ್ ಜಿಲ್ಲಾಧ್ಯಕ್ಷ ಮಲ್ಲು ಜಾಲಗೇರಿ ಮಾತನಾಡಿ, “ಈ ದೇಶದ ಅಂತರಾಷ್ಟ್ರೀಯ ಮಹಿಳಾ ಕುಸ್ತಿಪಟುಗಳ ಮೇಲೆ ಬಿಜೆಪಿ ಸಂಸದ ಹಾಗೂ ಕುಸ್ತಿ ಫೆಡರೇಷನ್ ಅಧ್ಯಕ್ಷ ಬ್ರಿಜ್ ಭೂಷಣ್ ಲೈಂಗಿಕ ಕಿರುಕುಳ ನೀಡಿದ್ದಾನೆ. ಇದನ್ನು ವಿರೋಧಿಸಿ ಮಹಿಳಾ ಕುಸ್ತಿಪಟುಗಳು ಪ್ರತಿಭಟನೆ ಮಾಡಿದರೆ ಪೋಲಿಸರಿಂದ ಹತ್ತಿಕ್ಕುವ ಕೆಲಸ ನಡೆಯುತ್ತಿದೆ. ದೇಶಕ್ಕೆ ಹೆಮ್ಮೆ ತಂದು ಕೊಟ್ಟ ಕುಸ್ತಿಪಟುಗಳ ಮೇಲೆ ದೌರ್ಜನ್ಯ ನಡೆದರು ಕುರುಡನಂತೆ ವರ್ತಿಸಿ ಅಪರಾಧಿಗೆ ಬೆಂಬಲ ನೀಡಿದ್ದಾರೆ” ಎಂದು ಆರೋಪಿಸಿದರು.‌

ಈ ಸುದ್ದಿ ಓದಿದ್ದೀರಾ? ವಿಜಯನಗರ | ಮನರೇಗಾ ಸಮರ್ಪಕ ಅನುಷ್ಠಾನಕ್ಕೆ ಗ್ರಾಕೂಸ ಒತ್ತಾಯ

ಭೀಮ್ ಆರ್ಮಿ ಕರ್ನಾಟಕ ಏಕತಾ ಮೀಷನ್ ಜಿಲ್ಲಾ ಉಪಾಧ್ಯಕ್ಷ ಅಪ್ಪು ಮುಲ್ಲಾ ಮಾತನಾಡಿ, “ಬಿಜೆಪಿ ನೀಚ ಸಂಸದ ತನ್ನ ಜವಾಬ್ದಾರಿ ಮರೆತು ಕುಸ್ತಿಪಟುಗಳ ಮೇಲೆ ಲೈಂಗಿಕ ದೌರ್ಜನ್ಯ ಎಸಗಿದ್ದಾನೆ. ಇದರ ವಿರುದ್ಧವಾಗಿ ಮಹಿಳಾ ಕುಸ್ತಿಪಟುಗಳ ನ್ಯಾಯಕ್ಕಾಗಿ ಪ್ರತಿಭಟನೆ ನಡೆಸಿದರೆ ಪೋಲಿಸರಿಂದ ಹಲ್ಲೆ ನಡೆಸಿದ್ದಾರೆ. ಈ ಕೂಡಲೇ ಆರೋಪಿಯನ್ನು ಬಂಧಿಸಿ ಮಹಿಳಾ ಕುಸ್ತಿಪಟುಗಳಿಗೆ ನ್ಯಾಯ ಒದಗಿಸಬೇಕು” ಎಂದು ಒತ್ತಾಯಿಸಿದರು.

ಈ ಪ್ರತಿಭಟನೆಯಲ್ಲಿ ಭೀಮ್ ಆರ್ಮಿ ಕರ್ನಾಟಕ ಏಕತಾ ಮಿಷನ್ ಜಿಲ್ಲಾ ಉಸ್ತುವಾರಿ ಫರೀದ್ ಅಲಿ ಸೈಯದ್, ಸಂಘಟನೆಯ ಜಿಲ್ಲಾ ಉಪಾಧ್ಯಕ್ಷ ಅಬ್ದುಲ್ ಖಯೂಮ್ ಚೌದರಿ ಹಾಗೂ ಸಂಘಟನೆಯ ಕಾರ್ಯಕರ್ತರು ಉಪಸ್ಥಿತರಿದ್ದರು.

WhatsApp Image 2025 07 12 at 17.38.34 e1752322718567
+ posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಸಿಂಧನೂರು | ರೀಲ್ಸ್ ಮಾಡಲು ಹೋದ ಯುವಕ ನೀರು ಪಾಲು

ರೀಲ್ಸ್ ಮಾಡುವ ಉದ್ದೇಶದಿಂದ ಸ್ನೇಹಿತರಿಗೆ ವಿಡಿಯೋ ಮಾಡಲು ಹೇಳಿ ಈಜಲು ನದಿಗೆ...

ಗದಗ | ಆದ್ಯ ವಚನಕಾರ ದೇವರ ದಾಸಿಮಯ್ಯ: ರಾಘವೇಂದ್ರ ಕೊಪ್ಪಳ

"ಆದ್ಯ ವಚನಕಾರ ನೇಕಾರ ಸಂತ ದೇವರ ದಾಸಿಮಯ್ಯನವರು 10 ನೇ ಶತಮಾನದಲ್ಲಿ...

ಮಾರ್ಚ್ 25ರಂದು ಬೆಂಗಳೂರಿನ ಫ್ರೀಡಂ ಪಾರ್ಕ್ನಲ್ಲಿ ಬಲಗೈ ಜಾತಿಗಳ ಬೃಹತ್ ಹೋರಾಟ

ಬಾಗೇಪಲ್ಲಿ:-ಕರ್ನಾಟಕ ರಾಜ್ಯ ಬಲಗೈ ಜಾತಿಗಳ ಮಹಾ ಒಕ್ಕೂಟದ ವತಿಯಿಂದ ಒಳ ಮೀಸಲಾತಿ...

ಯುಪಿಎಸ್ಸಿ ರ‍್ಯಾಂಕ್‌ ವಿಜೇತ ವರುಣ್ ಗೌಡಗೆ ಸನ್ಮಾನ

ಕೋಲಾರ: ಯುಪಿಎಸ್ಸಿ ಪರೀಕ್ಷೆಯಲ್ಲಿ 462 ನೇ ರ‍್ಯಾಂಕ್‌ ಪಡದ ತಾಲೂಕಿನ ತ್ಯಾವನಹಳ್ಳಿ...