ವಿಜಯಪುರ | ಭೀಮಾ ನದಿಯ ರೌದ್ರ ರೂಪ; ತಗ್ಗು ಪ್ರದೇಶಗಳಿಗೆ ನುಗ್ಗಿದ ನೀರು

Date:

ಕಳೆದ ಐದು ದಿನಗಳಿಂದ ತೀವ್ರವಾಗಿದ್ದ ವಿಜಯಪುರ ಜಿಲ್ಲೆಯ ಆಲಮೇಲ ತಾಲೂಕಿನ ಭೀಮಾ ನದಿಯ ಪ್ರವಾಹ ಪರಿಸ್ಥಿತಿ ಶುಕ್ರವಾರ ಮತ್ತಷ್ಟು ರೌದ್ರ ರೂಪ ತಾಳಿದೆ. ನದಿಯ ನೀರು ತಗ್ಗು ಪ್ರದೇಶಗಳು ಮತ್ತು ಹೊಲಗಳಿಗೆ ನುಗ್ಗಿ ಜನಜೀವನ ಅಸ್ತವ್ಯಸ್ತಗೊಳಿಸಿದೆ.

ದೇವಣಗಾವ ಸಮೀಪದ ಸೊನ್ನ ಬ್ಯಾರೇಜ್‌ನಲ್ಲಿ 3.50 ಲಕ್ಷ ಕ್ಯೂಸೆಕ್ ಒಳಹರಿವು ದಾಖಲಾಗಿದ್ದು, 28 ಗೇಟ್‌ಗಳ ಮೂಲಕ ಸಮಾನ ಪ್ರಮಾಣದ ನೀರನ್ನು ಬಿಡುಗಡೆ ಮಾಡಲಾಗುತ್ತಿದೆ ಎಂದು ಕೆಎನ್ಎನ್ಎಲ್ಎ ಕಾರ್ಯನಿರ್ವಾಹಕ ಇಂಜಿನಿಯರ್ ಸಂತೋಷಕುಮಾರ ಸಜ್ಜನ್ ತಿಳಿಸಿದ್ದಾರೆ. ತಾರಾಪುರ, ಕಡ್ಲೆವಾಡ, ಶೇಂಬೆವಾಡ, ತಾವರಖೇಡ ಮತ್ತು ಬ್ಯಾಡಗಿಹಾಳ ಗ್ರಾಮಗಳ ರಸ್ತೆಗಳಲ್ಲಿ ನೀರು ತುಂಬಿ ಸಂಪರ್ಕ ಕಡಿತಗೊಂಡಿದೆ. ದೇವಣಗಾಂವ ಗ್ರಾಮದಲ್ಲಿನ ಹನುಮಾನ್, ಅಂಬಿಗರ ಚೌಡಯ್ಯ ಮತ್ತು ಶಾಂತೇಶ್ವರ ದೇವಸ್ಥಾನಗಳು ಸೇರಿದಂತೆ ಅನೇಕ ಮನೆಗಳು ನೀರಿನಲ್ಲಿ ಮುಳುಗಿವೆ.

ದೇವಣಗಾಂವ–ಆಲಮೇಲ ರಸ್ತೆಯ ಪಕ್ಕದಲ್ಲಿ ನೀರು ತುಂಬಿ ನಿಂತಿದ್ದು, ನೀರಿನ ಮಟ್ಟ ಇನ್ನಷ್ಟು ಏರಿದರೆ ಕಲಬುರಗಿ–ವಿಜಯಪುರ ಮುಖ್ಯರಸ್ತೆಯ ಸಂಪರ್ಕವೂ ಕಡಿತಗೊಳ್ಳುವ ಸಾಧ್ಯತೆ ಇದೆ ಎನ್ನಲಾಗಿದೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ಕಮಸಾಗಿ ಗ್ರಾಮದ ಅಂಚಿನಲ್ಲಿರುವ ಮನೆಗಳಿಗೆ ನೀರು ನುಗ್ಗಿದೆ. ತಗ್ಗು ಆಗೋ ಹಳ್ಳ ಪ್ರದೇಶಗಳಲ್ಲಿ ಎಲ್ಲೆಂದರಲ್ಲಿ ನೀರು ನುಗ್ಗಿ ಹತ್ತಿ, ತೊಗರಿ, ಕಬ್ಬು ಬೆಳೆಗಳು ನೀರಿನಲ್ಲಿ ನಿಂತಿವೆ. ಭೀಮಾ ತೀರದ ಕಡಣಿ, ಕುರುಬತಹಳ್ಳಿ, ಮಗ್ನಳ್ಳಿ, ಬಗಲೂರ, ಚಿಕ್ಕ ಹಾವಳಗಿ, ಕಕ್ಕಳಮೇಲಿ, ಶಿರಸಗಿ, ಕುಳಿ ಕುಮಟಗಿ ಗ್ರಾಮಗಳ ಜಮೀನುಗಳಲ್ಲಿ ನೀರು ನುಗ್ಗಿದ್ದು, ಬೆಳೆಗಳು ನೀರುಪಾಲಾಗಿವೆ.

ಇದನ್ನೂ ಒದಿ: ವಿಜಯಪುರ | ಕೇಂದ್ರ ಸರ್ಕಾರ ಸರ್ಕಾರಿ ಆಸ್ಪತ್ರೆಗಳನ್ನು ಖಾಸಗೀಕರಣಗೊಳಿಸುವ ಹುನ್ನಾರ ನಡೆಸಿದೆ: ಅಮೂಲ್ಯ ನಿಧಿ

ಆಲಮೇಲ ತಹಶೀಲ್ದಾರ್ ಧನಪಾಲ ಶೆಟ್ಟಿ ಪ್ರವಾಹ ಪೀಡಿತ ಸ್ಥಳಗಳಿಗೆ ಭೇಟಿ ನೀಡಿ ಸಂತ್ರಸ್ತರಲ್ಲಿ ಧೈರ್ಯ ತುಂಬಿದರು. ದೇವಣಗಾಂವ ಪಿಡಿಒ ಸಂಜೀವ ಕುಮಾರ ದೊಡ್ಡಮನಿ, ಗ್ರಾಮ ಲೆಕ್ಕಾಧಿಕಾರಿ ಎಂಕೆ ಪೂಜಾರಿ ಸೇರಿದಂತೆ ಇನ್ನಿತರೆ ಅಧಿಕಾರಿಗಳು ಭೇಟಿ ಸಂದರ್ಭದಲ್ಲಿ ಉಪಸ್ಥಿತರಿದ್ದರು.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಸಿಂಧನೂರು | ರೀಲ್ಸ್ ಮಾಡಲು ಹೋದ ಯುವಕ ನೀರು ಪಾಲು

ರೀಲ್ಸ್ ಮಾಡುವ ಉದ್ದೇಶದಿಂದ ಸ್ನೇಹಿತರಿಗೆ ವಿಡಿಯೋ ಮಾಡಲು ಹೇಳಿ ಈಜಲು ನದಿಗೆ...

ಗದಗ | ಆದ್ಯ ವಚನಕಾರ ದೇವರ ದಾಸಿಮಯ್ಯ: ರಾಘವೇಂದ್ರ ಕೊಪ್ಪಳ

"ಆದ್ಯ ವಚನಕಾರ ನೇಕಾರ ಸಂತ ದೇವರ ದಾಸಿಮಯ್ಯನವರು 10 ನೇ ಶತಮಾನದಲ್ಲಿ...

ಮಾರ್ಚ್ 25ರಂದು ಬೆಂಗಳೂರಿನ ಫ್ರೀಡಂ ಪಾರ್ಕ್ನಲ್ಲಿ ಬಲಗೈ ಜಾತಿಗಳ ಬೃಹತ್ ಹೋರಾಟ

ಬಾಗೇಪಲ್ಲಿ:-ಕರ್ನಾಟಕ ರಾಜ್ಯ ಬಲಗೈ ಜಾತಿಗಳ ಮಹಾ ಒಕ್ಕೂಟದ ವತಿಯಿಂದ ಒಳ ಮೀಸಲಾತಿ...

ಯುಪಿಎಸ್ಸಿ ರ‍್ಯಾಂಕ್‌ ವಿಜೇತ ವರುಣ್ ಗೌಡಗೆ ಸನ್ಮಾನ

ಕೋಲಾರ: ಯುಪಿಎಸ್ಸಿ ಪರೀಕ್ಷೆಯಲ್ಲಿ 462 ನೇ ರ‍್ಯಾಂಕ್‌ ಪಡದ ತಾಲೂಕಿನ ತ್ಯಾವನಹಳ್ಳಿ...