ವಿಜಯಪುರ | ಬಜೆಟ್‌ ಕುರಿತು ಬಿಜೆಪಿ ಟೀಕೆ; ತಿರುಗೇಟು ಕೊಟ್ಟ ಕೆಪಿಸಿಸಿ ವಕ್ತಾರ ಗಣಿಹಾರ

Date:

ಮುಖ್ಯಮಂತ್ರಿ ಸಿದ್ದರಾಮಯ್ಯನವರು ಸರ್ವರಿಗೂ ಸಮಪಾಲು ಎಂಬ ನೀತಿಯಡಿ ಬಜೆಟ್ ಮಂಡಿಸಿದ್ದಾರೆ. ಆದರೆ, ಪ್ರತಿಪಕ್ಷ ಬಿಜೆಪಿಯವರು ‘ಹಲಾಲ್’ ಪದದ ಅರ್ಥ ಗೊತ್ತಿಲ್ಲದೆಯೇ ‘ಹಲಾಲ್ ಬಜೆಟ್’ ಎಂದು ಟೀಕಿಸಿದ್ದಾರೆ. ‘ಹಲಾಲ್’ ಎಂದರೆ ಪ್ರಮಾಣೀಕೃತ, ಕಾನೂನು ಬದ್ಧ ಎಂಬ ಅರ್ಥ ಹೊಂದಿದೆ. ಹಾಗಾದರೆ, ಬಿಜೆಪಿಯುವರು ಇದೊಂದು ಉತ್ತಮ ಬಜೆಟ್ ಎಂಬುವುದಾಗಿ ಒಪ್ಪಿಕೊಂಡಂತಾಗಿದೆ ಎಂದು ಕೆಪಿಸಿಸಿ ವಕ್ತಾರ ಎಸ್.ಎಂ.ಪಾಟೀಲ ಗಣಿಹಾರ ಬಿಜೆಪಿಗರಿಗೆ ತಿರುಗೇಟು ನೀಡಿದರು.

ನಗರದಲ್ಲಿ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, “ಸಿಎಂ ಬಜೆಟ್ ಭಾಷಣ ಓದಿ ಮುಗಿಸುವ ಮೊದಲೇ ಮುಸ್ಲಿಮರ ಬಗ್ಗೆ ಟೀಕೆ ಮಾಡಲು ಬಿಜೆಪಿಯವರಿಗೆ ಆತುರ ಇತ್ತು. ಹೀಗಾಗಿಯೇ ಹಲಾಲ್ ಪದದ ಅರ್ಥವನ್ನೂ ತಿಳಿದುಕೊಳ್ಳದೇ ಹಲಾಲ್ ಬಜೆಟ್ ಎಂದು ಟೀಕಿಸಿದ್ದಾರೆ. ಮತ್ತೊಂದೆಡೆ, ಪ್ರಧಾನಿಯವರು ‘ಸಬ್ ಕಾ ಸಾಥ್, ಸಬ್ ಕಾ ವಿಕಾಸ್’ ಎಂದು ಹೇಳುತ್ತಾರೆ. ಬಜೆಟ್‌ನಲ್ಲಿ ಅಲ್ಪಸಂಖ್ಯಾತ ಸಮುದಾಯಕ್ಕೆ ಕಡಿಮೆ ಅನುದಾನ ಸಿಕ್ಕಿರುವ ಬಗ್ಗೆ ರಾಜ್ಯ ಬಿಜೆಪಿಯವರು ಧ್ವನಿ ಎತ್ತಿದ್ದರೆ, ಪ್ರಧಾನಿಯವರ ಘೋಷಣೆಯಾದರೂ ಸಾಕಾರವಾಗುತ್ತಿತ್ತು” ಎಂದರು.

ಬಜೆಟ್‌ನಲ್ಲಿ ಅಲ್ಪಸಂಖ್ಯಾತ ಸಮುದಾಯಕ್ಕೆ 4.5 ಸಾವಿರ ಕೋಟಿ ರೂ. ಮೀಸಲಿಸಲಾಗಿದೆ. ಪರಿಶಿಷ್ಟ ಜಾತಿ, ಪಂಗಡ ನಂತರ ಮುಸ್ಲಿಂ ಸಮುದಾಯವೇ ದೊಡ್ಡದಾಗಿದೆ. ವಾಸ್ತವವಾಗಿ ಅಲ್ಪಸಂಖ್ಯಾತ ಸಮಯದಾಯಕ್ಕೆ 20 ಸಾವಿರ ಕೋಟಿ ರೂ. ಅನುದಾನ ನೀಡಬೇಕಾಗಿತ್ತು. ಅಲ್ಲದೇ, ಜಮೀರ್ ಅಹ್ಮದ್ ಖಾನ್ ಬಜೆಟ್ ಮಂಡನೆ ಮಾಡಿದಂತಿದೆ ಎಂದೂ ಬಿಜೆಪಿಯವರು ಟೀಕಿಸಿದ್ದಾರೆ. ಮುಂದೊಂದು ದಿನ ಜಮೀರ್ ಸಹ ಮುಖ್ಯಮಂತ್ರಿಯಾಗಿ ಬಜೆಟ್ ಮಂಡಿಸಿದರೂ ಅಚ್ಚರಿ ಇಲ್ಲ ಇದರೊಂದಿಗೆ ಬಿಜೆಪಿ ಬಯಕೆ ಸಹ ಈಡೇರಬಹದು” ಎಂದು ತಿರುಗಿ ಟೀಕಿಸಿದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ಮುಖಂಡ ಎಂ.ಸಿ.ಮುಲ್ಲಾ ಮಾತನಾಡಿ, “ರಾಜ್ಯದಲ್ಲಿ ವಿರೋಧ ಪಕ್ಷವೇ ಸರಿಯಿಲ್ಲ. ಈ ಸ್ಥಾನವನ್ನು ನಿಭಾಯಿಸುವಲ್ಲಿ ಬಿಜೆಪಿ ಸಂಪೂರ್ಣ ವಿಫಲವಾಗಿದೆ. ಬಿಜೆಪಿಯವರಿಗೆ ಬಜೆಟ್ ಎಂದರೆ ಗೊತ್ತಿಲ್ಲ, ಬಜೆಟ್ ಅಭ್ಯಾಸ ಮಾಡಿಲ್ಲ. ರಾಜ್ಯ ಬಿಜೆಪಿ ನಾಯಕರಿಗೆ ಕೇವಲ ಹಿಜಾಬ್, ಹಲಾಲ್, ಹಿಂದೂ, ಮುಸ್ಲಿಂ ಜಗಳವೇ ಉಸಿರಾಟವಾಗಿದೆ. ಗ್ಯಾರಂಟಿ ಅನುದಾನ ಬಳಸಿಕೊಂಡಂತೆ ಅಲ್ಪಸಂಖ್ಯಾತ ಸಮುದಾಯದ ಹಣ ಬಳಸಿಕೊಳ್ಳಲಿ ಎಂದು ಮುತ್ಸದ್ದಿ ರಾಜಕಾರಣಿಯಾಗಿರುವ ಸಂಸದ ರಮೇಶ ಜಿಗಜಿಣಗಿ ಹೇಳಿಕೆ ನೀಡಿದ್ದು ಸರಿಯಲ್ಲ. ಮುಸ್ಲಿಂ ಬೆಂಬಲದಿಂದಲೇ ರಾಜಕೀಯ ಪ್ರವೇಶ ಮಾಡಿದ್ದನ್ನು ಅವರು ಮರೆಯಬಾರದು. ಇತಿಹಾಸದಲ್ಲಿ ಇಂತಹ ವಿರೋಧ ಪಕ್ಷವನ್ನು ನೋಡಿಲ್ಲ ಕೇವಲ ಜಟಕಾ, ಹಲಾಲ್ ಎಂಬ ವಿಷಯವನ್ನೇ ಜನರ ಮುಂದೆ ತರುವ ಬಿಜೆಪಿಯುವರು ತಮ್ಮ ಪಕ್ಷವನ್ನು ಭಾರತೀಯ ಜನತಾ ಪಾರ್ಟಿ ಬದಲಿಗೆ ಭಾರತೀಯ ಜಟಕಾ ಪಾರ್ಟಿ ಎಂದು ಬದಲಾಯಿಸಿಕೊಳ್ಳಬೇಕು” ಎಂದು ವಾಗ್ದಾಳಿ ನಡೆಸಿದರು.

ಇದನ್ನೂ ಓದಿ: ವಿಜಯಪುರ | ಬೆಟ್ಟಿಂಗ್‌ ಆ್ಯಪ್‌ಗಳನ್ನು ನಿಷೇಧಿಸುವಂತೆ ಜಿಲ್ಲಾಧಿಕಾರಿಗೆ ಮನವಿ

ಸುದ್ದಿಗೋಷ್ಠಿಯಲ್ಲಿ ಮುಖಂಡರಾದ ವಸಂತ ಹೊನಮೋಡೆ, ನಾಗರಾಜ ಲಂಬು ಇದ್ದರು.

WhatsApp Image 2025 11 17 at 3.21.17 PM
ಈ ದಿನ ಡೆಸ್ಕ್
+ posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಸಿಂಧನೂರು | ರೀಲ್ಸ್ ಮಾಡಲು ಹೋದ ಯುವಕ ನೀರು ಪಾಲು

ರೀಲ್ಸ್ ಮಾಡುವ ಉದ್ದೇಶದಿಂದ ಸ್ನೇಹಿತರಿಗೆ ವಿಡಿಯೋ ಮಾಡಲು ಹೇಳಿ ಈಜಲು ನದಿಗೆ...

ಗದಗ | ಆದ್ಯ ವಚನಕಾರ ದೇವರ ದಾಸಿಮಯ್ಯ: ರಾಘವೇಂದ್ರ ಕೊಪ್ಪಳ

"ಆದ್ಯ ವಚನಕಾರ ನೇಕಾರ ಸಂತ ದೇವರ ದಾಸಿಮಯ್ಯನವರು 10 ನೇ ಶತಮಾನದಲ್ಲಿ...

ಮಾರ್ಚ್ 25ರಂದು ಬೆಂಗಳೂರಿನ ಫ್ರೀಡಂ ಪಾರ್ಕ್ನಲ್ಲಿ ಬಲಗೈ ಜಾತಿಗಳ ಬೃಹತ್ ಹೋರಾಟ

ಬಾಗೇಪಲ್ಲಿ:-ಕರ್ನಾಟಕ ರಾಜ್ಯ ಬಲಗೈ ಜಾತಿಗಳ ಮಹಾ ಒಕ್ಕೂಟದ ವತಿಯಿಂದ ಒಳ ಮೀಸಲಾತಿ...

ಯುಪಿಎಸ್ಸಿ ರ‍್ಯಾಂಕ್‌ ವಿಜೇತ ವರುಣ್ ಗೌಡಗೆ ಸನ್ಮಾನ

ಕೋಲಾರ: ಯುಪಿಎಸ್ಸಿ ಪರೀಕ್ಷೆಯಲ್ಲಿ 462 ನೇ ರ‍್ಯಾಂಕ್‌ ಪಡದ ತಾಲೂಕಿನ ತ್ಯಾವನಹಳ್ಳಿ...