ವಿಜಯಪುರ | ಬಿಜೆಪಿ ಭಯದ ವಾತಾವರಣ ಸೃಷ್ಟಿ ಮಾಡುತ್ತಿದೆ: ಸಚಿವ ಶಿವಾನಂದ ಪಾಟೀಲ್‌

Date:

ಒಬ್ಬ ಮುಖ್ಯಮಂತ್ರಿಯನ್ನು ಅಧಿಕಾರದಲ್ಲಿದ್ದಾಗಲೇ ಬಂಧನ ಮಾಡಿ ಬಿಜೆಪಿ ಭಯದ ವಾತಾವರಣ ಸೃಷ್ಟಿ ಮಾಡುತ್ತಿದೆ ಎಂದು ಸಕ್ಕರೆ ಸಚಿವ ಶಿವಾನಂದ ಪಾಟೀಲ್‌ ಆಕ್ರೋಶ ವ್ಯಕ್ತಪಡಿಸಿದರು.

ಲೋಕಸಭೆ ಚುನಾವಣೆ ಹಿನ್ನೆಲೆಯಲ್ಲಿ ಇಲ್ಲಿ ಬುಧವಾರ (ಮಾ.27) ಸಂಜೆ ವಿಜಯಪುರ ಜಿಲ್ಲೆಯ ಬಸವನ ಬಾಗೇವಾಡಿ ವಿಧಾನಸಭೆ ಮತಕ್ಷೇತ್ರದಲ್ಲಿ ನಡೆದ ಕಾರ್ಯಕರ್ತರ ಸಭೆಯಲ್ಲಿ ಅವರು ಮಾತನಾಡಿದರು.

ಚುನಾವಣೆ ಬಾಂಡ್ ಹೆಸರಲ್ಲಿ ಬಿಜೆಪಿ ಪಕ್ಷ ಆರು ಸಾವಿರ ಕೋಟಿ ರೂ.ಸಂಗ್ರಹಿಸಿದ್ದು ಯಾವ ಲೆಕ್ಕವೂ ಇಲ್ಲ, ಒಬ್ಬರ ಬಂಧನವೂ ಇಲ್ಲ. ಆದರೆ, ಅಬಕಾರಿ ಹಗರಣದ ನೆವದಲ್ಲಿ ಕೇವಲ ನಾನೂರು ಕೋಟಿ ಅವ್ಯವಹಾರದ ಮೇಲೆ ಇಡಿ ಮುಖಾಂತರ ಕೇಜ್ರಿವಾಲರನ್ನು ಬಂಧಿಸಲಾಗಿದೆ. ಇದೆಲ್ಲ ಜನ ತಿಳಿದುಕೊಳ್ಳಬೇಕು ಎಂದು ಹೇಳಿದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ಅಭಿವೃದ್ಧಿ ಕೆಲಸಗಳನ್ನು ಇಟ್ಟುಕೊಂಡು ಕಾಂಗ್ರೆಸ್ ಪಕ್ಷ ಮತ ಕೇಳುತ್ತಿದೆ. ಆದರೆ ಬಿಜೆಪಿ ಬರೀ ಅನಗತ್ಯ ವಿಷಯಗಳ ಬೆನ್ನು ಬಿದ್ದಿದೆ. ಬಾಗಲಕೋಟ ಹಾಗೂ ವಿಜಯಪುರ ಲೋಕಸಭೆಗೆ ಕಾಂಗ್ರೆಸ್ ಪಕ್ಷದವರು ಆರಿಸಿ ಬಂದರೆ ಆಲಮಟ್ಟಿ ಅಣೆಕಟ್ಟು ಎತ್ತರಿಸಿ ಎರಡೂ ಜಿಲ್ಲೆಗೆ ಸಂಪೂರ್ಣ ನೀರಾವರಿ ಮಾಡಲಾಗುತ್ತದೆ. ಈ ಸಲ ಬದಲಾವಣೆ ಮಾಡಿ, ರಾಜು ಆಲಗೂರರನ್ನು ಗೆಲ್ಲಿಸಿ ಎಂದು ಕೇಳಿಕೊಂಡರು.

ವಿಜಯಪುರ ಲೋಕಸಭೆ ಕಾಂಗ್ರೆಸ್ ಅಭ್ಯರ್ಥಿ ರಾಜು ಆಲಗೂರ ಮಾತನಾಡಿ, ಬಿಜೆಪಿಗೆ ಮತ ಕೇಳುವ ನೈತಿಕತೆಯೇ ಇಲ್ಲ. ಒಂದೇ ಒಂದು ಪ್ರಶ್ನೆ ಕೇಳದೆ, ಯಾವ ಅಭಿವೃದ್ಧಿಯೂ ಮಾಡದೇ ಇರುವ ಬಿಜೆಪಿ ಅಭ್ಯರ್ಥಿಗೆ ಮತ ಕೇಳುವ ಹಕ್ಕಿಲ್ಲ. ಕಾಂಗ್ರೆಸ್ ಪಕ್ಷ ಎಲ್ಲ ಬಗೆಯಿಂದಲೂ ಅಭಿವೃದ್ಧಿ ಕೆಲಸ ಮಾಡಿದೆ. ಕೇಂದ್ರದಲ್ಲೂ ಅಧಿಕಾರ ನೀಡಿದರೆ, ಎರಡೂ ಕಡೆ ನಮ್ಮದೇ ಸರಕಾರವಾಗಿ ಇನ್ನಷ್ಟು ಕೆಲಸಗಳು ಸಾಧ್ಯವಾಗಲಿವೆ. ಬಿಜೆಪಿಯ ಸುಳ್ಳಿನ ಕಾಯಕ ಬಹಳ ದಿನ ನಡೆಯುವುದಿಲ್ಲ. ಜಿಲ್ಲೆ ಇವರ ಅಧಿಕಾರಾವಧಿಯಲ್ಲಿ ಯಾವ ಅಭಿವೃದ್ಧಿ ಕಂಡಿಲ್ಲ. ಈ ಸಲ ಕಾಂಗ್ರೆಸ್ ಪಕ್ಷಕ್ಕೆ ಮತ ನೀಡಿ ಎಂದು ಮನವಿ ಮಾಡಿದರು.

ಈರಣ್ಣ ಪಟ್ಟಣಶೆಟ್ಟ ಪ್ರಾಸ್ತಾವಿಕ ಮಾತನಾಡಿದರು. ಶೇಖರಗೌಡ ಪಾಟೀಲ ಸ್ವಾಗತಿಸಿದರು. ಭಾಗ್ಯರಾಜ ಸೊನ್ನದ ನಿರೂಪಿಸಿದರು. ಶರಣಪ್ಪ ಬಳ್ಳಾ, ಬಸವರಾಜ ಜಾಲಗೇರಿ, ಕಲ್ಲು ದೇಸಾಯಿ ಕೊಲ್ಹಾರ, ತಾನಾಜಿ ನಾಗರಾಳ, ಶಿವನಗೌಡ ಗುಜಗೊಂಡ, ರಾಜಣ್ಣ ಪಾಟೀಲ, ಆರ್.ಎನ್. ಸೂಳಿಬಾವಿ, ಎಮ್.ಜಿ. ಪಡಗಾನೂರ, ಶೇಖರ ಗೊಳಸಂಗಿ, ಸಿ.ಎಚ್. ಗಿಡ್ಡಪ್ಪಗೊಳ, ಮಹಿಳಾ ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷರಾದ ರುಕ್ಮಿಣಿ, ಮುಸ್ಕಾನ್, ಬಸವರಾಜ ಸೋಮಪುರ, ಮಲ್ಲನಗೌಡ ಪಾಟೀಲ, ಚಂದ್ರಶೇಖರಗೌಡ ಪಾಟೀಲ, ಎಸ್.ಬಿ. ಪತಂಗಿ, ಬಿಎಸ್ ಕಲ್ಲೂರ, ಮಲ್ಲಪ್ಪ ಬಾಗೇವಾಡಿ, ಅಣ್ಣಾರಾಯ ಪಾಟೀಲ, ಮಹ್ಮದ ಹನೀಫ್ ಪತಂಗಿ, ರಾಜುಗೌಡ ಪಾಟೀಲ, ಭರತ್ ಅಗರವಾಲ್, ನಾಗನಗೌಡ ಹಂಗರಗಿ, ಸುಭಾಶ ಉಕ್ಕಲಿ, ವಿಶ್ವನಾಥಗೌಡ ಪಾಟೀಲ, ಸಾಹೇಬಗೌಡ ಪಾಟೀಲ, ಸಲೀಂ ನಾಗಠಾಣ, ಚನ್ನಪ್ಪಗೌಡ ಬಿರಾದಾರ ಅನೇಕರಿದ್ದರು.

WhatsApp Image 2025 11 17 at 3.21.17 PM
ಈ ದಿನ ಡೆಸ್ಕ್
+ posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಸಿಂಧನೂರು | ರೀಲ್ಸ್ ಮಾಡಲು ಹೋದ ಯುವಕ ನೀರು ಪಾಲು

ರೀಲ್ಸ್ ಮಾಡುವ ಉದ್ದೇಶದಿಂದ ಸ್ನೇಹಿತರಿಗೆ ವಿಡಿಯೋ ಮಾಡಲು ಹೇಳಿ ಈಜಲು ನದಿಗೆ...

ಗದಗ | ಆದ್ಯ ವಚನಕಾರ ದೇವರ ದಾಸಿಮಯ್ಯ: ರಾಘವೇಂದ್ರ ಕೊಪ್ಪಳ

"ಆದ್ಯ ವಚನಕಾರ ನೇಕಾರ ಸಂತ ದೇವರ ದಾಸಿಮಯ್ಯನವರು 10 ನೇ ಶತಮಾನದಲ್ಲಿ...

ಮಾರ್ಚ್ 25ರಂದು ಬೆಂಗಳೂರಿನ ಫ್ರೀಡಂ ಪಾರ್ಕ್ನಲ್ಲಿ ಬಲಗೈ ಜಾತಿಗಳ ಬೃಹತ್ ಹೋರಾಟ

ಬಾಗೇಪಲ್ಲಿ:-ಕರ್ನಾಟಕ ರಾಜ್ಯ ಬಲಗೈ ಜಾತಿಗಳ ಮಹಾ ಒಕ್ಕೂಟದ ವತಿಯಿಂದ ಒಳ ಮೀಸಲಾತಿ...

ಯುಪಿಎಸ್ಸಿ ರ‍್ಯಾಂಕ್‌ ವಿಜೇತ ವರುಣ್ ಗೌಡಗೆ ಸನ್ಮಾನ

ಕೋಲಾರ: ಯುಪಿಎಸ್ಸಿ ಪರೀಕ್ಷೆಯಲ್ಲಿ 462 ನೇ ರ‍್ಯಾಂಕ್‌ ಪಡದ ತಾಲೂಕಿನ ತ್ಯಾವನಹಳ್ಳಿ...