ವಿಜಯಪುರ | ಬಿಹಾರದ ಬೋಧ್ ಗಯಾ ಜಗತ್ತಿನ ಬೌದ್ಧರಿಗೆಲ್ಲ ಪವಿತ್ರವಾದ ಸ್ಥಳ: ಸಂಜು ಕಂಬಾಗಿ

Date:

ಬಿಹಾರದ ಬೋಧ್ ಗಯಾ ಜಗತ್ತಿನ ಬೌದ್ಧರಿಗೆಲ್ಲ ಪರಮ ಪವಿತ್ರವಾದ ಸ್ಥಳ. ರಾಜಕುಮಾರ ಸಿದ್ಧಾರ್ಥ ಬೋಧಿಜ್ಞಾನ ಪಡೆದು ಭಗವಾನ್ ಬುದ್ಧನಾದ ಪಾವನ ಸ್ಥಳ. ಈ ಕ್ಷೇತ್ರ ಬುದ್ಧನ ಕಾಲದಿಂದಲೂ ಪೂಜನೀಯವಾಗಿದೆ. ಹಾಗಾಗಿ ಬಿ ಟಿ ಆಕ್ಟ್ 1949ರ ಕಾಯ್ದೆಯನ್ನು ರದ್ದುಪಡಿಸಬೇಕು ಎಂದು ದಸಂಸ ವಿಜಯಪುರ ಜಿಲ್ಲಾ ಪ್ರಧಾನ ಕಾರ್ಯದರ್ಶಿ ಸಂಜು ಕಂಬಾಗಿ ಆಗ್ರಹಿಸಿದರು.

ವಿಜಯಪುರ ಜಿಲ್ಲೆಯ ಕರ್ನಾಟಕ ದಲಿತ ಸಂಘರ್ಷ ಸಮಿತಿ(ಅಂಬೇಡ್ಕರ್ ಭೀಮವಾದ)ದಿಂದ ಪ್ರತಿಭಟನೆ ನಡೆಸಿ ಜಿಲ್ಲಾಧಿಕಾರಿ ಟಿ ಭೂಬಾಲನ್ ಮುಖಾಂತರ ರಾಷ್ಟ್ರಪತಿಗೆ ಮನವಿ ಸಲ್ಲಿಸಿದ ಮಾತನಾಡಿದರು.

“ಸಾಮ್ರಾಟ್ ಅಶೋಕನು ಸೇರಿದಂತೆ ಈ ದೇಶದ ಅನೇಕ ರಾಜ ಮಹಾರಾಜರು ಮತ್ತು ಬರ್ಮಾ, ಶ್ರೀಲಂಕಾ, ಥೈಲ್ಯಾಂಡ್, ಜಪಾನ್ ಮತ್ತು ಇನ್ನಿತರ ದೇಶಗಳ ರಾಜರು ಹಾಗೂ ಉಪಾಸಕರು ಈ ಕ್ಷೇತ್ರ ವೃದ್ಧಿಗಾಗಿ ಶ್ರದ್ದಾಪೂರ್ವಕ ಕೊಡುಗೆ ನೀಡಿರುವುದು ಇತಿಹಾಸ. ಭಾರತದಲ್ಲಿ ಹುಟ್ಟಿ ಏಷ್ಯಾ ಖಂಡದ ಎಲ್ಲ ದೇಶಗಳಲ್ಲಿ ಪ್ರಪಂಚಾದ್ಯಂತ ವಿಜೃಂಭಿಸಿದೆ” ಎಂದು ಹೇಳಿದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

“ಏಷ್ಯಾದ ಬೆಳಕು ಎಂದು ಪ್ರಖ್ಯಾತವಾದ ಬೌದ್ಧಧರ್ಮ ಕಾಲಾನುಕ್ರಮದಲ್ಲಿ ಮಾತೃಭೂಮಿಯಲ್ಲಿ ಮುಸ್ಲಿಂ ಮತ್ತು ಹಿಂದೂಗಳ ಆಕ್ರಮಣಕ್ಕೆ ತುತ್ತಾಗಿ ಕಣ್ಮರೆಯಾಗಿದೆ. ಪ್ರಬುದ್ಧ ಭಾರತದ ಮಹಾಭೂತಿ ಮಹಾವಿಹಾರದ ಮುಕ್ತಿ ಆಂದೋಲನವನ್ನು 1992ರಂದು ಬಂದ ಆರ್ಯ ನಾಗಾರ್ಜುನ ಸುರೈ ಸಸಾಯಿಯವರ ನೇತೃತ್ವದಲ್ಲಿ ಅಂಬೇಡ್ಕರ್ ಅನುಯಾಯಿಗಳು ಮುಂದುವರೆಸಿದರು” ಎಂದು ತಿಳಿಸಿದರು.

“ರಾಷ್ಟ್ರಮಟ್ಟದಲ್ಲಿ ಹಲವು ಸುತ್ತಿನ ಹೋರಾಟಗಳು ಜರುಗಿದವು. ಬಿ ಟಿ ಆಕ್ಟ್ 1949ರ ಕಾಯ್ದೆಯಲ್ಲಿ ಹಾಗೂ ಬಿಟಿಎಂಸಿಯಲ್ಲಿ ಕೆಲವು ಬದಲಾವಣೆಗಳಾದವೇ ಹೊರತು ಸಂಪೂರ್ಣ ರದ್ದಾಗಲಿಲ್ಲ. ಈ ಸಂಬಂಧ ಕಳೆದ 15 ವರ್ಷಗಳಿಂದ ಬೌದ್ಧರು ನಡೆಸಿದ ಕಾನೂನು ಹೋರಾಟಕ್ಕೆ ಇನ್ನೂ ಜಯ ಸಿಕ್ಕಿಲ್ಲ. ಪ್ರಸ್ತುತ ಅಖಿಲ ಭಾರತ ಬೌದ್ಧ ವೇದಿಕೆ ಜಿಲ್ಲಾ ವಿಚಾರಧಾರೆಯ ಬೌದ್ಧ ಸಂಘ ಸಂಸ್ಥೆಗಳು ಹಾಗೂ ದೇಶದ ಅಂಬೇಡ್ಕರ್ ಅನುವಾಯಿಗಳನ್ನು ಒಂದೇ ವೇದಿಕೆಗೆ ತಂದು ಹೋರಾಟ ಆರಂಭಿಸಿದೆ” ಎಂದು ಹೇಳಿದರು.

ಈ ಸುದ್ದಿ ಓದಿದ್ದೀರಾ? ಮೈಸೂರು | ಬಿಳಿಕೆರೆ ಕಂದಾಯ ನಿರೀಕ್ಷಕ ಮಂಜುನಾಥ್ ವಿರುದ್ಧ ಶಿಸ್ತು ಕ್ರಮಕ್ಕೆ ರೈತರ ಆಗ್ರಹ

ರಾಜ್ಯ ಮಹಿಳಾ ಸಂಘಟನಾ ಸಂಚಾಲಕಿ ಪ್ರತಿಭಾ ಹೊಸಮನಿ ಮಾತನಾಡಿ, “ಈ ದೇಶದ ಬೌದ್ಧ ಸಮುದಾಯ ಮತ್ತು ಅಂಬೇಡ್ಕರ್ ಅನುಯಾಯಿಗಳು ಸಂವಿಧಾನದತ್ತ ಧಾರ್ಮಿಕ ಅವಕಾಶಗಳಿಂದ ವಂಚಿತರಾಗಿದ್ದಾರೆ. ಬಿಟಿ ಆಕ್ಟ್ 1949ನ್ನು ರದ್ದುಪಡಿಸಿ ಬೋಧ್‌ ಗಯಾದ ಮಹಾಬೋಧಿ ಮಹಾವಿಹಾರದ ಆಡಳಿತ ಸಂಪೂರ್ಣವಾಗಿ ಬೌದ್ಧರಿಗೆ ನೀಡಬೇಕು” ಎಂದು ಒತ್ತಾಯಿಸಿದರು.

ಈ ಸಂದರ್ಭದಲ್ಲಿ ಮಹಿಳಾ ಒಕ್ಕೂಟ ಜಲ ಸಂಚಾಲಕಿ ಕವಿತಾ ವಗ್ಗರ, ಜಿಲ್ಲಾ ಸಂಘಟಕರಾದ ಯಲ್ಲಪ್ಪ ಕಾಂಬಳೆ, ಚೈತನ ತೊರವಿ ಜಿಲ್ಲಾ ಸಂಘಟನಾ ಸಂಚಾಲಕ ಶಂಕರ ಚಲವಾದಿ, ನಗರ ಸಂಚಾಲಕ ನಕೂಶಾ ಹೊಸಮನಿ, ಪ್ರದೀಪ ಚಲವಾದಿ, ಭೀಮಣ್ಣ ಹಂಚಿನಾಳ, ಸುರೇಶ ಬಬಲೇಶ್ವರ, ಭಾಸ್ಕರ ಬೋರಗಿ, ಸುಖದೇವ ಕಟ್ಟಿಮನಿ, ತುಕಾರಾಮ ಮಮದಾಪುರ, ದತ್ತಾತ್ರೆಯ ಆಲ್ ಮೇಲಕರ ಮತ್ತಿತರ ಉಪಸ್ಥಿತರಿದ್ದರು.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಸಿಂಧನೂರು | ರೀಲ್ಸ್ ಮಾಡಲು ಹೋದ ಯುವಕ ನೀರು ಪಾಲು

ರೀಲ್ಸ್ ಮಾಡುವ ಉದ್ದೇಶದಿಂದ ಸ್ನೇಹಿತರಿಗೆ ವಿಡಿಯೋ ಮಾಡಲು ಹೇಳಿ ಈಜಲು ನದಿಗೆ...

ಗದಗ | ಆದ್ಯ ವಚನಕಾರ ದೇವರ ದಾಸಿಮಯ್ಯ: ರಾಘವೇಂದ್ರ ಕೊಪ್ಪಳ

"ಆದ್ಯ ವಚನಕಾರ ನೇಕಾರ ಸಂತ ದೇವರ ದಾಸಿಮಯ್ಯನವರು 10 ನೇ ಶತಮಾನದಲ್ಲಿ...

ಮಾರ್ಚ್ 25ರಂದು ಬೆಂಗಳೂರಿನ ಫ್ರೀಡಂ ಪಾರ್ಕ್ನಲ್ಲಿ ಬಲಗೈ ಜಾತಿಗಳ ಬೃಹತ್ ಹೋರಾಟ

ಬಾಗೇಪಲ್ಲಿ:-ಕರ್ನಾಟಕ ರಾಜ್ಯ ಬಲಗೈ ಜಾತಿಗಳ ಮಹಾ ಒಕ್ಕೂಟದ ವತಿಯಿಂದ ಒಳ ಮೀಸಲಾತಿ...

ಯುಪಿಎಸ್ಸಿ ರ‍್ಯಾಂಕ್‌ ವಿಜೇತ ವರುಣ್ ಗೌಡಗೆ ಸನ್ಮಾನ

ಕೋಲಾರ: ಯುಪಿಎಸ್ಸಿ ಪರೀಕ್ಷೆಯಲ್ಲಿ 462 ನೇ ರ‍್ಯಾಂಕ್‌ ಪಡದ ತಾಲೂಕಿನ ತ್ಯಾವನಹಳ್ಳಿ...