ವಿಜಯಪುರ | 2024-25ರ ಬಜೆಟ್ ಅತ್ಯಂತ ಜನಪ್ರಿಯ ಬಜೆಟ್:‌ ರವಿಕುಮಾರ ಬಿರಾದಾರ

Date:

3 ಲಕ್ಷದ 71 ಸಾವಿರ ಕೋಟಿ ದಾಖಲೆಯ ಬಜೆಟ್ ಮಂಡಿಸಿದ ಕರ್ನಾಟಕದ ಜನಪ್ರಿಯ ಮುಖ್ಯಮಂತ್ರಿ, ಭಾಗ್ಯಗಳ ಸರದಾರ ಸಿದ್ದರಾಮಯ್ಯನವರ ಬಜೆಟ್ ಅತ್ಯಂತ ಜನಪ್ರಿಯವಾಗಿದೆ. ಬಡವರ, ದೀನದಲಿತರ, ಕಾರ್ಮಿಕರ, ಮಹಿಳೆಯರ ಪರವಾದ ಬಜೆಟ್ ಇದಾಗಿದೆ ಎಂದು ಕೆಪಿಸಿಸಿ ವೈದ್ಯ ಘಟಕದ ರಾಜ್ಯ ಪ್ರಧಾನ ಕಾರ್ಯದರ್ಶಿ ಡಾ ರವಿಕುಮಾರ ಬಿರಾದಾರ ಬಣ್ಣಿಸಿದರು.

ವಿಜಯಪುರ ನಗರದಲ್ಲಿ ಪತ್ರಿಕಾ ಪ್ರಕಟಣೆಗೆ ತಿಳಿಸಿರುವ ಅವರು, “ಚುನಾವಣೆಗೂ ಮುನ್ನ ಘೋಷಿಸಿದ್ದ 5 ಗ್ಯಾರಂಟಿಗಳಾದ ಶಕ್ತಿ ಯೋಜನೆ, ಗ್ರಹಜ್ಯೋತಿ, ಗ್ರಹಲಕ್ಷ್ಮಿ, ಅನ್ನಭಾಗ್ಯ ಹಾಗೂ ಯುವನಿಧಿಗಳಿಗೆ ಹಣ ಒದಗಿಸಿ ನುಡಿದಂತೆ ನಡೆದಿದ್ದಾರೆ. ಅಲ್ಲದೇ ನವಕರ್ನಾಟಕ ನಿರ್ಮಾಣ ಮಾಡುವ ಹತ್ತು ಹಲವು ಘೋಷನೆಗಳನ್ನು ಮಾಡಿದ್ದು, ಇಡೀ ನಾಡಿನ ಜನತೆಯ ಬಾಳು ಬಂಗಾರವಾಗುವ ಕಾಲ ಸನ್ನಿಹಿತವಾಗಿದೆ” ಎಂದು ಹೇಳಿದರು.

“ವಿಜಯಪುರದ ಇಟ್ಟಂಗಿಹಾಳದಲ್ಲಿ ಫುಡ್ ಪಾರ್ಕ್, ಆಲಮೇಲದಲ್ಲಿ ತೋಟಗಾರಿಕಾ ಕಾಲೇಜು, ಬಸವನ ಬಾಗೇವಾಡಿ ಅಭಿವೃದ್ಧಿ ಮಂಡಳಿ ರಚನೆ ಹಾಗೂ ವಿಮಾನ ನಿಲ್ದಾಣ ಶೀಘ್ರ ಕಾರ್ಯ ನಿರ್ವಹಿಸುವಂತೆ ಘೋಷಿಸಿದ್ದು, ವಿಜಯಪುರ ಜಿಲ್ಲೆಯ ನೀರಾವರಿ ಯೋಜನೆಗಳನ್ನು ಶೀಘ್ರದಲ್ಲೇ ಪೂರ್ಣ ಮಾಡುವಲ್ಲಿ ಕ್ರಮ ಕೈಗೊಂಡಿರುವುದು ಜಿಲ್ಲೆ ಜನರಿಗೆ ಬಂಪರ್ ಸಿಕ್ಕಂತಾಗಿದೆ” ಎಂದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ಈ ಸುದ್ದಿ ಓದಿದ್ದೀರಾ? ಉಡುಪಿ | ಸರ್ವರಿಗೂ ಸಮಪಾಲು ಸರ್ವರಿಗೂ ಸಮಬಾಳು ನೀಡುವ ಗುರಿ ಹೊಂದಿರುವ ಬಜೆಟ್: ರಮೇಶ್ ಕಾಂಚನ್

“ಆಶಾ ಕಾರ್ಯಕರ್ತೆಯರ, ಅಂಗನವಾಡಿ ಕಾರ್ಯಕರ್ತೆಯರ ಮಾಸಾಶನ ಹೆಚ್ಚು ಮಾಡಿದ್ದು, ಶಿಕ್ಷಣ ಹಾಗೂ ಆರೋಗ್ಯ ಕ್ಷೇತ್ರಕ್ಕೂ ಹೆಚ್ಚಿನ ಹಣ ಮಿಸಲಿಟ್ಟಿರುವುದು ಅತೀವ ಸಂತಸ ತಂದಿದೆ. ಜನಸಾಮಾನ್ಯರಿಗೆ ಯಾವುದೇ ಹೆಚ್ಚಿನ ತೆರಿಗೆ ಹೇರದೆ ಆರ್ಥಿಕ ಶಿಸ್ತು ಕಾಪಾಡಿರುವ ಬಜೆಟ್ ಇದಾಗಿದೆ” ಎಂದು ಹೇಳಿದರು.

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಸಿಂಧನೂರು | ರೀಲ್ಸ್ ಮಾಡಲು ಹೋದ ಯುವಕ ನೀರು ಪಾಲು

ರೀಲ್ಸ್ ಮಾಡುವ ಉದ್ದೇಶದಿಂದ ಸ್ನೇಹಿತರಿಗೆ ವಿಡಿಯೋ ಮಾಡಲು ಹೇಳಿ ಈಜಲು ನದಿಗೆ...

ಗದಗ | ಆದ್ಯ ವಚನಕಾರ ದೇವರ ದಾಸಿಮಯ್ಯ: ರಾಘವೇಂದ್ರ ಕೊಪ್ಪಳ

"ಆದ್ಯ ವಚನಕಾರ ನೇಕಾರ ಸಂತ ದೇವರ ದಾಸಿಮಯ್ಯನವರು 10 ನೇ ಶತಮಾನದಲ್ಲಿ...

ಮಾರ್ಚ್ 25ರಂದು ಬೆಂಗಳೂರಿನ ಫ್ರೀಡಂ ಪಾರ್ಕ್ನಲ್ಲಿ ಬಲಗೈ ಜಾತಿಗಳ ಬೃಹತ್ ಹೋರಾಟ

ಬಾಗೇಪಲ್ಲಿ:-ಕರ್ನಾಟಕ ರಾಜ್ಯ ಬಲಗೈ ಜಾತಿಗಳ ಮಹಾ ಒಕ್ಕೂಟದ ವತಿಯಿಂದ ಒಳ ಮೀಸಲಾತಿ...

ಯುಪಿಎಸ್ಸಿ ರ‍್ಯಾಂಕ್‌ ವಿಜೇತ ವರುಣ್ ಗೌಡಗೆ ಸನ್ಮಾನ

ಕೋಲಾರ: ಯುಪಿಎಸ್ಸಿ ಪರೀಕ್ಷೆಯಲ್ಲಿ 462 ನೇ ರ‍್ಯಾಂಕ್‌ ಪಡದ ತಾಲೂಕಿನ ತ್ಯಾವನಹಳ್ಳಿ...