ವಿಜಯಪುರ | ಬಜೆಟ್‌ ಅಧಿವೇಶನ; ರೈತ ಮುಖಂಡರೊಂದಿಗೆ ಪೂರ್ವಭಾವಿ ಸಭೆ

Date:

ಈಗಾಗಲೇ 5 ಜನಪರ ಯೋಜನೆಗಳನ್ನು ಯಶಸ್ವಿಯಾಗಿ ನಡೆಸಿಕೊಂಡು ಬಂದಿದ್ದೇವೆ. ಮುಂದೆಯೂ ಮಾಡಿಕೊಂಡು ಹೋಗುತ್ತೇವೆ. ರಾಜ್ಯದ ಭೀಕರ ಬರಗಾಲದ ನಿಮಿತ್ತ ಕೇಂದ್ರಕ್ಕೆ ಮೂರು ಬಾರಿ ಮನವಿ ಮಾಡಿ ₹1,87,000 ಕೋಟಿ ಬಿಡುಗಡೆ ಮಾಡಬೇಕೆಂದು ಕೇಳಿದ್ದೇವೆ. ಆದರೆ ರೈತರ ಬಗ್ಗೆ ಕಿಂಚಿತ್ತೂ ಕಾಳಜಿ ಇಲ್ಲದೇ ಈವರೆಗೆ ಒಂದು ನಯಾ ಪೈಸೆಯನ್ನೂ ಕೊಟ್ಟಿಲ್ಲ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ರೈತ ಮುಖಂಡರೊಡನೆ ಮಾತನಾಡಿದರು.

2024-25 ನೇ ಸಾಲಿನ ಬಜೆಟ್ ನಿಮಿತ್ತ ನಡೆಯಲಿರುವ ಅಧಿವೇಶನದ ಪೂರ್ವವಾಗಿ ರಾಜ್ಯದ ಎಲ್ಲ ರೈತ ಮುಖಂಡರೊಂದಿಗೆ ಬೆಂಗಳೂರಿನಲ್ಲಿ ನಡೆದ ಸಭೆಯಲ್ಲಿ ಮಾತನಾಡಿದರು.

“ಎಲ್ಲ ಜಿಲ್ಲೆಯ ರೈತ ಮುಖಂಡರ  ಅಭಿಪ್ರಾಯ ಸಂಗ್ರಹಿಸಿ ಮುಂಬರುವ ಬಜೆಟ್ ರೈತರಿಗೆ ಅನುಕೂಲವಾಗಲಿ ಎನ್ನುವ ಉದ್ದೇಶದಿಂದ ಈ ಸಭೆ ಕರೆಯಲಾಗಿದೆ. ಬರಗಾಲದ ನಿಮಿತ್ಯ  ಕುಡಿಯುವ ನೀರು, ಜಾನುವಾರುಗಳಿಗೆ ಮೇವು ಸೇರಿದಂತೆ ಅನುಕೂಲವಾಗಲೆಂದು ಎಲ್ಲ ಜಿಲ್ಲಾಧಿಕಾರಿಗಳಿಗೆ ಹಣ ಮಿಸಲಿಟ್ಟು ಮುಂಜಾಗೃತ ಕ್ರಮ ಕೈಗೊಳ್ಳುವಂತೆ ಹೇಳಲಾಗಿದೆ. ನಾನೂ ಕೂಡಾ ರೈತ ಸಂಘದಿಂದ ಬಂದಿರುವವನು ರೈತರ ಕಷ್ಟ ಗೊತ್ತಿದೆ, ರೈತರ ಪರವಾಗಿ ಯಾವಾಗಲೂ ಇರುತ್ತೇನೆ” ಎಂದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ರೈತ ಮುಖಂಡರ ಸಭೆ 1

ಕರ್ನಾಟಕ ರಾಜ್ಯ ರೈತ ಸಂಘ ಹಾಗೂ ಹಸಿರು ಸೇನೆಯ ರಾಜ್ಯ ಪ್ರಧಾನ ಕಾರ್ಯದರ್ಶಿ ರಾಹುಲ್ ಕುಬಕಡ್ಡಿ ಮಾತನಾಡಿ, “ವಿಜಯಪುರ ಜಿಲ್ಲೆಗೆ ಸಂಬಂಧಿಸಿದಂತೆ ಕೂಡಲೇ ಕೆಬಿಜೆಎನ್‌ಎಲ್ ಕಚೇರಿಯನ್ನು ಬೆಂಗಳೂರಿನಿಂದ ಆಲಮಟ್ಟಿಗೆ ಸ್ಥಳಾಂತರಿಸಬೇಕು. ಕೃಷ್ಣಾ ಕಣಿವೆ ಯೋಜನೆಯನ್ನು ರಾಷ್ಟ್ರೀಯ ಯೋಜನೆಯಾಗಿ ಘೋಷಿಸಬೇಕು. ಆಲಮಟ್ಟಿ ಜಲಾಶಯದ ಎತ್ತರವನ್ನು 519.6 ರಿಂದ 524.256 ಮೀಟರ್ ಎತ್ತರಕ್ಕೆ ಎತ್ತರಿಸಬೇಕು. ನಷ್ಟ ಪರಿಹಾರ ಹಾಗೂ ಪುರ್ನವಸತಿ ನೀಡಬೇಕು” ಎಂದು ಒತ್ತಾಯಿಸಿದರು.

“ಜಿಲ್ಲೆಯಲ್ಲಿ ಮಾಡಲಾಗಿರುವ ಎಲ್ಲ ನೀರಾವರಿ ಯೋಜನೆಯ ಕಾಲುವೆ ಹಾಗೂ ಉಪ ಕಾಲುವೆಗಳಲ್ಲಿ ಮಣ್ಣು ಬಿದ್ದು, ಜಾಲಿಕಂಠಿಗಳು ಬೆಳೆದು ನೀರು ಸಾಗುತ್ತಿಲ್ಲ. ಮುಂಜಾಗೃತವಾಗಿ ಮಳೆಗಾಲಕ್ಕೂ ಮುಂಚಿತವಾಗಿಯೇ ವ್ಯವಸ್ಥೆ ಮಾಡಬೇಕು. ಅದಕ್ಕಾಗಿ ಪ್ರತೈಕ ಹಣ ಮೀಸಲಿಡಬೇಕು. ಬರಗಾಲದ ನಿಮಿತ್ತ ರೈತರ ಸಂಪೂರ್ಣ ಸಾಲ ಮನ್ನಾ ಮಾಡಬೇಕು. ಬರಗಾಲ ನಿವಾರಣೆಗೆ ಮುಂಜಾಗ್ರತವಾಗಿ ವಿಶೇಷ ಯೋಜನೆ ರೂಪಿಸಬೇಕು” ಎಂದರು.

ಜಿಲ್ಲಾಧ್ಯಕ್ಷ ಸಂಗಮೇಶ ಸಗರ ಮಾತನಾಡಿ, “ರೈತರಿಗೆ ಕಂಟಕವಾಗಿರುವ ಕೃಷಿ ಕಾಯ್ದೆ, ಎಪಿಎಂಸಿ ಕಾಯ್ದೆ, ಜಾನುವಾರು ಹತ್ಯೆ ಕಾಯ್ದೆಗಳನ್ನು ಕೇಂದ್ರ ಸರ್ಕಾರ ರೈತರ ಹೋರಾಟದ ಫಲವಾಗಿ ಮಂಡಿಯೂರಿ ಬೇಷರತ್ತಾಗಿ ಮರಳಿ ಪಡೆದಿದೆ. ಆದರೆ ಆಗಿನ ಬಿಜೆಪಿ ಸರ್ಕಾರ ಅದನ್ನು ಮುಂದುವರಿಸಿಕೊಂಡು ಬಂದಿತ್ತು. ಚುನಾವಣಾ ಸಂದರ್ಭದಲ್ಲಿ ಕಾಂಗ್ರೆಸ್ ಸರ್ಕಾರ ಅಧಿಕಾರಕ್ಕೆ ಬಂದ ಕೂಡಲೇ ರೈತರಿಗೆ ಮಾರಕವಾಗಿರುವ ಮೂರು ಕೃಷಿ ಕಾಯ್ದೆಗಳನ್ನು ಹಿಂಪಡೆಯುತ್ತೆವೆಂದು ಹೇಳಿರುವ ಸರ್ಕಾರ ಇನ್ನೂ ಮರಳಿ ಪಡೆದಿಲ್ಲ. ಕೂಡಲೇ ಹಿಂಪಡೆಯಬೇಕು” ಎಂದು ಆಗ್ರಹಿಸಿದರು.

“ಜಿಲ್ಲೆಯಲ್ಲಿ ಅತಿ ಹೆಚ್ಚು ಬೆಳೆಯುತ್ತಿರುವ ಲಿಂಬೆ, ದಾಳಿಂಬೆ, ದ್ರಾಕ್ಷಿ, ಡ್ರ್ಯಾಗನ್ ಹಣ್ಣುಗಳಿಗೆ ವಿಶೇಷ ಪ್ಯಾಕೇಜ್ ಘೋಷಣೆ ಮಾಡಿ ಅದರ ಉಪ ಉತ್ಪನ್ನಗಳನ್ನು ಮಾಡುವಂತೆ ಉತ್ತೇಜಿಸುವ ಯೋಜನೆ ಮಾಡಬೇಕು. ಅತಿ ಹೆಚ್ಚು ಬೆಳೆಯುತ್ತಿರುವ ತೊಗರಿ ಮೆಣಸಿನಕಾಯಿ, ಅಜಿವಾನ, ಮೆಕ್ಕೆಜೋಳ, ಉಳ್ಳಾಗಡ್ಡಿ ಸೇರಿದಂತೆ ಹಲವು ಬೆಳೆಗಳಿಗೆ ಮಾರುಕಟ್ಟೆ ವ್ಯವಸ್ಥೆ ಕಲ್ಪಿಸಬೇಕು” ಎಂದರು.

ಕೋಲ್ಹಾರ ತಾಲೂಕು ಅಧ್ಯಕ್ಷ ಸೋಮು ಬಿ. ಬಿರಾದಾರ ಮಾತನಾಡಿ, “ವಿದ್ಯುತ್ ಅಕ್ರಮ ಸಕ್ರಮ ಮೊದಲಿನಂತೆ ಮುಂದುವರೆಸಬೇಕು. ರೈತರ ಕೃಷಿ ಪಂಪ್‌ಸೆಟ್‌ಗಳಿಗೆ ಹಗಲು 12 ಘಂಟೆ 3 ಫೇಸ್ ಹಾಗೂ ರಾತ್ರಿ ಸಿಂಗಲ್ ಫೇಸ್ ಉಚಿತ ವಿದ್ಯುತ್ ನೀಡಬೇಕು. ರೈತರಿಗೆ ಈವರೆಗೆ ಮೂರ್ನಾಲ್ಕು ವರ್ಷಗಳಿಂದ ಬಾಕಿ ಉಳಿದ ಬೆಳೆ ವಿಮೆಯನ್ನು ಕೂಡಲೇ ಕೊಡಬೇಕು. ತಾರತಮ್ಯ ಮಾಡದೆ ಏಕರೂಪದಲ್ಲಿ ಕಬ್ಬಿಗೆ ಪ್ರತಿ ಟನ್‌ಗೆ ₹3,500 ಬೆಲೆ ಘೋಷಣೆ ಮಾಡಿ, ಕಬ್ಬಿಗೂ ವಿಮೆ ವ್ಯವಸ್ಥೆ ಮಾಡಬೇಕು. ಜತೆಗೆ ತೂಕದಲ್ಲಿ ಆಗುತ್ತಿರುವ ಅನ್ಯಾಯವನ್ನು ಬಗೆಹರಿಸಬೇಕು” ಎಂದರು.

ಈ ಸುದ್ದಿ ಓದಿದ್ದೀರಾ? ಹಾಸನ | ಲೋಕಸಭೆ ಚುನಾವಣೆಯಲ್ಲಿ ಕಾಂಗ್ರೆಸ್ ಅಭ್ಯರ್ಥಿ ಗೆಲುವು ನಿಶ್ಚಿತ: ಸಚಿವ ಕೆ ಎನ್  ರಾಜಣ್ಣ ವಿಶ್ವಾಸ

2012ರಲ್ಲಿ ಮುಳವಾಡ ಗ್ರಾಮದ ರೈತರ 3220 ಎಕರೆ ಕೆಐಡಿಬಿಗಾಗಿ ಮೀಸಲಿಟ್ಟು ಈವರೆಗೆ ಆ ಜಾಗದಲ್ಲಿ ಯಾವುದೇ ಕಾಮಗಾರಿ ಪ್ರಾರಂಭವಾಗಿಲ್ಲ. ರೈತರು ತಮ್ಮ ಕಲಿತ ನಿರುದ್ಯೋಗಿ ಮಕ್ಕಳಿಗೆ ಉದ್ಯೋಗ ಸಿಗುವುದು ಎನ್ನುವ ಉದ್ದೇಶದಿಂದ ತಮ್ಮ ಬೆಲೆಬಾಳುವ ಭೂಮಿಯನ್ನು ಬಿಟ್ಟುಕೊಟ್ಟಿದ್ದಾರೆ. ಅಲ್ಲಿ ಕಾರ್ಖಾನೆಗಳನ್ನು ಪ್ರಾರಂಭಿಸಬೇಕು” ಎಂದು ಆಗ್ರಹಿಸಿದರು.

ಈ ವೇಳೆ ಮುಖಂಡ ಲಕ್ಷ್ಮಣ ಹಂಚಿನಾಳ, ಅಶೋಕ ಕಳಸಗೊಂಡ, ಸಂತೋಷ ಹಂಚಿನಾಳ ಅಭಿಷೇಕ ಹೂಗಾರ ಸೇರಿದಂತೆ ಇತರರು ಇದ್ದರು.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಸಿಂಧನೂರು | ರೀಲ್ಸ್ ಮಾಡಲು ಹೋದ ಯುವಕ ನೀರು ಪಾಲು

ರೀಲ್ಸ್ ಮಾಡುವ ಉದ್ದೇಶದಿಂದ ಸ್ನೇಹಿತರಿಗೆ ವಿಡಿಯೋ ಮಾಡಲು ಹೇಳಿ ಈಜಲು ನದಿಗೆ...

ಗದಗ | ಆದ್ಯ ವಚನಕಾರ ದೇವರ ದಾಸಿಮಯ್ಯ: ರಾಘವೇಂದ್ರ ಕೊಪ್ಪಳ

"ಆದ್ಯ ವಚನಕಾರ ನೇಕಾರ ಸಂತ ದೇವರ ದಾಸಿಮಯ್ಯನವರು 10 ನೇ ಶತಮಾನದಲ್ಲಿ...

ಮಾರ್ಚ್ 25ರಂದು ಬೆಂಗಳೂರಿನ ಫ್ರೀಡಂ ಪಾರ್ಕ್ನಲ್ಲಿ ಬಲಗೈ ಜಾತಿಗಳ ಬೃಹತ್ ಹೋರಾಟ

ಬಾಗೇಪಲ್ಲಿ:-ಕರ್ನಾಟಕ ರಾಜ್ಯ ಬಲಗೈ ಜಾತಿಗಳ ಮಹಾ ಒಕ್ಕೂಟದ ವತಿಯಿಂದ ಒಳ ಮೀಸಲಾತಿ...

ಯುಪಿಎಸ್ಸಿ ರ‍್ಯಾಂಕ್‌ ವಿಜೇತ ವರುಣ್ ಗೌಡಗೆ ಸನ್ಮಾನ

ಕೋಲಾರ: ಯುಪಿಎಸ್ಸಿ ಪರೀಕ್ಷೆಯಲ್ಲಿ 462 ನೇ ರ‍್ಯಾಂಕ್‌ ಪಡದ ತಾಲೂಕಿನ ತ್ಯಾವನಹಳ್ಳಿ...