ವಿಜಯಪುರ | ಎಫ್‌ಪಿಒಗಳೊಂದಿಗೆ ಸೃಜನಾತ್ಮಕ ಹೆಜ್ಜೆಯನ್ನಿಡಲು ರೈತರಿಗೆ ಕರೆ

Date:

ಶೋಷಣೆ ಮುಕ್ತ ಕೃಷಿ ಪರಿಸರ ಹಾಗೂ ಸುಸ್ಥಿರ ಆದಾಯದ ಮೂಲಗಳನ್ನು ಸೃಜಿಸಲು ಜಾರಿಯಾಗಿರುವ ಎಫ್‌ಪಿಒಗಳೊಂದಿಗೆ ಸೃಜನಾತ್ಮಕ ಹೆಜ್ಜೆಯನ್ನಿಡಲು ರೈತರು ಮುಂದಾಗಬೇಕೆಂದು ದಾಸೋಹಿ ಕುಕ್ಕುಟ ರೈತ ಉತ್ಪಾದಕ ಕಂಪನಿಯ ಅಧ್ಯಕ್ಷ ಅರವಿಂದ ಕೊಪ್ಪ ಕರೆ ನೀಡಿದರು.

ವಿಜಯಪುರ ಜಿಲ್ಲೆಯ ಮುದ್ದೇಬಿಹಾಳ ಸಮೀಪದ ಚೊಂಡಿ ಗ್ರಾಮದ ವೇ. ಸಿದ್ದಯ್ಯ ಹಿರೇಮಠ ಇವರ ಪುಣ್ಯಾಶ್ರಮದಲ್ಲಿ ಕರ್ನಾಟಕ ಸಹಕಾರ ಕುಕ್ಕುಟ ಮಹಾಮಂಡಳಿ ನಿಯಮಿತದ ಪ್ರಾದೇಶಿಕ ಕೇಂದ್ರ, ಬೆಳಗಾವಿ, ಶ್ರೀ ಪರಮಾನಂದ ಗ್ರಾಮೀಣ ಅಭಿವೃದ್ಧಿ ಸಂಸ್ಥೆ, ಹರನಾಳ ಹಾಗೂ ದಾಸೋಹಿ ಕುಕ್ಕುಟ ರೈತ ಉತ್ಪಾದಕ ಕಂಪನಿ ಇವರುಗಳ ಸಂಯುಕ್ತಾಶ್ರಯದಲ್ಲಿ ಏರ್ಪಡಿಸಿದ್ದ ಪಾಲುದಾರ ರೈತರ ಜಾಗೃತಿ ಸಮಾವೇಶದ ಅಧ್ಯಕ್ಷತೆ ವಹಿಸಿ ಮಾತನಾಡಿದರು.

“ರೈತರಿಗೆ ಅಗತ್ಯವಿರುವ ಸೇವೆಗಳನ್ನು ಒಂದೇ ಸೂರಿನಡಿ ಒದಗಿಸುವ ಮಹತ್ಕಾರ್ಯಕ್ಕೆ ಭೂಮಿಕೆಯಂತಿರುವ ಎಫ್‌ಪಿಒ ಅಭಿವೃದ್ಧಿ ಮತ್ತು ಬೆಳವಣಿಗೆಯಲ್ಲಿ ಹೆಚ್ಚಿನ ರೈತರ ಪಾಲ್ಗೊಳ್ಳುವಿಕೆ ಮುಖ್ಯ” ಎಂದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ನಿವೃತ್ತ ಕಾರ್ಯಪಾಲಕ ಅಭಿಯಂತರ ಬಸನಗೌಡ ಪಾಟೀಲ ಅವರು ಕಾರ್ಯಕ್ರಮ‌ ಉದ್ಘಾಟಿಸಿ ಮಾತನಾಡಿ, “ಕೃಷಿ ವ್ಯವಹಾರದ ಪ್ರತಿ ಹಂತದಲ್ಲಿ ಅಡಕವಾಗಿರುವ ಮೋಸದ ಚಕ್ರವ್ಯೂಹವನ್ನು ಭೇದಿಸಲು ರೈತ ಉತ್ಪಾದಕ ಕಂಪನಿ ಬ್ರಹ್ಮಾಸ್ತ್ರವಾಗಿದ್ದು, ರೈತರು ನಿರ್ಭೀತಿಯಿಂದ ಕಂಪನಿ ಕಟ್ಟಿ ಬೆಳೆಸುವ ನಿಟ್ಟಿನಲ್ಲಿ ಕೈಜೋಡಿಸಬೇಕು” ಎಂದು ಮನವಿ ಮಾಡಿದರು.

ಮುಖ್ಯ ಅತಿಥಿಯಾಗಿ ಆಗಮಿಸಿದ್ದ ನಿವೃತ್ತ ಉಪ ತಹಶೀಲ್ದಾರ್ ಆರ್‌ ಬಿ ಸಜ್ಜನ ಮಾತನಾಡಿ, “ರೈತ ಉತ್ಪಾದಕ ಕಂಪನಿ ನಿರ್ಮಾಣದ ಹಿಂದಿರುವ ಗುರಿ, ಉದ್ದೇಶ ಮತ್ತು ನಿಯಮಗಳನ್ನು ಪ್ರತಿಯೊಬ್ಬ ರೈತರೂ ಅರ್ಥ ಮಾಡಿಕೊಂಡು ಕಂಪನಿ ಮುನ್ನೆಡೆಸುವ ಜವಾಬ್ದಾರಿ ಮತ್ತು ಕರ್ತವ್ಯ ನಿಭಾಯಿಸಲು ಮುಂದೆ ಬರಬೇಕು” ಎಂದು ಕರೆ ನೀಡಿದರು.

ಈ ಸುದ್ದಿ ಓದಿದ್ದೀರಾ? 2 ವರ್ಷದಿಂದ ನಡೆಯುತ್ತಿದೆ ಚನ್ನರಾಯಪಟ್ಟಣ ರೈತ ಹೋರಾಟ; ಜುಲೈ 23ರಂದು ಮುಖ್ಯಮಂತ್ರಿ ಮನೆಗೆ ಜಾಥಾ

ಸಾನಿಧ್ಯ ವಹಿಸಿದ್ದ ಅಗಸಬಾಳದ ಶರಣಯ್ಯ ಹಿರೇಮಠ ಮಾತನಾಡಿ, “ರೈತ ಕಲ್ಯಾಣ ಕಾರ್ಯಗಳನ್ನು ಕೈಗೆತ್ತಿಕೊಂಡು ಸರ್ಕಾರದ ನಿಯಮಕ್ಕೊಳಪಟ್ಟು ಖಾಸಗಿ ವ್ಯವಸ್ಥೆಯೊಂದಿಗೆ ಕಾರ್ಯೋನ್ಮುಖವಾಗಲು ಸಿದ್ದವಾಗಿರುವ ರೈತರೇ ಕೂಡಿ ಕಟ್ಟಿದ ಕಂಪನಿ ಮೇಲಿನ ನಮ್ಮೆಲ್ಲರ‌ ವಿಶ್ವಾಸ ಹೆಚ್ಚಾಗಬೇಕು” ಎಂದರು.

ವೇದಿಕೆ ಮೇಲೆ ಬಸನಗೌಡ ಪಾಟೀಲ(ಅಗಸಬಾಳ), ನಿರ್ದೇಶಕ ಸೋಮಲಿಂಗಪ್ಪ ಗಸ್ತಿಗಾರ, ಕಲ್ಲಣ್ಣ ಪ್ಯಾಟಿ, ಅಭಿಯಂತರ ಎಸ್‌ ಬಿ ರಾಮತಾಳ, ಗೌಡಪ್ಪಗೌಡ ಮೇಟಿ ಸೇರಿದಂತೆ ಹಲವರು ಇದ್ದರು.

WhatsApp Image 2025 11 17 at 3.21.17 PM
ಈ ದಿನ ಡೆಸ್ಕ್
+ posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಸಿಂಧನೂರು | ರೀಲ್ಸ್ ಮಾಡಲು ಹೋದ ಯುವಕ ನೀರು ಪಾಲು

ರೀಲ್ಸ್ ಮಾಡುವ ಉದ್ದೇಶದಿಂದ ಸ್ನೇಹಿತರಿಗೆ ವಿಡಿಯೋ ಮಾಡಲು ಹೇಳಿ ಈಜಲು ನದಿಗೆ...

ಗದಗ | ಆದ್ಯ ವಚನಕಾರ ದೇವರ ದಾಸಿಮಯ್ಯ: ರಾಘವೇಂದ್ರ ಕೊಪ್ಪಳ

"ಆದ್ಯ ವಚನಕಾರ ನೇಕಾರ ಸಂತ ದೇವರ ದಾಸಿಮಯ್ಯನವರು 10 ನೇ ಶತಮಾನದಲ್ಲಿ...

ಮಾರ್ಚ್ 25ರಂದು ಬೆಂಗಳೂರಿನ ಫ್ರೀಡಂ ಪಾರ್ಕ್ನಲ್ಲಿ ಬಲಗೈ ಜಾತಿಗಳ ಬೃಹತ್ ಹೋರಾಟ

ಬಾಗೇಪಲ್ಲಿ:-ಕರ್ನಾಟಕ ರಾಜ್ಯ ಬಲಗೈ ಜಾತಿಗಳ ಮಹಾ ಒಕ್ಕೂಟದ ವತಿಯಿಂದ ಒಳ ಮೀಸಲಾತಿ...

ಯುಪಿಎಸ್ಸಿ ರ‍್ಯಾಂಕ್‌ ವಿಜೇತ ವರುಣ್ ಗೌಡಗೆ ಸನ್ಮಾನ

ಕೋಲಾರ: ಯುಪಿಎಸ್ಸಿ ಪರೀಕ್ಷೆಯಲ್ಲಿ 462 ನೇ ರ‍್ಯಾಂಕ್‌ ಪಡದ ತಾಲೂಕಿನ ತ್ಯಾವನಹಳ್ಳಿ...