ವಿಜಯಪುರ | ಗಾಂಧೀಜಿಯವರ ಹುತಾತ್ಮ ದಿನದ ಅಂಗವಾಗಿ ಕ್ಯಾಂಡಲ್ ಮಾರ್ಚ್

Date:

ವಿಜಯಪುರದ ಪ್ರಗತಿಪರ ಸಂಘಟನೆಗಳ ವೇದಿಕೆ ನಗರದ ಅಂಬೇಡ್ಕರ್ ವೃತ್ತದಿಂದ ಗಾಂಧಿ ವೃತದವರೆಗೂ ಕ್ಯಾಂಡಲ್ ಮಾರ್ಚ್ ಮಾಡಿ, ಗಾಂಧಿ ಭಾವಚಿತ್ರಕ್ಕೆ ಪುಷ್ಪ ನಮನ ಸಲ್ಲಿಸಿ ಗಾಂಧೀಜಿಯವರ ಹುತಾತ್ಮ ದಿನ ಆಚರಿಸಿದರು.

ಒಂದು ನಿಮಿಷ ಮೌನಚರಣೆ ನಂತರ, ಪ್ರಗತಿಪರ ಸಂಘಟನೆಯ ಮುಖಂಡ ಅಕ್ರಮ ಮಾಶಾಳಕಾರ ಮಾತನಾಡಿ, ಜನವರಿ 30, ಮಹಾತ್ಮ ಗಾಂಧಿಯ ಹತ್ಯೆಯ ದಿನ, ಈ ಹತ್ಯೆಯನ್ನು ಮಾಡಿದವನು ನಾತುರಾಮ್ ಗೋಡ್ಸೆ ಎಂಬ ಹಂತಕ, ಹತ್ಯೆ ಮಾಡಿದ್ದಲ್ಲದೆ ಅದನ್ನು ಸಮರ್ಥಿಸಿಕೊಂಡಿದ್ದನು. ಇಂಥ ಸಂಸ್ಕೃತಿ ನಮ್ಮ ದೇಶದಲ್ಲ. ಬಹುತ್ವವನ್ನು ಪ್ರತಿಪಾದಿಸುವಂತಹ ದೇಶ. ಹಿಂಸೆ ಯನ್ನು ವೈಭವಿಕರಿಸುವಂತದ್ದು ನಮ್ಮ ಸಂಸ್ಕೃತಿಯಲ್ಲ ಎಂದರು.

ಗಾಂಧೀಜಿಯವರ ವಿಚಾರಗಳು ವಿಶ್ವಮಟ್ಟದಲ್ಲೇ ಪ್ರಚಾರ ಗೊಂಡಿರುವುದು ತಮ್ಮೆಲ್ಲರಿಗೂ ಗೊತ್ತಿರುವ ಸಂಗತಿ. ನನ್ನ ಜೀವನವೇ ನನ್ನ ಸಂದೇಶ ಎಂಬ ವಾಕ್ಯ ಗಾಂಧೀಜಿಯವರ ವಿಚಾರವಾಗಿತ್ತು. ದೇಶಕ್ಕೋಸ್ಕರ ತಮ್ಮ ಜೀವದಾನ ಮಾಡಿದಂತ ಮಹಾ ಪುಣ್ಯಾತ್ಮ ಗಾಂಧೀಜಿ. ಆದರೆ, ಇಂದಿನ ದಿನಮಾನಗಳಲ್ಲಿ ಮತ್ತೆ ಗೋಡ್ಸೆಅಂತಹ ವಿಚಾರಗಳು ಮುನ್ನೆಲೆಗೆ ಬರುತ್ತಿರುವುದು ದೇಶಕ್ಕೆ ಅಪಾಯಕಾರಿ ಎಂದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ಪ್ರಗತಿಪರರೆಲ್ಲರೂ ಸೇರಿ ಗಾಂಧೀಜಿ ನೆನೆಯುವುದೆಂದರೆ ಅವರ ವಿಚಾರಗಳನ್ನು ಹರಡುವುದು ಎಂದರ್ಥ. ನಾವೆಲ್ಲರೂ ಸೇರಿ ಗಾಂಧೀಜಿಯವರ ವಿಚಾರಗಳನ್ನು ಮನನ ಮಾಡಿಕೊಳ್ಳಬೇಕು ಅವರು ಹಾಕಿಕೊಟ್ಟ ಮಾರ್ಗದಲ್ಲಿ ನಾವು ಮುನ್ನಡೆಯಬೇಕೆಂದರು.

ರಿಯಾಜ ಫಾರೂಕಿ ಮಾತನಾಡಿ, ನಮ್ಮ ದೇಶ ಸಂವಿಧಾನವನ್ನು ಹೊಂದಿರುವಂತದ್ದು. ಬಹು ಸಂಸ್ಕೃತಿಗೆ ನಮ್ಮ ದೇಶ ವಿಶ್ವದಲ್ಲೇ ವಿಶೇಷತೆಯನ್ನು ಹೊಂದಿದೆ. ಆದರೆ, ಇಂದಿನ ದಿನ  ಕೋಮುವಾದಿಗಳ ಕೈಗೆ ಸಿಕ್ಕು ಅಲ್ಪಸಂಖ್ಯಾತರು ಶೋಷಣೆಗೊಳಗಾಗುತ್ತಿದ್ದಾರೆ. ಇದರ ವಿರುದ್ಧ ಬಲಿಷ್ಠವಾಗಿ ಹೋರಾಟಗಳನ್ನು ಕಟ್ಟುವುದು ಗಾಂಧೀಜಿ ವಿಚಾರ ಇಟ್ಟುಕೊಂಡು  ಹೋರಾಟ ಮಾಡುವುದು ಅತ್ಯವಶ್ಯ  ಎಂದರು.

ಈ ಸಂದರ್ಭದಲ್ಲಿ ಫಾದರ್ ಟಿಯೋಲಾ ಮಾಚಾದೊ, ಅಥಲ್ವಾ ದ್ರಾಕ್ಷಿ, ಮುತ್ತು ಭೋವಿ, ನಿರ್ಮಲಾ ಹೊಸಮನಿ, ಪಾಟೀಲ, ಹಮೀದ್ ಪಾಟೀಲ, ಕೃಷ್ಣಾ ಜಾಧವ, ರೇಷ್ಮಾ ಪಡಗನ್ನವರ, ಸಿ.ಬಿ. ಪಾಟೀಲ, ಬೀರಪ್ಪ ಜಮಾನಾಳ, ರುಕುಮುದ್ದಿನ್ ತೋರವಿ, ಇಬ್ರಾಯಿಮ ಮಸಾಗನಾಳ, ವರ್ಷ ಭೋವಿ, ಬಾಳು ಜೇವೂರು ಇತರರು ಉಪಸ್ಥಿತರಿದ್ದರು.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಸಿಂಧನೂರು | ರೀಲ್ಸ್ ಮಾಡಲು ಹೋದ ಯುವಕ ನೀರು ಪಾಲು

ರೀಲ್ಸ್ ಮಾಡುವ ಉದ್ದೇಶದಿಂದ ಸ್ನೇಹಿತರಿಗೆ ವಿಡಿಯೋ ಮಾಡಲು ಹೇಳಿ ಈಜಲು ನದಿಗೆ...

ಗದಗ | ಆದ್ಯ ವಚನಕಾರ ದೇವರ ದಾಸಿಮಯ್ಯ: ರಾಘವೇಂದ್ರ ಕೊಪ್ಪಳ

"ಆದ್ಯ ವಚನಕಾರ ನೇಕಾರ ಸಂತ ದೇವರ ದಾಸಿಮಯ್ಯನವರು 10 ನೇ ಶತಮಾನದಲ್ಲಿ...

ಮಾರ್ಚ್ 25ರಂದು ಬೆಂಗಳೂರಿನ ಫ್ರೀಡಂ ಪಾರ್ಕ್ನಲ್ಲಿ ಬಲಗೈ ಜಾತಿಗಳ ಬೃಹತ್ ಹೋರಾಟ

ಬಾಗೇಪಲ್ಲಿ:-ಕರ್ನಾಟಕ ರಾಜ್ಯ ಬಲಗೈ ಜಾತಿಗಳ ಮಹಾ ಒಕ್ಕೂಟದ ವತಿಯಿಂದ ಒಳ ಮೀಸಲಾತಿ...

ಯುಪಿಎಸ್ಸಿ ರ‍್ಯಾಂಕ್‌ ವಿಜೇತ ವರುಣ್ ಗೌಡಗೆ ಸನ್ಮಾನ

ಕೋಲಾರ: ಯುಪಿಎಸ್ಸಿ ಪರೀಕ್ಷೆಯಲ್ಲಿ 462 ನೇ ರ‍್ಯಾಂಕ್‌ ಪಡದ ತಾಲೂಕಿನ ತ್ಯಾವನಹಳ್ಳಿ...