ವಿಜಯಪುರ | ಸಡಗರ ಸಂಭ್ರಮದ ರಂಜಾನ ಹಬ್ಬ ಆಚರಣೆ

Date:

ವಿಜಯಪುರ ಜಿಲ್ಲೆಯ ಬಸವನಬಾಗೇವಾಡಿ ತಾಲೂಕಿನ ಮಸಬಿನಾಳ ಗ್ರಾಮದಲ್ಲಿ ರಂಜಾನ ಹಬ್ಬವನ್ನು ಮುಸ್ಲಿಂ ಬಾಂಧವರು ಸಡಗರ ಸಂಭ್ರಮದಿಂದ ಆಚರಿಸಿದರು.

ಸ್ಥಳೀಯ ಅಂಜುಮನ್ ಕಮಿಟಿಯ ಕಾರ್ಯದರ್ಶಿ ಲಾಲಸಾಬ್‌ ಸೈಯದ ಅವರು ಮಾತನಾಡಿ, ಮುಸ್ಲಿಮರ ಪಾಲಿಗೆ ಅತ್ಯಂತ ಪವಿತ್ರವಾಗಿರುವ ಈ ಮಾಸ ರಂಜಾನ್‌. ಚಂದ್ರನ ಚಲನೆಯನ್ನು ಆದರಿಸಿದ ಇಸ್ಲಾಮಿಕ್ ಕ್ಯಾಲೆಂಡರ ಪ್ರಕಾರ 9ನೇಯ ಈ ತಿಂಗಳಲ್ಲಿ ಹಗಲಿನ ಸುಮಾರು 14 ಗಂಟೆಗಳ ಕಾಲ ಉಪವಾಸವಿರುವ ರಂಜಾನ್ ಮಾಸದ ಆಚರಣೆ ಒಂದು ಭಾಗವಷ್ಟೇ, ಹೊರತು ಉಪವಾಸವೇ ಆಚರಣೆ ಅಲ್ಲ ಎಂದರು.

ಇಲ್ಲಿ ಮನಸ್ಸನ್ನು ಹತೋಟಿಯಲ್ಲಿಟ್ಟುಕೊಂಡು ದೇಹದ ಹಸಿವು, ಕಾಮನೆ, ಕೆಟ್ಟದ್ದನ್ನು ಆಚರಿಸುವ ಬಯಕೆಯನ್ನೇ ಮನಸ್ಸಿನಲ್ಲಿ ಮೊಳಕೆ ಒಡೆಯದಂತೆ ಮಾಡಿ ಶುದ್ಧೀಕರಿಸುವುದೇ ಪ್ರಮುಖ ಉದ್ದೇಶ. ಸೂರ್ಯೋದಯಕ್ಕೂ ಸುಮಾರು ಒಂದುವರೆ ಗಂಟೆ ಮೊದಲೇ ಶಹರಿ ಮಾಡಿ ಉಪವಾಸ ಮಾಡುವುದು ಮುಂದಿನ ಹದಿನಾಲ್ಕು ಗಂಟೆಗಳ ಕಾಲ ಮಾನಸಿಕವಾಗಿ ಮಾತ್ರವಲ್ಲ, ಯಾವುದೇ ಪ್ರಲೋಭನೆಗೆ ಒಳಗಾಗದೆ ಸೂರ್ಯಸ್ತದವರೆಗೆ ಕುರಾನ ಪಟ್ಟಣ, ಪ್ರಾರ್ಥನೆ, ದಾನ ಮತ್ತಿತರ ಕೆಲಸಗಳನ್ನು, ನಮ್ಮ ನಿತ್ಯದ ಕೆಲಸಗಳೊಂದಿಗೆ ಆಚರಿಸುವುದೇ ನಿಜವಾದ ಉಪವಾಸವಾಗಿದೆ ಎಂದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ಈ ಉಪವಾಸದ ಉದ್ದೇಶ ಉಪವಾಸದ ಅವಧಿಯಲ್ಲಿ ಸುಳ್ಳು ಹೇಳುವುದು ಲಾಭ ಮಾಡಿಕೊಳ್ಳುವುದು ಇನ್ನೊಬ್ಬರಿಗೆ ನೋವು ನೀಡುವುದು ಮೊದಲಾದ ಬಯಕೆಗಳನ್ನು ಮೂಲದಲ್ಲಿಯೇ ಹತ್ತಿಕ್ಕುವುದೇ ರಂಜಾನ. ಬಡವರ ಹಸಿವು ಶ್ರೀಮಂತರಿಗೆ ಈ ಕಠಿಣ ಪರಿಶ್ರಮದ ಅರಿವು ಮಾಡಿಸುವುದೇ ಉಪವಾಸ ಎಂದರು.

ಈ ಸಂದರ್ಭದಲ್ಲಿ ಹಾಪಿಜ ಮೊಹಮ್ಮದಸಾದ ಅವರು, ದೇಶದ ಒಳಿತಿಗಾಗಿ ರೈತರು ಎದುರಿಸುತ್ತಿರುವ ಬರಗಾಲ ಪ್ರಯುಕ್ತ ಮಳೆಗಾಗಿ ಅಲ್ಲಾಹನಲ್ಲಿ ಸಾಮೂಹಿಕ ಪ್ರಾರ್ಥನೆ ಸಲ್ಲಿಸಿದರು.

ಇದೇ ಸಂದರ್ಭದಲ್ಲಿ ಅಂಜುಮನ್ ಕಮಿಟಿಯ ಅಧ್ಯಕ್ಷ ಹಾರನರಶೀದ  ಹತ್ತರಕಿಹಾಳ, ಸದಸ್ಯರಾದ ಲಾಲ ಸಾಬ ಭಾಗವಾನ, ಬಾಬು ಭಾಗವಾನ, ಮಹಮ್ಮದಹನಿಪ, ಮಹಿಬೂಬ ಸೈಯದ, ಮಹಿಬೂಬ ಭಗವಾನ, ಮತ್ತಿತರು ಉಪಸ್ಥಿತರಿದ್ದರು.

WhatsApp Image 2025 11 17 at 3.21.17 PM
ಈ ದಿನ ಡೆಸ್ಕ್
+ posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಸಿಂಧನೂರು | ರೀಲ್ಸ್ ಮಾಡಲು ಹೋದ ಯುವಕ ನೀರು ಪಾಲು

ರೀಲ್ಸ್ ಮಾಡುವ ಉದ್ದೇಶದಿಂದ ಸ್ನೇಹಿತರಿಗೆ ವಿಡಿಯೋ ಮಾಡಲು ಹೇಳಿ ಈಜಲು ನದಿಗೆ...

ಗದಗ | ಆದ್ಯ ವಚನಕಾರ ದೇವರ ದಾಸಿಮಯ್ಯ: ರಾಘವೇಂದ್ರ ಕೊಪ್ಪಳ

"ಆದ್ಯ ವಚನಕಾರ ನೇಕಾರ ಸಂತ ದೇವರ ದಾಸಿಮಯ್ಯನವರು 10 ನೇ ಶತಮಾನದಲ್ಲಿ...

ಮಾರ್ಚ್ 25ರಂದು ಬೆಂಗಳೂರಿನ ಫ್ರೀಡಂ ಪಾರ್ಕ್ನಲ್ಲಿ ಬಲಗೈ ಜಾತಿಗಳ ಬೃಹತ್ ಹೋರಾಟ

ಬಾಗೇಪಲ್ಲಿ:-ಕರ್ನಾಟಕ ರಾಜ್ಯ ಬಲಗೈ ಜಾತಿಗಳ ಮಹಾ ಒಕ್ಕೂಟದ ವತಿಯಿಂದ ಒಳ ಮೀಸಲಾತಿ...

ಯುಪಿಎಸ್ಸಿ ರ‍್ಯಾಂಕ್‌ ವಿಜೇತ ವರುಣ್ ಗೌಡಗೆ ಸನ್ಮಾನ

ಕೋಲಾರ: ಯುಪಿಎಸ್ಸಿ ಪರೀಕ್ಷೆಯಲ್ಲಿ 462 ನೇ ರ‍್ಯಾಂಕ್‌ ಪಡದ ತಾಲೂಕಿನ ತ್ಯಾವನಹಳ್ಳಿ...