ವಿಜಯಪುರ | ಕೇಂದ್ರ, ರಾಜ್ಯ ಸರ್ಕಾರಗಳು ಸಹಕಾರ ಕ್ಷೇತ್ರದ ಮೇಲೆ ಲಕ್ಷ್ಯ ತೋರುತ್ತಿಲ್ಲ: ಸಚಿವ ಶಿವಾನಂದ ಪಾಟೀಲ

Date:

ಕೇಂದ್ರ ಮತ್ತು ರಾಜ್ಯ ಸರ್ಕಾರಗಳು ಸಹಕಾರ ತತ್ವದ ಆಶಯಗಳನ್ನೇ ಮರೆತಿದ್ದಲ್ಲದೆ, ಸಹಕಾರ ಕ್ಷೇತ್ರದ ಮೇಲೆ ಲಕ್ಷ್ಯ ತೋರುತ್ತಿಲ್ಲ ಎಂದು ಜವಳಿ ಹಾಗೂ ಸಕ್ಕರೆ ಸಚಿವ ಶಿವಾನಂದ ಪಾಟೀಲ ವಿಷಾದ ವ್ಯಕ್ತಪಡಿಸಿದರು.

ವಿಜಯಪುರ ಜಿಲ್ಲೆಯ ಸಿಂಧಗಿ ಪಟ್ಟಣದ ಅನ್ನಪೂರ್ಣ ಲೇಔಟ್‌ನಲ್ಲಿ ಮಂಗಳವಾರ ಸಂಜೆ ಸಿಂಧಗಿ-ಆಲಮೇಲ ದೇವರಹಿಪ್ಪರಗಿ ತಾಲೂಕಿನ ಪ್ರಾಥಮಿಕ ಕೃಷಿ ತ್ತಿನ ಅರ್ಬನ್ ಬ್ಯಾಂಕ್ ಹಾಗೂ ಕ್ರೆಡಿಟ್, ಸೌಹಾರ್ದ ಸಹಕಾರ ಸಹಯೋಗದೊಂದಿಗೆ ನಿರ್ಮಿಸಲಾಗುತ್ತಿರುವ ಸಹಕಾರ ವಸತಿ ಮತ್ತು ಮೂಲಭೂತ ನಿಗಮ ನಿಯಮಿತ ಭವನದ ಭೂಮಿ ಪೂಜೆ ನೆರವೇರಿಸಿ ಮಾತನಾಡಿದರು.

“ಸಹಕಾರ ಚಳವಳಿಗೆ ನಾಂದಿ ಹಾಡಿದ ರಾಜ್ಯದಲ್ಲಿ ಹುಟ್ಟಿಬೆಳೆದ ಕ್ಷೇತ್ರ ಈಗ ಕ್ಷೀಣಿಸುತ್ತಿದೆ. ಸಹಕಾರ ರಂಗದಿಂದ ರಾಜ್ಯ ಅಭಿವೃದ್ಧಿ ಕಂಡಿದೆ. ಈ ತತ್ವದಿಂದ ರಾಜ್ಯವೇ ಸ್ವಾವಲಂಬಿಯಾಗಿ ಬೆಳೆದುನಿಂತಿದೆ” ಎಂದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...
ಸಹಕಾರ ಕ್ಷೇತ್ರ

“ಎಲ್ಲ ಬೆಳೆಯನ್ನು ಬೆಳೆಯುವ ದೇಶ ನಮ್ಮದು. ಭವಿಷ್ಯದಲ್ಲಿ ಆಲಮಟ್ಟಿ ಅಣೆಕಟ್ಟಿನ ಎತ್ತರ ಹೆಚ್ಚಿ, ಜಿಲ್ಲೆ ಸಂಪೂರ್ಣವಾಗಿ ನೀರಾವರಿಯಾಗುತ್ತದೆ. ಕೃಷಿ ಕುರಿತು ರೈತರಲ್ಲಿ ಅಸೂಯೆ ಮೂಡದಿರಲಿ. ವೈಜ್ಞಾನಿಕವಾಗಿ ಬೆಳೆಯುವ ಮೂಲಕ ತಮ್ಮ ಬದುಕನ್ನು ಬದಲಾವಣೆಗೆ ತೆರೆದುಕೊಳ್ಳಬೇಕು. ಸಹಕಾರ ತತ್ವದಡಿ ಸುಂದರ ಮತ್ತು ಸುಭದ್ರ ಬದುಕು ಕಟ್ಟಿಕೊಳ್ಳಬೇಕು. ಕಟ್ಟಡ ನಿರ್ಮಾಣಕ್ಕೆ ಕೈಲಾದ ಸಹಕಾರ ನೀಡಲಾಗುವುದು” ಎಂದು ಹೇಳಿದರು.

ಶಾಸಕ ಅಶೋಕ ಮನಗೂಳಿ ಮಾತನಾಡಿ, “ಮೂರು ತಾಲೂಕಿನ 362 ಸಹಕಾರ ಸಂಘಗಳು ತಮ್ಮ ಕಾರ್ಯ ಚಿಂತನ-ಮಂಥನ ಚಟುವಟಿಕೆಗಳು ಆಸರೆಯಿಲ್ಲದೇ ನಡೆದಿದ್ದವು. ಈ ಸಹಕಾರ ಭವನದ ಮೂಲಕ ಅವರ ಕೆಲಸಗಳಿಗೆ, ಸಭೆ-ಸಮಾರಂಭಗಳಿಗೆ ಅನುಕೂಲವಾಗಲಿದೆ. ಈ ಹಿಂದಿನ ಸಭೆಯಲ್ಲಿ ನಿರ್ಧರಿಸಿದಂತೆ ಕಟ್ಟಡ ನಿರ್ಮಾಣಕ್ಕೆ ದೇಣಿಗೆ ನೀಡಿವೆ. ಮುಂದಿನ ವರ್ಷ ಇದೇ ಫೆಬ್ರವರಿಯಲ್ಲಿ ನೂತನ ಕಟ್ಟಡದ ಉದ್ಘಾಟನೆ ನೆರವೇರಿಸಲಾಗುವುದು” ಎಂದು ಭರವಸೆ ನೀಡಿದರು.

ಈ ಸುದ್ದಿ ಓದಿದ್ದೀರಾ? ವಿಜಯಪುರ | ತೊಗರಿ ಬೆಳೆಹಾನಿ ಪರಿಹಾರಕ್ಕೆ ರೈತರ ಆಗ್ರಹ

ಸಾರಂಗಮಠ-ಗಚ್ಚಿನಮಠದ ಡಾ.ಪ್ರಭು ಸಾರಂಗದೇವ ಶಿವಾಚಾರ್ಯರು ಸಾನಿಧ್ಯ ವಹಿಸಿದ್ದರು. ಸಾನ್ನಿಧ್ಯ ಅಖಂಡ ಸಹಕಾರ ಸಂಘಗಳ ಸಮಿತಿ ಅಧ್ಯಕ್ಷ ಡಾ. ರಾಮರಾವ್ ನಾಯಕ ಪ್ರಾಸ್ತಾವಿಕವಾಗಿ ಮಾತನಾಡಿದರು.

ವೇದಿಕೆಯಲ್ಲಿ ವಿಡಿಸಿಸಿ ಬ್ಯಾಂಕ್ ನಿರ್ದೇಶಕ ಹಣಮಂತ್ರಾಯಗೌಡ ಪಾಟೀಲ, ಗುರುಶಾಂತ ನಿಡೋಣಿ, ಸಾಧಿಕ್ ಸುಂಬಡ, ಕೆಡಿಪಿ ಸದಸ್ಯೆ ಮಹಾನಂದ ಬಮ್ಮಣ್ಣಿ, ಇಚಿಡಿ ಸಹಕಾರಿ ಸಹಾಯಕ ಉಪನಿಬಂಧಕ ಕೆ ಎಚ್‌ ವಡ್ಡರ, ಶಿವಕುಮಾರ ಗುಂದಗಿ ಇದ್ದರು.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಸಿಂಧನೂರು | ರೀಲ್ಸ್ ಮಾಡಲು ಹೋದ ಯುವಕ ನೀರು ಪಾಲು

ರೀಲ್ಸ್ ಮಾಡುವ ಉದ್ದೇಶದಿಂದ ಸ್ನೇಹಿತರಿಗೆ ವಿಡಿಯೋ ಮಾಡಲು ಹೇಳಿ ಈಜಲು ನದಿಗೆ...

ಗದಗ | ಆದ್ಯ ವಚನಕಾರ ದೇವರ ದಾಸಿಮಯ್ಯ: ರಾಘವೇಂದ್ರ ಕೊಪ್ಪಳ

"ಆದ್ಯ ವಚನಕಾರ ನೇಕಾರ ಸಂತ ದೇವರ ದಾಸಿಮಯ್ಯನವರು 10 ನೇ ಶತಮಾನದಲ್ಲಿ...

ಮಾರ್ಚ್ 25ರಂದು ಬೆಂಗಳೂರಿನ ಫ್ರೀಡಂ ಪಾರ್ಕ್ನಲ್ಲಿ ಬಲಗೈ ಜಾತಿಗಳ ಬೃಹತ್ ಹೋರಾಟ

ಬಾಗೇಪಲ್ಲಿ:-ಕರ್ನಾಟಕ ರಾಜ್ಯ ಬಲಗೈ ಜಾತಿಗಳ ಮಹಾ ಒಕ್ಕೂಟದ ವತಿಯಿಂದ ಒಳ ಮೀಸಲಾತಿ...

ಯುಪಿಎಸ್ಸಿ ರ‍್ಯಾಂಕ್‌ ವಿಜೇತ ವರುಣ್ ಗೌಡಗೆ ಸನ್ಮಾನ

ಕೋಲಾರ: ಯುಪಿಎಸ್ಸಿ ಪರೀಕ್ಷೆಯಲ್ಲಿ 462 ನೇ ರ‍್ಯಾಂಕ್‌ ಪಡದ ತಾಲೂಕಿನ ತ್ಯಾವನಹಳ್ಳಿ...