ವಿಜಯಪುರ | ಮಕ್ಕಳು ಆಟದ ಜತೆಗೆ ಓದಿಗೂ ಹೆಚ್ಚಿನ ಆಸಕ್ತಿ ತೋರಿಸಬೇಕು: ಹಮೀದ್ ಮುಶ್ರಫ್

Date:

ಇಂದಿನ ಮಕ್ಕಳೇ ನಾಳಿನ ಪ್ರಜೆಗಳು. ಮಕ್ಕಳು ಮನಸ್ಸು ಮಾಡಿದರೆ ಎಂತಹ ಸಾಧನೆ ಬೇಕಾದರೂ ಮಾಡಬಹುದು. ಹಾಗಾಗಿ ಮಕ್ಕಳು ಆಟದ ಜತೆಗೆ ಓದಿನ ಕಡೆಗೆ ಹೆಚ್ಚಿನ ಆಸಕ್ತಿ ತೋರಿಸಬೇಕು ಎಂದು ರಾಜಕೀಯ ಮುಖಂಡ ಹಮೀದ್ ಮುಶ್ರಫ್ ವಿದ್ಯಾರ್ಥಿಗಳಿಗೆ ಕಿವಿಮಾತು ಹೇಳಿದರು.

ವಿಜಯಪುರ ನಗರದ ಅನೌಪಚಾರಿಕ ಶಿಕ್ಷಣ ಸಂಸ್ಥೆ, ನಗರದ ಬಾಲಕಿರಣ ಮಕ್ಕಳ ಸಂಘಗಳ ಒಕ್ಕೂಟದ ಆಶ್ರಯದಲ್ಲಿ ಲೊಯೋಲಾ ಪದವಿ ಪೂರ್ವ ಕಾಲೇಜು ವತಿಯಿಂದಿ “ನಮ್ಮ ಹಕ್ಕು ನಮ್ಮ ರಕ್ಷಣೆ” ಎಂಬ ಘೋಷ ವಾಕ್ಯದಡಿ ಹಮ್ಮಿಕೊಂಡಿದ್ದ ಚಿಣ್ಣರ ಮೇಳ-2024 ಕಾರ್ಯಕ್ರಮದಲ್ಲಿ ಮಾತನಾಡಿದರು.

“ವಿಜಯಪುರ ಜಿಲ್ಲೆಯ ಮಕ್ಕಳು ಇವತ್ತು ಕ್ರಿಕೆಟರ್, ಪೈಲೆಟ್, ಆರ್ಮಿ ಹೀಗೆ ಉನ್ನತ ಹುದ್ದೆಯಲ್ಲಿದ್ದಾರೆ. ಜಿಲ್ಲೆಯ ಮಕ್ಕಳ ಎಲ್ಲ ಕ್ಷೇತ್ರಗಳಲ್ಲಿ ಇರುವಂತಾಗಬೇಕು. ಇದರಿಂದ ಪಾಲಕರು ಮತ್ತು ಜಿಲ್ಲೆಯ ಹೆಸರನ್ನು ಬೆಳಗುತ್ತೀರೆಂಬ ವಿಶ್ವಾಸವಿದೆ” ಎಂದು ಹೇಳಿದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

“ಇವತ್ತಿನ ಮಕ್ಕಳ ಮೇಳ ತುಂಬಾ ವಿಶೇಷತೆಯಿಂದ ಕೂಡಿದೆ. ನಿಮಗಾಗಿ ಸಂಸ್ಥೆ ಮನೋರಂಜನೆಯನ್ನು ಒದಗಿಸಿದೆ. ಇದರ ಸದುಪಯೋಗವನ್ನು ಪಡೆದುಕೊಳ್ಳಬೇಕು. ಬೇರೆ ಬೇರೆ ಕಡೆಗಳಿಂದ ಮಕ್ಕಳೆಲ್ಲ ಸೇರಿದ್ದೀರಿ. ಇಂದು ನಿಮ್ಮ ದಿನ. ಸಾಧ್ಯವಾದಷ್ಟು ಎಲ್ಲರೊಂದಿಗೆ ಬೆರೆತು ಸಂತೋಷಪಡಬೇಕು. ಜತೆಗೆ ಕಾರ್ಯಕ್ರಮದ ಅನುಭವವನ್ನೂ ಪಡೆದುಕೊಳ್ಳಬೇಕು” ಎಂದರು.

ಮುಖ್ಯ ಅತಿಥಿ ಬಸಮ್ಮ ಹತ್ತರಕಿ ಮಾತನಾಡಿ, ಸಂಕಷ್ಟದಲ್ಲಿರುವ ಮಕ್ಕಳಿಗೆ ಮಕ್ಕಳ ಕಲ್ಯಾಣ ಸಮಿತಿ ಯಾವ ರೀತಿ ನೆರವು ನೀಡುತ್ತಿದೆ. ಅದನ್ನು ಹೇಗೆ ಸಂಪರ್ಕಿಸಬೇಕೆಂಬುವುದನ್ನು ಮಕ್ಕಳಿಗೆ ಮಾಹಿತಿ ನೀಡಿದರು. ಜತೆಗೆ ಮಕ್ಕಳ ಸಂರಕ್ಷಣೆಗೆ ಮಕ್ಕಳ ಕಲ್ಯಾಣ ಸಮಿತಿ ಸದಾ ಸಿದ್ಧವಾಗಿದೆಯೆಂದು ತಿಳಿಸಿದರು.

ಫಾದರ್ ಟಿಯೋಲ್ ಮಚಾದೊ ಮಾತನಾಡಿ, “ಇವತ್ತಿನ ಚಿಣ್ಣರ ಮೇಳದ ಮುಖ್ಯ ಉದ್ದೇಶ ಆಟದ ಜತೆಗೆ ಕೆಲವು ಕಲಿಕೆಯನ್ನು ಇವತ್ತು ನೀವು ಇಲ್ಲಿಂದ ಕಲಿಯಬೇಕಾಗಿದೆ. ಪರಸ್ಪರ ಅನುಭವವನ್ನು ಹಂಚಿಕೊಳ್ಳಿ, ಆಟವಾಡಿ, ಒಟ್ಟಿಗೆ ಕೂತು ಊಟಮಾಡಿ, ನೃತ್ಯಮಾಡಿ ಚಿಣ್ಣರ ಮೇಳವನ್ನು ಅನುಭವಿಸಿರಿ” ಎಂದರು.

ಈ ಸುದ್ದಿ ಓದಿದ್ದೀರಾ? ಮೈಸೂರು | 11 ವರ್ಷದ ಬಾಲಕಿಗೆ ಕಣ್ಣಿನ ಪೊರೆ ಶಸ್ತ್ರಚಿಕಿತ್ಸೆ ಯಶಸ್ವಿ

ಚಿಣ್ಣರ ಮೇಳದಲ್ಲಿ ಮಕ್ಕಳಿಗಾಗಿ ಕುದುರೆ ಸವಾರಿ, ಮೆಹಂದಿ, ವಿಜ್ಞಾನ ಪ್ರಯೋಗಾಲಯ, ಹೆಣ್ಣುಮಕ್ಕಳ ಮುಟ್ಟಿನ ಕುರಿತು ಮಾಹಿತಿ, ಆರೋಗ್ಯ ತಪಾಸಣೆ ಶಿಬಿರ, ಸಂವಿಧಾನದ ಮಾಹಿತಿ, ವಿವಿಧ ಬಗೆಯ ಆಟೋಟಗಳು, ಅಲ್ಪೋಪಹಾರ ಸ್ಟಾಲ್‌ಗಳು, ಮ್ಯಾಜಿಕ್ ಶೋ, ಸಂಸ್ಕೃತಿಕ ಕಾರ್ಯಕ್ರಮಗಳು ಹೀಗೆ ಮಕ್ಕಳು ಎಲ್ಲ ಬಗೆಯ ಚಟುವಟಿಕೆಯಲ್ಲಿ ಭಾಗವಹಿಸಿ ಸಂತೋಷಪಟ್ಟರು. ಕಾರ್ಯಕ್ರದಲ್ಲಿ ವಿವಿಧ ಸ್ಲಂಗಳಿಂದ 750 ಮಕ್ಕಳು ಚಿಣ್ಣರ ಮೇಳದಲ್ಲಿ ಭಾಗವಹಿಸಿದ್ದರು.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಸಿಂಧನೂರು | ರೀಲ್ಸ್ ಮಾಡಲು ಹೋದ ಯುವಕ ನೀರು ಪಾಲು

ರೀಲ್ಸ್ ಮಾಡುವ ಉದ್ದೇಶದಿಂದ ಸ್ನೇಹಿತರಿಗೆ ವಿಡಿಯೋ ಮಾಡಲು ಹೇಳಿ ಈಜಲು ನದಿಗೆ...

ಗದಗ | ಆದ್ಯ ವಚನಕಾರ ದೇವರ ದಾಸಿಮಯ್ಯ: ರಾಘವೇಂದ್ರ ಕೊಪ್ಪಳ

"ಆದ್ಯ ವಚನಕಾರ ನೇಕಾರ ಸಂತ ದೇವರ ದಾಸಿಮಯ್ಯನವರು 10 ನೇ ಶತಮಾನದಲ್ಲಿ...

ಮಾರ್ಚ್ 25ರಂದು ಬೆಂಗಳೂರಿನ ಫ್ರೀಡಂ ಪಾರ್ಕ್ನಲ್ಲಿ ಬಲಗೈ ಜಾತಿಗಳ ಬೃಹತ್ ಹೋರಾಟ

ಬಾಗೇಪಲ್ಲಿ:-ಕರ್ನಾಟಕ ರಾಜ್ಯ ಬಲಗೈ ಜಾತಿಗಳ ಮಹಾ ಒಕ್ಕೂಟದ ವತಿಯಿಂದ ಒಳ ಮೀಸಲಾತಿ...

ಯುಪಿಎಸ್ಸಿ ರ‍್ಯಾಂಕ್‌ ವಿಜೇತ ವರುಣ್ ಗೌಡಗೆ ಸನ್ಮಾನ

ಕೋಲಾರ: ಯುಪಿಎಸ್ಸಿ ಪರೀಕ್ಷೆಯಲ್ಲಿ 462 ನೇ ರ‍್ಯಾಂಕ್‌ ಪಡದ ತಾಲೂಕಿನ ತ್ಯಾವನಹಳ್ಳಿ...