ವಿಜಯಪುರ | ಚಿಟ್ ಫಂಡ್ ಕಂಪೆನಿ ವಂಚನೆ; ಸಂತ್ರಸ್ತ ಠೇವಣಿದಾರರ ಹೋರಾಟಕ್ಕೆ ಡಿಎಸ್ಎಸ್ ಬೆಂಬಲ

Date:

ರಾಜ್ಯದಲ್ಲಿ ಹಾಗೂ ದೇಶದಲ್ಲಿ ಸಾರ್ವಜನಿಕರು ಸಾವಿರಾರು ಕೋಟಿ ರೂಪಾಯಿ ಚಿಟ್ ಫಂಡ್ ಕಂಪೆನಿಗಳಲ್ಲಿ ಹೂಡಿರುವ ಹಣವನ್ನು ಸಾರ್ವಜನಿಕರಿಗೆ ಮರಳಿಸಲು ಹಾಗೂ ವಂಚನೆ ಸಂತ್ರಸ್ತ ಠೇವಣಿದಾರರ ಕುಟುಂಬ ರಾಜ್ಯಾದ್ಯಂತ ಎಲ್ಲ ಜಿಲ್ಲಾಧಿಕಾರಿ ಕಚೇರಿ ಮುಂದೆ ಹಮ್ಮಿಕೊಂಡಿರುವ ಹೋರಾಟಕ್ಕೆ ದಲಿತ ಸಮರ ಸೇನೆ-ಕರ್ನಾಟಕ ವಿಜಯಪುರ ಜಿಲ್ಲಾ ಘಟಕ ಬೆಂಬಲ ನೀಡಿದೆ.

ಅಪರ ಜಿಲ್ಲಾಧಿಕಾರಿ ಸೋಮಲಿಂಗ ಗೇಣ್ಣೂರ್ ಅವರ ಮೂಲಕ ಮುಖ್ಯಮಂತ್ರಿ ಸಿದ್ದರಾಮಯ್ಯನವರಿಗೆ ಮನವಿ ಸಲ್ಲಿಸಿ, ಸಂಘಟನೆಯ ಜಿಲ್ಲಾಧ್ಯಕ್ಷ ಗೌಡಪ್ಪ ಬಸಪ್ಪ ಬಡಿಗೇರ ಮಾತನಾಡಿ, “ಸತತ 22 ದಿನಗಳಿಂದಲೂ ಹೆಚ್ಚು ಅವಧಿಗೆ ಜಿಲ್ಲಾಧಿಕಾರಿಗಳ ಕಚೇರಿ ಮುಂದೆ ಅಹೋರಾತ್ರಿ ಧರಣಿ ಸತ್ಯಾಗ್ರಹ ಹಮ್ಮಿಕೊಂಡಿರುವ ಠೇವಣಿದಾರರ, ಅನ್ಯಾಯಕ್ಕೂಳಾಗದವರ ಸಮಸ್ಯೆಯನ್ನು ಶೀಘ್ರವೇ ರಾಜ್ಯ ಹಾಗೂ ಕೇಂದ್ರ ಸರ್ಕಾರಗಳು ಬಗೆಹರಿಸಬೇಕು. ಇಲ್ಲದಿದ್ದರೆ, ರಾಜ್ಯವ್ಯಾಪಿ ಬಂದ್ ಹೋರಾಟಕ್ಕೆ ಕರೆ ನೀಡಲಾಗುವುದು” ಎಂದು ಎಚ್ಚರಿಕೆ ನೀಡಿದರು.

“ಇಡೀ ರಾಜ್ಯ ಹಾಗೂ ದೇಶದಲ್ಲಿ ಸರ್ಕಾರದ ರದ್ದುಗೊಳಿಸಿರುವ 185 ಚಿಟ್ ಫಂಡ್ ಕಂಪೆನಿಗಳಲ್ಲಿ ಹಣ ಹೂಡಿರುವ ಸಾರ್ವಜನಿಕರ ಹಣವನ್ನು ಅನಿಯಂತ್ರಿತ ಠೇವಣಿ ಯೋಜನೆಗಳ ನಿಷೇಧ ಕಾಯ್ದೆ-2019(BUDS Act-2019)ರ ಕಾನೂನಿನ ಅಡಿಯಲ್ಲಿ ರಾಜ್ಯ ಹಾಗೂ ಕೇಂದ್ರ ಸರ್ಕಾರ ಮಧ್ಯಸ್ಥಿಕೆ ವಹಿಸಿಕೊಂಡು ಸಾರ್ವಜನಿಕರ ಹಣ ಹಿಂದಿರುಗಿಸಗಬೇಕು” ಎಂದು ಒತ್ತಾಯಿಸಿದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

“ಅಗ್ರಿಗೋಲ್ಡ್ ಪಿಎಸಿಎಲ್ ಸೇರಿದಂತೆ ಇನ್ನಿತರ 185 ಚಿಟ್ ಫಂಡ್ ಕಂಪೆನಿಗಳಲ್ಲಿ ಅಂದಾಜು 350 ಕೋಟಿ ರೂಪಾಯಿಗಳ ಹಣವನ್ನು ವಿಜಯಪುರದಿಂದ ಹೂಡಿಕೆ ಮಾಡಿರುವ ಸಾರ್ವಜನಿಕರು ರಾಜ್ಯವ್ಯಾಪಿ ಸಾವಿರಾರು ಕೋಟಿ ಹಣ ಹೂಡಿಕೆ ಮಾಡಿ ಕಳೆದ 10 ವರ್ಷಗಳಿಂದ ನ್ಯಾಯಕ್ಕಾಗಿ ಸರ್ಕಾರಕ್ಕೆ ಮನವಿ ಮಾಡುತ್ತ ಬಂದಿರುತ್ತಾರೆ. ಆದರೆ ಈವರೆಗೆ ಸರ್ಕಾರದ ಯಾವುದೇ ಅಧಿಕಾರಿಗಳು ಕಿಂಚಿತ್ತು ಕಾಳಜಿ ಮಾಡದೇ ಇರುವುದು ಹೂಡಿಕೆದಾರರಿಗೆ ಚಿಂತೆ ಮಾಡುವಂತೆ ಮಾಡಿದೆ. ಹೂಡಿಕೆದಾರರು ಏಜೆಂಟ್‌ಗಳಿಗೆ ಹಣ ಕೊಡಿಸಿ ಎಂದು ನಿತ್ಯ ಕಿರಿಕಿರಿ ಮಾಡುವುದರಿಂದ ಮನನೊಂದ ಎಷ್ಟೋ ಮಂದಿ ಆತ್ಮಹತ್ಯೆ ಮಾಡಿಕೊಂಡಿರುವ ಘಟನೆಗಳೂ ಕೂಡ ಕಂಡುಬಂದಿವೆ” ಎಂದರು.

ಈ ಸುದ್ದಿ ಓದಿದ್ದೀರಾ? ಮಂಡ್ಯ | ಮೈಕ್ರೋ ಫೈನಾನ್ಸ್‌ಗಳ ಸಾಲದ ಸುಳಿಯಲ್ಲಿ ಸಿಲುಕಿದ ಮಹಿಳೆಯರು: ಸಂಕಷ್ಟದಿಂದ ಹೊರಬರಲು ಪರದಾಟ!

“ಸರ್ಕಾರ ಕೂಡಲೇ ಚಿಟ್ ಫಂಡ್‌ ಕಂಪೆನಿಗಳ ಆಸ್ತಿ ಹರಾಜು ಮಾಡಿ ಹಣ ಕೊಡಿಸಬೇಕು. ಇದು ವಿಳಂಬವಾದರೆ ರಾಜ್ಯವ್ಯಾಪಿ ಕರ್ನಾಟಕ ಬಂದ್ ಕರೆ ಕೊಡಬೇಕಾಗುತ್ತದೆ” ಎಂದು ಎಚ್ಚರಿಕೆ ನೀಡಿದರು.

ಈ ಸಂದರ್ಭದಲ್ಲಿ ಸಮಿತಿಯ ಮುಖಂಡರುಗಳಾದ ಶಿವು ಪತ್ರಕರ್ತರು, ಅಮೃತ್ ಮಾವಿನಹಳ್ಳಿ, ಸುಖದೇವ ಚಲವಾದಿ, ಸೋಮನಿಂಗ ರಣದೇವಿ, ಎಂ ಆರ್ ದೊಡ್ಡಮನಿ, ಪರಶುರಾಮ ಘರಸಂಗಿ, ಸಂಗಮೇಶ ಸಿಂದಗಿರಿ, ಸಚಿನ್ ಭಜಂತ್ರಿ, ಮೈಬೂಬ ಕಾಳಗಿ, ಭಜರಂಗಿ ನ್ಯೂನೆ ಹಾಗೂ ಅಪಾರ ಸಂಖ್ಯೆಯಲ್ಲಿ ಚಿಟ್ ಫಂಡ್ ಕಂಪೆನಿಗಳಿಂದ ಅನ್ಯಾಯಕ್ಕೊಳಗಾದ ಸಂತ್ರಸ್ತರು ಇದ್ದರು.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಸಿಂಧನೂರು | ರೀಲ್ಸ್ ಮಾಡಲು ಹೋದ ಯುವಕ ನೀರು ಪಾಲು

ರೀಲ್ಸ್ ಮಾಡುವ ಉದ್ದೇಶದಿಂದ ಸ್ನೇಹಿತರಿಗೆ ವಿಡಿಯೋ ಮಾಡಲು ಹೇಳಿ ಈಜಲು ನದಿಗೆ...

ಗದಗ | ಆದ್ಯ ವಚನಕಾರ ದೇವರ ದಾಸಿಮಯ್ಯ: ರಾಘವೇಂದ್ರ ಕೊಪ್ಪಳ

"ಆದ್ಯ ವಚನಕಾರ ನೇಕಾರ ಸಂತ ದೇವರ ದಾಸಿಮಯ್ಯನವರು 10 ನೇ ಶತಮಾನದಲ್ಲಿ...

ಮಾರ್ಚ್ 25ರಂದು ಬೆಂಗಳೂರಿನ ಫ್ರೀಡಂ ಪಾರ್ಕ್ನಲ್ಲಿ ಬಲಗೈ ಜಾತಿಗಳ ಬೃಹತ್ ಹೋರಾಟ

ಬಾಗೇಪಲ್ಲಿ:-ಕರ್ನಾಟಕ ರಾಜ್ಯ ಬಲಗೈ ಜಾತಿಗಳ ಮಹಾ ಒಕ್ಕೂಟದ ವತಿಯಿಂದ ಒಳ ಮೀಸಲಾತಿ...

ಯುಪಿಎಸ್ಸಿ ರ‍್ಯಾಂಕ್‌ ವಿಜೇತ ವರುಣ್ ಗೌಡಗೆ ಸನ್ಮಾನ

ಕೋಲಾರ: ಯುಪಿಎಸ್ಸಿ ಪರೀಕ್ಷೆಯಲ್ಲಿ 462 ನೇ ರ‍್ಯಾಂಕ್‌ ಪಡದ ತಾಲೂಕಿನ ತ್ಯಾವನಹಳ್ಳಿ...