ವಿಜಯಪುರ | ಅಸಂಘಟಿತ ಕಾರ್ಮಿಕರಿಗೆ ₹36,000ಗಳ ಕನಿಷ್ಠ ವೇತನಕ್ಕೆ CITU ಆಗ್ರಹ

Date:

ರಾಜ್ಯದಲ್ಲಿ ಕಾಂಗ್ರೆಸ್ ಸರ್ಕಾರ ಕಾರ್ಮಿಕರ ದುಡಿಮೆಯ ಸಮಯವನ್ನು ಹೆಚ್ಚಿಗೆ ಮಾಡಿದೆ. ಆದರೆ, ಅದಕ್ಕೆ ತಕ್ಕಂತೆ ಕೂಲಿ ಕೊಡುವುದಿಲ್ಲ. ಕನಿಷ್ಠ ಕೂಲಿ ಅಸಂಘಟಿತ ಕಾರ್ಮಿಕರಿಗೆ ₹36,000ಗಳ ಕನಿಷ್ಠ ವೇತನ ನೀಡಬೇಕು. 2011ರಿಂದ ಇಲ್ಲಿಯವರೆಗೆ ಅಂಗನವಾಡಿ ಅಕ್ಷರ ದಾಸೋಹ ನೌಕರರಿಗೆ ಕೇಂದ್ರ ಸರ್ಕಾರ 50% ಕಡಿತಗೊಳಿಸಿದೆ. ಜಾತಿ ಧರ್ಮದ ಹೆಸರಿನಲ್ಲಿ ಆರೋಗ್ಯಕರ ಸಮಾಜವನ್ನು ಹಾಳು ಮಾಡುತ್ತಿದೆ ಎಂದು CITU ರಾಜ್ಯ ಕಾರ್ಯದರ್ಶಿ ಎಚ್ ಎಸ್ ಸುನಂದಾ ಆಗ್ರಹಿಸಿದರು.

ವಿಜಯಪುರ ನಗರದಲ್ಲಿ ಜಿಲ್ಲಾ ಸಹಕಾರಿ ಯೂನಿಯನ್ ಸಭಾಂಗಣದಲ್ಲಿ ನಡೆದ ಸಿಐಟಿಯು ಆರನೇ ಜಿಲ್ಲಾ ಸಮ್ಮೇಳನದಲ್ಲಿ ಭಾಗವಹಿಸಿ ಅವರು ಮಾತನಾಡಿದರು.

“ಸರ್ಕಾರವು 49 ಇದ್ದ ಕಾರ್ಮಿಕರ ಕಾನೂನುಗಳನ್ನು 4 ಸಂಹಿತೆಗಳನ್ನಾಗಿ ಮಾಡಿ ಮಾಲೀಕರಿಗೆ ಅನುಕೂಲ ಮಾಡಿಕೊಟ್ಟಿದೆ. ಈ ಕಾನೂನುಗಳು ಜಾರಿಯಾಗದಂತೆ ಕಾರ್ಮಿಕರು ಸಂಘಟಿತರಾಗಿ ಹೋರಾಟ ಮಾಡುವುದು ಅವಶ್ಯಕವಾಗಿದೆ. ಅಂಗನವಾಡಿ ಬಿಸಿಯೂಟ ನೌಕರರಿಗೆ ಪಿಂಚಣಿ ಕೊಡಬೇಕು. ಎಷ್ಟು ಜನ ಶ್ರೀಮಂತರಾಗುತ್ತಾರೋ ಅಷ್ಟೇ ಪ್ರಮಾಣದಲ್ಲಿ ಬಡವರ ಸಂಖ್ಯೆ ಹೆಚ್ಚಾಗುತ್ತಿದೆ. ದೊಡ್ಡ ಪ್ರಮಾಣದಲ್ಲಿ ಭ್ರಷ್ಟಾಚಾರ ನಡೆಯುತ್ತಿದೆ. ಎಫ್ ಆರ್ ಎಸ್ ಜಾರಿಯಿಂದ ಎರಡು ಲಕ್ಷ ಗರ್ಭಿಣಿ ಮಹಿಳೆಯರು ಸೌಲಭ್ಯದಿಂದ ವಂಚಿತರಾಗಿದ್ದಾರೆ” ಎಂದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ಸಿಐಟಿಯು ಜಿಲ್ಲಾಧ್ಯಕ್ಷ ಅಣ್ಣಾರಾಯ ಇಳೆಗೆರಾ ಮಾತನಾಡಿ, “ಕೆಲವು ದಿನಗಳವರೆಗೆ ಮಂತ್ರಿಗಳಿಗೂ ಕಾರ್ಮಿಕರಿಗೆ ಕನಿಷ್ಠ ವೇತನ ನಿಗದಿ ಮಾಡುವಂತೆ ಮನವಿ ಸಲ್ಲಿಸಲಾಗುವುದು. ನಂತರ ಕೇಂದ್ರ ಸಚಿವರ ಮನೆಯ ಮುಂದೆ ಧರಣಿ ಮಾಡಲಾಗುವುದು. ಕೇಂದ್ರ ಸರಕಾರ ₹1,46,000 ಕೋಟಿ ಬಂಡವಾಳಗಾರರ ಸಾಲ ಮನ್ನಾ ಮಾಡಿದ್ದಾರೆ. ಕಾರ್ಮಿಕರಿಗೆ ಕೂಲಿ ಕೊಡಲು ಹಿಂದೇಟು ಹಾಕುತ್ತಿದೆ” ಎಂದು ಆಕ್ರೋಶ ವ್ಯಕ್ತಪಡಿಸಿದರು.

ಸಿಐಟಿಯು ಜಿಲ್ಲಾ ಪ್ರಧಾನ ಕಾರ್ಯದರ್ಶಿ ಲಕ್ಷ್ಮಣ್ ಹಂದ್ರಾಳ ಮಾತನಾಡಿ, “ಸಿಐಟಿಯು ಸಂಘಟನೆ ಮೂರು ವರ್ಷಗಳ ಕಾಲ ಮಾಡಿದ ಅನೇಕ ಜನಪರ ಕಾರ್ಮಿಕ ಚಳವಳಿಯ ಕರಡು ವರದಿಯನ್ನು ಮಂಡಿಸಿದೆ. ಅದನ್ನ ಎಲ್ಲ ಕಾರ್ಮಿಕ ಸಂಘಟನೆಯ ಪ್ರತಿನಿಧಿಗಳು ಅನುಮೋದನೆ ಮಾಡಿದರು” ಎಂದರು.

ಇದನ್ನೂ ಓದಿ: ವಿಜಯಪುರ | ಕಬ್ಬು ದರ ನಿಗದಿ ಕೇಂದ್ರದ ಅಧಿಕಾರ; ರಾಜ್ಯದ್ದು ಜಾರಿಯ ಕೆಲಸ: ಸಚಿವ ಎಂ ಬಿ ಪಾಟೀಲ್

ಸಮ್ಮೇಳನದಲ್ಲಿ 12 ಜನರ ಸಂಚಾಲಕ ಸಮಿತಿ ರಚಿಸಲಾಯಿತು. ಸಂಚಾಲಕರಾಗಿ ಲಕ್ಷ್ಮಣ್ ಹಂದ್ರಾಳ ಹಾಗೂ ಸಹ ಸಂಚಾಲಕರಾಗಿ ಅಣ್ಣಾರಾಯ, ಸೋಮಪ್ಪ ಆಯಟ್ಟಿ, ಸುರೇಶ್ ಜಿ ಬಿ, ಸುನಂದ ನಾಯಕ್, ಭಾರತಿವಾಲಿ, ಅಶ್ವಿನಿ ತಲ್ವಾರ್, ಸುಮಂಗಲ, ಆನಂದಿಶೆಟ್ಟಿ, ಕಾಳಮ್ಮ ಬಡಿಗೇರ್, ಲಾಲ್ ಅಹ್ಮದ್ ಶೇಕ್, ಚಂದ್ರಶೇಖರ್ ಬುರಣಾಪುರ್, ಶಿವಾನಂದ್ ಅವರನ್ನು ಆಯ್ಕೆ ಮಾಡಲಾಯಿತು.

ಈ ವೇಳೆ ಜನವಾದಿ ಮಹಿಳಾ ಸಂಘಟನೆಯ ಸುರೇಖಾ ರಜಪೂತ್, ಗ್ರಾಮ ಪಂಚಾಯಿತಿಯ ನೌಕರರ ಸಂಘದ ಮಾಜಿ ಅಧ್ಯಕ್ಷ ಎಸ್ ಐ ಗದಿಗಿಮಠ, ಲಕ್ಷ್ಮಣ ಹಂದ್ರಾಳ, ಚಂದ್ರಶೇಖರ್ ವಾಲಿಕಾರ್, ದಿನಗೂಲಿ ನೌಕರರ ಕ್ಷೇಮಾಭಿವೃದ್ಧಿ ಸಂಘದ ಅಧ್ಯಕ್ಷ ಚಂದ್ರಶೇಖರ್ ಬುರಣಾಪುರ, ಗ್ರಾಮ ಪಂಚಾಯಿತಿ ನೌಕರರು, ಕಟ್ಟಡ ಕಾರ್ಮಿಕ ಸಂಘಟನೆಯ ಪ್ರತಿನಿಧಿಗಳು, ಅಕ್ಷರ ದಾಸೋಹ ನೌಕರರು, ಅಂಗನವಾಡಿ ನೌಕರರು ಭಾಗವಹಿಸಿದ್ದರು.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಸಿಂಧನೂರು | ರೀಲ್ಸ್ ಮಾಡಲು ಹೋದ ಯುವಕ ನೀರು ಪಾಲು

ರೀಲ್ಸ್ ಮಾಡುವ ಉದ್ದೇಶದಿಂದ ಸ್ನೇಹಿತರಿಗೆ ವಿಡಿಯೋ ಮಾಡಲು ಹೇಳಿ ಈಜಲು ನದಿಗೆ...

ಗದಗ | ಆದ್ಯ ವಚನಕಾರ ದೇವರ ದಾಸಿಮಯ್ಯ: ರಾಘವೇಂದ್ರ ಕೊಪ್ಪಳ

"ಆದ್ಯ ವಚನಕಾರ ನೇಕಾರ ಸಂತ ದೇವರ ದಾಸಿಮಯ್ಯನವರು 10 ನೇ ಶತಮಾನದಲ್ಲಿ...

ಮಾರ್ಚ್ 25ರಂದು ಬೆಂಗಳೂರಿನ ಫ್ರೀಡಂ ಪಾರ್ಕ್ನಲ್ಲಿ ಬಲಗೈ ಜಾತಿಗಳ ಬೃಹತ್ ಹೋರಾಟ

ಬಾಗೇಪಲ್ಲಿ:-ಕರ್ನಾಟಕ ರಾಜ್ಯ ಬಲಗೈ ಜಾತಿಗಳ ಮಹಾ ಒಕ್ಕೂಟದ ವತಿಯಿಂದ ಒಳ ಮೀಸಲಾತಿ...

ಯುಪಿಎಸ್ಸಿ ರ‍್ಯಾಂಕ್‌ ವಿಜೇತ ವರುಣ್ ಗೌಡಗೆ ಸನ್ಮಾನ

ಕೋಲಾರ: ಯುಪಿಎಸ್ಸಿ ಪರೀಕ್ಷೆಯಲ್ಲಿ 462 ನೇ ರ‍್ಯಾಂಕ್‌ ಪಡದ ತಾಲೂಕಿನ ತ್ಯಾವನಹಳ್ಳಿ...