ವಿಜಯಪುರ | ಸಹಕಾರಿ ಸಂಘಗಳು ₹5 ಲಕ್ಷದವರೆಗೆ ಶೂನ್ಯಬಡ್ಡಿ ಸಾಲ ನೀಡುವ ಬ್ಯಾಂಕ್‌ಗಳಾಗಿವೆ: ಸಚಿವ ಶಿವಾನಂದ ಪಾಟೀಲ

Date:

ಕರ್ನಾಟಕದ ಸಹಕಾರಿ ಸಂಘಗಳು ರೈತರಿಗೆ ₹5 ಲಕ್ಷದವರೆಗೆ ಶೂನ್ಯ ಬಡ್ಡಿಯಲ್ಲಿ ಸಾಲ ನೀಡುವ ಬ್ಯಾಂಕ್‌ಗಳಾಗಿವೆ ಎಂದು ಸಕ್ಕರೆ, ಜವಳಿ, ಕಬ್ಬು ಅಭಿವೃದ್ಧಿ ಹಾಗೂ ಕೃಷಿ ಮಾರುಕಟ್ಟೆ ಸಚಿವ ಮತ್ತು ವಿಜಯಪುರ ಡಿಸಿಸಿ ಬ್ಯಾಂಕ್‌ನ ಅಧ್ಯಕ್ಷ ಶಿವಾನಂದ ಪಾಟೀಲ ಹೇಳಿದರು.

ವಿಜಯಪುರ ಜಿಲ್ಲೆಯ ಇಂಡಿ ತಾಲೂಕಿನ ಲಭ್ಯಾಣ ಗ್ರಾಮದಲ್ಲಿ ಬ್ಯಾಂಕ್‌ನ 49ನೇ ಜಾಕಿಯ ಉದ್ಘಾಟನಾ ಸಮಾರಂಭದಲ್ಲಿ ಮಾತನಾಡಿದರು.

“ಜಗತ್ತಿಗೆ ಗೋಧಿ, ಅಕ್ಕಿ ಕೊಡುವ ದೇಶ ನಮ್ಮದಾಗಿದೆ. ಹಾಲು ಉತ್ಪಾದನೆಯಲ್ಲಿ ಆಗ್ರಗಣ್ಯ ಸ್ಥಾನ ಭಾರತಕ್ಕಿದ್ದು, ಕರ್ನಾಟಕ ಪ್ರಥಮ ಸ್ಥಾನದಲ್ಲಿದೆ. ಹಾಲು ಉತ್ಪಾದನೆಯಲ್ಲಿ ವಿಜಯಪುರ-ಬಾಗಲಕೋಟೆ ರಾಜ್ಯದಲ್ಲಿಯೇ ಪ್ರಥಮ ಸ್ಥಾನದಲ್ಲಿದೆ” ಎಂದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

“ರಾಜ್ಯದಲ್ಲಿ 27 ಸಕ್ಕರೆ ಕಾರ್ಖಾನೆಗಳಿಗೆ ಬಿಡಿಸಿಸಿ ಬ್ಯಾಂಕ್‌ ಸಾಲ ನೀಡಿದೆ. 272 ಪ್ರಾಥಮಿಕ ಕೃಷಿ ಪತ್ತಿನ ಸಂಘಗಳಿದ್ದು 234 ಸ್ವಂತ ಕಟ್ಟಡ ಕಟ್ಟಿಸಲಾಗಿದೆ. ಬಿಡಿಸಿಸಿ ಬ್ಯಾಂಕ್‌ನಲ್ಲಿ ರೈತರು ₹6000 ಕೋಟಿ ಡೆಪಾಸಿಟ್‌ ಇಟ್ಟಿದ್ದಾರೆ. ಬಿಡಿಸಿಸಿ ಬ್ಯಾಂಕ್‌ ರೈತರಿಗೆ ₹6000 ಕೋಟಿ ಸಾಲ ನೀಡಿದೆ. ಮುಂದೆ ರೈತರು ಬ್ಯಾಂಕಿಗೆ ಸಾಲ ಕೇಳಲು ಬರುವ ಬದಲಾಗಿ ಡಿಪಾಸಿಟ್ ಇಡಲು ಬರುವ ವ್ಯವಸ್ಥೆಯಾಗಬೇಕಾಗಿದೆ” ಎಂದರು.

“ಸಣ್ಣವ್ಯಾಪಾರಸ್ಥರು, ಬಡವರ ಬದುಕಿಗೆ ಸಹಕಾರಿ ಬ್ಯಾಂಕ್‌ಗಳು ನೆರವು ನೀಡುತ್ತಿವೆ. ರಾಷ್ಟ್ರೀಕೃತ ಬ್ಯಾಂಕ್‌ಗಳಲ್ಲಿ ಬಡವರು, ರೈತರು ನಿಬಂಧನೆಯ ಕಾರಣಕ್ಕೆ ಸಾಲ ತೆಗೆದುಕೊಳ್ಳುವದು ಕಷ್ಟ, ಸಹಕಾರಿ ಬ್ಯಾಂಕ್‌ ಸಾಲ-ಸೌಲಭ್ಯ ಕಲ್ಪಿಸಿ ದೇಶದ ಪ್ರಗತಿಗೆ ಸಿಂಹಪಾಲು ಕೊಡುಗೆ ನೀಡಿದೆ” ಎಂದರು.

ಶಾಸಕ ಯಶವಂತರಾಯಗೌಡ ಪಾಟೀಲ ಮಾತನಾಡಿ, “ದೇಶದಲ್ಲಿ ಸಹಕಾರ ಚಳುವಳಿ ದೊಡ್ಡ ಕ್ರಾಂತಿ ಮಾಡಿದೆ. ಅದರಲ್ಲೂ ಭಾರತದ ಪ್ರಗತಿಯಲ್ಲಿ ಸಹಕಾರ ಬ್ಯಾಂಕ್‌ಗಳ ಕೊಡುಗೆ ಆಪಾರವಾಗಿದೆ” ಎಂದರು.

ಅಮೃತಾನಂದ ಶ್ರೀಗಳು ಮಾತನಾಡಿ, “ಸಹಕಾರಿ ಬ್ಯಾಂಕ್ ಯಶಸ್ವಿಯಾಗಲು ಠೇವಣೆದಾರರ ಜತೆಗೆ, ಸಕಾಲಕ್ಕೆ ಸಾಲ ಮರುಪಾವತಿ ಮಾಡುವ ಸಾಲಗಾರರು ಮುಖ್ಯವಾಗಿದ್ದು, ಅವರಿಗೆ ಗೌರವ ಸಲ್ಲಬೇಕಾಗಿದೆ” ಎಂದರು.

ಈ ಸುದ್ದಿ ಓದಿದ್ದೀರಾ? ತುರುವೇಕೆರೆ | ಇವನಾರವ ಎನ್ನದೇ ಇವ ನಮ್ಮವ ಎನ್ನುವಂತೆ ವೀರಶೈವ ಲಿಂಗಾಯಿತ ಸಮಾಜ ಬಾಳಬೇಕಿದೆ : ಕೇಂದ್ರ ಸಚಿವ ವಿ. ಸೋಮಣ್ಣ

ಬ್ಯಾಂಕ್‌ನ ಉಪಾಧ್ಯಕ್ಷ ರಾಜಶೇಖರ ಗುಡದಿನ್ನಿ, ಬ್ಯಾಂಕಿನ ಸಿಇಒ ಎಸ್ ಡಿ ಬಿರಾದಾರ, ಆರ್ ಎಂ ಬಣಕಾರ, ಎಂ ಎಸ್ ಹತ್ತೂರಕರ, ಅಹಿರಸಂಗದ ಮಲ್ಲಿಕಾರ್ಜುನ ಶಿವಾಚಾರ್ಯರು, ಶಂಕ್ರಪ್ಪ ಸಿದ್ರಾಮಶೆಟ್ಟಿ, ಗ್ರಾಪಂ ಅಧ್ಯಕ್ಷೆ ಕಲಾವತಿ ಬಿರಾದಾರ, ವೇಂಕಟೇಶ ಕುಲಕರ್ಣಿ, ಸಿದ್ದಣ್ಣ ಬೂದಿಹಾಳ ವಕೀಲರು, ಪುಷ್ಟಾವತಿ ಮರೋಟ, ಸಹಕಾರಿ ಸಂಘ ಉಪನಿಬಂಧಕ ಭಾಗ್ಯಶ್ರೀ, ಕೆ ಎಚ್ ವಡ್ಡರ, ಎಂ ಆರ್ ಪಾಟೀಲ, ಶ್ರೀಮಂತ ಇಂಡಿ, ಗಣೇಶಲಿಂಗ ಮಹಾರಾಜರು ಸೇರಿದಂತೆ ಇತರರು ಇದ್ದರು.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಸಿಂಧನೂರು | ರೀಲ್ಸ್ ಮಾಡಲು ಹೋದ ಯುವಕ ನೀರು ಪಾಲು

ರೀಲ್ಸ್ ಮಾಡುವ ಉದ್ದೇಶದಿಂದ ಸ್ನೇಹಿತರಿಗೆ ವಿಡಿಯೋ ಮಾಡಲು ಹೇಳಿ ಈಜಲು ನದಿಗೆ...

ಗದಗ | ಆದ್ಯ ವಚನಕಾರ ದೇವರ ದಾಸಿಮಯ್ಯ: ರಾಘವೇಂದ್ರ ಕೊಪ್ಪಳ

"ಆದ್ಯ ವಚನಕಾರ ನೇಕಾರ ಸಂತ ದೇವರ ದಾಸಿಮಯ್ಯನವರು 10 ನೇ ಶತಮಾನದಲ್ಲಿ...

ಮಾರ್ಚ್ 25ರಂದು ಬೆಂಗಳೂರಿನ ಫ್ರೀಡಂ ಪಾರ್ಕ್ನಲ್ಲಿ ಬಲಗೈ ಜಾತಿಗಳ ಬೃಹತ್ ಹೋರಾಟ

ಬಾಗೇಪಲ್ಲಿ:-ಕರ್ನಾಟಕ ರಾಜ್ಯ ಬಲಗೈ ಜಾತಿಗಳ ಮಹಾ ಒಕ್ಕೂಟದ ವತಿಯಿಂದ ಒಳ ಮೀಸಲಾತಿ...

ಯುಪಿಎಸ್ಸಿ ರ‍್ಯಾಂಕ್‌ ವಿಜೇತ ವರುಣ್ ಗೌಡಗೆ ಸನ್ಮಾನ

ಕೋಲಾರ: ಯುಪಿಎಸ್ಸಿ ಪರೀಕ್ಷೆಯಲ್ಲಿ 462 ನೇ ರ‍್ಯಾಂಕ್‌ ಪಡದ ತಾಲೂಕಿನ ತ್ಯಾವನಹಳ್ಳಿ...