ವಿಜಯಪುರ | ʼಏತ ನೀರಾವರಿ ಪೂರ್ಣಗೊಳಿಸಿ ರೈತರ ಹಿತ ಕಾಪಾಡಿʼ

Date:

ವಿಜಯಪುರ ಜಿಲ್ಲೆಯ ದೇವರಹಿಪ್ಪರಗಿ ತಾಲೂಕಿನ ಬೂದಿಹಾಳ-ಪಿರಾಪುರ ಏತ ನೀರಾವರಿ ಯೋಜನೆ ಪೂರ್ಣಗೊಳಿಸಿ ರೈತರ ಹಿತ ಕಾಪಾಡಬೇಕು ಎಂದು ಯೋಜನೆಯ ಕ್ರಿಯಾಶೀಲ ವೇದಿಕೆಯಿಂದ ಉಪ ಮುಖ್ಯಮಂತ್ರಿ ಹಾಗೂ ನೀರಾವರಿ ಸಚಿವ ಡಿ ಕೆ ಶಿವಕುಮಾರ ಅವರಿಗೆ ಮನವಿ ಸಲ್ಲಿಸಲಾಯಿತು.

ಬೆಂಗಳೂರಿನ ಸಚಿವರ ಸ್ವಗೃಹದಲ್ಲಿ ಬೂದಿಹಾಳ-ಪೀರಾಪುರ ನೀರಾವರಿ ಯೋಜನೆ ಕ್ರಿಯಾಶೀಲ ವೇದಿಕೆಯ ಪದಾಧಿಕಾರಿಗಳು ಹಾಗೂ ಮಾಜಿ ಸಿಂದಗಿ ಶಾಸಕ ಶರಣಪ್ಪ ಸುಣಗಾರ ನೇತೃತ್ವದಲ್ಲಿ ಮನವಿ ಸಲ್ಲಿಸಲಾಯಿತು.

“ಯೋಜನೆಗೆ ಸರ್ಕಾರ ಈಗಾಗಲೇ ಸುಮಾರು 800 ಕೋಟಿ ಹಣ ಖರ್ಚು ಮಾಡಿದೆ. ನೀರು ಟ್ರೈಯಲ್ ರನ್ ಔಟ್ ಬಾಕ್ಸ್‌ವರೆಗೆ ತಲುಪಿದೆ. ಇನ್ನು ಹೊಲಗಾಲುವೆಯ ಶೇ.10ರಷ್ಟು ಕೆಲಸ ಮಾತ್ರ ಬಾಕಿ ಇದ್ದು, ಬೇಸಿಗೆಯಲ್ಲಿ ಕಾಮಗಾರಿಯನ್ನು ತ್ವರಿತ ಗತಿಯಲ್ಲಿ ಮುಗಿಸಬೇಕಿದೆ. ಅದಕ್ಕಾಗಿ ಸರ್ಕಾರ ₹170-200 ಕೋಟಿ ಮಂಜೂರು ಮಾಡಿದೆ. ಈ ಭಾಗದ 50,607 ಎಕರೆ ಕೃಷಿ ಭೂಮಿ ನೀರಾವರಿಗೆ ಒಳಪಡುತ್ತದೆ. ರೈತರು, ಯುವಕರು ನಗರ ಪ್ರದೇಶಕ್ಕೆ ಗುಳೆ ಹೋಗುತ್ತಿದ್ದಾರೆ. ಸರ್ಕಾರ ಪಕ್ಷಾತೀತವಾಗಿ ಈಯೋಜನೆ ಪೂರ್ಣಗೊಳಿಸಿದರೆ 38 ಗ್ರಾಮಗಳ ಲಕ್ಷಕ್ಕೂ ರೈತರಿಗೆ ಉದ್ಯೋಗ ಸೃಷ್ಟಿಯಾಗುತ್ತದೆ. ಆದ್ದರಿಂದ ಅಧಿಕಾರಿಗಳಿಗೆ ನಿರ್ದೇಶನ ನೀಡಿ ತ್ವರಿತ ಗತಿಯಲ್ಲಿ ಯೋಜನೆ ಪೂರ್ಣಗೊಳಿಸುವಂತೆ ಸೂಚಿಸಬೇಕು” ಎಂದು ಮನವಿಯಲ್ಲಿ ಉಲ್ಲೇಖಿಸಲಾಗಿದೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ಇದನ್ನೂ ಓದಿ: ವಿಜಯಪುರ | ವಾರ್ಡ್ ನಂ. 29ರ ಉಪಚುನಾವಣೆ: ಬಿಜೆಪಿ ಅಭ್ಯರ್ಥಿ ಗಿರೀಶ್ ಬಿರಾದಾರ್ ಗೆಲುವು

ಈ ವೇಳೆ ಮುಖಂಡರಾದ ಪ್ರಭುಗೌಡ ಬಿರಾದಾರ, ಹನುಮಗೌಡ ಬಿರಾದಾರ, ಕಾಶಿನಾಥ ತಳವಾರ, ಮಲ್ಲಣ್ಣ ಹಿರೇಕುರುಬರ, ಸಂಗನಗೌಡ ನಾಗರೆಡ್ಡಿ, ಮಹಾದೇವವಾಲಿಕಾರ, ಸಿದ್ದನಗೌಡ ಬಿರಾದಾರ, ರುದ್ರಗೌಡ ಬಿರಾದಾರ, ಶಿವಪುತ್ರ ಚೌದ್ರಿ ಹಾಗೂ ಗುರುರಾಜ ಪಡಶೆಟ್ಟಿ ಸೇರಿದಂತೆ ಹಲವಾರು ರೈತ ಮುಖಂಡರು ಉಪಸ್ಥಿತರಿದ್ದರು.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಸಿಂಧನೂರು | ರೀಲ್ಸ್ ಮಾಡಲು ಹೋದ ಯುವಕ ನೀರು ಪಾಲು

ರೀಲ್ಸ್ ಮಾಡುವ ಉದ್ದೇಶದಿಂದ ಸ್ನೇಹಿತರಿಗೆ ವಿಡಿಯೋ ಮಾಡಲು ಹೇಳಿ ಈಜಲು ನದಿಗೆ...

ಗದಗ | ಆದ್ಯ ವಚನಕಾರ ದೇವರ ದಾಸಿಮಯ್ಯ: ರಾಘವೇಂದ್ರ ಕೊಪ್ಪಳ

"ಆದ್ಯ ವಚನಕಾರ ನೇಕಾರ ಸಂತ ದೇವರ ದಾಸಿಮಯ್ಯನವರು 10 ನೇ ಶತಮಾನದಲ್ಲಿ...

ಮಾರ್ಚ್ 25ರಂದು ಬೆಂಗಳೂರಿನ ಫ್ರೀಡಂ ಪಾರ್ಕ್ನಲ್ಲಿ ಬಲಗೈ ಜಾತಿಗಳ ಬೃಹತ್ ಹೋರಾಟ

ಬಾಗೇಪಲ್ಲಿ:-ಕರ್ನಾಟಕ ರಾಜ್ಯ ಬಲಗೈ ಜಾತಿಗಳ ಮಹಾ ಒಕ್ಕೂಟದ ವತಿಯಿಂದ ಒಳ ಮೀಸಲಾತಿ...

ಯುಪಿಎಸ್ಸಿ ರ‍್ಯಾಂಕ್‌ ವಿಜೇತ ವರುಣ್ ಗೌಡಗೆ ಸನ್ಮಾನ

ಕೋಲಾರ: ಯುಪಿಎಸ್ಸಿ ಪರೀಕ್ಷೆಯಲ್ಲಿ 462 ನೇ ರ‍್ಯಾಂಕ್‌ ಪಡದ ತಾಲೂಕಿನ ತ್ಯಾವನಹಳ್ಳಿ...