ವಿಜಯಪುರ | ಪಾಲಿಕೆ ಪವರ್ ಗಾಗಿ ಕಾಂಗ್ರೆಸ್-ಬಿಜೆಪಿ ಕಸರತ್ತು

Date:

ವಿಜಯಪುರ ಮಹಾನಗರ ಪಾಲಿಕೆಯ ಹಾಲಿ ಮೇಯರ್ ಹಾಗೂ ಉಪ ಮೇಯರ್ ಅಧಿಕಾರಾವಧಿ ಇದೇ ಜ. 9ಕ್ಕೆ ಮುಗಿಯಲಿದ್ದು, ಮುಂದಿನ ಅವಧಿಯ ಪಾಲಿಕೆ ಪವರ್ ಗಾಗಿ ಆಡಳಿತ ಪಕ್ಷ ಕಾಂಗ್ರೆಸ್ ಹಾಗೂ ಬಿಜೆಪಿ ಪಾಳಯದಲ್ಲಿ ಕಸರತ್ತು ಜೋರಾಗಿದೆ. ರಾಜಕೀಯ ಚಟುವಟಿಕೆ, ತಂತ್ರ-ಪ್ರತಿತಂತ್ರಗಳು ಚುರುಕುಗೊಂಡಿವೆ.

ಇದೀಗ 2ನೇ ಅವಧಿಯ ಮೀಸಲಾತಿ ಪ್ರಕಾರ ಮೇಯರ್ ಸ್ಥಾನವು ಹಿಂದುಳಿದ ವರ್ಗ 2ಎ ಹಾಗೂ ಉಪ ಮೇಯರ್ ಸ್ಥಾನ ಸಾಮಾನ್ಯ ಮಹಿಳೆಗೆ ಒಲಿಯಲಿದೆ ಎನ್ನಲಾಗ್ತಿದೆ. ಈ ಮೀಸಲಾತಿ ಅನ್ವಯ ಅಧಿಕಾರ ಹಿಡಿಯಲು ಕಾಂಗ್ರೆಸ್ ಹಾಗೂ ಬಿಜೆಪಿ ಪಕ್ಷಗಳು ತೀವ್ರ ಕಸರತ್ತು ನಡೆಸಿವೆ. ಎರಡೂ ಪಕ್ಷಗಳಲ್ಲಿ ತಲಾ 3ಕ್ಕೂ ಹೆಚ್ಚು ಪ್ರಬಲ ಆಕಾಂಕ್ಷಿಗಳು ರೇಸ್‌ ನಲ್ಲಿದ್ದಾರೆ.

WhatsApp Image 2025 01 07 at 10.17.05 AM

ಶಾಸಕ ಬಸನಗೌಡ ಪಾಟೀಲ ಯತ್ನಾಳ ಹಾಗೂ ಸಂಸದ ರಮೇಶ ಜಿಗಜಿಣಗಿ ಅವರ ದೋಸ್ತಿ ಬಿಜೆಪಿ ಪಾಲಿಕೆ ಅನುಕೂಲವಾಗಲಿದೆ. ಅಲ್ಲದೆ ಯತ್ನಾಳರ ತಂತ್ರಗಾರಿಕೆ ಬಿಜೆಪಿಗೆ ವರವಾಗಲಿದೆ ಎಂಬುದು ರಾಜಕೀಯ ವಿಶ್ಲೇಷಕರ ಮಾತು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ಇದನ್ನು ಓದಿದ್ದೀರಾ? ವಿಜಯಪುರ | ವಿದ್ಯಾರ್ಥಿನಿಯರಿಗೆ ಲೈಂಗಿಕ ಕಿರುಕುಳ ಆರೋಪ: ಪ್ರಾಂಶುಪಾಲನ ಬಂಧನ

ಮೇಯರ್ ಹಾಗೂ ಉಪ ಮೇಯರ್ ಚುನಾವಣೆ ದಿನಾಂಕವನ್ನು ಚುನಾವಣಾ ಅಧಿಕಾರಿ ಪ್ರಾದೇಶಿಕ ಆಯುಕ್ತರು ಇನ್ನಷ್ಟೇ ನಿಗದಿಗೊಳಿಸಬೇಕಿದೆ. ಎರಡೂ ಪಕ್ಷಗಳು ಚುನಾವಣೆ ದಿನಾಂಕ ಘೋಷಣೆ ಎದರು ನೋಡುತ್ತಾ ಅಧಿಕಾರಕ್ಕೆ ರಣತಂತ್ರ ರೂಪಿಸುತ್ತಿವೆ.

ಪಾಲಿಕೆಯ ಒಟ್ಟು 35 ಸ್ಥಾನಗಳಲ್ಲಿ ಬಿಜೆಪಿ 17, ಕಾಂಗ್ರೆಸ್ 10, ಎಐಎಂಐಎಂ 2,  ಜೆಡಿಎಸ್ 1 ಬಿಜೆಪಿ 5 ಪಕ್ಷೇತರ ಸದಸ್ಯರಿದ್ದಾರೆ. ಬಿಜೆಪಿಗೆ ಅನೇಕ ಸದಸ್ಯರಲ್ಲದೆ ಶಾಸಕ ಯತ್ನಾಳ್ ಹಾಗೂ ಸಂಸದ ಜಿಗಜಿಣಗಿ ಮತಗಳ ಬಲವಿದ್ದರೆ, ಇತ್ತ ಕಾಂಗ್ರೆಸ್ ಬುಟ್ಟಿಯಲ್ಲಿ ಸಚಿವ ಎಂ. ಬಿ. ಪಾಟೀಲ, ನಾಗಠಾಣ ಶಾಸಕ ವಿಠ್ಠಲ ಕಟಕದೊಂಡ ಹಾಗೂ ಪರಿಷತ್ ಸದಸ್ಯ ಸುನೀಲಗೌಡ ಪಾಟೀಲರ ಮತಗಳಿವೆ. ಕಳೆದ ಬಾರಿ ಮೇಯರ್ ಹಾಗೂ ಉಪ ಮೇಯರ್ ಆಯ್ಕೆ ವೇಳೆ ಪರಿಷತ್ ಸದಸ್ಯರಾಗಿ ಮತ ಚಲಾಯಿಸುವ ಅಧಿಕಾರ ಹೊಂದಿದ್ದ ಕಾಂಗ್ರೆಸ್ ನ ಪ್ರಕಾಶ ರಾಠೋಡ್ ಅವರ ಅವಧಿ ಮುಗಿದಿದೆ ಎನ್ನಲಾಗಿದೆ. ರಾಜಕೀಯ ದೊಂಬರಾಟದಲ್ಲಿ ಅಧಿಕಾರದ ಗದ್ದುಗೆ ಯಾರ ಕೈ ಸೇರಲಿದೆ ಕಾದು ನೋಡಬೇಕು.

ರಮೇಶ್ ಎಸ್ ಹೊಸಮನಿ
ರಮೇಶ ಎಸ್ ಹೊಸಮನಿ
+ posts

ವಿಜಯಪುರ ಜಿಲ್ಲಾ ಸಂಯೋಜಕರು

ಪೋಸ್ಟ್ ಹಂಚಿಕೊಳ್ಳಿ:

ರಮೇಶ ಎಸ್ ಹೊಸಮನಿ
ರಮೇಶ ಎಸ್ ಹೊಸಮನಿ
ವಿಜಯಪುರ ಜಿಲ್ಲಾ ಸಂಯೋಜಕರು

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಸಿಂಧನೂರು | ರೀಲ್ಸ್ ಮಾಡಲು ಹೋದ ಯುವಕ ನೀರು ಪಾಲು

ರೀಲ್ಸ್ ಮಾಡುವ ಉದ್ದೇಶದಿಂದ ಸ್ನೇಹಿತರಿಗೆ ವಿಡಿಯೋ ಮಾಡಲು ಹೇಳಿ ಈಜಲು ನದಿಗೆ...

ಗದಗ | ಆದ್ಯ ವಚನಕಾರ ದೇವರ ದಾಸಿಮಯ್ಯ: ರಾಘವೇಂದ್ರ ಕೊಪ್ಪಳ

"ಆದ್ಯ ವಚನಕಾರ ನೇಕಾರ ಸಂತ ದೇವರ ದಾಸಿಮಯ್ಯನವರು 10 ನೇ ಶತಮಾನದಲ್ಲಿ...

ಮಾರ್ಚ್ 25ರಂದು ಬೆಂಗಳೂರಿನ ಫ್ರೀಡಂ ಪಾರ್ಕ್ನಲ್ಲಿ ಬಲಗೈ ಜಾತಿಗಳ ಬೃಹತ್ ಹೋರಾಟ

ಬಾಗೇಪಲ್ಲಿ:-ಕರ್ನಾಟಕ ರಾಜ್ಯ ಬಲಗೈ ಜಾತಿಗಳ ಮಹಾ ಒಕ್ಕೂಟದ ವತಿಯಿಂದ ಒಳ ಮೀಸಲಾತಿ...

ಯುಪಿಎಸ್ಸಿ ರ‍್ಯಾಂಕ್‌ ವಿಜೇತ ವರುಣ್ ಗೌಡಗೆ ಸನ್ಮಾನ

ಕೋಲಾರ: ಯುಪಿಎಸ್ಸಿ ಪರೀಕ್ಷೆಯಲ್ಲಿ 462 ನೇ ರ‍್ಯಾಂಕ್‌ ಪಡದ ತಾಲೂಕಿನ ತ್ಯಾವನಹಳ್ಳಿ...