ವಿಜಯಪುರ | ಉಪಹಾರ ಸೇವಿಸುತ್ತಾ ಜನರೊಂದಿಗೆ ಬೆರೆತು ಚರ್ಚಿಸಿದ ಕಾಂಗ್ರೆಸ್‌ ಅಭ್ಯರ್ಥಿ ರಾಜು ಆಲಗೂರ

Date:

ತಮ್ಮ ಸರಳತೆ, ಸಜ್ಜನಿಕೆಯಿಂದಲೇ ಮತದಾರರ ಮನಸ್ಸು ಗೆಲ್ಲುತ್ತಿರುವ ಕಾಂಗ್ರೆಸ್‌ನ ಲೋಕಸಭೆ ಅಭ್ಯರ್ಥಿ ಪ್ರೊ.ರಾಜು ಆಲಗೂರ ಅವರು ಗುರುವಾರ ಬೆಳಿಗ್ಗೆ ಸಾಮಾನ್ಯರ ಜತೆಗೇ ಕುಳಿತು ಉಪಹಾರ ಸೇವಿಸಿದ್ದು ವಿಶೇಷವಾಗಿತ್ತು.

ಜನಸಾಮಾನ್ಯರ ಜತೆ ಪ್ರಚಾರಕ್ಕೂ ಮುನ್ನ ವಿಜಯಪುರ ನಗರದ ಸೊಲ್ಲಾಪುರ ರಸ್ತೆಯ ಮುಂದಿನ ಕ್ಯಾಂಟೀನ್‌ವೊಂದರಲ್ಲಿ ಚಹಾ ಕುಡಿಯುತ್ತ ಚರ್ಚಿಸುತ್ತಿದ್ದಾಗಲೇ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆಯವರ ಕರೆ ಬಂದಿದ್ದು ಮತ್ತೂ ವಿಶೇಷವಾಗಿತ್ತು. ಖರ್ಗೆಯವರು ಚುನಾವಣೆ ಕುರಿತು ಮಾಹಿತಿ ಪಡೆದು, “ಹೇಗೆ ನಡೆಯುತ್ತಿದೆ ಪ್ರಚಾರ? ನಿಮ್ಮ ಬಗ್ಗೆ ಹೈಕಾಮಂಡ್‌ಗೆ ಒಳ್ಳೆಯ ವರದಿ ಬಂದಿದೆ. ನೀವು ಗೆಲ್ಲುವ ಅಭ್ಯರ್ಥಿಯಾಗಿದ್ದೀರಿ. ಎಲ್ಲರ ಸಹಕಾರ ಪಡೆಯಿರಿ” ಎಂದು ಹೇಳಿದರು.

ಹೋಟೆಲ್‌ವೊಂದರಲ್ಲಿ ಇರುವುದಾಗಿ ಹೇಳಿದ ಆಲಗೂರರು, “ಜಿಲ್ಲೆಯ ಎಲ್ಲ ಪ್ರಮುಖ ನಾಯಕರು ಹಗಲಿರುಳು ಶ್ರಮಿಸುತ್ತಿದ್ದಾರೆ. ಎಲ್ಲರೂ ಒಮ್ಮತ ಹಾಗೂ ಉತ್ಸಾಹದಿಂದ ಬೆನ್ನಿಗಿದ್ದು ಪಕ್ಷದ ಗೆಲುವಿಗಾಗಿ ಶತ ಪ್ರಯತ್ನ ಮಾಡುತ್ತಿದ್ದಾರೆ. ಕೆಳ ಹಂತದಿಂದ ಮತದಾರರನ್ನು ತಲುಪುತ್ತಿದ್ದೇವೆ” ಎಂದು ವಿವರಿಸಿದರು.‌

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ರಾಜು ಆಲಗೂರ ಸಂವಾದ

ಖರ್ಗೆಯವರು ಇದಕ್ಕುತ್ತರಿಸಿ, “ನೀವು ಗೆದ್ದೇ ಗೆಲ್ಲುತ್ತೀರಿ. ಇದೇ ಉತ್ತಮ ಸ್ಥಿತಿಯನ್ನು ಕಾಯ್ದುಕೊಂಡು ಹೋಗಬೇಕು” ಎಂದು ಹೇಳಿ ಹಲವು ಸೂಚನೆ, ಸಲಹೆಗಳನ್ನು ಕೊಟ್ಟರು.

ನಾಷ್ಟಾ ಜೊತೆಗೆ ಚರ್ಚೆ, ಆಪ್ತ ಮಾತು

ಉಪಹಾರ ಮಾಡುತ್ತ ಆಲಗೂರರು ಹೋಟೆಲ್‌ಗೆ ಬಂದವರ ಜತೆಗೆ ಮಾತನಾಡುತ್ತ ರಾಜಕಾರಣ ಹೊರತುಪಡಿಸಿ ಅವರ ಕುಷಲೋಪರಿ ವಿಚಾರಿಸುತ್ತಿದ್ದರು. ದೇಶದ ಇಂದಿನ ಸ್ಥಿತಿ, ಬೆಲೆ ಏರಿಕೆ ಬಗ್ಗೆಯೂ ಹಲವರು ಮಾತನಾಡಿದರು.

“ನೀವು ಹೀಗೆ ಎಲ್ಲರೊಂದಿಗೆ ಬೆರೆಯುತ್ತೀರಿ. ಸದ್ಯದ ಸಂಸದರು ನಮಗೆ ಮುಖವನ್ನೇ ತೋರಿಸಿಲ್ಲ. ಈಗ ಚುನಾವಣೆ ಬಂದಾಗ ಅವರ ಮುಖ ನೋಡುತ್ತಿದ್ದೇವೆ. ನಿಮ್ಮಂತಹವರು ಜನಪ್ರತಿನಿಧಿಗಳಾದರೆ ಉತ್ತಮ” ಎಂದು ಸ್ಥಳೀಯರು ಅಭಿಪ್ರಾಯಪಟ್ಟರು.

ರಾಜು ಆಲಗೂರ ಸಂವಾದ

“ನೀವು ಆಯ್ಕೆಯಾದರೆ ನಗರಕ್ಕೆ ರೈಲು, ವಿಮಾನಯಾನ, ಪ್ರವಾಸಿ ತಾಣವಾಗಿ ಅಭಿವೃದ್ಧಿ, ಮೂಲ ಸೌಕರ್ಯಗಳಂತಹ ಮಹತ್ವದ ಕೆಲಸ ಮಾಡಬೇಕು” ಎಂದು ಪಟ್ಟಿ ಮುಂದಿಟ್ಟರು.

ಸ್ಥಳೀಯರ ಪಟ್ಟಿಗೆ ಪ್ರತಿಕ್ರಿಯಿಸಿದ ಆಲಗೂರರು, “ಈಗಾಗಲೇ ಎರಡು ಬಾರಿ ಶಾಸಕನಾಗಿ, ನಿಗಮದ ಅಧ್ಯಕ್ಷನಾಗಿ ದುಡಿದಿದ್ದೇನೆ. ನೀವು ಈ ಬಾರಿ ವಿಶ್ವಾಸವಿಟ್ಟು ಮತ ಹಾಕಿದರೆ ಪ್ರಾಮಾಣಿಕವಾಗಿ ಶ್ರಮಿಸುತ್ತೇನೆ” ಎಂದು ಭರವಸೆ ನೀಡಿದರು.

ಗೃಹಲಕ್ಷ್ಮಿ ರೊಕ್ಕ ಬಂದು ನಮ್ಮಂತೋರಿಗಿ ಪಾಡಾಗ್ಯಾದ್ರಿ.

ರಾಜು ಆಲಗೂರ ಅವರು ಹೋಟೆಲ್‌ನಲ್ಲಿ ಕೆಲಸ ಮಾಡುತ್ತಿದ್ದ ಕಾರ್ಮಿಕರ ಕಷ್ಟ-ಸುಖವನ್ನೂ ಕೇಳಿ ಆಪ್ತತೆ ಮೆರೆದರು. ಅಡುಗೆ ಕೋಣೆಗೆ ಹೋಗಿ ಹೆಣ್ಣುಮಕ್ಕಳನ್ನು ಮಾತನಾಡಿಸಿದರು. ಅಲ್ಲಿದ್ದವರು, “ನಮಗ ಸಿದ್ದರಾಮಯ್ಯರು ತಿಂಗ್ಳಾ ಎರಡು ಸಾವಿರ ಹಾಕ್ತಿರೋದು, ಬಸ್ ಫ್ರೀ, ಕರೆಂಟ್ ಕೊಟ್ಟಿರೋದಕ್ಕ ಭಾಳ ಅನುಕೂಲ ಆಗ್ಯಾದ್ರಿ. ನಮ್ಮ ಮಕ್ಕಳು ನಾವೀಗ ನೆಮ್ಮದಿಯಿಂದ ಇದ್ದೀವಿ” ಎಂದು ಹೇಳಿದರು.

“ಎಂ ಬಿ ಪಾಟೀಲರು ನಮಗ ನೀರ್ ಕೊಟ್ಟು ಭಾಳ ದೊಡ್ಡ ಉಪಕಾರ ಮಾಡ್ಯಾರ್ರೀ ಸರ್” ಎಂದು ಭಾವುಕರಾದರು. ಅಲ್ಲಿದ್ದ ಅನೇಕರು ನೀರಾವರಿ ಕೆಲಸಗಳನ್ನು ಶ್ಲಾಘಿಸಿದರು.

“ಹಿಂದೆ ಬಿಜಾಪುರಕ್ಕ ತಿಂಗಳಿಗೊಮ್ಮೆ ನೀರು ಬರ್ತಿತ್ತು. ಈಗ ಆರಾಮಿದೀವ್ರಿ.. ನಮ್ಮ ಹೊಲಾನೂ ಛೊಲೋ ಬೆಳಿಲಿಕತ್ತ್ಯಾವ ಭೂಮೀಗಿ ಬಂಗಾರದ ಬೆಲಿ ಬಂದದ” ಎಂದು ಹೇಳಿದ್ದು ಕೇಳಿದ ಆಲಗೂರರಿಗೆ ಸಮಾಧಾನ ತಂದಿತು. ಮುಂದೆಯೂ ನಾವು ನಿಮ್ಮೊಂದಿಗೆ ಇದ್ದೇವೆಂದು ಹೇಳಿ, ಮೌನವಾಗಿ ನಮಸ್ಕರಿಸಿ ಮುನ್ನೆಡೆದರು.

ಈ ಸುದ್ದಿ ಓದಿದ್ದೀರಾ? ರಾಯಚೂರು | ಕಾಂಗ್ರೆಸ್ ಅಭ್ಯರ್ಥಿ ಜಿ ಕುಮಾರ ನಾಯಕರನ್ನು ಭಾರೀ ಅಂತರದಿಂದ ಗೆಲ್ಲಿಸಿ: ಸಚಿವ ಬೋಸರಾಜು

ಜಿಲ್ಲಾ ಉಸ್ತುವಾರಿ ಸಚಿವ ಎಂ ಬಿ ಪಾಟೀಲರ ಪುತ್ರ ಬಸವನಗೌಡ ಪಾಟೀಲ ಮತ್ತು ಡಾ ಮಹಾಂತೇಶ ಬಿರಾದಾರ ಆಲಗೂರರಿಗೆ ಸಾಥ್ ನೀಡಿದರು.

ಲೋಕಸಭೆ ಕಾಂಗ್ರೆಸ್ ಅಭ್ಯರ್ಥಿ ಪ್ರೊ. ರಾಜು ಆಲಗೂರ ಅವರು ವಿಜಯಪುರದ ಹೋಟೆಲೊಂದರಲ್ಲಿ ಬೆಳಗಿನ ಉಪಹಾರ ಮಾಡಿ, ಜನರ ಜತೆಗೆ ಬೆರೆತರು. ಸಚಿವ ಎಂ ಬಿ ಪಾಟೀಲರ ಪುತ್ರ ಬಸವನಗೌಡ ಪಾಟೀಲ, ಡಾ ಮಹಾಂತೇಶ ಬಿರಾದಾರ ಜೊತೆಗಿದ್ದರು.

WhatsApp Image 2025 11 17 at 3.21.17 PM
ಈ ದಿನ ಡೆಸ್ಕ್
+ posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಸಿಂಧನೂರು | ರೀಲ್ಸ್ ಮಾಡಲು ಹೋದ ಯುವಕ ನೀರು ಪಾಲು

ರೀಲ್ಸ್ ಮಾಡುವ ಉದ್ದೇಶದಿಂದ ಸ್ನೇಹಿತರಿಗೆ ವಿಡಿಯೋ ಮಾಡಲು ಹೇಳಿ ಈಜಲು ನದಿಗೆ...

ಗದಗ | ಆದ್ಯ ವಚನಕಾರ ದೇವರ ದಾಸಿಮಯ್ಯ: ರಾಘವೇಂದ್ರ ಕೊಪ್ಪಳ

"ಆದ್ಯ ವಚನಕಾರ ನೇಕಾರ ಸಂತ ದೇವರ ದಾಸಿಮಯ್ಯನವರು 10 ನೇ ಶತಮಾನದಲ್ಲಿ...

ಮಾರ್ಚ್ 25ರಂದು ಬೆಂಗಳೂರಿನ ಫ್ರೀಡಂ ಪಾರ್ಕ್ನಲ್ಲಿ ಬಲಗೈ ಜಾತಿಗಳ ಬೃಹತ್ ಹೋರಾಟ

ಬಾಗೇಪಲ್ಲಿ:-ಕರ್ನಾಟಕ ರಾಜ್ಯ ಬಲಗೈ ಜಾತಿಗಳ ಮಹಾ ಒಕ್ಕೂಟದ ವತಿಯಿಂದ ಒಳ ಮೀಸಲಾತಿ...

ಯುಪಿಎಸ್ಸಿ ರ‍್ಯಾಂಕ್‌ ವಿಜೇತ ವರುಣ್ ಗೌಡಗೆ ಸನ್ಮಾನ

ಕೋಲಾರ: ಯುಪಿಎಸ್ಸಿ ಪರೀಕ್ಷೆಯಲ್ಲಿ 462 ನೇ ರ‍್ಯಾಂಕ್‌ ಪಡದ ತಾಲೂಕಿನ ತ್ಯಾವನಹಳ್ಳಿ...