ವಿಜಯಪುರ | ಬಿಜೆಪಿ ಮುಖಂಡ ರವೀಂದ್ರ ಲೋಣಿ ಮಾತಿಗೆ, ಕಾಂಗ್ರೆಸ್ ಜಿಲ್ಲಾ ಘಟಕದ ಅಧ್ಯಕ್ಷ ತಿರುಗೇಟು

Date:

ನಾಗಠಾಣ ಮೀಸಲು ವಿಧಾನಸಭಾ ಕ್ಷೇತ್ರ ಕಾಂಗ್ರೆಸ್ ಆಡಳಿತ ಅವಧಿಯಲ್ಲಿ ಅಭಿವೃದ್ಧಿ ಆಗಿಲ್ಲ. ಶಾಸಕ ವಿಠಲ ಕಟಕ ದಂಡ ಅವರು ಕ್ಷೇತ್ರಕ್ಕೆ ವಿಶೇಷ ಅನುದಾನ ತಂದಿಲ್ಲ. ಕ್ಷೇತ್ರದ ಸಮಸ್ಯೆಗಳಿಗೆ ಉಸ್ತುವಾರಿ ಸಚಿವರು ಸ್ಪಂದಿಸಿಲ್ಲ. ಮುಖ್ಯಮಂತ್ರಿ ಸಿದ್ದರಾಮಯ್ಯ ಕ್ಷೇತ್ರಕ್ಕೆ ಅನುದಾನ ನೀಡಿಲ್ಲವೆಂಬ ಬಿಜೆಪಿ ಮುಖಂಡ ರವೀಂದ್ರ ಲೋಣಿ ಆರೋಪ ಖಂಡನೀಯ ಎಂದು ವಿಜಯಪುರ ಕಾಂಗ್ರೆಸ್ ಜಿಲ್ಲಾ ಘಟಕದ ಅಧ್ಯಕ್ಷ ಮಲ್ಲಿಕಾರ್ಜುನ್ ಲೋಣಿ ಹೇಳಿದರು.

ವಿಜಯಪುರ ನಗರದಲ್ಲಿ ಪತ್ರಿಕಾಗೋಷ್ಠಿ ನಡೆಸಿ ಮಾತನಾಡಿದ ಅವರು, “ಕಾಂಗ್ರೆಸ್ ಅಧಿಕಾರಕ್ಕೆ ಬಂದು ಎರಡೂವರೆ ವರ್ಷಗಳಲ್ಲಿ ಶಾಸಕರು ನಾಗಾಣ ಕ್ಷೇತ್ರಕ್ಕೆ ವಿವಿಧ ಅಭಿವೃದ್ಧಿ ಕಾರ್ಯಗಳಿಗೆ ವಿವಿಧ ಇಲಾಖೆಗಳಿಂದ 700 ಕೋಟಿ ರೂಪಾಯಿ ಅನುದಾನ ತಂದಿದ್ದಾರೆ” ಎಂದು ಸಮರ್ಪಿಸಿಕೊಂಡರು.

“ಜಿಲ್ಲಾ ಉಸ್ತುವಾರಿ ಸಚಿವರು ನಾಗಠಾಣ ಕ್ಷೇತ್ರದ ಕೆಲಸ ಮಾಡಿಲ್ಲವೆಂಬ ಆರೋಪ ಖಂಡನೀಯ. ಇಡೀ ಜಿಲ್ಲೆಯನ್ನೇ ಅವರು ನೀರಾವರಿ ಮಾಡಿದ್ದಾರೆ. ಕೈಗಾರಿಕೆ ತರಲು ಪ್ರಯತ್ನಿಸುತ್ತಿದ್ದಾರೆ. ಅವರ ವಿರುದ್ಧದ ಟೀಕೆ ಸರಿಯಲ್ಲ” ಎಂದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

“ವಿಜಯಪುರ ಮಹಾನಗರ ಪಾಲಿಕೆಗೆ ರಾಜ್ಯ ಸರ್ಕಾರ ಬಿಡುಗಡೆ ಮಾಡಿರುವ ₹150 ಕೋಟಿ ವಿಶೇಷ ಅನುದಾನದಲ್ಲಿ ₹39 ಕೋಟಿ ಅನುದಾನ ನಾಗಠಾಣ ಕ್ಷೇತ್ರ ವ್ಯಾಪ್ತಿಗೆ ಬರುವ ಪಾಲಿಕೆ ವಾರ್ಡ್‌ಗಳಲ್ಲಿ ಖರ್ಚು ಮಾಡಲಾಗಿದೆ. ಮುಖ್ಯಮಂತ್ರಿ ಸಿದ್ದರಾಮಯ್ಯನವರು ಅಹಿಂದ ನಾಯಕರೆಂದು ಹೇಳಿಕೊಂಡು, ಕೇವಲ ಅಲ್ಪಸಂಖ್ಯಾತ ಮುಸ್ಲಿಮರ ಪರ ಇದ್ದಾರೆಂಬ ಆರೋಪ ಖಂಡನೀಯ. ಸಿದ್ದರಾಮಯ್ಯನವರು ಸರ್ವಜಾತಿ, ಜನಾಂಗ, ಧರ್ಮಗಳ ಪರವಾಗಿದ್ದಾರೆ” ಎಂದರು.

“ನಾಗಠಾಣಾ ಕ್ಷೇತ್ರಕ್ಕೆ ಗೋವಿಂದ ಕಾರಜೋಳ ಅವರಂತಹ ಸಮರ್ಥ ನಾಯಕರು ಸಿಗದ ಕಾರಣ ಕ್ಷೇತ್ರ ಅಭಿವೃದ್ಧಿಯಾಗಿಲ್ಲವೆಂಬ ರವೀಂದ್ರ ಲೋಣಿ ಹೇಳಿಕೆ ಸರಿಯಲ್ಲ. ನಾಗಠಾಣವು ಈ ಮೊದಲು ಬಳ್ಳೊಳ್ಳಿ ವಿಧಾನಸಭಾ ಕ್ಷೇತ್ರವಿದ್ದಾಗ ಶಾಸಕ, ಸಚಿವರಾಗಿದ್ದ ರಮೇಶ ಜಿಗಜಿಣಗಿ ಅವಧಿಯಲ್ಲಿ ಹಾಗೂ ಈ ಹಿಂದಿನ ಅವಧಿಯಲ್ಲಿ ಬಿಜೆಪಿ ಮೈತ್ರಿಕೂಟದ ಜೆಡಿಎಸ್ ಶಾಸಕರು ಇದ್ದಾಗ ಯಾವೆಲ್ಲ ಅಭಿವೃದ್ಧಿ ಕೆಲಸಗಳಾಗಿವೆ ಎಂಬುದನ್ನು ಬಿಜೆಪಿ ಮುಖಂಡರು ಕ್ಷೇತ್ರದ ಜನತೆಗೆ ತಿಳಿಸಬೇಕು” ಎಂದು ಸವಾಲು ಹಾಕಿದರು.

“ತಿಡಗುಂದಿ ಬಳಿ ಕೈಗಾರಿಕಾ ಸ್ಥಾಪಿಸುವುದು ಬೇಡವೆಂದು ಲೋಣಿಯವರು ವಿರೋದ ವ್ಯಕ್ತಪಡಿಸಿದ್ದಾರೆ. ಆದರೆ, ಆ ಪ್ರದೇಶದಲ್ಲಿ ಕೊಳವೆ ಬಾವಿ ಕೊರೆದರೆ ಸಿಹಿ ನೀರು ಬದಲು, ಕಹಿ ನೀರು ಬರುತ್ತದೆ. ಇಂತಹ ಭೂಮಿ ಕೃಷಿಗಿಂತ ಕೈಗಾರಿಕೆಗೆ ಯೋಗ್ಯವಾಗಿದೆ ಎಂಬುದನ್ನು ಬಿಜೆಪಿಯವರು ತಿಳಿದುಕೊಳ್ಳಬೇಕು” ಎಂದರು.

“ಶಾಸಕ ಬಸನಗೌಡ ಪಾಟೀಲ್ ಅವರು ಮುಸ್ಲಿಮರ ವಿರುದ್ಧ ನಿರಂತರ ವಾಗ್ದಾಳಿ, ಟೀಕೆ ಮಾಡುತ್ತಿರುವ ಬಗ್ಗೆ ಪ್ರತಿಕ್ರಿಯೆಸಿದ ಲೋಣಿ, ಮುಸ್ಲಿಮರನ್ನು ಸದಾ ಕಾಲ ನಿಂದಿಸುತ್ತಿದ್ದರೆ ಶಾಸಕನಾಗಿರಬಹುದು ಎಂಬ ಭ್ರಮೆಯಲ್ಲಿ ಅವರಿದ್ದಾರೆ. ಅವರ ಮುಸ್ಲಿಂ ವಿರೋಧಿ ಹೇಳಿಕೆ ಖಂಡನೆ” ಎಂದರು.

ಈ ಸುದ್ದಿ ಓದಿದ್ದೀರಾ? ಮೂರು ವರ್ಷದ ಅವಧಿಯಲ್ಲಿ ರಾಜ್ಯಾದ್ಯಂತ 6,635 ಎಸ್‌ಸಿ/ಎಸ್‌ಟಿ ದೌರ್ಜನ್ಯ ಪ್ರಕರಣ ದಾಖಲು: ಸಿಎಂ ಸಿದ್ದರಾಮಯ್ಯ

“2023ರ ವಿಧಾನಸಭಾ ಚುನಾವಣೆಯಲ್ಲಿ ವಿಜಯಪುರ ಮತದಾರರು ಅವರಿಗೆ ಬುದ್ಧಿ ಕಲಿಸಿದ್ದರು. ಆದರೆ, ಹೊರಗಿನಿಂದ 25,000 ಅಕ್ರಮ ಮತದಾರರನ್ನು ಕರೆತಂದು, ಮತವನ್ನು ಕದ್ದು ಶಾಸಕರಾಗಿದ್ದಾರೆ” ಎಂದು ಆರೋಪಿಸಿದರು.

ಈ ವೇಳೆ ಕಾಂಗ್ರೆಸ್ ಮುಖಂಡರಾದ ವೈಜನಾಥ ಕರ್ಪೂರ ಮಠ, ಶಹಜಾನ್ ಮುಲ್ಲಾ, ಆರ್ ಡಿ ಹಕ್ಕೆ, ಚಾಂದ್ ಸಾಬ್ ಗಡಗಲಾವ, ಸಲೀಂ ಪಿರಿಜಾದೆ, ಅಬ್ದುಲ್ ರಜಾಕ್ ಹೊರ್ತಿ, ರವಿ ದಾಸ ಕಾಲೆ ಭಾಗ, ಆನಂದ ಬಂಡಿ, ದೇಸಿ ಚೌಹಾಣ್, ವಸಂತ ವನ ಮೋಡೆ, ರಫೀಕ್ ಯಾತಗಿರಿ ಇದ್ದರು.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಸಿಂಧನೂರು | ರೀಲ್ಸ್ ಮಾಡಲು ಹೋದ ಯುವಕ ನೀರು ಪಾಲು

ರೀಲ್ಸ್ ಮಾಡುವ ಉದ್ದೇಶದಿಂದ ಸ್ನೇಹಿತರಿಗೆ ವಿಡಿಯೋ ಮಾಡಲು ಹೇಳಿ ಈಜಲು ನದಿಗೆ...

ಗದಗ | ಆದ್ಯ ವಚನಕಾರ ದೇವರ ದಾಸಿಮಯ್ಯ: ರಾಘವೇಂದ್ರ ಕೊಪ್ಪಳ

"ಆದ್ಯ ವಚನಕಾರ ನೇಕಾರ ಸಂತ ದೇವರ ದಾಸಿಮಯ್ಯನವರು 10 ನೇ ಶತಮಾನದಲ್ಲಿ...

ಮಾರ್ಚ್ 25ರಂದು ಬೆಂಗಳೂರಿನ ಫ್ರೀಡಂ ಪಾರ್ಕ್ನಲ್ಲಿ ಬಲಗೈ ಜಾತಿಗಳ ಬೃಹತ್ ಹೋರಾಟ

ಬಾಗೇಪಲ್ಲಿ:-ಕರ್ನಾಟಕ ರಾಜ್ಯ ಬಲಗೈ ಜಾತಿಗಳ ಮಹಾ ಒಕ್ಕೂಟದ ವತಿಯಿಂದ ಒಳ ಮೀಸಲಾತಿ...

ಯುಪಿಎಸ್ಸಿ ರ‍್ಯಾಂಕ್‌ ವಿಜೇತ ವರುಣ್ ಗೌಡಗೆ ಸನ್ಮಾನ

ಕೋಲಾರ: ಯುಪಿಎಸ್ಸಿ ಪರೀಕ್ಷೆಯಲ್ಲಿ 462 ನೇ ರ‍್ಯಾಂಕ್‌ ಪಡದ ತಾಲೂಕಿನ ತ್ಯಾವನಹಳ್ಳಿ...