ವಿಜಯಪುರ | ಮುಸ್ಲಿಮರನ್ನು ಕಾಂಗ್ರೆಸ್‌ ಕಡೆಗಣಿಸುತ್ತಿದೆ: ಮುಖಂಡರ ಆರೋಪ

Date:

ಕಾಂಗ್ರೆಸ್‌ಗೆ ಮೂಲ ಬಂಡವಾಳವೇ ಮುಸ್ಲಿಮರು. ಇತ್ತೀಚಿನ ವರ್ಷಗಳಲ್ಲಿ ಮೂಲ ಬಂಡವಾಳಿಗರನ್ನೇ ಕಾಂಗ್ರೆಸ್ ಮರೆಯುತ್ತಿದೆ. ಕಾಂಗ್ರೆಸ್‌ನಲ್ಲಿ ಮುಸ್ಲಿಮರನ್ನು ಮೂರನೇ ದರ್ಜೆ ನಾಗರಿಕರನ್ನಾಗಿ ಮಾಡಲಾಗಿದೆ. ಈ ನಿರ್ಲಕ್ಷ್ಯ ಸರಿಯಲ್ಲ ಎಂದು ಮುಸ್ಲಿಂ ಮುಖಂಡರು ಆರೋಪ ಮಾಡಿದ್ದಾರೆ.

ವಿಜಯಪುರ ನಗರದಲ್ಲಿ ಪತ್ರಿಕಾಗೋಷ್ಠಿ ಉದ್ದೇಶಿಸಿ ಮಾತನಾಡಿದ ಮುಸ್ಲಿಂ ಮುಖಂಡರು “ಮುಂಬರುವ ವಿಧಾನ ಪರಿಷತ್‌ಗೆ ಸದಸ್ಯರ ಆಯ್ಕೆ ವೇಳೆ ಜಿಲ್ಲಾ ಕಾಂಗ್ರೆಸ್, ಅಲ್ಪಸಂಖ್ಯಾತ ಮುಖಂಡರಿಗೆ ಅವಕಾಶ ಕಲ್ಪಿಸಬೇಕು” ಎಂದು ಆಗ್ರಹಿಸಿದರು.

ಅಬ್ದುಲ್ ಹಮೀದ್ ಮುಶ್ರೀಫ್, ಎಸ್. ಎಂ.ಪಾಟೀಲ ಗಣಿಹಾರ, ಮಹಮ್ಮದ್ ರಫೀಕ್ ಟಪಾಲ್, ಎಂ.ಸಿ.ಮುಲ್ಲಾ, ಫಯಾಜ್ ಕಲಾದಗಿ, ನಸೀಂ ರೋಜಿನದಾರ ಸೇರಿದಂತೆ ಹಲವು ಸಮುದಾಯದ ಮುಖಂಡರು, “ಜಿಲ್ಲೆಯಲ್ಲಿ ಆರು ವಿಧಾನಸಭಾ ಕ್ಷೇತ್ರಗಳಲ್ಲಿ ಕಾಂಗ್ರೆಸ್ ಗೆಲುವಿಗೆ ಮುಸ್ಲಿಂ ಮತದಾರರು ಕಾರಣ. ಹೀಗಾಗಿ ಅವಕಾಶ ಹಾಗೂ ಪ್ರಾಮುಖ್ಯತೆ ಕೇಳುವ ಹಕ್ಕು ನಮಗಿದೆ. ನಾವು ಭಿಕ್ಷೆ ಬೇಡುತ್ತಿಲ್ಲ. ನಮ್ಮ ಪಗಾರ ಕೇಳುತ್ತಿದ್ದೇವೆ. ಜಿಲ್ಲೆಯಲ್ಲಿ ಕಾಂಗ್ರೆಸ್ ಗೆಲುವಿಗೆ ರಾತ್ರಿ-ಹಗಲು ಕೆಲಸ ಮಾಡಿದ್ದೇವೆ. ಆದರೆ, ಜಿಲ್ಲೆಯ ಮುಸ್ಲಿಂ ಮುಖಂಡರಿಗೆ ನಿಗಮ, ಮಂಡಳಿ, ವಿಧಾನ ಪರಿಷತ್‌ಗೆ ನೇಮಕವಾಗುವಾಗ ಪರಿಗಣಿಸುತ್ತಿಲ್ಲ. ದಕ್ಷಿಣ ಕರ್ನಾಟಕದ ಮುಸ್ಲಿಮರಿಗೆ ಅವಕಾಶ ಲಭಿಸುತ್ತಿದೆ. ಉತ್ತರ ಕರ್ನಾಟಕದವರಿಗೆ ಲಭಿಸುತ್ತಿಲ್ಲ” ಎಂದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ಇದನ್ನೂ ಓದಿ: ವಿಜಯಪುರ | ʼಏತ ನೀರಾವರಿ ಪೂರ್ಣಗೊಳಿಸಿ ರೈತರ ಹಿತ ಕಾಪಾಡಿʼ

ವಿಜಯಪುರ ಜಿಲ್ಲೆಯಲ್ಲಿ ದೊಡ್ಡ ಪ್ರಮಾಣದಲ್ಲಿ ಅಲ್ಪಸಂಖ್ಯಾತ ಸಮುದಾಯವಿದೆ. ನಮ್ಮ ಜಿಲ್ಲೆಯ ನಾಯಕರ ಬಗ್ಗೆ ಸಂಪೂರ್ಣ ವಿಶ್ವಾಸವಿದೆ. ಕೂದಲೆಳೆ ಅಂತರದಿಂದ ಎರಡು ಸಮುದಾಯದ ಮುಖಂಡರು ವಿಧಾನಸಭೆ ಚುನಾವಣೆ ಯಲ್ಲಿ ಆಯ್ಕೆಯಾಗಲಿಲ್ಲ. ಈ ಕೊರತೆಯನ್ನು ಜಿಲ್ಲೆಯ ಅಲ್ಪಸಂಖ್ಯಾತ ಮುಖಂಡರೊಬ್ಬರಿಗೆ ವಿಧಾನ ಪರಿಷತ್ ಸದಸ್ಯ ಸ್ಥಾನ ನೀಡುವ ಮೂಲಕ ನೀಗಿಸಬಹುದಾಗಿದೆ ಎಂದು ಮನವಿ ಮಾಡಿದರು.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಸಿಂಧನೂರು | ರೀಲ್ಸ್ ಮಾಡಲು ಹೋದ ಯುವಕ ನೀರು ಪಾಲು

ರೀಲ್ಸ್ ಮಾಡುವ ಉದ್ದೇಶದಿಂದ ಸ್ನೇಹಿತರಿಗೆ ವಿಡಿಯೋ ಮಾಡಲು ಹೇಳಿ ಈಜಲು ನದಿಗೆ...

ಗದಗ | ಆದ್ಯ ವಚನಕಾರ ದೇವರ ದಾಸಿಮಯ್ಯ: ರಾಘವೇಂದ್ರ ಕೊಪ್ಪಳ

"ಆದ್ಯ ವಚನಕಾರ ನೇಕಾರ ಸಂತ ದೇವರ ದಾಸಿಮಯ್ಯನವರು 10 ನೇ ಶತಮಾನದಲ್ಲಿ...

ಮಾರ್ಚ್ 25ರಂದು ಬೆಂಗಳೂರಿನ ಫ್ರೀಡಂ ಪಾರ್ಕ್ನಲ್ಲಿ ಬಲಗೈ ಜಾತಿಗಳ ಬೃಹತ್ ಹೋರಾಟ

ಬಾಗೇಪಲ್ಲಿ:-ಕರ್ನಾಟಕ ರಾಜ್ಯ ಬಲಗೈ ಜಾತಿಗಳ ಮಹಾ ಒಕ್ಕೂಟದ ವತಿಯಿಂದ ಒಳ ಮೀಸಲಾತಿ...

ಯುಪಿಎಸ್ಸಿ ರ‍್ಯಾಂಕ್‌ ವಿಜೇತ ವರುಣ್ ಗೌಡಗೆ ಸನ್ಮಾನ

ಕೋಲಾರ: ಯುಪಿಎಸ್ಸಿ ಪರೀಕ್ಷೆಯಲ್ಲಿ 462 ನೇ ರ‍್ಯಾಂಕ್‌ ಪಡದ ತಾಲೂಕಿನ ತ್ಯಾವನಹಳ್ಳಿ...