ವಿಜಯಪುರ | ಕಾಂಗ್ರೆಸ್ ಮಾರುಕಟ್ಟೆ ವ್ಯಾಪಾರಿಗಳ ಪರವಾಗಿದೆ: ಎಂ.ಬಿ ಪಾಟೀಲ

Date:

ಕಾಂಗ್ರೆಸ್ ಯಾವತ್ತೂ ಆರ್ಥಿಕತೆ ಮೂಲವಾದ ವ್ಯಾಪಾರ-ವಹಿವಾಟಿನ ಪರವಿದೆ. ನಾವು ವ್ಯಾಪಾರಿಗಳ ಹಿತ ಕಾಪಾಡುತ್ತಾ ಬಂದಿದ್ದೇವೆ ಎಂದು ವಿಜಯಪುರ ಜಿಲ್ಲಾ ಉಸ್ತುವಾರಿ ಸಚಿವ ಎಂ.ಬಿ. ಪಾಟೀಲ ಹೇಳಿದರು.

ವಿಜಯಪುರದ ಕಾಂಗ್ರೆಸ್‌ ಅಭ್ಯರ್ಥಿ ಪ್ರೊ. ರಾಜು ಆಲಗೂರ ಅವರ ಪರವಾಗಿ ಎಪಿಎಂಸಿ ಮಾರುಕಟ್ಟೆ ಆವರಣದಲ್ಲಿ ನಡೆದ ವ್ಯಾಪಾರಿಗಳ ಹಾಗೂ ಎಲ್ಲ ಸಂಘಗಳ ಪ್ರತಿನಿಧಿಗಳ ಸಭೆಯಲ್ಲಿ ಮಾತನಾಡಿದರು. “ದೇಶ ಈ ಹತ್ತು ವರ್ಷಗಳಲ್ಲಿ ಏನೇನು ಅನುಭವಿಸಿದೆ ನಿಮಗೆ ಗೊತ್ತಿದೆ. ಎಲ್ಲದರ ಮೇಲೆ ಜಿಎಸ್‌ಟಿ ದಾಳಿಯನ್ನು ವ್ಯಾಪಾರಿಗಳಾದ ನೀವು ಅನುಭವಿಸಿದ್ದೀರಿ. ಮನಮೋಹನ್ ಸಿಂಗ್‌ ಅವರು ಇದ್ದಾಗ ದೇಶದ ಆರ್ಥಿಕ ಸ್ಥಿತಿ ಅತ್ಯಂತ ಬಲಿಷ್ಠವಾಗಿತ್ತು. ಆದರೆ ಮೋದಿ ಆಡಳಿತ ಬಂದ ಮೇಲೆ ಅದು ಕುಸಿಯುತ್ತ ಬಂದಿದೆ. ಇದರ ನೇರ ಪರಿಣಾಮವನ್ನು ನೀವು ಉಂಡಿದ್ದೀರಿ” ಎಂದು ವಿವರಿಸಿದರು.

“ಚುನಾವಣಾ ಬಾಂಡ್ ಮೂಲಕ ಅನಧಿಕೃತವಾಗಿ ಹಣ ಎತ್ತಲಾಗಿದೆ. ಹೆದರಿಸಿ-ಬೆದರಿಸಿ ವ್ಯಾಪಾರಿಗಳ, ಉದ್ಯೋಗಪತಿಗಳಿಂದ ವಸೂಲಿ ಮಾಡಲಾಗಿದೆ. ಇದೆಲ್ಲವನ್ನು ನೀವು ಅರ್ಥ ಮಾಡಿಕೊಳ್ಳಬೇಕು. ಜಿಲ್ಲೆಯ ತೋಟಗಾರಿಕೆ, ಎಲ್ಲ ಬೆಳೆಗಳ ಹಿತ, ಅಭಿವೃದ್ಧಿಗೆ ಹಾಗೂ ನಿಮ್ಮ ವ್ಯಾಪಾರ-ವಹಿವಾಟಿನ ಉಳಿವಿಗಾಗಿ ಯೋಚಿಸಿ ಮತ ನೀಡಿ. ಶರದ್ ಪವಾರ ಅವರ ಬಾರಾಮತಿಯಂತೆ ವಿಜಯಪುರವನ್ನು ಬೆಳೆಸೋಣ” ಎಂದು ಹೇಳಿದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ಮಾರುಕಟ್ಟೆ ಹಾಗೂ ಜವಳಿ ಸಚಿವ ಶಿವಾನಂದ ಪಾಟೀಲ ಮಾತನಾಡಿ, “ಎಪಿಎಂಸಿಗಾಗಿ ಕೇಂದ್ರ ಸರಕಾರವನ್ನು ಮೀರಿ ನಿಮ್ಮೊಂದಿಗೆ ನಿಂತಿದ್ದು ರಾಜ್ಯ ಸರ್ಕಾರ. ಇದರಿಂದ ನಿಮಗೆ ಬಹುಪಯೋಗವಾಗಿದೆ. ಯಾರು ಯಾರೋ ಬಂದು ನಮ್ಮನ್ನು ಬೈದು ಮತ ಕೇಳುವವರ ಮಾತು ಕೇಳಬೇಡಿ. ಸದ್ಯದ ಸಂಸದನಿಗೆ ಪದೇ ಪದೇ ಅಧಿಕಾರ ನೀಡಿದರೂ ನಿಮ್ಮ ಹಣೆ ಬರಹ ಬದಲಾಗಿಲ್ಲ. ದೇಶವನ್ನು ಮೋದಿ-ಶಾ ಮಾತ್ರ ಆಳುತ್ತಿದ್ದಾರೆ. ನೀವೆಲ್ಲ ತಿಳಿದವರು. ಹಮಾಲರು ಊಟಕ್ಕೂ ಪರಿದಾಡುತ್ತಿದ್ದಾರೆ. ಮೋದಿ ದೊಡ್ಡವರ ಪರ ಇದ್ದಾರೆ. ಸಣ್ಣ ವ್ಯಾಪಾರಿಗಳ ಕಾಳಜಿ ಅವರಿಗಿಲ್ಲ” ಎಂದರು.

ಸಭೆಯಲ್ಲಿ ಶಾಸಕ ಯಶವಂತರಾಯಗೌಡ ಪಾಟೀಲ, ಎಐಸಿಸಿ ವೀಕ್ಷಕ ಸಯೀದ್ ಬುರಾನುದ್ದೀನ, ಶಾಸಕರಾದ ಪ್ರಕಾಶ ರಾಠೋಡ, ವಿಠ್ಠಲ ಕಟಕದೊಂಡ, ಅಶೋಕ ಮನಗೂಳಿ, ಮಾಜಿ ಶಾಸಕ ಶರಣಪ್ಪ ಸುಣಗಾರ, ಹಮೀದ್ ಮುಶ್ರೀಫ್, ನಿಗಮದ ಅಧ್ಯಕ್ಷೆ ಕಾಂತಾ ನಾಯಕ, ವೀಕ್ಷಕ ಸಯೀದ್ ಬುರಾನ್, ಡಾ. ಮಕ್ಬೂಲ್ ಬಾಗವಾನ, ಸೈಯ್ಯದ ನೂರುದ್ದೀನ್, ಸಂಘದ ಅಧ್ಯಕ್ಷ ರವೀಂದ್ರ ಬಿಜ್ಜರಗಿ, ವೈಜನಾಥ ಕರ್ಪೂರಮಠ, ಪಕ್ಷದ ಜಿಲ್ಲಾಧ್ಯಕ್ಷ ಎಂ. ಎಸ್. ಲೋಣಿ, ಗುಡ್ಡೂ ಮಹೀಂದ್ರಕರ, ಫಾರೂಖ ಬಾಗವಾನ, ಸಂಗಪ್ಪ ಹೇರಲಗಿ, ಸುರೇಶ ಗಚ್ಚಿನಕಟ್ಟಿ, ಅರುಣ ಹುಂಡೆಕಾರ ಅನೇಕರಿದ್ದರು.

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಸಿಂಧನೂರು | ರೀಲ್ಸ್ ಮಾಡಲು ಹೋದ ಯುವಕ ನೀರು ಪಾಲು

ರೀಲ್ಸ್ ಮಾಡುವ ಉದ್ದೇಶದಿಂದ ಸ್ನೇಹಿತರಿಗೆ ವಿಡಿಯೋ ಮಾಡಲು ಹೇಳಿ ಈಜಲು ನದಿಗೆ...

ಗದಗ | ಆದ್ಯ ವಚನಕಾರ ದೇವರ ದಾಸಿಮಯ್ಯ: ರಾಘವೇಂದ್ರ ಕೊಪ್ಪಳ

"ಆದ್ಯ ವಚನಕಾರ ನೇಕಾರ ಸಂತ ದೇವರ ದಾಸಿಮಯ್ಯನವರು 10 ನೇ ಶತಮಾನದಲ್ಲಿ...

ಮಾರ್ಚ್ 25ರಂದು ಬೆಂಗಳೂರಿನ ಫ್ರೀಡಂ ಪಾರ್ಕ್ನಲ್ಲಿ ಬಲಗೈ ಜಾತಿಗಳ ಬೃಹತ್ ಹೋರಾಟ

ಬಾಗೇಪಲ್ಲಿ:-ಕರ್ನಾಟಕ ರಾಜ್ಯ ಬಲಗೈ ಜಾತಿಗಳ ಮಹಾ ಒಕ್ಕೂಟದ ವತಿಯಿಂದ ಒಳ ಮೀಸಲಾತಿ...

ಯುಪಿಎಸ್ಸಿ ರ‍್ಯಾಂಕ್‌ ವಿಜೇತ ವರುಣ್ ಗೌಡಗೆ ಸನ್ಮಾನ

ಕೋಲಾರ: ಯುಪಿಎಸ್ಸಿ ಪರೀಕ್ಷೆಯಲ್ಲಿ 462 ನೇ ರ‍್ಯಾಂಕ್‌ ಪಡದ ತಾಲೂಕಿನ ತ್ಯಾವನಹಳ್ಳಿ...