ವಿಜಯಪುರ | ಕಾಂಗ್ರೆಸ್‌ ಅಭ್ಯರ್ಥಿ ರಾಜು ಆಲಗೂರಗೆ ಲಿಂಗತ್ವ ಅಲ್ಪಸಂಖ್ಯಾತರ ಬೆಂಬಲ

Date:

ವಿಜಯಪುರ ಲೋಕಸಭಾ ಕ್ಷೇತ್ರದ ಅಭ್ಯರ್ಥಿ ರಾಜು ಆಲಗೂರಗೆ ಲಿಂಗತ್ವ ಅಲ್ಪಸಂಖ್ಯಾತರು ವಿಜಯಪುರದಲ್ಲಿರುವ ಕಾಮಗ್ರೆಸ್‌ ಕಚೇರಿಗೆ ಆಗಮಿಸಿ ಬೆಂಬಲ ಸೂಚಿಸಿದ್ದಾರೆ.

ವಿಜಯಪುರ ಮತ ಕ್ಷೇತ್ರದಲ್ಲಿ ಮಂಗಳ ಮುಖಿಮತದಾರರು ಒಂದೂವರೆ ಸಾವಿರಕ್ಕಿಂತಲೂ ಹೆಚ್ಚು ಇದ್ದಾರೆ. ಇವರೆಲ್ಲ ರಾಜ್ಯ ಸಂಘಟನೆಗಳ ಸಲಹೆಯಂತೆ ಲಿಂಗತ್ವ ಅಲ್ಪಸಂಖ್ಯಾತರ ಕ್ಷೇಮಕ್ಕಾಗಿ ಇರುವ ಸಂಘಟನೆ ಆಲಗೂರರಿಗೆ ಬೆಂಬಲ ನೀಡಿದೆ.

ಈ ಸಂಬಂಧ ಕಾಂಗ್ರೆಸ್ ಕಚೇರಿಯಲ್ಲಿ ಪತ್ರಿಕಾಗೋಷ್ಠಿ ನಡೆಸಿದ ಕಾಂಗ್ರೆಸ್‌ ಅಭ್ಯರ್ಥಿ ರಾಜು ಆಲಗೂರ ಇವರಿಗೆ ಧನ್ಯವಾದ ಸಲ್ಲಿಸಿ ಮಾತನಾಡಿದರು. ಕಾಂಗ್ರೆಸ್‌ಗೆ ಎಲ್ಲ ಕಡೆಯಿಂದ ನಿರೀಕ್ಷೆ ಮೀರಿ ಬೆಂಬಲ ವ್ಯಕ್ತವಾಗುತ್ತಿದೆ. ಇವತ್ತು ಲಿಂಗತ್ವ ಅಲ್ಪಸಂಖ್ಯಾತರ ಶುಭ ಹರಕೆ, ಬೆಂಬಲದಿಂದ ಮತ್ತಷ್ಟು ಖುಷಿಯಾಗಿದೆ. ಇವರ ಕ್ಷೇಮಾಭಿವೃದ್ಧಿಗೆ ಬದ್ಧ ಎಂದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ಲಿಂಗಾಯತರು ಸೇರಿ ಎಲ್ಲರ ಬೆಂಬಲ

ನಮಗೆ ಲಿಂಗಾಯತ ಸಮುದಾಯದ ಎಲ್ಲ ಒಳಪಂಗಡಗಳ ಸಹಮತವೂ ಬಹುದೊಡ್ಡ ಮಟ್ಟದಲ್ಲಿ ದೊರೆತಿದೆ. ಸಚಿವರುಗಳಾದ ಲಕ್ಷ್ಮಣ ಸವದಿ, ಎಚ್.ಎಮ್. ರೇವಣ್ಣ, ರಾಮಲಿಂಗಾರೆಡ್ಡಿ, ಆರ್.ಬಿ.ತಿಮ್ಮಾಪುರ ಸೇರಿ ಅನೇಕ ದಿಗ್ಗಜರ ಸಭೆಗಳೂ ಆಯಾ ಸಮುದಾಯಕ್ಕನುಗುಣವಾಗಿ ನಡೆದಿವೆ. ಎಲ್ಲ ಸಮುದಾಯದವರ ಸಹಕಾರ, ಪ್ರೀತಿ ಸಿಗುತ್ತಿದೆ. ಮತದಾರರು ಈ ಸಲ ನಿಜವಾಗಿಯೂ ಬದಲಾವಣೆ ಬಯಸಿದ್ದಾರೆ. ಅವರೆಲ್ಲ ದಶಕಗಳಿಂದ ಲೋಕಸಭೆ ಕ್ಷೇತ್ರದ ಕಡೆಗಣನೆಯಿಂದ ಬೇಸತ್ತಿದ್ದರು ಎಂದು ಹೇಳಿದರು.

ಮಂಗಳ ಮುಖಿಯರ ಪ್ರತಿನಿಧಿಯಾಗಿ ಪ್ರಾರ್ಥನಾ ಅಂಬಿ ಮಾತನಾಡಿ, ಸಮಾಜದ, ಉಳಿದ ಪಕ್ಷಗಳು ಸೇರಿ ಎಲ್ಲರೂ ನಮ್ಮನ್ನು ಮೊದಲಿಂದ ಕಡೆಗಣಿಸಿದ್ದಾರೆ. ಈಗ ಕಾಂಗ್ರೆಸ್ ಮೇಲೆ ವಿಶ್ವಾಸ ಇಟ್ಟಿದ್ದೇವೆ. ನಮಗೆ ವಸತಿ ಸೇರಿ ಒಂದಷ್ಟು ಅನುಕೂಲಗಳು ಆಗಬೇಕು. ನಮಗೆ ಉದ್ಯೋಗ ನೀಡಿದರೆ ಸ್ವಾಭಿಮಾನಿಗಳಾಗಿ ಬದುಕುತ್ತೇವೆ. ಸ್ವಾವಲಂಬಿ ಜೀವನ ಮಾಡುತ್ತೇವೆ. ನಮಗೆ ರಾಜ್ಯ ಸರ್ಕಾರದ ಎರಡು ಸಾವಿರ ರೂ. ಗ್ಯಾರಂಟಿಯಲ್ಲಿ ಸಿಗಬೇಕು. ಕೆಲ ಅನುಕೂಲ ಮಾಡಿಕೊಡಬೇಕು ಎಂದರು.

ಪತ್ರಿಕಾಗೋಷ್ಠಿಯಲ್ಲಿ ಮೂಡಿಗೆರೆ ಮಾಜಿ ಶಾಸಕ ಕುಮಾರಸ್ವಾಮಿ, ಮಂಗಳ ಮುಖಿಯರ ಸಂಘದ ಗುಲಾಬ ರಾಠೋಡ, ಸುನೀಲ, ಮೇಘಾ, ಮೈನುದ್ದೀನ್, ಶಬ್ಬೀರ್ ಕಾಗದ ಕೋಟಿ, ಸತೀಶ್, ಉಮಾ, ವಿಠ್ಠಲ ಸಾಳುಂಕೆ, ನಾಗಮ್ಮ, ಈರಣ್ಣ ಲಗಳಿ, ವಿಜು ಅನೇಕರಿದ್ದರು.

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಸಿಂಧನೂರು | ರೀಲ್ಸ್ ಮಾಡಲು ಹೋದ ಯುವಕ ನೀರು ಪಾಲು

ರೀಲ್ಸ್ ಮಾಡುವ ಉದ್ದೇಶದಿಂದ ಸ್ನೇಹಿತರಿಗೆ ವಿಡಿಯೋ ಮಾಡಲು ಹೇಳಿ ಈಜಲು ನದಿಗೆ...

ಗದಗ | ಆದ್ಯ ವಚನಕಾರ ದೇವರ ದಾಸಿಮಯ್ಯ: ರಾಘವೇಂದ್ರ ಕೊಪ್ಪಳ

"ಆದ್ಯ ವಚನಕಾರ ನೇಕಾರ ಸಂತ ದೇವರ ದಾಸಿಮಯ್ಯನವರು 10 ನೇ ಶತಮಾನದಲ್ಲಿ...

ಮಾರ್ಚ್ 25ರಂದು ಬೆಂಗಳೂರಿನ ಫ್ರೀಡಂ ಪಾರ್ಕ್ನಲ್ಲಿ ಬಲಗೈ ಜಾತಿಗಳ ಬೃಹತ್ ಹೋರಾಟ

ಬಾಗೇಪಲ್ಲಿ:-ಕರ್ನಾಟಕ ರಾಜ್ಯ ಬಲಗೈ ಜಾತಿಗಳ ಮಹಾ ಒಕ್ಕೂಟದ ವತಿಯಿಂದ ಒಳ ಮೀಸಲಾತಿ...

ಯುಪಿಎಸ್ಸಿ ರ‍್ಯಾಂಕ್‌ ವಿಜೇತ ವರುಣ್ ಗೌಡಗೆ ಸನ್ಮಾನ

ಕೋಲಾರ: ಯುಪಿಎಸ್ಸಿ ಪರೀಕ್ಷೆಯಲ್ಲಿ 462 ನೇ ರ‍್ಯಾಂಕ್‌ ಪಡದ ತಾಲೂಕಿನ ತ್ಯಾವನಹಳ್ಳಿ...