ವಿಜಯಪುರ | ಭಾರತೀಯರಿಗೆ ಗೌರವದ ಬದುಕು ನೀಡಿದ ಗ್ರಂಥ ಸಂವಿಧಾನ: ಶಾಕು ಬೋಧಿಧಮ್ಮ

Date:

ಭಾರತದ ಸಂವಿಧಾನ ಗ್ರಂಥವು ಸಮಸ್ತ ಭಾರತೀಯರಿಗೆ ಗೌರವದ ಬದುಕನ್ನು ನೀಡಿದೆ. ಅಂಥ ಸಂವಿಧಾನವನ್ನು ಗೌರವಿಸುವುದು ಭಾರತೀಯರ ಕರ್ತವ್ಯ ಎಂದು ಝೆನ್ ಬೌದ್ಧ ಭಿಕ್ಷು ಡಾ. ಶಾಕು ಬೋಧಿಧಮ್ಮ ಹೇಳಿದರು.

ಅಂತಾರಾಷ್ಟ್ರೀಯ ಬೌದ್ಧ ಯುವ ಸಂಘಟನೆ, ಫುಲೆ-ಶಾಹು-ಅಂಬೇಡ್ಕರ್ ಸ್ಟೂಡೆಂಟ್ಸ್ ಫೆಡರೇಷನ್, ಬುದ್ಧ-ಬಸವ-ಅಂಬೇಡ್ಕರ್ ಮಿಷನ್, ಬುದ್ಧ ವಿಹಾರ ನಿರ್ಮಾಣ ಸಮಿತಿಗಳ ಸಂಯುಕ್ತ ಆಶ್ರಯದಲ್ಲಿ ವಿಜಯಪುರ ನಗರದ ಹಲವೆಡೆ ಹಮ್ಮಿಕೊಂಡಿದ್ದ “ಸಂವಿಧಾನ ಸಮ್ಮಾನ್ ರ‍್ಯಾಲಿ”ಗೆ ಚಾಲನೆ ನೀಡಿ ಮಾತನಾಡಿದರು.

“ಬಾಬಾಸಾಹೇಬ ಅಂಬೇಡ್ಕರ್ ಅವರು ಸಂವಿಧಾನದ ಮೂಲಕ ಭಾರತದ ಎಲ್ಲ ಜಾತಿ ಜನಾಂಗದವರಿಗೆ, ಎಲ್ಲ ಧರ್ಮೀಯರಿಗೆ ಸಮಾನಹಕ್ಕು ಮತ್ತು ಅವಕಾಶಗಳನ್ನು ಒದಗಿಸಿಕೊಟ್ಟಿದ್ದಾರೆ. ಧ್ವನಿಯಿಲ್ಲದ ಶೋಷಿತ ವರ್ಗಗಳಿಗೆ ಮತ್ತು ಮಹಿಳೆಯರಿಗೆ ಧ್ವನಿ ನೀಡಿದ್ದಲ್ಲದೆ, ಅವರಿಗೆ ಗೌರವಯುತ ಬದುಕು ನೀಡಿದ್ದಾರೆ. ಆದರೆ ಕೆಲವರು ಸಂವಿಧಾನ ಬದಲಾಯಿಸುವ ಬಗ್ಗೆ ಮಾತನಾಡುತ್ತಾರೆ. ಕೇಂದ್ರ ಸರ್ಕಾರದ ಒಬ್ಬ ಮಂತ್ರಿ ತಾವು ಬಂದಿರುವುದೇ ಸಂವಿಧಾನ ಬದಲಾಯಿಸಲು ಎಂದು ಬಹಿರಂಗವಾಗಿ ಹೇಳುತ್ತಾರೆ. ಸಂವಿಧಾನ ಬದಲಾದರೆ ಪ್ರಜಾಪ್ರಭುತ್ವದ ಸೌಧವೇ ಕುಸಿಯುತ್ತದೆ” ಎಂದು ಆತಂಕ ವ್ಯಕ್ತಪಡಿಸಿದರು.‌

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

“ಪ್ರಸ್ತುತದಲ್ಲಿ ಸಂವಿಧಾನ ಅಪಾಯದಲ್ಲಿದೆಯೆಂದು ಮನಗಂಡ ಅನೇಕ ಸಮಾನತಾವಾದಿ ಸಂಘಟನೆಗಳು, ಲೇಖಕರು, ಚಿಂತಕರು ಸಂವಿಧಾನ ರಕ್ಷಣಾ ಹೋರಾಟಗಳನ್ನು ಮಾಡುತ್ತಿದ್ದಾರೆ. ಸಂವಿಧಾನವನ್ನು ಉಳಿಸಿಕೊಳ್ಳುವುದು ಎಷ್ಟು ಮುಖ್ಯವೋ ಸಂವಿಧಾನವನ್ನು ಗೌರವಿಸುವುದೂ ಅಷ್ಟೇ ಮುಖ್ಯ ಎಂಬುದನ್ನು ಪ್ರತಿಯೊಬ್ಬ ಭಾರತೀಯರೂ ಅರಿತಾಗ ಮಾತ್ರ ಸಂವಿಧಾನ ರಕ್ಷಣೆ ಸಾಧ್ಯ” ಎಂದು ಭಂತೆ ಬೋಧಿಧಮ್ಮ ಹೇಳಿದರು.

ಕಾರ್ಯಕ್ರಮಕ್ಕೂ ಮುನ್ನ ನಗರದ ಸಾರಿಪುತ್ರ-ಬೋಧಿಧಮ್ಮ ಬುದ್ಧವಿಹಾರದಲ್ಲಿ ಬುದ್ಧ, ಬಸವ, ಅಂಬೇಡ್ಕರ್ ಅವರಿಗೆ ಪ್ರಾರ್ಥನೆ ಸಲ್ಲಿಸುವ ಮೂಲಕ ಪ್ರಾರಂಭವಾದ ಸಂವಿಧಾನ ಸಮ್ಮಾನ್ ರ‍್ಯಾಲಿಯು ನಗರದ ಪ್ರಮುಖ ಬೀದಿಗಳ ಮೂಲಕ ಹಾಯ್ದು, ಗಾಂಧಿ ವೃತ್ತ, ಬಸವೇಶ್ವರ ವೃತ್ತದ ಮಾರ್ಗವಾಗಿ ಸಂಚರಿಸಿ ಡಾ. ಅಂಬೇಡ್ಕರ್ ವೃತ್ತದಲ್ಲಿ ಮುಕ್ತಾಯಗೊಂಡಿತು. ಭಂತೆ ಬೋಧಿಧಮ್ಮ ರ‍್ಯಾಲಿಯ ನೇತೃತ್ವ ವಹಿಸಿದ್ದರು.

ಈ ಸುದ್ದಿ ಓದಿದ್ದೀರಾ? ಗದಗ | ಸಿರಿಧಾನ್ಯದಲ್ಲಿ ಮೂಡಿದ ಚಿತ್ತಾಕರ್ಷಕ ರಂಗೋಲಿ

‌ಬುದ್ಧವಿಹಾರ ನಿರ್ಮಾಣ ಸಮಿತಿ ನಿರ್ದೇಶಕ, ಹಿರಿಯ ಪತ್ರಕರ್ತ ಅನಿಲ ಹೊಸಮನಿ, ದಲಿತ ಸಂಘರ್ಷ ಸಮಿತಿಯ ಜಿಲ್ಲಾ ಸಂಘಟನಾ ಸಂಚಾಲಕ ಚೆನ್ನು ಕಟ್ಟಿಮನಿ ಅವರು ರ‍್ಯಾಲಿಗೆ ಚಾಲನೆ ನೀಡಿದರು. ಯುವ ಮುಖಂಡರುಗಳಾದ ಸಂಜು ಗುನ್ನಾಪುರ, ರಮೇಶ ಬೋರಗಿ, ಸಂತೋಷ ಕಾಂಬಳೆ, ಸುಜಲ ಕಾಂಬಳೆ, ಪವನ್ ಚೌಡಿಕರ, ರಕ್ಷಿತ್ ಗುನ್ನಾಪುರ, ಆನಂದ ಔರಂಗಾಬಾದ್, ಸಂಘರ್ಷ ಹೊಸಮನಿ, ಅನಂತ ವರಕನಹಳ್ಳಿ, ಸಿದ್ರಾಮ ವೀರಕರ, ರಾಜರತ್ನ ಕಾಂಬಳೆ, ಆದರ್ಶ ಕೋಟ್ಯಾಳ, ಅಜಿತ ಕಟ್ಟಿಮನಿ, ಪ್ರತಾಪ ಚಿಕ್ಕಲಕಿ, ಕೀರ್ತಿಕುಮಾರ ಕಾಖಂಡಕಿ ಸೇರಿದಂತೆ ನೂರಾರು ಯುವಕರು ರ‍್ಯಾಲಿಯಲ್ಲಿ ಭಾಗವಹಿಸಿದ್ದರು.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಸಿಂಧನೂರು | ರೀಲ್ಸ್ ಮಾಡಲು ಹೋದ ಯುವಕ ನೀರು ಪಾಲು

ರೀಲ್ಸ್ ಮಾಡುವ ಉದ್ದೇಶದಿಂದ ಸ್ನೇಹಿತರಿಗೆ ವಿಡಿಯೋ ಮಾಡಲು ಹೇಳಿ ಈಜಲು ನದಿಗೆ...

ಗದಗ | ಆದ್ಯ ವಚನಕಾರ ದೇವರ ದಾಸಿಮಯ್ಯ: ರಾಘವೇಂದ್ರ ಕೊಪ್ಪಳ

"ಆದ್ಯ ವಚನಕಾರ ನೇಕಾರ ಸಂತ ದೇವರ ದಾಸಿಮಯ್ಯನವರು 10 ನೇ ಶತಮಾನದಲ್ಲಿ...

ಮಾರ್ಚ್ 25ರಂದು ಬೆಂಗಳೂರಿನ ಫ್ರೀಡಂ ಪಾರ್ಕ್ನಲ್ಲಿ ಬಲಗೈ ಜಾತಿಗಳ ಬೃಹತ್ ಹೋರಾಟ

ಬಾಗೇಪಲ್ಲಿ:-ಕರ್ನಾಟಕ ರಾಜ್ಯ ಬಲಗೈ ಜಾತಿಗಳ ಮಹಾ ಒಕ್ಕೂಟದ ವತಿಯಿಂದ ಒಳ ಮೀಸಲಾತಿ...

ಯುಪಿಎಸ್ಸಿ ರ‍್ಯಾಂಕ್‌ ವಿಜೇತ ವರುಣ್ ಗೌಡಗೆ ಸನ್ಮಾನ

ಕೋಲಾರ: ಯುಪಿಎಸ್ಸಿ ಪರೀಕ್ಷೆಯಲ್ಲಿ 462 ನೇ ರ‍್ಯಾಂಕ್‌ ಪಡದ ತಾಲೂಕಿನ ತ್ಯಾವನಹಳ್ಳಿ...