ವಿಜಯಪುರ | ಸಂವಿಧಾನ ನಮ್ಮ ಜೀವಾಳ: ಕುಮಾರ್ ಇಂಡಿಕರ್ ಐಎಎಸ್‌

Date:

ಸಂವಿಧಾನ ನಮ್ಮ ಜೀವಾಳ. ಸಂವಿಧಾನವನ್ನು ಎಲ್ಲರೂ ಗೌರವಿಸಬೇಕು. ಸಂವಿಧಾನವು ನಮಗೆ ಎಲ್ಲ ರೀತಿಯ ಹಕ್ಕುಗಳನ್ನು ಕೊಟ್ಟಿದೆ. ಅದನ್ನು ಸಮರ್ಪಕವಾಗಿ ಬಳಸಿಕೊಳ್ಳುವ ಕರ್ತವ್ಯ ನಮ್ಮದಾಗಿದೆ ಎಂದು ಕುಮಾರ್ ಇಂಡಿಕರ್ ಐಎಎಸ್ ಹೇಳಿದರು.

ವಿಜಯಪುರ ಜಿಲ್ಲೆಯ ಸಿಂಧಗಿ ತಾಲೂಕಿನ ಸಂಗಮ ಸಂಸ್ಥೆಯಲ್ಲಿ ಹಮ್ಮಿಕೊಂಡಿದ್ದ ಸಂವಿಧಾನ ದಿನಾಚರಣೆ ಕಾರ್ಯಕ್ರಮದಲ್ಲಿ ಮಾತನಾಡಿ, “ಸಂವಿಧಾನದ ಸಾರವನ್ನು ಇವತ್ತಿನ ಯುವಪೀಳಿಗೆಗೆ ತಿಳಿಸುವ ಅಗತ್ಯವಿದೆ. ಸಂವಿಧಾನ ನಮ್ಮ ಭಾರತಕ್ಕೆ ಕೊಟ್ಟು ಇವತ್ತಿಗೆ 72 ವರ್ಷ ಕಳೆದು ಹೋಗಿದೆ. ಇಂದು ಸಂವಿಧಾನ ಓದುವುದು ಮಾತ್ರವಲ್ಲ, ಪ್ರತಿಯೊಬ್ಬರ ಮನಸಲ್ಲಿ ಇರಬೇಕು. ಭಾರತದ ಪ್ರಜೆಗಳಾದ ನಾವು ಅಂದರೆ ಎಲ್ಲ ಜಾತಿ ಧರ್ಮಗಳನ್ನು ಒಳಗೊಂಡಿರುವುದು” ಎಂದು ಹೇಳಿದರು.

“ಪ್ರಶ್ನೆ ಕೇಳಿದರೆ ಯಾವುದೇ ಪ್ರಯೋಜನವಾಗುತ್ತದೆ. ಪ್ರಶ್ನೆ ಕೇಳುವವರನ್ನೇ ನೀವು ದೇಶ ಬಿಟ್ಟು ಬೇರೆ ದೇಶಕ್ಕೆ ಹೋಗಿ ಎನ್ನುವವರೂ ಕೂಡ ನಮ್ಮವರು. ಇದರಿಂದ ತಪ್ಪಿದ್ದರೆ ಕೂಡ ಜನ ಮೌನ ತಾಳಿರುತ್ತಾರೆ. ಆದರೆ ಯಾರೇ ಏನೇ ಅನ್ನಲಿ ನಾವು ಮಾತ್ರ ಸಂವಿಧಾನವನ್ನು ಗೌರಸಬೇಕು. ಅದೇ ರೀತಿ ಪ್ರತಿಯೊಬ್ಬರೂ ಭಾರತದ ಸಂವಿಧಾನವನ್ನು ಗೌರಸಬೇಕು” ಎಂದು ಕಿವಿಮಾತು ಹೇಳಿದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ಸಂಗಮ ಸಂಸ್ಥೆಯ ನಿರ್ದೇಶಕ ಫಾದರ್ ಸಂತೋಷ್ ಮಾತನಾಡಿ, “ಭಾರತದ ದೇಶದಲ್ಲಿ ಡಾ. ಬಾಬಾಸಾಹೇಬ ಅಂಬೇಡ್ಕರ್ವಾರು ಹುಟ್ಟದೇ ಇದ್ದಿದ್ದರೆ, ಇವತ್ತು ಸಂವಿಧಾನ ಬರೆಯದೇ ಇದ್ದಿದ್ದರೆ ನಾವು ನೀವು ಇಲ್ಲಿ ಈ ಕಾರ್ಯಕ್ರಮದಲ್ಲಿ ಕೂರಲು ಸಾಧ್ಯವಿರುತ್ತಿರಲಿಲ್ಲ. ನಾವು ಇಲ್ಲಿ ಸೇರಲು ಅಂಬೇಡ್ಕರ್ ಅವರು ಬರೆದ ಸಂವಿಧಾನ ಅದೇ ರೀತಿ ಉಸಿರಾಡಲು ಗಾಳಿ, ಕುಡಿಯಲು ನೀರು ಎಷ್ಟು ಮುಖ್ಯವೋ ಸಂವಿಧಾನವೂ ಅಷ್ಟೇ ಮುಖ್ಯ” ಎಂದರು.

ಈ ಸುದ್ದಿ ಓದಿದ್ದೀರಾ? ವಿಜಯಪುರ | ಬಿಸಿಯೂಟ ಯೋಜನೆಯ ನಿಧಿ ಹಂಚಿಕೆ; ಪುಡಿಗಾಸಿನ ಏರಿಕೆಗೆ ಎಐಯುಟಿಯುಸಿ ಖಂಡನೆ

“ಭಾರತ ಸಂವಿಧಾನವನ್ನು ಈ ನೆಲದಲ್ಲಿ ಹುಟ್ಟಿರಿವದರಿಂದ ಪ್ರತಿಯೊಬ್ಬರೂ ತಿಳಿದುಕೊಳ್ಳಲೇಬೇಕು. ಸಂವಿಧಾನವೆಂದರೆ ಏನು? ಸಂವಿಧಾನ ಯಾಕೆ ಬರೆದರು? ಸಂವಿಧಾನದಲ್ಲಿ ಏನಿದೆ? ಎಂಬುದನ್ನು ತಿಳಿದುಕೊಳ್ಳದೇ ಇರುವವರು ಈ ಭೂಮಿ ಮೇಲೆ ಇದ್ದೂ ಸತ್ತಂತೆ. ಆದ್ದರಿಂದ ಪ್ರತಿಯೊಬ್ಬರೂ ಸಂವಿಧಾನವನ್ನು ತಿಳಿದುಕೊಳ್ಳಿ, ತಿಳಿಯದಿದ್ದರೆ ನಿಮ್ಮ ಮಕ್ಕಳಿಂದ ಅಥವಾ ಸಂಗಮ ಸಂಸ್ಥೆಯಿಂದ ತಿಳಿದುಕೊಳ್ಳಿ” ಎಂದು ಸಲಹೆ ಹೇಳಿದರು.

ಸಂವಿಧಾನ ದಿನದ ಪ್ರಯುಕ್ತ ನೂರಾರು ಸಂಖ್ಯೆಯಲ್ಲಿ ಶೋಷಿತ ಸಮುದಾಯಗಳು, ಕಾರ್ಯಕರ್ತರು ಸೇರಿ ಸಂವಿಧಾನ ಜಾಥಾ ನಡೆಸಿದರು.

ಕಾರ್ಯಕ್ರಮದಲ್ಲಿ ಡಾ. ದಸ್ತಿಗಿರಿ ಮುಲ್ಲಾ, ಸಂಗಮ ಸಂಸ್ಥೆಯ ಸಹ ನಿರ್ದೇಶಕಿ ಸಿಸ್ಟರ್ ಸಿಂತಿಯ ಡಿ. ಮೇಲ್ಲೋ, ಮಾಲಕಪ್ಪ ಹಲಗಿ, ಶ್ರೀಶೈಲ ಗಣಿಹಾರ, ಉಮೇಶ್ ಹಾಗೂ ಹಳ್ಳಿ ಅಭಿವೃದ್ಧಿ ಸಮಿತಿಗಳ ಜನವೇದಿಕೆ ನಾಯಕರು, ಮಹಿಳಾ ಸಂಘದ ಸದಸ್ಯರು, ಕಟ್ಟಡ ಕಾರ್ಮಿಕರು, ಮನರೇಗಾದಲ್ಲಿ ಕೆಲಸ ಮಾಡುವವರು ಇದ್ದರು.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಸಿಂಧನೂರು | ರೀಲ್ಸ್ ಮಾಡಲು ಹೋದ ಯುವಕ ನೀರು ಪಾಲು

ರೀಲ್ಸ್ ಮಾಡುವ ಉದ್ದೇಶದಿಂದ ಸ್ನೇಹಿತರಿಗೆ ವಿಡಿಯೋ ಮಾಡಲು ಹೇಳಿ ಈಜಲು ನದಿಗೆ...

ಗದಗ | ಆದ್ಯ ವಚನಕಾರ ದೇವರ ದಾಸಿಮಯ್ಯ: ರಾಘವೇಂದ್ರ ಕೊಪ್ಪಳ

"ಆದ್ಯ ವಚನಕಾರ ನೇಕಾರ ಸಂತ ದೇವರ ದಾಸಿಮಯ್ಯನವರು 10 ನೇ ಶತಮಾನದಲ್ಲಿ...

ಮಾರ್ಚ್ 25ರಂದು ಬೆಂಗಳೂರಿನ ಫ್ರೀಡಂ ಪಾರ್ಕ್ನಲ್ಲಿ ಬಲಗೈ ಜಾತಿಗಳ ಬೃಹತ್ ಹೋರಾಟ

ಬಾಗೇಪಲ್ಲಿ:-ಕರ್ನಾಟಕ ರಾಜ್ಯ ಬಲಗೈ ಜಾತಿಗಳ ಮಹಾ ಒಕ್ಕೂಟದ ವತಿಯಿಂದ ಒಳ ಮೀಸಲಾತಿ...

ಯುಪಿಎಸ್ಸಿ ರ‍್ಯಾಂಕ್‌ ವಿಜೇತ ವರುಣ್ ಗೌಡಗೆ ಸನ್ಮಾನ

ಕೋಲಾರ: ಯುಪಿಎಸ್ಸಿ ಪರೀಕ್ಷೆಯಲ್ಲಿ 462 ನೇ ರ‍್ಯಾಂಕ್‌ ಪಡದ ತಾಲೂಕಿನ ತ್ಯಾವನಹಳ್ಳಿ...