ವಿಜಯಪುರ | ಸಂವಿಧಾನ ಪ್ರತಿಯೊಬ್ಬರ ಜೀವನದ ಮಾರ್ಗದರ್ಶಿಯಾಗಲಿ: ಹಂಗಾಮಿ ಕುಲಪತಿ ಪ್ರೊ.ಶಾಂತಾದೇವಿ

Date:

ಡಾ.ಬಾಬಾ ಸಾಹೇಬ್ ಅಂಬೇಡ್ಕರ್ ಅವರು ತಮ್ಮ ಇಡೀ ಜೀವಮಾನದ ಅನುಭವಗಳನ್ನು ಧಾರೆಯೆರೆದು ರಚಿಸಿದ ಸಂವಿಧಾನ ನಮ್ಮ ದೇಶದ ನಾಗರಿಕರು ಸ್ವತಂತ್ರವಾಗಿ ಬದುಕಲು ಅವಕಾಶಗಳನ್ನು ಕಲ್ಪಿಸಿದೆ. ನ್ಯಾಯ. ಸಮಾನತೆ, ಲಿಂಗ ಮತ್ತು ಆರ್ಥಿಕ ಸಮಾನತೆಯನ್ನು ಭದ್ರಪಡಿಸಿಕೊಳ್ಳಲು ಅವಕಾಶ ನೀಡಿದೆ. ಇಂಥ ಅದ್ಭುತ ಸಂವಿಧಾನ ಪ್ರತಿಯೊಬ್ಬರೂ ಅರ್ಥೈಸಿಕೊಂಡು ಪಾಲನೆ ಮಾಡಬೇಕು ಎಂದು ವಿವಿಯ ಹಂಗಾಮಿ ಕುಲಪತಿ ಪ್ರೊ.ಶಾಂತಾದೇವಿ ಟಿ ಹೇಳಿದರು.

ವಿಜಯಪುರದ ಕರ್ನಾಟಕ ರಾಜ್ಯ ಅಕ್ಕಮಹಾದೇವಿ ಮಹಿಳಾ ವಿಶ್ವವಿದ್ಯಾಲಯದಲ್ಲಿ ಭಾನುವಾರ ನಡೆದ 76ನೇ ಗಣರಾಜ್ಯೋತ್ಸವ ಕಾರ್ಯಕ್ರಮದಲ್ಲಿ ಧ್ವಜಾರೋಹಣ ನೆರವೇರಿಸಿ ಮಾತನಾಡಿದರು.

“ನಮ್ಮ ಸಂವಿಧಾನ ಪ್ರತಿಯೊಬ್ಬರ ಜೀವನದ ಮಾರ್ಗದರ್ಶಿಯಾಗಬೇಕು. ದೇಶದ ಆರ್ಥಿಕ, ಸಾಮಾಜಿಕ ಬದಲಾವಣೆಯಲ್ಲಿ ಶಿಕ್ಷಣ ಪ್ರಮುಖ ಪಾತ್ರ ವಹಿಸುತ್ತಿದ್ದು, ನಮ್ಮ ರಾಷ್ಟ್ರ ಬಲಿಷ್ಠವಾಗಿ, ಸದೃಢವಾಗಲು ಎಲ್ಲರಿಗೂ ಸಮಾನವಾಗಿ ಗುಣಮಟ್ಟದ ಶಿಕ್ಷಣ ದೊರೆಯಬೇಕು. ಈ ನಿಟ್ಟಿನಲ್ಲಿ ನಮ್ಮ ಮಹಿಳಾ ವಿವಿಯ ವಿದ್ಯಾರ್ಥಿನಿಯರು ಉನ್ನತವಾದ ಜ್ಞಾನ ಸಂಪಾದಿಸಿ ರಾಷ್ಟ್ರ ಮತ್ತು ಅಂತಾರಾಷ್ಟ್ರೀಯ ಮಟ್ಟದ ಸಂಸ್ಥೆಗಳಲ್ಲಿ ಕೆಲಸ ನಿರ್ವಹಿಸುವಂತಾಗಬೇಕು” ಎಂಬ ಆಶಯ ವ್ಯಕ್ತಪಡಿಸಿದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

“ನಾವು ಇವತ್ತು ಜ್ಞಾನಾಧಾರಿತ ಸಮಾಜದಲ್ಲಿ ಬದುಕುತ್ತಿದ್ದೇವೆ. ಜ್ಞಾನವೇ ಇಂದು ಬಹು ಮುಖ್ಯವಾಗಿದೆ. ಆದ್ದರಿಂದ ಪ್ರತಿಯೊಬ್ಬ ವಿದ್ಯಾರ್ಥಿನಿಯೂ ಕಷ್ಟಪಟ್ಟು ಜ್ಞಾನ ಸಂಪಾದಿಸಬೇಕು. ಜ್ಞಾನ ಸಂಪಾದಿಸದೇ ಹೋದರೆ ಈ ಸಮಾಜದಲ್ಲಿ ಮೋಸಹೋಗುವ ಸಾಧ್ಯತೆಗಳಿವೆ. ನಮ್ಮ ದಿನನಿತ್ಯದ ಜೀವನ ಸುಗಮವಾಗಿ ಮತ್ತು ನಿರಾತಂಕವಾಗಿ ನಡೆಯಬೇಕಾದರೆ ಜ್ಞಾನ ಅತ್ಯವಶ್ಯ. ಈ ಹಿನ್ನೆಲೆಯಲ್ಲಿ ವಿದ್ಯಾರ್ಥಿನಿಯರ ಜ್ಞಾನ ವಿಸ್ತರಿಸಲು ಮಹಿಳಾ ವಿಶ್ವವಿದ್ಯಾಲಯ ಸಾಧ್ಯವಿರುವ ಎಲ್ಲ ಸೌಲಭ್ಯಗಳನ್ನೂ ಒದಗಿಸುತ್ತದೆ” ಎಂದು ಭರವಸೆ ನೀಡಿದರು.

ಈ ಸುದ್ದಿ ಓದಿದ್ದೀರಾ? ಬೆಂಗಳೂರು | ಗಣರಾಜ್ಯೋತ್ಸವದಲ್ಲಿ ಜೈಶ್ರೀರಾಮ್‌ ಘೋಷಣೆ; ಸಂವಿಧಾನ ಶಿಲ್ಪಿ ಡಾ. ಬಿ ಆರ್ ಅಂಬೇಡ್ಕರ್‌ ಭಾವಚಿತ್ರ ಇಡದೆ ಅವಮಾನ

ಗಣರಾಜ್ಯೋತ್ಸವದ ಮಹತ್ವ ಕುರಿತು ಕುಲಸಚಿವ ಶಂಕರಗೌಡ ಸೋಮನಾಳ ಅವರು ವಿದ್ಯಾರ್ಥಿನಿಯರಿಗೆ ರಸಪ್ರಶ್ನೆ ಕಾರ್ಯಕ್ರಮ ನಡೆಸಿಕೊಟ್ಟು ವಿಜೇತ ವಿದ್ಯಾರ್ಥಿನಿಯರಿಗೆ ನಗದು ಬಹುಮಾನ ವಿತರಿಸಿದರು.

ಸಂಗೀತ ವಿಭಾಗದ ವಿದ್ಯಾರ್ಥಿನಿಯರಿಂದ ರಾಷ್ಟ್ರೀಯ ಗೀತೆಗಳ ಗಾಯನ ನಡೆಯಿತು. ಕಾರ್ಯಕ್ರಮದಲ್ಲಿ ಮೌಲ್ಯಮಾಪನ ಕುಲಸಚಿವ ಪ್ರೊ. ಎಚ್ ಎಂ ಚಂದ್ರಶೇಖರ್, ಕ್ರೀಡಾ ನಿರ್ದೇಶನಾಲಯದ ನಿರ್ದೇಶಕ ಡಾ ಹನುಮಂತಯ್ಯ ಪೂಜಾರ, ಹಾಸ್ಟೆಲ್‌ಗಳ ಮುಖ್ಯ ವಾರ್ಡನ್ ಪ್ರೊ ಜ್ಯೋತಿ ಉಪಾಧ್ಯೆ, ವಿವಿಯ ವಿವಿಧ ನಿಕಾಯಗಳ ಡೀನರು, ವಿಭಾಗಗಳ ಮುಖ್ಯಸ್ಥರು, ಸಂಯೋಜಕರು, ಬೋಧಕ ಮತ್ತು ಬೋಧಕೇತರ ಸಿಬ್ಬಂದಿ ವರ್ಗ ಹಾಗೂ ಸಂಶೋಧನಾ ವಿದ್ಯಾರ್ಥಿನಿಯರು, ಸ್ನಾತಕ ಮತ್ತು ಸ್ನಾತಕೋತ್ತರ ವಿದ್ಯಾರ್ಥಿನಿಯರು ಸೇರಿದಂತೆ ಇತರರು ಇದ್ದರು.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಸಿಂಧನೂರು | ರೀಲ್ಸ್ ಮಾಡಲು ಹೋದ ಯುವಕ ನೀರು ಪಾಲು

ರೀಲ್ಸ್ ಮಾಡುವ ಉದ್ದೇಶದಿಂದ ಸ್ನೇಹಿತರಿಗೆ ವಿಡಿಯೋ ಮಾಡಲು ಹೇಳಿ ಈಜಲು ನದಿಗೆ...

ಗದಗ | ಆದ್ಯ ವಚನಕಾರ ದೇವರ ದಾಸಿಮಯ್ಯ: ರಾಘವೇಂದ್ರ ಕೊಪ್ಪಳ

"ಆದ್ಯ ವಚನಕಾರ ನೇಕಾರ ಸಂತ ದೇವರ ದಾಸಿಮಯ್ಯನವರು 10 ನೇ ಶತಮಾನದಲ್ಲಿ...

ಮಾರ್ಚ್ 25ರಂದು ಬೆಂಗಳೂರಿನ ಫ್ರೀಡಂ ಪಾರ್ಕ್ನಲ್ಲಿ ಬಲಗೈ ಜಾತಿಗಳ ಬೃಹತ್ ಹೋರಾಟ

ಬಾಗೇಪಲ್ಲಿ:-ಕರ್ನಾಟಕ ರಾಜ್ಯ ಬಲಗೈ ಜಾತಿಗಳ ಮಹಾ ಒಕ್ಕೂಟದ ವತಿಯಿಂದ ಒಳ ಮೀಸಲಾತಿ...

ಯುಪಿಎಸ್ಸಿ ರ‍್ಯಾಂಕ್‌ ವಿಜೇತ ವರುಣ್ ಗೌಡಗೆ ಸನ್ಮಾನ

ಕೋಲಾರ: ಯುಪಿಎಸ್ಸಿ ಪರೀಕ್ಷೆಯಲ್ಲಿ 462 ನೇ ರ‍್ಯಾಂಕ್‌ ಪಡದ ತಾಲೂಕಿನ ತ್ಯಾವನಹಳ್ಳಿ...