ವಿಜಯಪುರ | ಸಂವಿಧಾನ, ಸಾಮಾಜಿಕ ನ್ಯಾಯ, ಸಹಬಾಳ್ವೆ ಸಮಾಲೋಚನೆ ಸಭೆ

Date:

ನಮ್ಮ ದೇಶ ಬಹುಸಂಸ್ಕೃತಿಗೆ ಪ್ರಖ್ಯಾತಿಯನ್ನು ಪಡಿದಿದೆ. ವಿವಿಧತೆಯಲ್ಲಿ ಏಕತೆಯನ್ನು ನಮ್ಮ ರಾಷ್ಟ್ರ ಹೊಂದಿದೆ. ಹಲವಾರು ಜಾತಿ, ಮತ, ಪಂಥಗಳು ಇವೆ. ಹಾಗಾಗಿ ನಾವೆಲ್ಲರೂ ಸುಮಾರು 75 ವರ್ಷಗಳಿಂದ ಸಾಮರಸ್ಯದಿಂದ ಬದುಕುತಿದ್ದೇವೆ ಎಂದು ಎದ್ದೇಳು ಕರ್ನಾಟಕ ವಿಜಯಪುರ ಜಿಲ್ಲಾ ಕೋಆರ್ಡಿನೆಟರ್ ಮಹಮ್ಮದ್ ಅಬ್ದುಲ್ ಖದೀರ್ ಹೇಳಿದರು.

ವಿಜಯಪುರ ನಗರದ ನವ ಸಾನಿಧ್ಯ ಸಂಸ್ಥೆ ಮತ್ತು ಝಾನ್ಸಿ ರಾಣಿ ಮಹಿಳಾ ಒಕ್ಕೂಟ, ಎದ್ದೇಳು ಕರ್ನಾಟಕ, ಈ ದಿನ.ಕಾಮ್‌ ಸಹಯೋಗದಲ್ಲಿ ನಡೆದ ಸಂವಿಧಾನ, ಸಾಮಾಜಿಕ ನ್ಯಾಯ, ಸಹಬಾಳ್ವೆ ಸಮಾಲೋಚನೆ ಸಭೆಯಲ್ಲಿ ಮಾತನಾಡಿದರು.

“ಪ್ರಸ್ತುತ ಕೇಂದ್ರ ಸರ್ಕಾರವು ಕೋಮುವಾದಿ ವಿಚಾರವನ್ನು ಮುನ್ನಲೆಗೆ ತಂದು ಜನಗಳ ನಡುವೆ ಹೊಡೆದಾಳುವ ನೀತಿ ಜಾರಿಗೆ ತರುತ್ತಿದೆ. ಇದರ ವಿರುದ್ಧ ಬಲಿಷ್ಠ ಜನಾಂದೋಲನ ಬೆಳೆಯಬೇಕು.
ಈ ಹಿನ್ನಲೆಯಲ್ಲಿ ನಾವೆಲ್ಲರೂ ಕೆಲಸ ಮಾಡುವ ಅವಶ್ಯಕತೆ ಇದೆ” ಎಂದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

“ಡಾ. ಬಾಬಾ ಸಾಹೇಬ್ ಅಂಬೇಡ್ಕರ್ ವಿಚಾರಗಳನ್ನು ಎಲ್ಲ ಸಮುದಾಯದ ಜನರಿಗೆ ಮನುವರಿಕೆ ಮಾಡಿಸುವುದು ಇಂದಿನ ತುರ್ತು ಅಗತ್ಯವಿದೆ. ಕೇಂದ್ರ ಸರ್ಕಾರ ಜಾರಿ ಮಾಡಲು ಹೊರಟಿರುವ ರೈತ ವಿರೋಧಿ ಕಾನೂನುಗಳನ್ನು ಹಿಂತೆಗೆದುಕೊಳ್ಳಿ ಎಂದು ದೇಶದ ರೈತರು ಬೀದಿಗಿಳಿದು ಹೋರಾಟ ಮಾಡುತ್ತಿದ್ದಾರೆ. ಈ ಬೇಡಿಕೆ ಈಡೇರಿಸಲು ಸಂಯುಕ್ತ ಕಿಸಾನ್ ಮೋರ್ಚಾವು ಕಳೆದ 2 ವರ್ಷದ ಹಿಂದೆ ಹೋರಾಟ ಮಾಡಿದಾಗ ಮಂಡಿಯೂರಿ ಕೇಂದ್ರ ಸರ್ಕಾರವು ಈ ಕಾಯ್ದೆಗಳನ್ನು ಹಿಂಪಡೆಯುವುದಾಗಿ ಮಾತು ಕೊಟ್ಟಿತ್ತು. ಆದರೆ ಮಾತು ತಪ್ಪಿದ ಕೇಂದ್ರ ಸರ್ಕಾರವು ಕಾಯ್ದೆಗಳನ್ನು ವಾಪಸ್ ತೆಗೆದುಕೊಳ್ಳಲಿಲ್ಲ”‌ ಎಂದು ಆರೋಪಿಸಿದರು.

ಮಾತು ತಪ್ಪಿರುವ ಕೇಂದ್ರದ ವಿರುದ್ಧ ರೈತರು ಹೋರಾಟ ಮಾಡಿದರೆ, ರೈತರ ಮೇಲೆ ಗೋಲಿ ಬಾರ್, ಅಶ್ರುವಾಯು ದಾಳಿ, ಅರೆಸೇನಾ ಪಡೆ ಬಳಸಿ ರೈತರನ್ನು ಅಧೋಗತಿಗೆ ತಳ್ಳುವಂತಹ ಎಲ್ಲ ಪ್ರಯತ್ನಗಳನ್ನೂ ಕೇಂದ್ರ ಸರ್ಕಾರ ಮಾಡುತ್ತಿದೆ. ಆದರೆ ರೈತರು ಯಾವುದೇ ಕಾರಣಕ್ಕೂ ಹಿಂಜರಿಯದೆ ಒಂದು ಹೆಜ್ಜೆ ಮುಂದೆ ಹಿಟ್ಟು ಹೋರಾಟ ಕಟ್ಟುತ್ತಿದ್ದಾರೆ. ಇದು ನಮ್ಮೆಲ್ಲರಿಗೂ ಸ್ಪೂರ್ತಿಯಾಗಬೇಕು” ಎಂದು ಹೇಳಿದರು.

ಈ ಸುದ್ದಿ ಓದಿದ್ದೀರಾ? ವಿಜಯಪುರ | ಸಮಾಜ ತಿದ್ದುವ ಶಕ್ತಿ ಕನ್ನಡ ಸಾಹಿತ್ಯ ಪರಿಷತ್ತಿಗೆ ಇದೆ: ದೊಡ್ಡಣ್ಣ ಬಜಂತ್ರಿ

“ಪ್ರಜಾಪ್ರಭುತ್ವ ಉಳಿಯಬೇಕಾದರೆ ಸಂವಿದಾನ ಉಳಿಸುವುದು ಅತ್ಯಂತ ಅವಶ್ಯಕತೆ ಇದೆ. ಬರುವ ಚುನಾವಣೆಯಲ್ಲಿ ಕೇಂದ್ರ ಸರ್ಕಾರವನ್ನು ಸೋಲಿಸುವ ಮೂಲಕ ಸಂವಿಧಾನ ಮತ್ತು ಪ್ರಜಾಪ್ರಭುತ್ವವನ್ನು ಉಳಿಸಲು ನಾವೆಲ್ಲರೂ ಬದ್ಧರಾಗೋಣ” ಎಂದು ಕರೆ ನೀಡಿದರು.

ಈ ಸಂರ್ಭದಲ್ಲಿ ಝಾನ್ಸಿ ರಾಣಿ ಮಹಿಳಾ ಒಕ್ಕೂಟದ ಅಧ್ಯಕ್ಷೆ ಭಾಗೀರಥಿ ಮಲ್ಲಿಕಾರ್ಜುನ ರಾಮತೀರ್ಥ, ನವ ಸಾನಿಧ್ಯ ಸಂಸ್ಥೆಯ ಮುಖ್ಯಸ್ಥೆ ಸಿಸ್ಟರ್ ಜೋಲಿ, ಈ ದಿನ.ಕಾಮ್‌ ಜಿಲ್ಲಾ ಕೋಆರ್ಡಿನೇಟರ್ ರಮೇಶ್ ಹೊಸಮನಿ ಸೇರಿದಂತೆ ಇತರರು ಇದ್ದರು.

WhatsApp Image 2025 11 17 at 3.21.17 PM
ಈ ದಿನ ಡೆಸ್ಕ್
+ posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಸಿಂಧನೂರು | ರೀಲ್ಸ್ ಮಾಡಲು ಹೋದ ಯುವಕ ನೀರು ಪಾಲು

ರೀಲ್ಸ್ ಮಾಡುವ ಉದ್ದೇಶದಿಂದ ಸ್ನೇಹಿತರಿಗೆ ವಿಡಿಯೋ ಮಾಡಲು ಹೇಳಿ ಈಜಲು ನದಿಗೆ...

ಗದಗ | ಆದ್ಯ ವಚನಕಾರ ದೇವರ ದಾಸಿಮಯ್ಯ: ರಾಘವೇಂದ್ರ ಕೊಪ್ಪಳ

"ಆದ್ಯ ವಚನಕಾರ ನೇಕಾರ ಸಂತ ದೇವರ ದಾಸಿಮಯ್ಯನವರು 10 ನೇ ಶತಮಾನದಲ್ಲಿ...

ಮಾರ್ಚ್ 25ರಂದು ಬೆಂಗಳೂರಿನ ಫ್ರೀಡಂ ಪಾರ್ಕ್ನಲ್ಲಿ ಬಲಗೈ ಜಾತಿಗಳ ಬೃಹತ್ ಹೋರಾಟ

ಬಾಗೇಪಲ್ಲಿ:-ಕರ್ನಾಟಕ ರಾಜ್ಯ ಬಲಗೈ ಜಾತಿಗಳ ಮಹಾ ಒಕ್ಕೂಟದ ವತಿಯಿಂದ ಒಳ ಮೀಸಲಾತಿ...

ಯುಪಿಎಸ್ಸಿ ರ‍್ಯಾಂಕ್‌ ವಿಜೇತ ವರುಣ್ ಗೌಡಗೆ ಸನ್ಮಾನ

ಕೋಲಾರ: ಯುಪಿಎಸ್ಸಿ ಪರೀಕ್ಷೆಯಲ್ಲಿ 462 ನೇ ರ‍್ಯಾಂಕ್‌ ಪಡದ ತಾಲೂಕಿನ ತ್ಯಾವನಹಳ್ಳಿ...