ವಿಜಯಪುರ | ಬೆಳೆ ಹಾನಿ; ವಿಮಾ ಕಂಪನಿ ವಿರುದ್ಧ ರೈತರ ಆಕ್ರೋಶ

Date:

ಮುಂಗಾರು ಹಂಗಾಮಿನಲ್ಲಿ ಬಿತ್ತನೆ ಮಾಡಿದ ತೊಗರಿ ಬೆಳೆ ಸಂಪೂರ್ಣ ಹಾಳಾಗಿದ್ದು, ಕಂತು ತುಂಬಿದ್ದರೂ ಫಸಲ ಬೀಮಾ ಯೋಜನೆಯಡಿ ಪರಿಹಾರ ನೀಡಿಲ್ಲ ಎಂದು ವಿಜಯಪುರ ರೈತರು ವಿಮಾ ಕಂಪನಿ ವಿರುದ್ಧ ಆಕ್ರೋಶ ವ್ಯಕ್ತಪಡಿಸಿದರು.

ಜಿಲ್ಲೆಯ ಬಸವನಬಾಗೇವಾಡಿ ತಾಲೂಕಿನ ಇಂಗಳೇಶ್ವರ ಗ್ರಾಮದ ರೈತರು ವಿಮಾ ಕಂಪನಿ ವಿರುದ್ದ ಧಿಕ್ಕಾರ ಕೂಗಿ, ಜಿಲ್ಲಾಧಿಕಾರಿ ಟಿ.ಭೂಬಾಲನ್ ಅವರಿಗೆ ಇಂದು ಮನವಿ ಸಲ್ಲಿಸಿದರು.

“ಇಂಗಳೇಶ್ವರ ಗ್ರಾಮದ ರೈತರು ಫಸಲ್ ಬೀಮಾ ಯೋಜನೆಯಡಿಯಲ್ಲಿ ಪ್ರತಿ ಎಕರೆಗೆ ಸಾವಿರಾರು ರೂಪಾಯಿಯಂತೆ ವಿಮಾ ಕಂತು ಕಟ್ಟಿದರೂ ಕಳೆದ 5 ವರ್ಷಗಳಿಂದ ನಯಾ ಪೈಸೆ ಪರಿಹಾರ ಬರದ ಕಾರಣ ಇಂಗಳೇಶ್ವರ ಗ್ರಾಮದ ರೈತರು ತೀವ್ರ ಸಂಕಷ್ಟ ಎದುರಿಸುತ್ತಿದ್ದಾರೆ. ವಿಮಾ ಕಂಪನಿ ಒಂದು ರೀತಿ ಮಟ್ಕಾ ಅಡ್ಡೆ ಆಡುವ ಅಡ್ಡೆಯಾಗಿ ಪರಿಣಮಿಸಿದೆ. ಇಂಗಳೇಶ್ವರ ಗ್ರಾಮ ಪಂಚಾಯತಿ ವ್ಯಾಪ್ತಿಗೆ ಬರುವ ರೆಬಿನಾಳ ಗ್ರಾಮದ ರೈತರಿಗೆ ತೊಗರಿ ಪರಿಹಾರ ಬಂದಿದೆ. ಆದರೆ ಇಂಗಳೇಶ್ವರಕ್ಕೆ ಮಾತ್ರ ಪರಿಹಾರ ಹಣ ಬಿಡುಗಡೆಗೊಳಿಸದೆ ಇರುವುದು ಒಂದು ಕಣ್ಣಿಗೆ ಸುಣ್ಣ ಇನ್ನೊಂದು ಕಣ್ಣಿಗೆ ಬೆಣ್ಣೆ ಸವರುವ ಕೆಲಸ ರಾಜ್ಯ ವಿಮಾ ಕಂಪನಿ ಹಾಗೂ ರಾಜ್ಯ ಸರ್ಕಾರ ಮಾಡುತ್ತಿದೆ” ಎಂದು ಅಖಂಡ ಕರ್ನಾಟಕ ರೈತ ಸಂಘದ ರಾಜ್ಯ ಪ್ರಧಾನ ಕಾರ್ಯದರ್ಶಿ ಅರವಿಂದ ಕುಲಕರ್ಣಿ ದೂರಿದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

“ಈ ರೀತಿ ಮಾಡಿ ರೈತರಿಗೆ ಮೋಸ ಮಾಡಲಾಗುತ್ತಿದೆ. ಸರ್ಕಾರದ ಹಿಡಿತದಲ್ಲಿರಬೇಕಾದ ವಿಮಾ ಕಂಪನಿಯೇ, ಸರ್ಕಾರವನ್ನು ತನ್ನ ಹಿಡಿತದಲ್ಲಿ ಇಟ್ಟುಕೊಂಡಿದೆ ಎನ್ನುವಂತಾಗಿದೆ. ವಿಮಾ ಕಂಪನಿಯವರು ರೈತರಿಂದ ವಿಮೆ ಕಂತು ಕಟ್ಟಿಸಿಕೊಂಡು ಪರಿಹಾರ ಕೊಡದಿದ್ದರೆ ವಿಮಾ ಕಂಪನಿ ಏತಕ್ಕೆ ಬೇಕು ಎಂದು ಅವರು ಪ್ರಶ್ನಿಸಿದ್ದಾರೆ. ಶೀಘ್ರದಲ್ಲಿ ಇಂಗಳೇಶ್ವರ ಗ್ರಾಮದ ರೈತರಿಗೆ ತೊಗರಿ ಪರಿಹಾರ ಕೊಡದಿದ್ದರೆ ಉಪವಾಸ ಸತ್ಯಾಗ್ರಹ ಹಮ್ಮಿಕೊಳ್ಳಬೇಕಾಗುತ್ತದೆ” ಎಂದು ಸರ್ಕಾರಕ್ಕೆ ಎಚ್ಚರಿಕೆ ನೀಡಿದ್ದಾರೆ.

ಇದನ್ನೂ ಓದಿ: ವಿಜಯಪುರ | ಯುಗಾದಿ ಸಂಭ್ರಮದಲ್ಲಿದ್ದ ಮೂವರು ಬಾಲಕರು ನೀರುಪಾಲು

ಈ ಸಂದರ್ಭದಲ್ಲಿ ರುದ್ರಯ್ಯ ಹಿರೇಮಠ, ನಿಂಗಯ್ಯ ಆಚನೂರ, ಈರಪ್ಪ ಕಡಗೋಲ, ಕಲ್ಲಪ್ಪ ಕಾಳಗಿ, ಶಿವಾನಂದ ಬಾಗೇವಾಡಿ, ಸಿದ್ದಪ್ಪ ಶೇಖಣ್ಣವರ, ರೇವಣಸಿದ್ದ ಶೇಖಣ್ಣವರ, ಸಿದ್ದಪ್ಪ ಜಕ್ಕನ್ನವರ, ದುಂಡಪ್ಪ ಹದಿಮೂರ, ಸಿದ್ದಿಂಗಪ್ಪ ನಂದಿ, ರಾವಯ್ಯ ಹಿರೇಮಠ, ಪರಪ್ಪ ಬಾಗೇವಾಡಿ, ಭೀಮಪ್ಪ ಬಾಗೇವಾಡಿ, ರುದ್ರಯ್ಯ ಹಿರೇಮಠ, ಸಿದ್ದಪ್ಪ ಪತ್ತಾರ, ಶ್ರೀಶೈಲ ಸಜ್ಜನ, ಮಲ್ಲಿಕಾರ್ಜುನ ಸಜ್ಜನ, ಸಂಗಪ್ಪ ಚೌಕಿಮಠ, ಶರಣಪ್ಪ ಉಕ್ಕಲಿ, ಕಲ್ಯಾಣಿ ಕಾಳಗಿ ಸೇರಿದಂತೆ ಇತರರು ಇದ್ದರು.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಸಿಂಧನೂರು | ರೀಲ್ಸ್ ಮಾಡಲು ಹೋದ ಯುವಕ ನೀರು ಪಾಲು

ರೀಲ್ಸ್ ಮಾಡುವ ಉದ್ದೇಶದಿಂದ ಸ್ನೇಹಿತರಿಗೆ ವಿಡಿಯೋ ಮಾಡಲು ಹೇಳಿ ಈಜಲು ನದಿಗೆ...

ಗದಗ | ಆದ್ಯ ವಚನಕಾರ ದೇವರ ದಾಸಿಮಯ್ಯ: ರಾಘವೇಂದ್ರ ಕೊಪ್ಪಳ

"ಆದ್ಯ ವಚನಕಾರ ನೇಕಾರ ಸಂತ ದೇವರ ದಾಸಿಮಯ್ಯನವರು 10 ನೇ ಶತಮಾನದಲ್ಲಿ...

ಮಾರ್ಚ್ 25ರಂದು ಬೆಂಗಳೂರಿನ ಫ್ರೀಡಂ ಪಾರ್ಕ್ನಲ್ಲಿ ಬಲಗೈ ಜಾತಿಗಳ ಬೃಹತ್ ಹೋರಾಟ

ಬಾಗೇಪಲ್ಲಿ:-ಕರ್ನಾಟಕ ರಾಜ್ಯ ಬಲಗೈ ಜಾತಿಗಳ ಮಹಾ ಒಕ್ಕೂಟದ ವತಿಯಿಂದ ಒಳ ಮೀಸಲಾತಿ...

ಯುಪಿಎಸ್ಸಿ ರ‍್ಯಾಂಕ್‌ ವಿಜೇತ ವರುಣ್ ಗೌಡಗೆ ಸನ್ಮಾನ

ಕೋಲಾರ: ಯುಪಿಎಸ್ಸಿ ಪರೀಕ್ಷೆಯಲ್ಲಿ 462 ನೇ ರ‍್ಯಾಂಕ್‌ ಪಡದ ತಾಲೂಕಿನ ತ್ಯಾವನಹಳ್ಳಿ...