ವಿಜಯಪುರ | ಬೆಳೆ ಹಾನಿ ಸಮೀಕ್ಷೆಯ ವರದಿ ಶೀಘ್ರ ಸಿಗಲಿದೆ: ಡಿಸಿ ಡಾ. ಆನಂದ

Date:

ಮುಂಗಾರು ಮಳೆ ಹಿನ್ನಲೆಯಲ್ಲಿ ಡೋಣಿ ನದಿ ತೀರದ ಪ್ರದೇಶದಲ್ಲಿನ ಕೃಷಿ ಭೂಮಿ ಪ್ರವಾಹಕ್ಕೊಳಗಾಗಿ ಅಂದಾಜು 5500 ಹೆಕ್ಟೇ‌ರ್ ಜಮೀನು ಮುಳುಗಡೆಯಾಗಿ ಬೆಳೆಗಳು ಹಾನಿಯಾಗಿವೆ. ಈ ಕುರಿತು ಕಂದಾಯ, ಕೃಷಿ ಹಾಗೂ ತೋಟಗಾರಿಕೆ ಇಲಾಖೆಗಳು ಸಮೀಕ್ಷೆ ನಡೆಸಿ ಶೀಘ್ರದಲ್ಲೇ ಪೂರ್ಣಗೊಳಿಸಿ ವರದಿ ಸಲ್ಲಿಸಲಿವೆ ಎಂದು ವಿಜಯಪುರ ಜಿಲ್ಲಾಧಿಕಾರಿ ಡಾ.ಆನಂದ ಕೆ. ತಿಳಿಸಿದರು.

ಡೋಣಿ ನದಿಯ ಪ್ರವಾಹ ಪೀಡಿತ ಪ್ರದೇಶಗಳಿಗೆ ಜಿಲ್ಲಾಧಿಕಾರಿ ಡಾ. ಆನಂದ, ಜಿಪಂ ಸಿಇಒ ರಿಷಿ ಆನಂದ ಅವರೊಂದಿಗೆ ಜಂಟಿಯಾಗಿ ಜಿಲ್ಲೆಯ ಸಾರವಾಡ, ದದಾಮಟ್ಟಿ, ಉಕುಮನಾಳ ಹಾಗೂ ಎಂಬತ್ನಾಳ ಸೇರಿದಂತೆ ವಿವಿಧೆಡೆ ಭೇಟಿ ನೀಡಿ ಅವರು ಪರಿಶೀಲನೆ ನಡೆಸಿ ಮಾತನಾಡಿ, ವರದಿಯನುಸಾರ ಬೆಳೆ ನಷ್ಟವಾಗಿರುವ ರೈತರ ಖಾತೆಗೆ ನೇರವಾಗಿ ಪರಿಹಾರ ಹಣ ಜಮೆ ಮಾಡಲಾಗುವುದು ಎಂದರು.

ಡೋಣಿ ನದಿಗೆ ಅಡ್ಡಲಾಗಿ ಕಟ್ಟಿರುವ ಸೇತುವೆಗಳಲ್ಲಿ ಪ್ರವಾಹ ಪರಿಸ್ಥಿತಿ ನಿಯಂತ್ರಣಕ್ಕಾಗಿ ಶಾಶ್ವತ ಪರಿಹಾರ ಕಲ್ಪಿಸುವಂತೆ ಈಗಾಗಲೇ ಸ್ಥಳೀಯ ರೈತರು ಕೆಲವು ಬೇಡಿಕೆಗಳನ್ನು ಸಲ್ಲಿಸಿದ್ದು, ಇವರ ಬೇಡಿಕೆಯನ್ವಯ ಕಾಮಗಾರಿಗಳನ್ನು ಕೈಗೊಳ್ಳಲು ಬೇಕಾಗುವ ಅನುದಾನ, ಸೂಕ್ತ ಯೋಜನೆ ಕುರಿತಂತೆ ಜಿಲ್ಲಾ ಮಟ್ಟದಲ್ಲಿ ಚರ್ಚಿಸಿ ಕ್ರಮ ವಹಿಸಲಾಗುವುದು ಎಂದು ತಿಳಿಸಿದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

“ಡೋಣಿ ನದಿಯ ಪ್ರವಾಹ ನಿಯಂತ್ರಣಕ್ಕಾಗಿ ಅಂದಾಜು 7.5 ಕೋಟಿ ರೂ.ಗಳ ವಿಪತ್ತು ನಿರ್ವಹನಾ ಉಪಶಮನ ನಿಧಿಯಡಿ ಈಗಾಗಲೇ ಪಂಚಾಯತ್ ರಾಜ್ ಇಂಜಿನೀಯರಿಂಗ್ ವಿಭಾಗದಿಂದ ಸೇತುವೆ ಮುಂಭಾಗ ಹಾಗೂ ಹಿಂಭಾಗದಲ್ಲಿನ ಒಂದು ಕಿ.ಮೀ. ಅಂತರದಲ್ಲಿ ಹೂಳೂ ತೆಗೆಯುವುದು, ಗಿಡಗಂಟಿಗಳನ್ನು ತೆರವುಗೊಳಿಸುವುದು ಹಾಗೂ ಪಕ್ಕದಲ್ಲಿ ಪ್ರವಾಹ ಪರಿಸ್ಥಿತಿ ನಿರ್ಮಾಣವಾಗದಂತೆ ಅರಣೀಕರಣ ಕಾಮಗಾರಿ ಸೇರಿದಂತೆ ಪ್ರವಾಹ ನಿಯಂತ್ರಣಕ್ಕಾಗಿ ಕಾಮಗಾರಿಗಳನ್ನು ಕೈಗೆತ್ತಿಕೊಳ್ಳಲಾಗಿದ್ದು, ನವೆಂಬರ್ ಅಂತ್ಯದಲ್ಲಿ ಹೂಳು ತೆಗೆಯುವುದು, ಸೇತುವೆ ಪಾತ್ರದಲ್ಲಿ ಅರಣೀಕರಣ ಕಾಮಗಾರಿ ಸಹ ಆರಂಭವಾಗಲಿದ್ದು, ಡೋಣಿನದಿ ಪ್ರವಾಹ ನಿಯಂತ್ರಣ ಕಾಮಗಾರಿಗಳನ್ನು ಆದ್ಯತೆಯಾಗಿ ತೆಗೆದುಕೊಂಡು ಡೋಣಿ ನದಿಯಿಂದಾಗುವ ಸಮಸ್ಯೆಗಳನ್ನು ಅವಲೋಕಿಸಿ ಅದಕ್ಕೆ ಸಂಬಂಧಿಸಿದ ಕಾಮಗಾರಿಗಳನ್ನು ಹಂತ ಹಂತವಾಗಿ ಕಾಮಗಾರಿ ಕೈಗೊಳ್ಳಲಾಗುವುದು” ಎಂದು ಅವರು ಹೇಳಿದರು.

ಇದನ್ನೂ ಓದಿ: ವಿಜಯಪುರ | ಅಕ್ಕಮಹಾದೇವಿ ಮಹಿಳಾ ವಿವಿಯ ವಿವಿಧ ಪಿಜಿ ಕೋರ್ಸ್‌ಗಳಿಗೆ ಸೆ.2ರಂದು ಕೌನ್ಸೆಲಿಂಗ್‌

ಜಂಟಿ ಕೃಷಿ ನಿರ್ದೇಶಕ ಶಿವನಗೌಡ ಪಾಟೀಲ, ತೋಟಗಾರಿಕೆ ಇಲಾಖೆಯ ಉಪ ನಿರ್ದೇಶಕ ರಾಹುಲ್ ಭಾವಿದೊಡ್ಡಿ, ಅಲ್ಪಸಂಖ್ಯಾತರ ಇಲಾಖೆಯ ಅಧಿಕಾರಿ ಪ್ರಶಾಂತ ಪೂಜಾರಿ, ತಹಶೀಲ್ದಾರ್ ಶಾಂತಲಾ ಚಂದನ, ರೈತ ಭೀಮಸೇನ, ಮಲ್ಲಿಕಾರ್ಜುನ ಬಟಗಿ ಸೇರಿದಂತೆ ಅನೇಕರು ಭೇಟಿ ವೇಳೆ ಉಪಸ್ಥಿತರಿದ್ದರು.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಸಿಂಧನೂರು | ರೀಲ್ಸ್ ಮಾಡಲು ಹೋದ ಯುವಕ ನೀರು ಪಾಲು

ರೀಲ್ಸ್ ಮಾಡುವ ಉದ್ದೇಶದಿಂದ ಸ್ನೇಹಿತರಿಗೆ ವಿಡಿಯೋ ಮಾಡಲು ಹೇಳಿ ಈಜಲು ನದಿಗೆ...

ಗದಗ | ಆದ್ಯ ವಚನಕಾರ ದೇವರ ದಾಸಿಮಯ್ಯ: ರಾಘವೇಂದ್ರ ಕೊಪ್ಪಳ

"ಆದ್ಯ ವಚನಕಾರ ನೇಕಾರ ಸಂತ ದೇವರ ದಾಸಿಮಯ್ಯನವರು 10 ನೇ ಶತಮಾನದಲ್ಲಿ...

ಮಾರ್ಚ್ 25ರಂದು ಬೆಂಗಳೂರಿನ ಫ್ರೀಡಂ ಪಾರ್ಕ್ನಲ್ಲಿ ಬಲಗೈ ಜಾತಿಗಳ ಬೃಹತ್ ಹೋರಾಟ

ಬಾಗೇಪಲ್ಲಿ:-ಕರ್ನಾಟಕ ರಾಜ್ಯ ಬಲಗೈ ಜಾತಿಗಳ ಮಹಾ ಒಕ್ಕೂಟದ ವತಿಯಿಂದ ಒಳ ಮೀಸಲಾತಿ...

ಯುಪಿಎಸ್ಸಿ ರ‍್ಯಾಂಕ್‌ ವಿಜೇತ ವರುಣ್ ಗೌಡಗೆ ಸನ್ಮಾನ

ಕೋಲಾರ: ಯುಪಿಎಸ್ಸಿ ಪರೀಕ್ಷೆಯಲ್ಲಿ 462 ನೇ ರ‍್ಯಾಂಕ್‌ ಪಡದ ತಾಲೂಕಿನ ತ್ಯಾವನಹಳ್ಳಿ...