ವಿಜಯಪುರ | ಸಾಂಸ್ಕೃತಿಕ ಜನೋತ್ಸವ: ‘ದೇವರ ನಾಡಲ್ಲಿ’ ಚಿತ್ರ ಪ್ರದರ್ಶನ

Date:

ವಿಜಯಪುರ ಜಿಲ್ಲೆಯಲ್ಲಿ ನಡೆಯುತ್ತಿರುವ 14ನೇ ʼಸಾಂಸ್ಕೃತಿಕ ಜನೋತ್ಸವʼದ ಅಂಗವಾಗಿ ನಗರದ ಕಂದಗಲ್ ರಂಗ ಮಂದಿರದಲ್ಲಿ ಬಿ.ಸುರೇಶ್‌ ನಿರ್ದೇಶನದ ‘ದೇವರ ನಾಡಲ್ಲಿ’ ಚಿತ್ರ ಪ್ರದರ್ಶನ ಕಾರ್ಯಕ್ರಮ ಆಯೋಜಿಸಲಾಗಿತ್ತು.

ಚಿತ್ರ ವೀಕ್ಷಿಸಿದ ಎಐಯುಟಿಯುಸಿ ರಾಜ್ಯಾಧ್ಯಕ್ಷ ಕೆ. ಸೋಮಶೇಖರ್, “ಸಮಾಜದಲ್ಲಿ ನಡೆಯುತ್ತಿರುವ ಕೋಮುವಾದ ಪರಿಣಾಮ ಬೀರುವುದು ಬಡ ಜನರ ಮೇಲೆಯೇ ಹೊರತು ಶ್ರೀಮಂತ ವ್ಯಕ್ತಿಗಳ ಮೇಲಲ್ಲ. ಪ್ರಗತಿಪರ ಧೋರಣೆಯನ್ನು, ಕೋಮು ಸೌಹಾರ್ದತೆಯ ಬದುಕನ್ನು ನಡೆಸಲು ಪೂರಕವಾಗುವಂತಹ ಸಂದೇಶವನ್ನು ಈ ಸಿನಿಮಾ ಮೂಲಕ ನಿರ್ದೇಶಕರು ತೋರಿಸಿದ್ದಾರೆ” ಎಂದು ಹೇಳಿದರು.

ಆವಿಷ್ಕಾರ ಸಂಘಟನೆಯ ಭರತ್ ಕುಮಾರ್ ಹೆಚ್ ಟಿ ಮಾತನಾಡಿ, “ಸಾಮಾನ್ಯವಾಗಿ ಒಂದು ಕಲೆಯನ್ನ ಅಭಿವ್ಯಕ್ತ ಪಡಿಸುವಾಗ ಕಲಾವಿದ ಅಥವಾ ನಿರ್ದೇಶಕನಾಗಿರಲಿ ತಮ್ಮದೇ ಆದ ವಿಧಾನವನ್ನು ಅನುಸರಿಸಿಕೊಂಡು ಸಂದೇಶವನ್ನು ಕೊಡುತ್ತಾರೆ. ಸಿನಿಮಾದಲ್ಲಿರುವ ಉತ್ತಮವಾದ ಸಂದೇಶವೇನೆಂದರೆ, ಯಾವುದೇ ದೇಶದಲ್ಲಾಗಿರಲಿ, ಯಾವುದೇ ಸಮಾಜದಲ್ಲಾಗಿರಲಿ ಸಮಾಜಘಾತುಕ ಚಟುವಟಿಕೆಗಳಿಗೆ ಬಲಿಪಶುವಾಗುತ್ತಿರುವವರು ಯಾರೋ ಶ್ರೀಮಂತ, ಎಂಎಲ್‌ಎ, ಎಂಪಿ ಮಕ್ಕಳಲ್ಲ. ಬದಲಾಗಿ ಜನಸಾಮಾನ್ಯರ ಮಕ್ಕಳು ಬಲಿಯಾಗುತ್ತಾರೆನ್ನುವ ಸನ್ನಿವೇಶಗಳು ಸಿನಿಮಾದಲ್ಲಿವೆ. ಈ ಸಿನಿಮಾದಲ್ಲಿ ಮುಖ್ಯವಾಗಿ ನಾಯಕಿ ಕೊನೆಯಲ್ಲಿ ನ್ಯಾಯದ ಪರವಾಗಿ ನಿಲ್ಲುವ ಸನ್ನಿವೇಶದಿಂದ ನಾವು ಸಹ ಉನ್ನತ ಮೌಲ್ಯ, ಉನ್ನತ ವಿಚಾರಗಳನ್ನು ಆಯ್ಕೆ ಮಾಡಿಕೊಳ್ಳಬೇಕೆನ್ನುವ ಸಂದೇಶ ಬಹಳ ಸುಂದರವಾಗಿ ಬಂದಿದೆ.” ಎಂದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ಇದನ್ನೂ ಓದಿ: ವಿಜಯಪುರ | ಹರೀಶ್ ಡಿ.ಕೆ. ಅವರಿಗೆ ಪಿಎಚ್.ಡಿ ಪದವಿ

ಐಎಂಎಸ್ಎಸ್ ಜಿಲ್ಲಾ ಕಾರ್ಯದರ್ಶಿ ಶಿವಬಾಳಮ್ಮ, ಎಐಡಿವೈಒ ಜಿಲ್ಲಾ ಕಾರ್ಯದರ್ಶಿ ಸಿದ್ರಾಮ ಹಿರೇಮಠ, ಎಐಎಂಎಸ್‌ಎಸ್ ಜಂಟಿ ಜಿಲ್ಲಾ ಕಾರ್ಯದರ್ಶಿ ಶಿವರಂಜನಿ ಕೆ ಸೇರಿದಂತೆ ಇತರರು ಕಾರ್ಯಕ್ರಮದಲ್ಲಿ ಉಪಸ್ಥಿತರಿದ್ದರು.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಸಿಂಧನೂರು | ರೀಲ್ಸ್ ಮಾಡಲು ಹೋದ ಯುವಕ ನೀರು ಪಾಲು

ರೀಲ್ಸ್ ಮಾಡುವ ಉದ್ದೇಶದಿಂದ ಸ್ನೇಹಿತರಿಗೆ ವಿಡಿಯೋ ಮಾಡಲು ಹೇಳಿ ಈಜಲು ನದಿಗೆ...

ಗದಗ | ಆದ್ಯ ವಚನಕಾರ ದೇವರ ದಾಸಿಮಯ್ಯ: ರಾಘವೇಂದ್ರ ಕೊಪ್ಪಳ

"ಆದ್ಯ ವಚನಕಾರ ನೇಕಾರ ಸಂತ ದೇವರ ದಾಸಿಮಯ್ಯನವರು 10 ನೇ ಶತಮಾನದಲ್ಲಿ...

ಮಾರ್ಚ್ 25ರಂದು ಬೆಂಗಳೂರಿನ ಫ್ರೀಡಂ ಪಾರ್ಕ್ನಲ್ಲಿ ಬಲಗೈ ಜಾತಿಗಳ ಬೃಹತ್ ಹೋರಾಟ

ಬಾಗೇಪಲ್ಲಿ:-ಕರ್ನಾಟಕ ರಾಜ್ಯ ಬಲಗೈ ಜಾತಿಗಳ ಮಹಾ ಒಕ್ಕೂಟದ ವತಿಯಿಂದ ಒಳ ಮೀಸಲಾತಿ...

ಯುಪಿಎಸ್ಸಿ ರ‍್ಯಾಂಕ್‌ ವಿಜೇತ ವರುಣ್ ಗೌಡಗೆ ಸನ್ಮಾನ

ಕೋಲಾರ: ಯುಪಿಎಸ್ಸಿ ಪರೀಕ್ಷೆಯಲ್ಲಿ 462 ನೇ ರ‍್ಯಾಂಕ್‌ ಪಡದ ತಾಲೂಕಿನ ತ್ಯಾವನಹಳ್ಳಿ...