ವಿಜಯಪುರ | ಡಿ.ದೇವರಾಜ ಅರಸು ಜನ್ಮದಿನಾಚರಣೆ

Date:

ಡಿ.ದೇವರಾಜ ಅರಸು ಅವರು ಮುಖ್ಯಮಂತ್ರಿಗಳಾಗಿದ್ದ ಸಂದರ್ಭದಲ್ಲಿ ರಾಜ್ಯದಲ್ಲಿ ಜಾರಿಗೆ ತಂದಿದ್ದ ʼಉಳುವವನೇ ಭೂಮಿಯ ಒಡೆಯʼ ಎಂಬ ಕ್ರಾಂತಿಕಾರಿ ಭೂ ಸುಧಾರಣಾ ಕಾಯ್ದೆ ದೇಶದಲ್ಲಿಯೇ ಮಾದರಿಯಾಗಿತ್ತು ಎಂದು ಸಾಮಾಜಿಕ ಮತ್ತು ಆರ್ಥಿಕ ಬದಲಾವಣೆ ಮಂಡಳಿಯ ಅಧ್ಯಕ್ಷ ಹಾಗೂ ನಿವೃತ್ತ ಹಿರಿಯ ಐಎಎಸ್ ಅಧಿಕಾರಿ ಅಶೋಕ ದಳವಾಯಿ ಅಭಿಪ್ರಾಯಪಟ್ಟರು.

ವಿಜಯಪುರ ನಗರದ ಮಹಿಳಾ ವಿಶ್ವವಿದ್ಯಾಲಯದ ವಿದ್ಯಾರ್ಥಿ ಕ್ಷೇಮಪಾಲನ ನಿರ್ದೇಶನಾಲಯ ಮತ್ತು ಸಮಾನ ಅವಕಾಶ ಘಟಕದ ಆಶ್ರಯದಲ್ಲಿ ಡಿ.ದೇವರಾಜ ಅರಸು ಅವರ 110ನೇ ಜನ್ಮ ದಿನಾಚರಣೆ ಅಂಗವಾಗಿ ಮಂಗಳವಾರ ಹಮ್ಮಿಕೊಂಡಿದ್ದ ವಿಶೇಷ ಉಪನ್ಯಾಸ ಕಾರ್ಯಕ್ರಮದಲ್ಲಿ ಮಾತನಾಡಿದರು.

“ಕರ್ನಾಟಕದಲ್ಲಿ ಜಮೀನ್ದಾರಿ ಪದ್ಧತಿ, ಜೀತ ಪದ್ಧತಿ ಮತ್ತು ತಲೆಮೇಲೆ ಮಲ ಹೊರುವ ಅನಿಷ್ಟ ಪದ್ಧತಿಗಳನ್ನು ನಿರ್ಮೂಲನೆ ಮಾಡಿದ ಶ್ರೇಯಸ್ಸು ದೇವರಾಜ ಅರಸು ಅವರಿಗೆ ಸಲ್ಲುತ್ತದೆ. ಅರಸು ರಾಜ್ಯದಲ್ಲಿ ಕ್ರಾಂತಿಕಾರಿ ಬದಲಾವಣೆ ತರಲು ಬಹುವಾಗಿ ಶ್ರಮಿಸಿದ್ದರು. ಅರಸು ಒಬ್ಬ ಕರ್ಮಯೋಗಿ, ರಾಜಕೀಯ ಮುತ್ಸದ್ದಿಯಾಗಿದ್ದರು” ಎಂದು ಬಣ್ಣಿಸಿದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

“ರಾಜ್ಯದಲ್ಲಿ 70-80ರ ದಶಕದಲ್ಲಿ ಆರ್ಥಿಕ, ಸಾಮಾಜಿಕ, ಶೈಕ್ಷಣಿಕ, ರಾಜಕೀಯ ಪರಿವರ್ತನೆಗೆ ಗಟ್ಟಿಯಾದ ಅಡಿಗಲ್ಲು ಹಾಕಿದ್ದ ದೇವರಾಜ ಅರಸು ಅವರು ಡಾ.ಬಿ ಆರ್ ಅಂಬೇಡ್ಕರ್ ಅವರು ರೂಪಿಸಿದ ಸಂವಿಧಾನದ ಆಶಯಗಳನ್ನು ಜಾರಿಗೆ ತರಲು ಪ್ರಾಮಾಣಿಕ ಪ್ರಯತ್ನಗಳನ್ನು ನಡೆಸಿದ್ದರು. ಇದರ ಪರಿಣಾಮವಾಗಿ ಜನರ ಬಡತನ ದೂರ ಮಾಡುವ ಇಚ್ಛಾಶಕ್ತಿ ಅವರಲ್ಲಿತ್ತು” ಎಂದು ಹೇಳಿದರು.

ಡಿ.ದೇವರಾಜ ಅರಸು ಜನ್ಮದಿನಾಚರಣೆ 1

“ಇಂದಿನ ಪೀಳಿಗೆ ದೇವರಾಜ ಅರಸು ಅವರ ಜೀವನ ಸಾಧನೆ ತಿಳಿದುಕೊಳ್ಳಬೇಕು. ಅವರ ಜೀವನಾದರ್ಶಗಳನ್ನು ನಾವೆಲ್ಲರೂ ನಮ್ಮ ನಮ್ಮ ಜೀವನದಲ್ಲಿ ಆಳವಡಿಸಿಕೊಳ್ಳಲು ಪ್ರಾಮಾಣಿಕ ಪ್ರಯತ್ನಗಳನ್ನು ಮಾಡಬೇಕು. ಆಗ ಮಾತ್ರ ನಾವು ಅವರಿಗೆ ಗೌರವ ಸಲ್ಲಿಸಿದಂತಾಗುತ್ತದೆ” ಎಂದು ಅಶೋಕ ದಳವಾಯಿ ಪ್ರತಿಪಾದಿಸಿದರು.

“ಡಿ.ದೇವರಾಜ ಅರಸು ಅವರು ಸದಾ ಸಮಾನತೆಯ ಹಾದಿಯನ್ನು ತೋರಿದ ಮಹಾನ್ ನಾಯಕ. ಸಮಾಜದಲ್ಲಿ ಮೇಲು-ಕೀಳು ಎಂಬ ಆಸಮಾನತೆಗಳನ್ನು ಹೋಗಲಾಡಿಸಲು ಅವರು ದೃಢ ಪ್ರಯತ್ನ ನಡೆಸಿದರು. ತಮ್ಮ ದೃಢ ಸಂಕಲ್ಪದಿಂದ ಶ್ರಮಜೀವಿಗಳ ಹಕ್ಕನ್ನು ಸಂರಕ್ಷಿಸಿದರು. ಅರಸು ಅವರ ಜೀವನವೇ ಒಂದು ಪಾಠ. ಸಾಮಾನ್ಯ ಜನರ ಕಲ್ಯಾಣಕ್ಕಾಗಿ ಅವರು ಬದ್ಧರಾಗಿ ದುಡಿಯುವುದರ ಮೂಲಕವೇ ನಿಜವಾದ ನಾಯಕತ್ವ ಎಂದರೇನು? ಎಂಬುದನ್ನು ತೋರಿಸಿಕೊಟ್ಟವರು ಅವರು” ಎಂದು ಹೇಳಿದರು.

ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿದ್ದ ವಿವಿಯ ಕುಲಪತಿ ಪ್ರೊ.ವಿಜಯಾ ಕೋರಿಶೆಟ್ಟಿ ಮಾತನಾಡಿ, “ಡಿ.ದೇವರಾಜ್ ಅರಸು ಅವರು ಕರ್ನಾಟಕದ ರಾಜಕೀಯದಲ್ಲಿ ಸಮಾನತೆ, ಸಾಮಾಜಿಕ ನ್ಯಾಯ ಮತ್ತು ಜನಪರ ಆಡಳಿತದ ನಿಜವಾದ ಪ್ರತಿರೂಪವಾಗಿದ್ದರು. ಹಿಂದುಳಿದ ವರ್ಗಗಳ ಸಬಲೀಕರಣಕ್ಕಾಗಿ ಅವರು ಕೈಗೊಂಡ ಕಲ್ಯಾಣಕಾರಿ ಕ್ರಮಗಳು ಇಂದಿಗೂ ಮಾದರಿಯಾಗಿದೆ. ಪಾರದರ್ಶಕತೆ, ಸರಳತೆ ಹಾಗೂ ನೈತಿಕತೆಗೆ ಹೆಸರಾಗಿದ್ದ ಅವರ ಆಡಳಿತ ಶೈಲಿ ಇಂದಿನ ರಾಜಕೀಯ ನಾಯಕತ್ವಕ್ಕೆ ದಿಕ್ಕು ತೋರಿಸುವಂತಿದೆ” ಎಂದರು.

ಈ ಸುದ್ದಿ ಓದಿದ್ದೀರಾ? ಧಾರವಾಡ | ಅವಳಿನಗರ ವ್ಯಾಪ್ತಿಯಲ್ಲಿ ಆ.26ರಿಂದ ಸೆ.07ರವರೆಗೆ ಮದ್ಯ ಮಾರಾಟ, ಮದ್ಯಪಾನ ನಿಷೇಧ

ಕಾರ್ಯಕ್ರಮದಲ್ಲಿ ಹಿಂದುಳಿದ ವರ್ಗಗಳ ಘಟಕದ ಸಂಯೋಜಕ ಪ್ರೊ.ಶ್ರೀನಿವಾಸ, ವಿವಿಧ ವಿಭಾಗಗಳ ಮುಖ್ಯಸ್ಥರು, ಡೀನರು. ಪ್ರಾಧ್ಯಾಪಕರು, ಬೋಧಕ ಮತ್ತು ಬೋಧಕೇತರ ಸಿಬ್ಬಂದಿ ವರ್ಗ ಹಾಗೂ ಸಂಶೋಧನಾ ವಿದ್ಯಾರ್ಥಿನಿಯರು, ಸ್ನಾತಕ ಮತ್ತು ಸ್ನಾತಕೋತ್ತರ ವಿದ್ಯಾರ್ಥಿನಿಯರು ಸೇರಿದಂತೆ ಇತರರು ಇದ್ದರು.

ಕಾರ್ಯಕ್ರಮದಲ್ಲಿ ಸ್ನಾತಕ ಅಧ್ಯಯನ ವಿಭಾಗದ ವಿಶೇಷ ಅಧಿಕಾರಿ ಪ್ರೊ.ಸಕ್ಷಾಲ ಹೂವಣ್ಣ ಸ್ವಾಗತಿಸಿ ಪ್ರಾಸ್ತಾವಿಕವಾಗಿ ಮಾತನಾಡಿದರು. ಸಂಶೋಧನಾ ವಿದ್ಯಾರ್ಥಿನಿ ಶ್ವೇತಾ ಅತಿಥಿಗಳನ್ನು ಪರಿಚಯಿಸಿದರು. ಡಾ.ತಹಮೀನಾ ನಿಗಾರ ಸುಲ್ತಾನಾ ನಿರೂಪಿಸಿದರು. ವಿದ್ಯಾರ್ಥಿ ಕ್ಷೇಮಪಾಲನ ನಿರ್ದೇಶನಾಲಯದ ನಿರ್ದೇಶಕಿ ಪ್ರೊ.ಜ್ಯೋತಿ ಉಪಾಧ್ಯೆ ವಂದಿಸಿದರು.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಸಿಂಧನೂರು | ರೀಲ್ಸ್ ಮಾಡಲು ಹೋದ ಯುವಕ ನೀರು ಪಾಲು

ರೀಲ್ಸ್ ಮಾಡುವ ಉದ್ದೇಶದಿಂದ ಸ್ನೇಹಿತರಿಗೆ ವಿಡಿಯೋ ಮಾಡಲು ಹೇಳಿ ಈಜಲು ನದಿಗೆ...

ಗದಗ | ಆದ್ಯ ವಚನಕಾರ ದೇವರ ದಾಸಿಮಯ್ಯ: ರಾಘವೇಂದ್ರ ಕೊಪ್ಪಳ

"ಆದ್ಯ ವಚನಕಾರ ನೇಕಾರ ಸಂತ ದೇವರ ದಾಸಿಮಯ್ಯನವರು 10 ನೇ ಶತಮಾನದಲ್ಲಿ...

ಮಾರ್ಚ್ 25ರಂದು ಬೆಂಗಳೂರಿನ ಫ್ರೀಡಂ ಪಾರ್ಕ್ನಲ್ಲಿ ಬಲಗೈ ಜಾತಿಗಳ ಬೃಹತ್ ಹೋರಾಟ

ಬಾಗೇಪಲ್ಲಿ:-ಕರ್ನಾಟಕ ರಾಜ್ಯ ಬಲಗೈ ಜಾತಿಗಳ ಮಹಾ ಒಕ್ಕೂಟದ ವತಿಯಿಂದ ಒಳ ಮೀಸಲಾತಿ...

ಯುಪಿಎಸ್ಸಿ ರ‍್ಯಾಂಕ್‌ ವಿಜೇತ ವರುಣ್ ಗೌಡಗೆ ಸನ್ಮಾನ

ಕೋಲಾರ: ಯುಪಿಎಸ್ಸಿ ಪರೀಕ್ಷೆಯಲ್ಲಿ 462 ನೇ ರ‍್ಯಾಂಕ್‌ ಪಡದ ತಾಲೂಕಿನ ತ್ಯಾವನಹಳ್ಳಿ...