ವಿಜಯಪುರ | ರಸ್ತೆ ಗುಂಡಿಗಳನ್ನು ಮುಚ್ಚಿದ ದಲಿತ ಮುಖಂಡರು

Date:

ವಿಜಯಪುರ ನಗರದ ಸುತ್ತಮುತ್ತಲಿನಲ್ಲಿರುವ ರಸ್ತೆಗಳು ಹದಗೆಟ್ಟು ಹೋಗಿದ್ದು, ರಸ್ತೆಗಳ ಮಧ್ಯೆ ತಗ್ಗು ಗುಂಡಿಗಳು ಬಿದ್ದಿರುವುದರಿಂದ ವಾಹನ ಸವಾರರು ಜೀವ ಕೈಯಲ್ಲಿ ಹಿಡಿದುಕೊಂಡು ಹೋಗಬೇಕಾದ ಪರಿಸ್ಥಿತಿ ಎದುರಾಗಿದ್ದು, ದಲಿತ ಮುಖಂಡರು, ಜನಪರ ಕಾಳಜಿಯುಳ್ಳ ಸಮಾನ ಮನಸ್ಕರು ಒಗ್ಗೂಡಿ ರಸ್ತೆ ಗುಂಡಿಗಳನ್ನು ಮುಚ್ಚುವ ಮೂಲಕ ಸಮಾಜಕ್ಕೆ ಮಾದರಿಯಾಗಿದ್ದಾರೆ.

ಮಳೆನೀರು ಸಂಗ್ರಹವಾಗಿರುವುದರಿಂದ ರಸ್ತೆ ಗುಂಡಿಗಳು ಕಾಣುತ್ತಿಲ್ಲ. ಬೈಕ್ ಸವಾರರು ರಸ್ತೆಗಳನ್ನು ನೋಡಿ ಪರದಾಡುವಂತಹ ಪರಿಸ್ಥಿತಿ ಬಂದಿದೆ. ಕೋಟಿ ಕೋಟಿ ರೂಪಾಯಿಗಳಲ್ಲಿ ರಸ್ತೆ ಕಾಮಗಾರಿ ನಡೆದಿದ್ದರೂ ಮತ್ತೆ ರಸ್ತೆಗಳ ನಡುವೆ ಬಿದ್ದಿರುವ ಗುಂಡಿಗಳಿಗೆ ಜನರು ಭಯ ಭೀತರಾಗಿದ್ದರು.

ಸಂಬಂಧಿಸಿದ ಅಧಿಕಾರಿಗಳು, ಇಲಾಖೆಯವರು, ನಗರ ಶಾಸಕರು, ಮಹಾನಗರ ಪಾಲಿಕೆಯ ಆಯುಕ್ತರು ಕಂಡೂ ಕಾಣದಂತೆ ಜಾಣಕುರುಡು ಪ್ರದರ್ಶಿಸಿದ್ದಾರೆ. ಇಂತಹ ನಡೆ ನಮ್ಮ ನಗರದ ಅಭಿವೃದ್ಧಿಯ ಕಡೆ ಯಾರೂ ಗಮನ ಹರಿಸದಿರುವುದನ್ನು ಎತ್ತಿ ತೋರಿಸುತ್ತಿದೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...
ರಸ್ತೆ ಗುಂಡಿ ಮುಚ್ಚಿದ ಮುಖಂಡರು 1

ವಿಜಯಪುರ ನಗರದಲ್ಲಿ ಗೋಲ್ ಗುಂಬಜ್ ಪೋಲಿಸ್ ಠಾಣೆ ಎದುರುಗಡೆ ರೈಲ್ವೆ ಸೇತುವೆ ಇರುವ ರಸ್ತೆಯಲ್ಲಿ ದೊಡ್ಡದಾದ ಗುಂಡಿ ಬಿದ್ದಿದ್ದು, ಬಹುದಿನಗಳಾದರೂ ಯಾರೂ ಇದರ ಬಗ್ಗೆ ಗಮನ ಹರಿಸಿಲ್ಲ. ಕೆಲಸದ ನಿಮಿತ್ಯ ದಲಿತ ಮುಖಂಡರು ಆ ಕಡೆ ಹೊದಾಗ ಅದನ್ನು ಗಮನಿಸಿ ಗುಂಡಿ ಮುಚ್ಚುವ ಕೆಲಸಕ್ಕೆ ಮುಂದಾಗಿದ್ದಾರೆ.

ರಸ್ತೆ ಗುಂಡಿ ಮುಚ್ಚಿದ ಮುಖಂಡರು 2

ಜನಪರ ಹೊರಾಟದ ಜತೆಗೆ ಜನಪರ ಕಾಳಜಿಯು ಇರಲಿ ಎಂಬ ಮನದಾಸೆಯೊಂದಿಗೆ ಸಮಾಜದ ಎಲ್ಲ ಜನರ ಪರವಾಗಿ ನಾವು ಇದ್ದೇವೆ ಎಂಬ ಮನೋಭಾವ ಹೊಂದಿದ ಮುಖಂಡರು ರಸ್ತೆಯ ಗುಂಡಿ ಮುಚ್ಚುವ ಮೂಲಕ ಸಮಾಜಕ್ಕೆ ಮಾದರಿಯಾಗಿದ್ದಾರೆ.

ಈ ಸುದ್ದಿ ಓದಿದ್ದೀರಾ? ಮಂಡ್ಯ | ದಲಿತ ವಿರೋಧಿ ಹೇಳಿಕೆ ನೀಡಿರುವ ಜಿ ಟಿ ದೇವೆಗೌಡ ವಿರುದ್ಧ ಪ್ರತಿಭಟನೆ

ಈ ಸಂದರ್ಭದಲ್ಲಿ ಸಾಮಾಜಿಕ ಕಾರ್ಯಕರ್ತ ಯಮನಪ್ಪ ಗುಣಕಿ, ಜಿಲ್ಲಾ ಜಾಗೃತಿ ಉಸ್ತುವಾರಿ ಸಮಿತಿ ಸದಸ್ಯ ಯಮನಪ್ಪ ಸಿದರಡ್ಡಿ,
ದಲಿತ ಸಂಘರ್ಷ ಸಮಿತಿ ಜಿಲ್ಲಾ ಸಂಘಟನಾ ಸಂಚಾಲಕ ಚನ್ನು ಕಟ್ಟಿಮನಿ, ಪಿಂಟು ನಾಟೀಕಾರ, ಸಿದ್ದು ಸೇರಿ ಐದು ಜನ ಮುಖಂಡರು ಭಾಗಿಯಾಗಿದ್ದರು.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಸಿಂಧನೂರು | ರೀಲ್ಸ್ ಮಾಡಲು ಹೋದ ಯುವಕ ನೀರು ಪಾಲು

ರೀಲ್ಸ್ ಮಾಡುವ ಉದ್ದೇಶದಿಂದ ಸ್ನೇಹಿತರಿಗೆ ವಿಡಿಯೋ ಮಾಡಲು ಹೇಳಿ ಈಜಲು ನದಿಗೆ...

ಗದಗ | ಆದ್ಯ ವಚನಕಾರ ದೇವರ ದಾಸಿಮಯ್ಯ: ರಾಘವೇಂದ್ರ ಕೊಪ್ಪಳ

"ಆದ್ಯ ವಚನಕಾರ ನೇಕಾರ ಸಂತ ದೇವರ ದಾಸಿಮಯ್ಯನವರು 10 ನೇ ಶತಮಾನದಲ್ಲಿ...

ಮಾರ್ಚ್ 25ರಂದು ಬೆಂಗಳೂರಿನ ಫ್ರೀಡಂ ಪಾರ್ಕ್ನಲ್ಲಿ ಬಲಗೈ ಜಾತಿಗಳ ಬೃಹತ್ ಹೋರಾಟ

ಬಾಗೇಪಲ್ಲಿ:-ಕರ್ನಾಟಕ ರಾಜ್ಯ ಬಲಗೈ ಜಾತಿಗಳ ಮಹಾ ಒಕ್ಕೂಟದ ವತಿಯಿಂದ ಒಳ ಮೀಸಲಾತಿ...

ಯುಪಿಎಸ್ಸಿ ರ‍್ಯಾಂಕ್‌ ವಿಜೇತ ವರುಣ್ ಗೌಡಗೆ ಸನ್ಮಾನ

ಕೋಲಾರ: ಯುಪಿಎಸ್ಸಿ ಪರೀಕ್ಷೆಯಲ್ಲಿ 462 ನೇ ರ‍್ಯಾಂಕ್‌ ಪಡದ ತಾಲೂಕಿನ ತ್ಯಾವನಹಳ್ಳಿ...