ವಿಜಯಪುರ | ಒಳಮೀಸಲಾತಿ, ಎ ಜೆ ಸದಾಶಿವ ಆಯೋಗ ವರದಿ ಅನುಷ್ಠಾನಕ್ಕೆ ದಲಿತ ಮುಖಂಡರ ಆಗ್ರಹ

Date:

ಒಳಮೀಸಲಾತಿ, ಎ ಜೆ ಸದಾಶಿವ ಆಯೋಗ ವರದಿ ಅನುಷ್ಠಾನಕ್ಕೆ ಆಗ್ರಹಿಸಿ ದಲಿತ ಸಮುದಾಯದ ಮುಖಂಡರು ಸೇರಿದಂತೆ ಒಳಮೀಸಲಾತಿಗೆ ಒಳಪಡುವ ಎಲ್ಲ ಜನಾಂಗದವರು ಒಗ್ಗೂಡಿ ವಿಜಯಪುರ ಜಿಲ್ಲೆಯ ಮುದ್ದೇಬಿಹಾಳ ಪಟ್ಟಣದಲ್ಲಿ ಪ್ರತಿಭಟನೆ ನಡೆಸಿದರು.

ಮುದ್ದೇಬಿಹಾಳ ಪಟ್ಟಣದ ಅಂಬೇಡ್ಕರ್ ವೃತ್ತ, ಬಸವೇಶ್ವರ ವೃತ್ತ ಸೇರಿದಂತೆ ಇತರ ಪ್ರಮುಖ ವೃತ್ತಗಳಲ್ಲಿ ಸಂಚರಿಸಿದ ಈ ಬೃಹತ್‌ ಮೆರವಣಿಗೆ ತಹಶೀಲ್ದಾರ್ ಕಚೇರಿಗೆ ತೆರಳಿ ತಹಶೀಲ್ದಾ‌ರ್ ಮೂಲಕ ಸರ್ಕಾರಕ್ಕೆ ಮನವಿ ಸಲ್ಲಿಸಿದರು. ಇದಕ್ಕೂ ಮುನ್ನ ತಹಶೀಲ್ದಾರ್‌ ಕಚೇರಿ ಆವರಣದಲ್ಲಿ ಬಹಿರಂಗ ಸಭೆ ನಡೆಸಿದರು.

ದಲಿತ ಮುಖಂಡ ಡಿ ಬಿ ಮುದೂರ ಮಾತನಾಡಿ, “ಸರ್ಕಾರ ಒಳಮೀಸಲಾತಿ ಜಾರಿಗೊಳಿಸಬೇಕಾಗಿದೆ. ಆದರೆ ಈವರೆಗೆ ಒಳಮೀಸಲಾತಿ ಅನುಷ್ಠಾನಕ್ಕೆ ತಂದಿಲ್ಲ. ಹಾಗಾಗಿ ಒಳಮೀಸಲಾತಿಗೆ ಒಳಪಡುವ ಎಲ್ಲ ಜನಾಂಗದವರೂ ಈ ಬೃಹತ್ ಪ್ರತಿಭಟನೆಯಲ್ಲಿ ಭಾಗಿಯಾಗಿ ಒಳಮೀಸಲಾತಿ ಜಾರಿಗೆ ಆಗ್ರಹಿಸಿ ಸರ್ಕಾಕ್ಕೆ ಹಕ್ಕೊತ್ತಾಯ ಮಾಡುತ್ತಿದ್ದೇವೆ” ಎಂದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

“ಸತತ 30‌ ರಿಂದ 40 ವರ್ಷದಿಂದ ಈ ಹೋರಾಟ ನಡೆಯುತ್ತಲೇ ಇದೆ. ಜತೆಗೆ ಸರ್ವೋಚ್ಚ ನ್ಯಾಯಾಲಯ ಒಳಮೀಸಲಾತಿ ಜಾರಿಗೆ ಆದೇಶ ಹೊರಡಿಸಿದೆ. ಆದರೆ ಈವರೆಗೂ ಒಳಮೀಸಲಾತಿ ಜಾರಿ ಮಾಡಿಲ್ಲ. ಸರ್ಕಾರ ಕೂಡಲೇ ಒಳಮೀಸಲಾತಿ ಜಾರಿ ಮಾಡಬೇಕು. ಇಲ್ಲದಿದ್ದಲ್ಲಿ ಮುಂದಿನ ದಿನಗಳಲ್ಲಿ ರಾಜ್ಯ ವ್ಯಾಪಿ ಈ ಹೋರಾಟ ಮುಂದುವರೆಸಲಾಗುವುದು” ಎಂದು ಸರ್ಕಾರಕ್ಕೆ ಎಚ್ಚರಿಕೆ ನೀಡಿದರು.

ಈ ಸುದ್ದಿ ಓದಿದ್ದೀರಾ? ವಿಜಯಪುರ | ಕೊಲ್ಹಾರದ ಕಲ್ಲು ಗಣಿಗಾರಿಕೆ ಬಂದ್ ಮಾಡುವಂತೆ ರೈತರ ಆಗ್ರಹ

ಸಿ ಜಿ ವಿಜಯಕರ ಮಾತನಾಡಿ, “ಶೋಷಿತ ವರ್ಗದ ಜನರಿಗೆ ಸಮಾನತೆಯಲ್ಲಿ ಅನ್ಯಾಯವಾಗುತ್ತಿದೆ. ಸರಿಸಮಾನತೆ ಈ ಜನಾಂಗದವರಿಗೂ ಸಿಗಬೇಕು. ಹಿಂದುಳಿದ ವರ್ಗದವರಿಗೆ ನ್ಯಾಯ ಸಿಗಬೇಕು. ಒಳಮೀಸಲಾತಿ ಜಾರಿಯಾದರೆ ಇದೆಲ್ಲವೂ ದೊರಕುವ ಸಾಧ್ಯತೆಯಿದೆ” ಎಂದು ಸರ್ಕಾರಕ್ಕೆ ಒತ್ತಾಯಸಿದ್ದು, ಒಳಮೀಸಲಾತಿಯ ಮಹತ್ವದ ಬಗ್ಗೆ ತಿಳಿಸಿದರು.

ಮುಖಂಡರುಗಳಾದ ಹರೀಶ್ ನಾಟೀಕಾರ, ತಂಗಡಿಯವರಾದ ಶಾಂತಪ್ಪ ಪೂಜಾರಿ, ಡಿ ಬಿ‌ ಮುದೂರ, ಸಿ ಜಿ ವಿಜಯಕರ್, ಬಾಲಚಂದ್ರ ಹುಲ್ಲೂರ, ಪರಶುರಾಮ ಕೂಚಬಾಳ, ಹುಲಗಪ್ಪ ನಾಗರಬೆಟ್ಟ, ಬಸವರಾಜ ನಾಗರಬೆಟ್ಟ, ಭೀಮಣ್ಣ ಲೋಟಗೇರಿ, ರವಿ ಬಸರಕೋಡ, ರವಿ ಗರಸಂಗಿ, ಬೈಲಪ್ಪ ಗರಸಂಗಿ, ರಾಘು ನಾಲತವಾಡ, ಶಿವು ನಾಲತವಾಡ, ನಾಗಪ್ಪ ಲೋಟಗೇರಿ, ಶೇಕು ಮಾದರ, ಪುರಸಭೆ ಸದಸ್ಯ ಶಿವು ಶಿವಪುರ, ಪ್ರಶಾಂತ ಕಾಳೆ, ಪ್ರಕಾಶ ಸರೂರ, ದೇವರಾಜ ಹಂಗರಗಿ, ಕಾಶೀನಾಥ್ ದೊಡ್ಡಮನಿ ಪೂಜಾರಿ ಸೇರಿದಂತೆ ಇತರ ದಲಿತ ಮುಖಂಡರು ಇದ್ದರು.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಸಿಂಧನೂರು | ರೀಲ್ಸ್ ಮಾಡಲು ಹೋದ ಯುವಕ ನೀರು ಪಾಲು

ರೀಲ್ಸ್ ಮಾಡುವ ಉದ್ದೇಶದಿಂದ ಸ್ನೇಹಿತರಿಗೆ ವಿಡಿಯೋ ಮಾಡಲು ಹೇಳಿ ಈಜಲು ನದಿಗೆ...

ಗದಗ | ಆದ್ಯ ವಚನಕಾರ ದೇವರ ದಾಸಿಮಯ್ಯ: ರಾಘವೇಂದ್ರ ಕೊಪ್ಪಳ

"ಆದ್ಯ ವಚನಕಾರ ನೇಕಾರ ಸಂತ ದೇವರ ದಾಸಿಮಯ್ಯನವರು 10 ನೇ ಶತಮಾನದಲ್ಲಿ...

ಮಾರ್ಚ್ 25ರಂದು ಬೆಂಗಳೂರಿನ ಫ್ರೀಡಂ ಪಾರ್ಕ್ನಲ್ಲಿ ಬಲಗೈ ಜಾತಿಗಳ ಬೃಹತ್ ಹೋರಾಟ

ಬಾಗೇಪಲ್ಲಿ:-ಕರ್ನಾಟಕ ರಾಜ್ಯ ಬಲಗೈ ಜಾತಿಗಳ ಮಹಾ ಒಕ್ಕೂಟದ ವತಿಯಿಂದ ಒಳ ಮೀಸಲಾತಿ...

ಯುಪಿಎಸ್ಸಿ ರ‍್ಯಾಂಕ್‌ ವಿಜೇತ ವರುಣ್ ಗೌಡಗೆ ಸನ್ಮಾನ

ಕೋಲಾರ: ಯುಪಿಎಸ್ಸಿ ಪರೀಕ್ಷೆಯಲ್ಲಿ 462 ನೇ ರ‍್ಯಾಂಕ್‌ ಪಡದ ತಾಲೂಕಿನ ತ್ಯಾವನಹಳ್ಳಿ...