ವಿಜಯಪುರ | ತುರ್ತಾಗಿ ಒಳಮೀಸಲಾತಿ ನೀಡುವಂತೆ ದಲಿತ ಸಂಘಟನೆಗಳ ಆಗ್ರಹ

Date:

ನ್ಯಾ.ಸದಾಶಿವ ಆಯೋಗದ ವರದಿ ಅನುಸಾರ, ಸುಪ್ರಿಂ ಕೋರ್ಟ್‌ ತೀರ್ಮಾನದಂತೆ ರಾಜ್ಯ ಸರ್ಕಾರ ಒಳಮೀಸಲಾತಿ ನೀಡುವಂತೆ ಆಗ್ರಹಿಸಿ ದಲಿತ ಸಂಘಟನೆಗಳ ಮುಖಂಡರು ಹಾಗೂ ನೂರಾರು ಸದಸ್ಯರು ಪ್ರತಿಭಟನೆ ನಡೆಸಿದರು.

ವಿಜಯಪುರ ಜಿಲ್ಲೆಯ ಮುದ್ದೇಬಿಹಾಳ ತಾಲೂಕಿನ ತಹಶೀಲ್ದಾರ್ ಕಚೇರಿ ಮುಂದೆ ಸೋಮವಾರ ಪ್ರತಿಭಟನೆ ನಡೆಸಿದ ಸಂಘಟಕರು, ಕರ್ನಾಟಕ ಸಾಬೂನು ಮತ್ತು ಮಾರ್ಜಕ ನಿಗಮದ ಅಧ್ಯಕ್ಷ ಹಾಗೂ ಶಾಸಕ ಸಿ ಎಸ್ ನಾಡಗೌಡರ ನಿವಾಸಕ್ಕೆ ಮುತ್ತಿಗೆ ಹಾಕಲು ಪ್ರಯತ್ನಿಸಿದರು.

ಡಿವೈಎಸ್‌ಪಿ ಬಲ್ಲಪ್ಪ ನಂದಗಾಂದೆ, ಸಿಪಿಐ ಮಲ್ಲಿಕಾರ್ಜನ ತುಳಸಿಗೇರಿ, ಪಿಎಸ್‌ಐ ಸಂಜಯ್ ತಿಪ್ಪಾರೆಡ್ಡಿ ಸೇರಿದಂತೆ ನೂರಾರು ಪೋಲಿಸರು ಪ್ರತಿಭಟಟನಾಕಾರರನ್ನು ತಡೆದಿದ್ದು, ತಹ‌ಶೀಲ್ದಾರ್‌ ಮೂಲಕ ಸರ್ಕಾರಕ್ಕೆ ಮನವಿ ಸಲ್ಲಿಸುವಂತೆ ಕೋರಿದರು.‌

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ದಲಿತ ಚಳುವಳಿಯ ಮುಖಂಡ ಡಿ ಬಿ ಮೂದೂರ ಮಾತನಾಡಿ, “ದೇಶದಲ್ಲಿ ತೀರಾ ಹಿಂದುಳಿದ ಕೊಳಚೆ ಪ್ರದೇಶದಲ್ಲಿ ಜೀವನ ನಡೆಸುತ್ತಿರುವ ಮಾದಿಗ ಸಮುದಾಯ ಬಾಂಧವರ ಮಕ್ಕಳು ಶಿಕ್ಷಣವಂತರಾಗಿ ಮುನ್ನಲೆಗೆ ಬರಬೇಕೆಂದರೆ ದಲಿತರ ಒಳಮಿಸಲಾತಿ ಅವಶ್ಯಕವಾಗಿದೆ. ನಿಜವಾದ ಅಸ್ಪೃಶ್ಯರಾದ ದಲಿತ ಸಮುದಾಯದವರು ಕಳೆದ 45 ರಿಂದ 50 ವರ್ಷ ಒಳ ಮೀಸಲಾತಿಗೆ ಹೋರಾಟ ನಡೆಸಿದರೂ ಕೂಡಾ ಸರ್ಕಾರಗಳು ನಮ್ಮ ಮನವಿಗೆ ಸ್ಪಂದಿಸುವ ಕಾರ್ಯ ಮಾಡುತ್ತಿಲ್ಲ. ಈ ಹಿನ್ನೆಲೆಯಲ್ಲಿ ರಾಜ್ಯದ ಆಯಾ ಮತಕ್ಷೇತ್ರದ ಶಾಸಕರ ಮನೆಗೆ ಮುತ್ತಿಗೆ ಹಾಕಿ ನಮ್ಮ ಹಕ್ಕಿಗಾಗಿ ಪ್ರತಿಭಟಿಸುತ್ತಿದ್ದೇವೆ” ಎಂದು ಹೇಳಿದರು.

ಹರೀಶ್ ನಾಟಿಕರ್ ಮಾತನಾಡಿ, “ನಾವು ಪ್ರತಿಭಟನೆ ಬಗ್ಗೆ 15 ದಿನಗಳ ಹಿಂದೆಯೇ ಸುದ್ದಿಗೋಷ್ಠಿ ನಡೆಸಿ ಮಾಧ್ಯಮಗಳ ಮೂಲಕ ನಮ್ಮ ಹೋರಾಟದ ಬಗ್ಗೆ ಶಾಸಕರ ಗಮನಕ್ಕೆ ತಂದಿದ್ದೆವು.‌ ಆದರೆ ಶಾಸಕ ನಾಡಗೌಡರು ಹೋರಾಟಗಾರರನ್ನು ಒಂದು ದಿನವೂ ಕರೆಯಲಿಲ್ಲ. ನಮ್ಮ ಹಕ್ಕಿನ ಕುರಿತು ಸ್ಪಂದನೆ ನೀಡಲಿಲ್ಲ. ನಮ್ಮ ಹಕ್ಕಿಗಾಗಿ ಮೀಸಲಾತಿ ಮಡೆದುಕೊಳ್ಳಲು ನಾವು ಸಿದ್ಧರಿದ್ದೇವೆ. ಹೋರಾಟ ಮೊಟಕುಗೊಳಿಸುವ ಪ್ರಶ್ನೆಯೇ ಇಲ್ಲ ಕಾರಣ ಶಾಸಕ ಸಿ ಎಸ್ ನಾಡಗೌಡ ಅವರು ಬೆಳಗಾವಿಯಲ್ಲಿ ನಡೆಯಲಿರುವ ಅಧಿವೇಶದಲ್ಲಿ ಒಳಮೀಸಲಾತಿ ಬಗ್ಗೆ ಧ್ವನಿ ಎತ್ತುವ ಮೂಲಕ ಮುಖ್ಯಮಂತ್ರಿಗಳ ಗಮನ ಸೆಳೆದು ಒಳಮೀಸಲಾತಿಯ ಹಕ್ಕು ನಮಗೆ ದೊರೆಯುವಂತೆ ಮಾಡಬೇಕು. ಇಲ್ಲವಾದದೆ ನಿಮ್ಮ ವಿರುದ್ಧ ನಿರಂತರವಾಗಿ ಹೋರಾಟ ನಡೆಸಬೇಕಾಗುತ್ತದೆ” ಎಂದು ಎಚ್ಚರಿಕೆ ನೀಡಿದರು.

ಈ ಸುದ್ದಿ ಓದಿದ್ದೀರಾ? ರಾಯಚೂರು | ಪರಿಶಿಷ್ಟ ಜಾತಿ ಸಮುದಾಯದ ಪ್ರತಿನಿಧಿಗಳ ನೇಮಕಕ್ಕೆ ಒತ್ತಾಯಿಸಿ ಪ್ರತಿಭಟನೆ

ಈ ವೇಳೆ ಶೇಖು ಆಲೂರ, ಸಿ ಜಿ ವಿಜಯಕರೆ, ನ್ಯಾಯವಾದಿ ಕೆ. ಬಿ ದೊಡಮನಿ, ಪ್ರಕಾಶ ಸರೂರ, ಪ್ರಶಾಂತ ಕಾಳೆ, ಆನಂದ ಗಂಗೂರ, ಆನಂದ ದೇವೂರ, ಸುರೇಶ ಮಾದರ, ತಪ್ಪಣ್ಣ ದೊಡಮನಿ, ಆನಂದ ಮದೂರು, ಬಾಲು ಹುಲ್ಲೂರ, ಪರುಶುರಾಮ ಬಸರಕೋಡ, ದೇವರಾಜ ಹಂಗರಗಿ ಸೇರಿದಂತೆ ಹಲವರು ಇದ್ದರು.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಸಿಂಧನೂರು | ರೀಲ್ಸ್ ಮಾಡಲು ಹೋದ ಯುವಕ ನೀರು ಪಾಲು

ರೀಲ್ಸ್ ಮಾಡುವ ಉದ್ದೇಶದಿಂದ ಸ್ನೇಹಿತರಿಗೆ ವಿಡಿಯೋ ಮಾಡಲು ಹೇಳಿ ಈಜಲು ನದಿಗೆ...

ಗದಗ | ಆದ್ಯ ವಚನಕಾರ ದೇವರ ದಾಸಿಮಯ್ಯ: ರಾಘವೇಂದ್ರ ಕೊಪ್ಪಳ

"ಆದ್ಯ ವಚನಕಾರ ನೇಕಾರ ಸಂತ ದೇವರ ದಾಸಿಮಯ್ಯನವರು 10 ನೇ ಶತಮಾನದಲ್ಲಿ...

ಮಾರ್ಚ್ 25ರಂದು ಬೆಂಗಳೂರಿನ ಫ್ರೀಡಂ ಪಾರ್ಕ್ನಲ್ಲಿ ಬಲಗೈ ಜಾತಿಗಳ ಬೃಹತ್ ಹೋರಾಟ

ಬಾಗೇಪಲ್ಲಿ:-ಕರ್ನಾಟಕ ರಾಜ್ಯ ಬಲಗೈ ಜಾತಿಗಳ ಮಹಾ ಒಕ್ಕೂಟದ ವತಿಯಿಂದ ಒಳ ಮೀಸಲಾತಿ...

ಯುಪಿಎಸ್ಸಿ ರ‍್ಯಾಂಕ್‌ ವಿಜೇತ ವರುಣ್ ಗೌಡಗೆ ಸನ್ಮಾನ

ಕೋಲಾರ: ಯುಪಿಎಸ್ಸಿ ಪರೀಕ್ಷೆಯಲ್ಲಿ 462 ನೇ ರ‍್ಯಾಂಕ್‌ ಪಡದ ತಾಲೂಕಿನ ತ್ಯಾವನಹಳ್ಳಿ...