ವಿಜಯಪುರ | ಅಮಿತ್ ಶಾ ವಿರುದ್ಧ ಸೂಕ್ತ ಕಾನೂನು ಕ್ರಮಕ್ಕೆ ಆಗ್ರಹ

Date:


ಸಂಸತ್ತಿನ ಕಲಾಪದಲ್ಲಿ ಡಾ ಬಿ ಆರ್‌ ಅಂಬೇಡ್ಕರ್ ಅವರನ್ನು ಅವಮಾನ ಮಾಡಿರುವ ಕೇಂದ್ರ ಗೃಹಸಚಿವ ಅಮಿತ್‌ ಶಾ ವಿರುದ್ಧ ಸೂಕ್ತ ಕ್ರಮ ಕೈಗೊಳ್ಳಬೇಕೆಂದು ದಲಿತ ಸೇನೆ ವಿಜಯಪುರ ಜಿಲ್ಲಾ ಮುಖಂಡ ಖಾಜು ಹೊಸಮನಿ ಆಗ್ರಹಿಸಿದರು.

ವಿಜಯಪುರ ಜಿಲ್ಲೆಯ ಸಿಂದಗಿ ಪಟ್ಟಣದ ತಹಶೀಲ್ದಾರ್ ಕಚೇರಿ ಎದುರು ಪ್ರತಿಭಟನೆ ನಡೆಸಿದ ಬಳಿಕ ತಹಶೀಲ್ದಾರ್‌ ಅವರಿಗೆ ಮನವಿ ಸಲ್ಲಿಸಿ ಮಾತನಾಡಿದರು.

“ಡಾ ಬಿ ಆರ್‌ ಅಂಬೇಡ್ಕರ್‌ ಅವರು ಭಾರತದ ಸಂವಿಧಾನದ ಶಿಲ್ಪಿಯಾಗಿದ್ದು, ಇಡೀ ದೇಶದ ಪ್ರಜಾಪ್ರಭುತ್ವಕ್ಕೆ ಬುನಾದಿಯಾಗಿದ್ದಾರೆ. ಅವರು ಈ ದೇಶದಲ್ಲಿ ಸಮಾನತೆ, ಭ್ರಾತೃತ್ವ ಮತ್ತು ನ್ಯಾಯದ ತತ್ವಗಳನ್ನು ಸ್ಥಾಪಿಸಲು ತಮ್ಮ ಜೀವನವನ್ನೇ ಅರ್ಪಿಸಿದರು. ದಲಿತರು, ದಮನಿತರು, ಮಹಿಳೆಯರು ಮತ್ತು ಎಲ್ಲ ಶೋಷಿತ ಸಮುದಾಯಗಳಿಗೆ ನ್ಯಾಯ ಒದಗಿಸುವಲ್ಲಿ ಅವರ ಕೊಡುಗೆ ಅಮೂಲ್ಯವಾಗಿದೆ. ಅಂಬೇಡ್ಕರ್ ಅವರು ನಮಗೆ ಕೇವಲ ನಾಯಕರಷ್ಟೇ ಅಲ್ಲ, ಬಡವರು ಮತ್ತು ಶೋಷಿತರಿಗೆ ದೇವರಂತಿದ್ದಾರೆ” ಎಂದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ಈ ಸುದ್ದಿ ಓದಿದ್ದೀರಾ? ಶ್ರೀರಂಗಪಟ್ಟಣ | ಅಮಿತ್ ಶಾ ರಾಜೀನಾಮೆಗೆ ಒತ್ತಾಯಿಸಿ ಪ್ರಜ್ಞಾವಂತರ ಪ್ರತಿಭಟನೆ

“ಅಂಬೇಡ್ಕರ್ ಕುರಿತು ಅಮಿತ್ ಶಾ ಅವರ ಹಗುರ ಮತ್ತು ಅವಹೇಳನಕಾರಿ ಹೇಳಿಕೆಗಳು ಮಾತ್ರವಲ್ಲ, ಅವು ನಮ್ಮ ಸಂವಿಧಾನದ ಆಧ್ಯಾತ್ಮಿಕತೆಯನ್ನು ನಾಶಮಾಡಲು ಪ್ರಯತ್ನಿಸುತ್ತಿವೆ. ಇದರೊಂದಿಗೆ, ದಲಿತರು, ಶೋಷಿತರು ಮತ್ತು ಭಾರತದ ಎಲ್ಲ ನ್ಯಾಯಪ್ರಿಯ ಪ್ರಜೆಗಳ ಭಾವನೆಗಳಿಗೆ ಧಕ್ಕೆ ಉಂಟಾಗಿದೆ. ಇದು ಸಂಸತ್ತಿನ ಸ್ಫೂರ್ತಿ ಮತ್ತು ಪ್ರಜಾಪ್ರಭುತ್ವದ ತತ್ವಗಳಿಗೆ ನಿಲ್ಲದ ಶಕ್ತಿಯ ಹಾನಿಯಾಗಿದ್ದು, ದೇಶದ ಮುಖ್ಯ ನಾಯಕರು ಇಂತಹ ಕೃತ್ಯಗಳನ್ನು ಮಾಡಲು ಸಾದರ(ಅಸಡ್ಡೆ)ವಾಗುತ್ತಿರುವುದು ತೀವ್ರ ಖಂಡನೀಯ” ಎಂದು ಕಿಡಿಕಾರಿದರು.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಸಿಂಧನೂರು | ರೀಲ್ಸ್ ಮಾಡಲು ಹೋದ ಯುವಕ ನೀರು ಪಾಲು

ರೀಲ್ಸ್ ಮಾಡುವ ಉದ್ದೇಶದಿಂದ ಸ್ನೇಹಿತರಿಗೆ ವಿಡಿಯೋ ಮಾಡಲು ಹೇಳಿ ಈಜಲು ನದಿಗೆ...

ಗದಗ | ಆದ್ಯ ವಚನಕಾರ ದೇವರ ದಾಸಿಮಯ್ಯ: ರಾಘವೇಂದ್ರ ಕೊಪ್ಪಳ

"ಆದ್ಯ ವಚನಕಾರ ನೇಕಾರ ಸಂತ ದೇವರ ದಾಸಿಮಯ್ಯನವರು 10 ನೇ ಶತಮಾನದಲ್ಲಿ...

ಮಾರ್ಚ್ 25ರಂದು ಬೆಂಗಳೂರಿನ ಫ್ರೀಡಂ ಪಾರ್ಕ್ನಲ್ಲಿ ಬಲಗೈ ಜಾತಿಗಳ ಬೃಹತ್ ಹೋರಾಟ

ಬಾಗೇಪಲ್ಲಿ:-ಕರ್ನಾಟಕ ರಾಜ್ಯ ಬಲಗೈ ಜಾತಿಗಳ ಮಹಾ ಒಕ್ಕೂಟದ ವತಿಯಿಂದ ಒಳ ಮೀಸಲಾತಿ...

ಯುಪಿಎಸ್ಸಿ ರ‍್ಯಾಂಕ್‌ ವಿಜೇತ ವರುಣ್ ಗೌಡಗೆ ಸನ್ಮಾನ

ಕೋಲಾರ: ಯುಪಿಎಸ್ಸಿ ಪರೀಕ್ಷೆಯಲ್ಲಿ 462 ನೇ ರ‍್ಯಾಂಕ್‌ ಪಡದ ತಾಲೂಕಿನ ತ್ಯಾವನಹಳ್ಳಿ...