ವಿಜಯಪುರ | ಕೇಂದ್ರ-ರಾಜ್ಯ ಸರ್ಕಾರದ ವೈಫಲ್ಯ ಖಂಡಿಸಿ ದಸಂಸದಿಂದ ಪಂಜಿನ ಮೆರವಣಿಗೆ

Date:

ರಾಜ್ಯ ಮತ್ತು ಕೇಂದ್ರ ಸರಕಾರದ ವೈಫಲ್ಯವನ್ನು ಖಂಡಿಸಿ ಕರ್ನಾಟಕ ದಲಿತ ಸಂಘರ್ಷ ಸಮಿತಿ ವಿಜಯಪುರ ಜಿಲ್ಲಾ ಸಮಿತಿಯ ವತಿಯಿಂದ ಜಿಲ್ಲಾ ಕೇಂದ್ರದಲ್ಲಿ ಬೃಹತ್ ಪಂಜಿನ ಮರವಣಿಗೆಯನ್ನು ನಡೆಸಲಾಯಿತು.

ಡಾ. ಬಿ. ಆರ್. ಅಂಬೇಡ್ಕರ್  ಸರ್ಕಲ್‌ನಿಂದ ಗಾಂಧಿ ವೃತ್ತದ ಮಾರ್ಗವಾಗಿ ತೆರಳಿದ ದಸಂಸ ಮುಖಂಡರು, ಜಿಲ್ಲಾಧಿಕಾರಿಗಳಿಗೆ ಮನವಿ ಸಲ್ಲಿಸಿದರು.

ಈ ಸಂದರ್ಭದಲ್ಲಿ ಮಾತನಾಡಿದ ರಾಜ್ಯ ಸಂಚಾಲಕರಾದ ಹೆಣ್ಣೂರು ಶ್ರೀನಿವಾಸ್, “ಡಾ. ಬಿ ಆರ್ ಅಂಬೇಡ್ಕರ್ ಅವರ ಬಯಕೆಯಂತೆ ದುರ್ಬಲರನ್ನು ರಕ್ಷಿಸಲು ಅವರಿಗಾಗಿ ವಿಶೇಷ ಯೋಜನೆಗಳನ್ನು ಜಾರಿಗೊಳಿಸಲಾಗಿತ್ತು. ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡಗಳಿಗೆ ಸೇರಿದ ಜನರಿಗೆ ಮತ್ತು ಇತರ ಜನರ ನಡುವಿನ ಅಂತರವನ್ನು ಕಡಿಮೆ ಮಾಡಲು ನಿರ್ದಿಷ್ಟ ಕ್ರಮಗಳನ್ನು ಕೈಗೊಳ್ಳಿ ಎಂದು ನಮ್ಮ ಸಂವಿಧಾನದ ಆಶಯದಂತೆ ಆಡಳಿತ ನಡೆಸುವ ಸರ್ಕಾರಗಳಿಗೆ ಕಿವಿ ಮಾತು ಹೇಳಿದ್ದರು. ಆದರೆ, ಸರ್ಕಾರಗಳು ಯಾವುದನ್ನು ಗಣನೆಗೆ ತೆಗೆದುಕೊಳ್ಳುತ್ತಿಲ್ಲ” ಎಂದು ದೂರಿದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ದಸಂಸ 1 1

“ವಿಜಯಪುರ ಜಿಲ್ಲೆಯಲ್ಲೂ ದಲಿತರ ಮೇಲಲೆ ಅನೇಕ ದೌರ್ಜನ್ಯ ಮತ್ತು ಅನ್ಯಾಯಗಳು ನಡೆಯುತ್ತಿದೆ. ಈ ಬಗ್ಗೆ ಜಿಲ್ಲಾಧಿಕಾರಿಗಳ ಗಮನಕ್ಕೆ ಪದೇ ಪದೇ ತರಲಾಗಿದ್ದರೂ, ಯಾವುದೇ ಸೂಕ್ತ ಕ್ರಮಗಳಾಗಿಲ್ಲ” ಎಂದರು.

ಜಿಲ್ಲಾ ಸಂಚಾಲಕ ಅಶೋಕ್ ಛಲವಾದಿ ಮಾತನಾಡಿ, ಕೊಲ್ಹಾರ ತಾಲೂಕಿನ ನಾಗರದಿನ್ನಿ ಗ್ರಾಮದ ರಿ.ಸ.ನಂ.56 ಮತ್ತು 75,77ರಲ್ಲಿ ಹೆಚ್ಚುವರಿ ಜಮೀನನ್ನು 19 ದಲಿತ ಕುಟುಂಗಳಿಗೆ 74 ಏಕರೆ 17 ಗುಂಟೆ ಜಮೀನನ್ನು ಭೂನ್ಯಾಯ ಮಂಡಳಿ 1981ರಲ್ಲಿ ನೀಡಿತ್ತು. ಕಳೆದ 43 ವರ್ಷಗಳಿಂದ ಪರಿಶಿಷ್ಟ ಜಾತಿಯ ಜನರು ಈ ಜಮೀನಿನಲ್ಲಿ ಸಾಗುವಳಿ ಮಾಡಿಕೊಂಡು ಬದುಕನ್ನು ಕಟ್ಟಿಕೊಂಡಿದ್ದಾರೆ. ಆದರೆ ಆ 19 ಕುಟುಂಬಗಳಿಗೆ ಪರ್ಯಾಯ ಭೂಮಿ ವ್ಯವಸ್ಥೆ ಬಗ್ಗೆ ಮತ್ತು ಕುಟುಂಬಗಳು ಬೀದಿಗೆ ಬೀಳುವುದನ್ನು ತಪ್ಪಿಸಲು ಸರ್ಕಾರ ತೀವ್ರಗತಿಯಲ್ಲಿ ನ್ಯಾಯ ಒದಗಿಸುವಲ್ಲಿ ಮುರ್ತುವರ್ಜಿ ವಹಿಸಬೇಕು” ಎಂದರು.

ಸಂಚಾಲಕರಾದ ಪ್ರಕಾಶ್ ಗುಡಿಮನಿ ಮಾತನಾಡಿ, ಪರಿಶಿಷ್ಟ ಜಾತಿ ಮತ್ತು ಪಂಗಡದ ಕಲ್ಯಾಣಕ್ಕೆ ಮೀಸಲಿಟ್ಟ ಅನುದಾನವನ್ನು ಗ್ಯಾರಂಟಿ ಯೋಜನೆಗೆ ರಾಜ್ಯ ಸರ್ಕಾರ ಬಳಸುತ್ತಿದೆ. ಪರಿಶಿಷ್ಟರಿಗೆ ಮೀಸಲಿಟ್ಟ ಎಸ್‌ಸಿಪಿ-ಟಿಎಸ್‌ಪಿ ಹಣದಲ್ಲಿ 2023-24 ಸಾಲಿನಲ್ಲಿ 11,000 ಕೋಟಿ, 2024-25ನೇ ಸಾಲಿನಲ್ಲಿ 14,000 ಕೋಟಿ ಬಳಸಿದೆ. ಗ್ಯಾರಂಟಿ ಯೋಜನೆಗಳನ್ನು ನಾವೇ ಮಾಡಿದ್ದು ಎಂದು ಹೇಳಿಕೊಳುತ್ತಿರುವ ಸರ್ಕಾರ ಪರಿಶಿಷ್ಟರಿಗೆ ದ್ರೋಹ ಬಗೆಯುತ್ತಿದೆ. ದಲಿತರ ಬಗ್ಗೆ ಸರ್ಕಾರಕ್ಕೆ ನಿಜವಾದ ಕಾಳಜಿ ಇದ್ದರೆ ಗ್ಯಾರಂಟಿ ಯೋಜನೆಗಳಿಗೆ ಬಳಸದೇ, ಈ ಹಣವನ್ನು ಎಸ್.ಸಿ / ಎಸ್.ಟಿ ಸಮುದಾಯಗಳ ಅಭಿವೃದ್ಧಿಗೆ ಬಳಸಬೇಕು” ಎಂದು ಆಗ್ರಹಿಸಿದರು.

ಇದನ್ನು ಓದಿದ್ದೀರಾ? ವಿಜಯಪುರ | ಅರ್ಧ ಶತಮಾನದ ಉರ್ದು ಶಾಲೆಗೆ ಬೇಕಿದೆ ಮೂಲ ಸೌಕರ್ಯ

ಈ ಸಂದರ್ಭದಲ್ಲಿ ಸಂಘಟನೆಯ ಮುಖಂಡರುಗಳಾದ ರಮೇಶ ಆಸಂಗಿ, ವಿನಾಯಕ ಗುಣಸಾಗರ, ರೇಣುಕಾ ಮಾದರ, ಪರುಶುರಾಮ ಡಿಂಡಿವಾರ ಶರಣು ಶಿಂಧೆ, ಲಕ್ಕಪ್ಪ ಬಡಿಗೇರ್, ಸುರೇಶ ನಡಗಡ್ಡೆ, ಅನಿಲ ಕೊಡತಿ, ಬಿ. ಎಸ್. ತಳವಾರ, ರವಿ ಮ್ಯಾಗೇರಿ, ಶಿವಾನಂದ ಮೂರುಮಾನ, ಮಂಜುನಾಥ ಎಂಟಮಾನ, ರಾಜಕುಮಾರ್ ಸಿಂಧನೂರ, ರವಿಚಂದ್ರ ಛಲವಾದಿ, ಲಕ್ಷ್ಮಣ್ ಹಾಲಿಹಾಳ, ಚಂದ್ರಶೇಖರ ಕೆಳಗಿನಮನಿ, ಸಂತೋಷ ಠಕ್ಕೆ, ಸಿದ್ದು ಬಾರಿಗಿಡದ, ಶುಭದ್ರ ಮೇಲಿನಮನಿ, ಚಂದ್ರಕಲಾ ಮಸಳಿಕೇರಿ, ಮುತ್ತು ಬಿದರಿ ಇತರರು ಉಪಸ್ಥಿತರಿದ್ದರು.

WhatsApp Image 2025 11 17 at 3.21.17 PM
ಈ ದಿನ ಡೆಸ್ಕ್
+ posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಸಿಂಧನೂರು | ರೀಲ್ಸ್ ಮಾಡಲು ಹೋದ ಯುವಕ ನೀರು ಪಾಲು

ರೀಲ್ಸ್ ಮಾಡುವ ಉದ್ದೇಶದಿಂದ ಸ್ನೇಹಿತರಿಗೆ ವಿಡಿಯೋ ಮಾಡಲು ಹೇಳಿ ಈಜಲು ನದಿಗೆ...

ಗದಗ | ಆದ್ಯ ವಚನಕಾರ ದೇವರ ದಾಸಿಮಯ್ಯ: ರಾಘವೇಂದ್ರ ಕೊಪ್ಪಳ

"ಆದ್ಯ ವಚನಕಾರ ನೇಕಾರ ಸಂತ ದೇವರ ದಾಸಿಮಯ್ಯನವರು 10 ನೇ ಶತಮಾನದಲ್ಲಿ...

ಮಾರ್ಚ್ 25ರಂದು ಬೆಂಗಳೂರಿನ ಫ್ರೀಡಂ ಪಾರ್ಕ್ನಲ್ಲಿ ಬಲಗೈ ಜಾತಿಗಳ ಬೃಹತ್ ಹೋರಾಟ

ಬಾಗೇಪಲ್ಲಿ:-ಕರ್ನಾಟಕ ರಾಜ್ಯ ಬಲಗೈ ಜಾತಿಗಳ ಮಹಾ ಒಕ್ಕೂಟದ ವತಿಯಿಂದ ಒಳ ಮೀಸಲಾತಿ...

ಯುಪಿಎಸ್ಸಿ ರ‍್ಯಾಂಕ್‌ ವಿಜೇತ ವರುಣ್ ಗೌಡಗೆ ಸನ್ಮಾನ

ಕೋಲಾರ: ಯುಪಿಎಸ್ಸಿ ಪರೀಕ್ಷೆಯಲ್ಲಿ 462 ನೇ ರ‍್ಯಾಂಕ್‌ ಪಡದ ತಾಲೂಕಿನ ತ್ಯಾವನಹಳ್ಳಿ...