ವಿಜಯಪುರ | ʼದಾಸಿಮಯ್ಯರ ವಚನಗಳು ವ್ಯಕ್ತಿಯ ಆತ್ಮಶುದ್ಧಿಗೊಳಿಸುತ್ತವೆʼ

Date:

ಕನ್ನಡದ ಮೊದಲ ವಚನಕಾರ ದೇವರ ದಾಸಿಮಯ್ಯರ ವಚನಗಳು ವ್ಯಕ್ತಿಯ ಆತ್ಮ ಶುದ್ದಿಗೊಳಿಸುತ್ತವೆ ಎಂದು ವಿಜಯಪುರದ ಅಕ್ಕಮಹಾದೇವಿ ಮಹಿಳಾ ವಿವಿಯ ಕನ್ನಡ ವಿಭಾಗದ ಮುಖ್ಯಸ್ಥ ಪ್ರೊ. ಎಂ ನಾಗರಾಜ ಹೇಳಿದರು.

ವಿವಿಯಲ್ಲಿ ಆಯೋಜಿಸಿದ್ದ ದಾಸಿಮಯ್ಯ ಜಯಂತಿ ಕಾರ್ಯಕ್ರಮದಲ್ಲಿ ಮಾತನಾಡಿದ ಅವರು, “ದೇವರ ದಾಸಿಮಯ್ಯ ಅವರ ವಚನಗಳು ಸಮಾಜದಲ್ಲಿ ಮಹತ್ವದ ಪರಿವರ್ತನೆಗಳನ್ನು ಉಂಟುಮಾಡುವ ಶಕ್ತಿ ಹೊಂದಿವೆ. ಅವರ ವಚನಗಳಲ್ಲಿ ಶ್ರಮಪೂಜೆ, ಭಕ್ತಿ, ಮಾನವೀಯತೆ ಮತ್ತು ಸಮಾನತೆಯ ಆದರ್ಶಗಳು ಸ್ಪಷ್ಟವಾಗಿ ಪ್ರತಿಫಲಿಸುತ್ತವೆ. ಅವರ ವಚನಗಳು ಕೇವಲ ಭಕ್ತಿಯ ಸಾರವಲ್ಲ, ಅದು ಬದುಕಿನ ನೈತಿಕ ಮೌಲ್ಯಗಳಿಗೂ ದಾರಿದೀಪವಾಗಿದೆ. ಹೊಸ ತಲೆಮಾರಿಗೆ ದಾಸಿಮಯ್ಯನ ವಚನಗಳು ಸೌಹಾರ್ದತೆ, ಸತ್ಕಾರ್ಯ ಮತ್ತು ಮಾನವೀಯತೆಯ ಆಧಾರಶಿಲೆಯಾಗಿ ಕಾರ್ಯನಿರ್ವಹಿಸುತ್ತವೆ” ಎಂದರು.

ವಿವಿಯ ಯುಜಿ ಸ್ನಾತಕ ವಿಭಾಗದ ವಿಶೇಷಾಧಿಕಾರಿ ಪ್ರೊ. ಸಕಾಲ ಹೂವಣ್ಣ ಮಾತನಾಡಿ, “ದೇವರ ದಾಸಿಮಯ್ಯ ಅವರ ವಚನಗಳು ಇಂದಿಗೂ ಸಮಾಜದ ಸುಧಾರಣೆಗೆ ಪ್ರೇರಣೆಯಾಗಿದ್ದು, ಅವು ಬದುಕಿಗೆ ಮಾರ್ಗದರ್ಶಕ ಬೆಳಕಾಗಿ ಕೆಲಸ ಮಾಡುತ್ತವೆ. ವಿದ್ಯಾರ್ಥಿನಿಯರು ಶರಣರ ವಚನಗಳನ್ನು ಜೀವನದಲ್ಲಿ ಅಳವಡಿಸಿಕೊಳ್ಳಬೇಕು. ಮಹಾನ್ ವ್ಯಕ್ತಿಗಳ ಜಯಂತಿಗಳನ್ನು ಆಚರಿಸುವ ಮೂಲಕ ಅವರ ಆದರ್ಶಗಳನ್ನು ಜ್ಞಾಪಿಸಿಕೊಳ್ಳಬೇಕು” ಎಂದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ಇದನ್ನೂ ಓದಿ: ವಿಜಯಪುರ | ʼಏತ ನೀರಾವರಿ ಪೂರ್ಣಗೊಳಿಸಿ ರೈತರ ಹಿತ ಕಾಪಾಡಿʼ

ಕಾರ್ಯಕ್ರಮದಲ್ಲಿ ವಿಭಾಗದ ಸಂಯೋಜಕಿ ಡಾ. ಜಿ ಸೌಭಾಗ್ಯ, ಡಾ. ಚೆಲುವರಾಜು, ಸಾಂಸ್ಕೃತಿಕ ಸಂಯೋಜಕ ಡಾ. ಮೆಹರಾಜ್ ಹಾಗೂ ಬೋಧಕ , ಬೋದಕೇತರ ಸಿಬ್ಬಂದಿಗಳು ಉಪಸ್ಥಿತರಿದ್ದರು.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಸಿಂಧನೂರು | ರೀಲ್ಸ್ ಮಾಡಲು ಹೋದ ಯುವಕ ನೀರು ಪಾಲು

ರೀಲ್ಸ್ ಮಾಡುವ ಉದ್ದೇಶದಿಂದ ಸ್ನೇಹಿತರಿಗೆ ವಿಡಿಯೋ ಮಾಡಲು ಹೇಳಿ ಈಜಲು ನದಿಗೆ...

ಗದಗ | ಆದ್ಯ ವಚನಕಾರ ದೇವರ ದಾಸಿಮಯ್ಯ: ರಾಘವೇಂದ್ರ ಕೊಪ್ಪಳ

"ಆದ್ಯ ವಚನಕಾರ ನೇಕಾರ ಸಂತ ದೇವರ ದಾಸಿಮಯ್ಯನವರು 10 ನೇ ಶತಮಾನದಲ್ಲಿ...

ಮಾರ್ಚ್ 25ರಂದು ಬೆಂಗಳೂರಿನ ಫ್ರೀಡಂ ಪಾರ್ಕ್ನಲ್ಲಿ ಬಲಗೈ ಜಾತಿಗಳ ಬೃಹತ್ ಹೋರಾಟ

ಬಾಗೇಪಲ್ಲಿ:-ಕರ್ನಾಟಕ ರಾಜ್ಯ ಬಲಗೈ ಜಾತಿಗಳ ಮಹಾ ಒಕ್ಕೂಟದ ವತಿಯಿಂದ ಒಳ ಮೀಸಲಾತಿ...

ಯುಪಿಎಸ್ಸಿ ರ‍್ಯಾಂಕ್‌ ವಿಜೇತ ವರುಣ್ ಗೌಡಗೆ ಸನ್ಮಾನ

ಕೋಲಾರ: ಯುಪಿಎಸ್ಸಿ ಪರೀಕ್ಷೆಯಲ್ಲಿ 462 ನೇ ರ‍್ಯಾಂಕ್‌ ಪಡದ ತಾಲೂಕಿನ ತ್ಯಾವನಹಳ್ಳಿ...