ವಿಜಯಪುರ | ಪಿಪಿಪಿ ಮಾದರಿ ಕೈಬಿಟ್ಟು ಸರ್ಕಾರಿ ವೈದ್ಯಕೀಯ ಕಾಲೇಜು ಸ್ಥಾಪಿಸಲು ದವಿಪ ಮನವಿ

Date:

ವೈದ್ಯಕೀಯ ಕಾಲೇಜಿನ ಉದ್ದೇಶಿತ ಪಿಪಿಪಿ ಮಾದರಿಯನ್ನು ಕೈಬಿಟ್ಟು ಸಂಪೂರ್ಣ ಸರ್ಕಾರಿ ವೈದ್ಯಕೀಯ ಕಾಲೇಜು ಸ್ಥಾಪಿಸಲು ದಲಿತ ವಿದ್ಯಾರ್ಥಿ ಪರಿಷತ್ ವಿಜಯಪುರ ಜಿಲ್ಲಾ ಘಟಕ ಆಗ್ರಹಿಸಿದೆ.

ಪ್ರತಿಭಟನಾಕಾರರು ನಗರದ ಶಿವಾಜಿ ಸರ್ಕಲ್ ವೃತ್ತದಿಂದ ಅಂಬೇಡ್ಕರ್ ವೃತ್ತದ ಮಾರ್ಗವಾಗಿ ಜಿಲ್ಲಾಧಿಕಾರಿ ಕಚೇರಿಗೆ ಪ್ರತಿಭಟನೆ ನಡೆಸಿ ಜಿಲ್ಲಾಧಿಕಾರಿ ಮುಖಾಂತರ ಮುಖ್ಯಮಂತ್ರಿಗಳಿಗೆ ಮನವಿ ಸಲ್ಲಿಸಿದರು.

ಈ ವೇಳೆ ದಲಿತ ವಿದ್ಯಾರ್ಥಿ ಪರಿಷತ್ತಿನ ಸಂಸ್ಥಾಪಕ ರಾಜ್ಯಾಧ್ಯಕ್ಷ ಶ್ರೀನಾಥ ಪೂಜಾರಿ ಮಾತನಾಡಿ, “ವಿಜಯಪುರ ಜಿಲ್ಲೆಯು ಕಿತ್ತು ತಿನ್ನುವ ಬಡತನ ಮತ್ತು ಸೌಲಭ್ಯಗಳ ಕೊರತೆಯಿಂದಾಗಿ ಈಗಾಗಲೇ ನಲುಗುತ್ತಿದೆ. ಇಲ್ಲಿನ ಮಕ್ಕಳು ಗುಣಮಟ್ಟದ ಶಿಕ್ಷಣದಿಂದ ವಂಚಿತರಾಗಿದ್ದಾರೆ. ಜೊತೆಗೆ ಇಲ್ಲಿನ ಜನರ ಆರೋಗ್ಯ ಪರಿಸ್ಥಿತಿ ಅಷ್ಟೊಂದು ಗುಣಮಟ್ಟದ್ದೂ ಆಗಿಲ್ಲ. ಇಂಥ ವಿಷಮ ಪರಿಸ್ಥಿತಿಯಿಂದಾಗಿ ಸರ್ಕಾರಿ ಆಸ್ಪತ್ರೆಯೂ ರೋಗಿಗಳ ಸಂಖ್ಯೆಯಿಂದ ತುಂಬಿ ತುಳುಕುತ್ತಿರುವ ಸಂದರ್ಭದಲ್ಲಿ ಸರ್ಕಾರವು ಪಿಪಿಪಿ ಮಾದರಿಯ ವೈದ್ಯ ಕಾಲೇಜನ್ನು ಸ್ಥಾಪನೆ ಮಾಡಲು ಹೊರಟಿರುವುದು ಗಾಯದ ಮೇಲೆ ಬರೆ ಎಳೆದಂತಾಗಿದೆ” ಎಂದು ಆರೋಪಿಸಿದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

“ಜಿಲ್ಲೆಗೆ ಒಂದು ಸರ್ಕಾರಿ ವೈದ್ಯಕೀಯ ಕಾಲೇಜು ಆರಂಭಿಸಬೇಕು ಎಂಬುದು ಜಿಲ್ಲೆಯ ಜನರ ಬಹುದಿನದ ಬೇಡಿಕೆಯಾಗಿದೆ. ಜಿಲ್ಲೆಯ ಸರ್ಕಾರಿ ವೈದ್ಯಕೀಯ ಕಾಲೇಜು ಆರಂಭಿಸಬೇಕು ಇಲ್ಲವಾದರೆ ಮುಂದಿನ ದಿನಗಳಲ್ಲಿ ಉಗ್ರ ಹೋರಾಟ ಕೈಗೊಳ್ಳಬೇಕಾಗುತ್ತದೆ” ಎಂದು ಎಚ್ಚರಿಸಿದ ಅವರು, ಜಿಲ್ಲೆಯ ಸಾಹಿತಿಗಳು ಲೇಖಕರು ಚಿಂತಕರು ಕೂಡ ಒತ್ತಾಯಿಸುತ್ತಿರುವುದು ಅದನ್ನೇ. ಸರ್ಕಾರಿ ಆಸ್ಪತ್ರೆಗೆ ಸೂಕ್ತವಾದ ಸುಮಾರು 149 ಎಕರೆಗೆ ಹೆಚ್ಚು ಸ್ಥಳಾವಕಾಶ ಸರ್ಕಾರ ಆಸ್ಪತ್ರೆ ಆವರಣದಲ್ಲಿದೆ. ತಾಯಿ ಮತ್ತು ಮಕ್ಕಳ ವಿಶೇಷ ಆಸ್ಪತ್ರೆಯೂ ಇದೆ. ಇದೆಲ್ಲವನ್ನು ಗಮನದಲ್ಲಿಟ್ಟುಕೊಂಡ (ಮೆಡಿಕಲ್ ಕೌನ್ಸಿಲ್ ಆಫ್ ಇಂಡಿಯಾ) ನಿಯೋಗ ವಿಜಯಪುರಕ್ಕೆ ಆಗಮಿಸಿ ಸ್ಥಳ ತೋರಿಸಿ ಜಿಲ್ಲೆಯ ಸರ್ಕಾರಿ ವೈದ್ಯಕೀಯ ಕಾಲೇಜು ಆರಂಭಿಸಲು ಶಿಫಾರಸ್ಸು ಮಾಡಿತ್ತು. ಜಿಲ್ಲೆಯ ಜನರ ಹೋರಾಟ ಮತ್ತು ಆಗ್ರಹದಿಂದಾಗಿ ಇದೀಗ ತಮ್ಮ ಸರ್ಕಾರವು ವಿಜಯಪುರ ಜಿಲ್ಲೆಗೆ ಸರ್ಕಾರಿ ವೈದ್ಯಕೀಯ ಕಾಲೇಜನ್ನು ಆರಂಭಿಸಲು ತಾತ್ವಿಕವಾಗಿ ಒಪ್ಪಿಕೊಂಡಿದೆ. ಆದರೆ ದುರಾದೃಷ್ಟ ಪಿಪಿಪಿ ಮಾದರಿಯ ಕಾಲೇಜು ನಮ್ಮ ಜಿಲ್ಲೆಗೆ ಬೇಡವೇ ಬೇಡ” ಎಂದು ಒತ್ತಾಯಿಸಿದರು.

ಇದನ್ನೂ ಓದಿ: ವಿಜಯಪುರ | ಅಕ್ಕಮಹಾದೇವಿ ಮಹಿಳಾ ವಿವಿ; ಪಿಜಿ ಕೋರ್ಸ್‌ಗಳ ಪ್ರವೇಶಾತಿ ದಿನಾಂಕ ವಿಸ್ತರಣೆ

ಈ ವೇಳೆ ವಿಜಯಪುರದ ಹಿರಿಯ ಪತ್ರಕರ್ತ ಅನಿಲ ಹೊಸಮನಿ, ಹಿರಿಯ ನ್ಯಾಯವಾದಿ ವಿದ್ಯಾವತಿ ಅಂಕಲಿಗಿ, ದಲಿತ ವಿದ್ಯಾರ್ಥಿ ಪರಿಷತ್ತಿನ ಜಿಲ್ಲಾ ಸಂಚಾಲಕ ಅಕ್ಷಯ ಕುಮಾರ ಅಜಿಮನಿ, ಉಪಾಧ್ಯಕ್ಷ ಮಾದೇಶ ಚಲವಾದಿ ಹಾಗೂ ಜಿಲ್ಲೆಯ ವಿವಿಧ ಕಾಲೇಜುಗಳಿಂದ ಸಾವಿರಾರು ವಿದ್ಯಾರ್ಥಿಗಳು ಪ್ರತಿಭಟನೆಯಲ್ಲಿ ಪಾಲ್ಗೊಂಡಿದ್ದರು.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಸಿಂಧನೂರು | ರೀಲ್ಸ್ ಮಾಡಲು ಹೋದ ಯುವಕ ನೀರು ಪಾಲು

ರೀಲ್ಸ್ ಮಾಡುವ ಉದ್ದೇಶದಿಂದ ಸ್ನೇಹಿತರಿಗೆ ವಿಡಿಯೋ ಮಾಡಲು ಹೇಳಿ ಈಜಲು ನದಿಗೆ...

ಗದಗ | ಆದ್ಯ ವಚನಕಾರ ದೇವರ ದಾಸಿಮಯ್ಯ: ರಾಘವೇಂದ್ರ ಕೊಪ್ಪಳ

"ಆದ್ಯ ವಚನಕಾರ ನೇಕಾರ ಸಂತ ದೇವರ ದಾಸಿಮಯ್ಯನವರು 10 ನೇ ಶತಮಾನದಲ್ಲಿ...

ಮಾರ್ಚ್ 25ರಂದು ಬೆಂಗಳೂರಿನ ಫ್ರೀಡಂ ಪಾರ್ಕ್ನಲ್ಲಿ ಬಲಗೈ ಜಾತಿಗಳ ಬೃಹತ್ ಹೋರಾಟ

ಬಾಗೇಪಲ್ಲಿ:-ಕರ್ನಾಟಕ ರಾಜ್ಯ ಬಲಗೈ ಜಾತಿಗಳ ಮಹಾ ಒಕ್ಕೂಟದ ವತಿಯಿಂದ ಒಳ ಮೀಸಲಾತಿ...

ಯುಪಿಎಸ್ಸಿ ರ‍್ಯಾಂಕ್‌ ವಿಜೇತ ವರುಣ್ ಗೌಡಗೆ ಸನ್ಮಾನ

ಕೋಲಾರ: ಯುಪಿಎಸ್ಸಿ ಪರೀಕ್ಷೆಯಲ್ಲಿ 462 ನೇ ರ‍್ಯಾಂಕ್‌ ಪಡದ ತಾಲೂಕಿನ ತ್ಯಾವನಹಳ್ಳಿ...