ವಿಜಯಪುರ | ಖಾಸಗಿ ಶಿಕ್ಷಣ ಸಂಸ್ಥೆಗಳ ಡೊನೇಷನ್‌ ನೀತಿಗೆ ಕಡಿವಾಣ ಹಾಕಲು ದವಿಪ ಮನವಿ

Date:

ವಿಜಯಪುರ ಜಿಲ್ಲೆಯಲ್ಲಿರುವ ಖಾಸಗಿ ಶಿಕ್ಷಣ ಸಂಸ್ಥೆಗಳು ಡೊನೇಷನ್ ಹೆಸರಲ್ಲಿ ‌ಪೋಷಕರಿಂದ ವಿಪರೀತ ಹಣ ವಸೂಲಿ ಮಾಡುತ್ತಿದ್ದಾರೆ. ಖಾಸಗಿಯವರ ಈ ನೀತಿಗಳಿಗೆ ಕಡಿವಾಣ ಹಾಕಬೇಕೆಂದು ದಲಿತ ವಿದ್ಯಾರ್ಥಿ ಪರಿಷತ್ ಜಿಲ್ಲಾ ಘಟಕ ಜಿಲ್ಲಾಧಿಕಾರಿಗೆ ಮನವಿ ಸಲ್ಲಿಸಿದೆ.

ಅಕ್ಷಯ ಕುಮಾರ ಅಜಮನಿ ಮಾತನಾಡಿ, “ಜಿಲ್ಲೆಯಲ್ಲಿರುವ ಖಾಸಗಿ ಶಿಕ್ಷಣ ಸಂಸ್ಥೆಗಳು ಪಿಯುಸಿ ಸೇರಿ ಉನ್ನತ ಶಿಕ್ಷಣದ ಎಲ್ಲಾ ಹಂತಗಳಲ್ಲಿ ಡೊನೇಷನ್‌ ಹೆಸರಿನಲ್ಲಿ ಅತಿ ಹೆಚ್ಚು ಹಣ ವಸೂಲಿ ಮಾಡುತ್ತಿರುವುದು ಅತ್ಯಂತ ಖಂಡನೀಯ. ಎಲ್ಲಾ ಖಾಸಗಿ ಶಾಲಾ ಕಾಲೇಜುಗಳಲ್ಲಿ ಪಿಯುಸಿ ದಾಖಲಾತಿಯೊಂದಕ್ಕೆ ಸುಮಾರು 2 ರಿಂದ 3 ಲಕ್ಷ ರೂಪಾಯಿ ತೆಗೆದುಕೊಳ್ಳುತ್ತಿದ್ದಾರೆ. ಇದರಿಂದ ಸಾಮಾನ್ಯ ಜನವರ್ಗ ಮಕ್ಕಳಿಗೆ ದುಬಾರಿ ಶಿಕ್ಷಣ ನೀಡಲು ಸಾಧ್ಯವಾಗದೆ ಹಣಕ್ಕಾಗಿ ಸಾಲದ ಮೊರೆ ಹೋಗುವ ಪರಿಸ್ಥಿತಿ ಎದುರಾಗಿದೆ. ಸರ್ಕಾರಿ ಸಂಸ್ಥೆಗಳಲ್ಲಿ ಮೂಲಸೌಕರ್ಯಗಳಿಲ್ಲದ ಕಾರಣ ವಿದ್ಯಾರ್ಥಿಗಳು ಮತ್ತು ಪಾಲಕರು ಖಾಸಗಿ ಸಂಸ್ಥೆಗಳ ಮೊರೆ ಹೋಗುತ್ತಿದ್ದಾರೆ. ಅದನ್ನ ಸರಿಪಡುವ ನಿಟ್ಟಿನಲ್ಲಿ ಯಾಕೆ ಕ್ರಮಗಳಾಗುತ್ತಿಲ್ಲ. ಇದು ಇದೇ ರೀತಿ ಮುಂದುವರೆದರೆ ಖಾಸಗಿ ಸಂಸ್ಥೆಗಳ ವಿರುದ್ಧ ಹೋರಾಟ ಮುಂದುವರೆಸಲಾಗುವುದು” ಎಂದು ಎಚ್ಚರಿಕೆ ನೀಡಿದರು.

“ಸಂಬಂಧಪಟ್ಟ ಅಧಿಕಾರಿಗಳು ಇಂದೇ ಆದೇಶ ಹೊರಡಿಸಬೇಕು. ಎಲ್ಲಾ ಶಿಕ್ಷಣ ಸಂಸ್ಥೆಗಳು ರೋಸ್ಟರ್ ಪ್ರಕಾರವೇ ಫೀ ತೆಗೆದುಕೊಳ್ಳಬೇಕು, ಸರ್ಕಾರದ ಆದೇಶದ ರೋಸ್ಟರ್ ನ್ನು ಕಡ್ಡಾಯವಾಗಿ ದೊಡ್ಡ ಪ್ರಮಾಣದಲ್ಲಿ ಪ್ರಸ್ತುತ ಪಡಿಸಬೇಕು. ರೋಸ್ಟರ್‌ನಲ್ಲಿ ಇರುವ ನಿಯಮಾವಳಿಯಂತೆ ಶಿಕ್ಷಕರನ್ನ ನೇಮಕ ಮಾಡಿಕೊಳ್ಳಬೇಕು, ಕಡ್ಡಾಯವಾಗಿ ಪಾಲಕರಿಗೆ ಮತ್ತು ವಿದ್ಯಾರ್ಥಿಗಳಿಗೆ ಜಿ ಎಸ್ ಟಿ ಟಿನ್ ನಂಬರ್ ಇರುವ ರಸಿದಿಯನ್ನೇ ನೀಡಬೇಕು” ಎಂದು ಆಗ್ರಹಿಸಿದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ಇದನ್ನೂ ಓದಿ: ವಿಜಯಪುರ | ಪಹಲ್ಗಾಮ್ ಉಗ್ರ ದಾಳಿಗೆ ಬಲಿಯಾದವರಿಗೆ ಭಾವಪೂರ್ಣ ಶ್ರದ್ಧಾಂಜಲಿ

ಈ ಸಂದರ್ಭದಲ್ಲಿ ಮಾದೇಶ್ ಚಲವಾದಿ, ಸಂದೇಶ್ ಕುಮುಟಗಿ, ಯುವರಾಜ್ ಓಲೇಕಾರ, ಆದಿತ್ಯ, ಪ್ರಶಾಂತ್ ದಾಂಡೇಕರ್, ಶಂಕರ್ ಬಸರಗಿ ಸೇರಿದಂತೆ ಮುಂತಾದವರು ಭಾಗಿಯಾಗಿದ್ದರು.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಸಿಂಧನೂರು | ರೀಲ್ಸ್ ಮಾಡಲು ಹೋದ ಯುವಕ ನೀರು ಪಾಲು

ರೀಲ್ಸ್ ಮಾಡುವ ಉದ್ದೇಶದಿಂದ ಸ್ನೇಹಿತರಿಗೆ ವಿಡಿಯೋ ಮಾಡಲು ಹೇಳಿ ಈಜಲು ನದಿಗೆ...

ಗದಗ | ಆದ್ಯ ವಚನಕಾರ ದೇವರ ದಾಸಿಮಯ್ಯ: ರಾಘವೇಂದ್ರ ಕೊಪ್ಪಳ

"ಆದ್ಯ ವಚನಕಾರ ನೇಕಾರ ಸಂತ ದೇವರ ದಾಸಿಮಯ್ಯನವರು 10 ನೇ ಶತಮಾನದಲ್ಲಿ...

ಮಾರ್ಚ್ 25ರಂದು ಬೆಂಗಳೂರಿನ ಫ್ರೀಡಂ ಪಾರ್ಕ್ನಲ್ಲಿ ಬಲಗೈ ಜಾತಿಗಳ ಬೃಹತ್ ಹೋರಾಟ

ಬಾಗೇಪಲ್ಲಿ:-ಕರ್ನಾಟಕ ರಾಜ್ಯ ಬಲಗೈ ಜಾತಿಗಳ ಮಹಾ ಒಕ್ಕೂಟದ ವತಿಯಿಂದ ಒಳ ಮೀಸಲಾತಿ...

ಯುಪಿಎಸ್ಸಿ ರ‍್ಯಾಂಕ್‌ ವಿಜೇತ ವರುಣ್ ಗೌಡಗೆ ಸನ್ಮಾನ

ಕೋಲಾರ: ಯುಪಿಎಸ್ಸಿ ಪರೀಕ್ಷೆಯಲ್ಲಿ 462 ನೇ ರ‍್ಯಾಂಕ್‌ ಪಡದ ತಾಲೂಕಿನ ತ್ಯಾವನಹಳ್ಳಿ...