ವಿಜಯಪುರ | ಬೆಳೆ ಹಾನಿ ಸಮೀಕ್ಷೆ ವರದಿಗೆ ಆಕ್ಷೇಪಣೆ ಸಲ್ಲಿಸಲು ಡಿಸಿ ಆನಂದ್ ಸೂಚನೆ

Date:

ಇತ್ತೀಚಿಗೆ ಸುರಿದ ಮಳೆಯಿಂದ ಹಾನಿಗೊಳಗಾದ ಕೃಷಿ ಹಾಗೂ ತೋಟಗಾರಿಕಾ ಬೆಳೆಗಳ ಕುರಿತು ಜಂಟಿ ಸಮೀಕ್ಷೆ ವರದಿಯನ್ನು ಪ್ರಕಟಿಸಿ, ರೈತರಿಂದ ಆಕ್ಷೇಪಣೆಗಳನ್ನು ಆಹ್ವಾನಿಸಿ, ಅಂತಿಮ ವರದಿ ವಿಂಗಡಿಸಿ ಸಲ್ಲಿಸುವಂತೆ ಸಂಬಂಧಿಸಿದ ತಹಶೀಲ್ದಾರ್‌ಗಳಿಗೆ ವಿಜಯಪುರ ಜಿಲ್ಲಾಧಿಕಾರಿ ಡಾ. ಆನಂದ ಕೆ ಸೂಚನೆ ನೀಡಿದರು.

ನಗರದ ಜಿಲ್ಲಾಧಿಕಾರಿಗಳ ಕಚೇರಿ ಸಭಾಂಗಣದಲ್ಲಿ ನಡೆದ ಜಿಲ್ಲಾ ವಿಪತ್ತು ನಿರ್ವಹಣಾ ಸಮಿತಿ ಸಭೆಯಲ್ಲಿ ಮಾತನಾಡಿದ ಅವರು, “ಇತ್ತೀಚೆಗೆ ಸುರಿದ ಮಳೆಯಿಂದಾಗಿ ಜಿಲ್ಲೆಯ 13 ತಾಲೂಕುಗಳಲ್ಲಿ ಹಾನಿಗೊಳಗಾದ ಬೆಳೆಗಳ ಜಂಟಿ ಸಮೀಕ್ಷೆ ನಡೆಸಿದ್ದು, 21683.9 ಹೆಕ್ಟೇರ್ ಕೃಷಿ ಹಾಗೂ 450 ಹೆಕ್ಟೇರ್ ತೋಟಗಾರಿಕೆ ಬೆಳೆಗಳ ಸಮೀಕ್ಷಾ ವರದಿಯನ್ನು ಜಿಲ್ಲೆಯ ಸಂಬಂಧಿಸಿದ ಗ್ರಾಮ ಪಂಚಾಯತ್ ಕಾರ್ಯಾಲಯ, ರೈತ ಸಂಪರ್ಕ ಕೇಂದ್ರ, ತಹಶೀಲ್ದಾರ ಕಾರ್ಯಾಲಯಗಳಲ್ಲಿ ಹಾನಿಗೊಳಗಾದ ಅಂತಿಮ ರೈತರ ಬೆಳೆಗಳ ಪಟ್ಟಿಯನ್ನು ಪ್ರಚುರಪಡಿಸಿ ರೈತರಿಂದ ಆಕ್ಷೇಪಣೆಗಳನ್ನು ಆಹ್ವಾನಿಸಿ, ವರದಿಯನ್ನು ವಿಂಗಡಿಸಿ ವರದಿಯನ್ನು ಸಲ್ಲಿಸಬೇಕು” ಸಂಬಂಧಿಸಿದ ಅಧಿಕಾರಿಗಳಿಗೆ ಸೂಚಿಸಿದರು.

ಜಿಲ್ಲೆಯ 13 ತಾಲೂಕಿನ ತಹಶೀಲ್ದಾರಗಳ ನಿರ್ದೇಶನದಂತೆ ತಮ್ಮ ತಾಲೂಕಿನಲ್ಲಿ ಬೆಳ ಹಾನಿಯಾದ ರೈತ ಪಟ್ಟಿಯನ್ನು ರೈತ ಸಂಪರ್ಕ ಕೇಂದ್ರ ಸೇರಿದಂತೆ ವಿವಿಧಡೆ ಪ್ರಚುರಪಡಿಸಿ ಆಕ್ಷೇಪಣೆಗಳನ್ನು ಆಹ್ವಾನಿಸಬೇಕು. ಎಲ್ಲ ತಹಶೀಲ್ದಾರಗಳು ಈಗಾಗಲೇ ಹಾನಿಯಾದ ಭಾಗಶ ಮನೆ, ಕಚ್ಚಾ ಮನೆಗಳಿಗೆ ನಿಗದಿತ ಅವಧಿಯಲ್ಲಿ ಪರಿಹಾರ ಒದಗಿಸಲು ಕ್ರಮ ವಹಿಸಬೇಕು ಎಂದು ತಿಳಿಸಿದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ಇದನ್ನೂ ಓದಿ: ವಿಜಯಪುರ | ಮಹಿಳಾ ಸಬಲೀಕರಣದತ್ತ ʼಒಡಲ ಧ್ವನಿ ಒಕ್ಕೂಟʼದ ಹೆಜ್ಜೆ; ರೈತರಿಗೆ ಕೃಷಿ ಪರಿಕರ ವಿತರಣೆ

ಮಳೆ ಸೇರಿದಂತೆ ಪ್ರಾಕೃತಿಕ ವಿಕೋಪದಿಂದ ರಸ್ತೆಗಳ ಸಂಪರ್ಕ ಕಡಿತಗೊಂಡಲ್ಲಿ ತಕ್ಷಣ ಸ್ಪಂದಿಸಿ ಪರಿಹಾರೋಪಾಯ ಕ್ರಮಗಳನ್ನು ಕೈಗೊಳ್ಳಬೇಕು. ತಾಲೂಕಿನ ನೋಡಲ್ ಅಧಿಕಾರಿಗಳು ತಾಲೂಕಿನ ಸಮಗ್ರ ಮಾಹಿತಿ ಹೊಂದಿ, ವಿಪತ್ತು ಸಂದರ್ಭದಲ್ಲಿ ಕೈಗೊಳ್ಳಬೇಕಾದ ಕ್ರಮಗಳ ಕುರಿತು ಮುಂಚಿತವಾಗಿಯೇ ಸಭೆಗಳನ್ನು ನಡೆಸಿ, ಸೂಕ್ತ ತಿಳುವಳಿಕೆ ಮೂಡಿಸಬೇಕು. ಜಿಲ್ಲೆಯಾದ್ಯಂತ ವಿಫಲವಾಗಿರುವ ಕೊಳವೆ ಬಾವಿಗಳಿದ್ದಲ್ಲಿ ಕೂಡಲೇ ಮುಚ್ಚಲು ಕ್ರಮ ವಹಿಸಬೇಕು. ಯಾವುದೇ ಅನಾಹುತಕ್ಕೆ ಅವಕಾಶ ನೀಡದೇ ಸಮರ್ಪಕವಾಗಿ ವಿಪತ್ತು ನಿರ್ವಹಣಾ ಕಾರ್ಯಗಳನ್ನು ಕೈಗೊಳ್ಳುವಂತೆ ಸಂಬಂಧಿಸಿದ ಅಧಿಕಾರಿಗಳಿಗೆ ನಿರ್ದೇಶಿಸಿದರು.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಸಿಂಧನೂರು | ರೀಲ್ಸ್ ಮಾಡಲು ಹೋದ ಯುವಕ ನೀರು ಪಾಲು

ರೀಲ್ಸ್ ಮಾಡುವ ಉದ್ದೇಶದಿಂದ ಸ್ನೇಹಿತರಿಗೆ ವಿಡಿಯೋ ಮಾಡಲು ಹೇಳಿ ಈಜಲು ನದಿಗೆ...

ಗದಗ | ಆದ್ಯ ವಚನಕಾರ ದೇವರ ದಾಸಿಮಯ್ಯ: ರಾಘವೇಂದ್ರ ಕೊಪ್ಪಳ

"ಆದ್ಯ ವಚನಕಾರ ನೇಕಾರ ಸಂತ ದೇವರ ದಾಸಿಮಯ್ಯನವರು 10 ನೇ ಶತಮಾನದಲ್ಲಿ...

ಮಾರ್ಚ್ 25ರಂದು ಬೆಂಗಳೂರಿನ ಫ್ರೀಡಂ ಪಾರ್ಕ್ನಲ್ಲಿ ಬಲಗೈ ಜಾತಿಗಳ ಬೃಹತ್ ಹೋರಾಟ

ಬಾಗೇಪಲ್ಲಿ:-ಕರ್ನಾಟಕ ರಾಜ್ಯ ಬಲಗೈ ಜಾತಿಗಳ ಮಹಾ ಒಕ್ಕೂಟದ ವತಿಯಿಂದ ಒಳ ಮೀಸಲಾತಿ...

ಯುಪಿಎಸ್ಸಿ ರ‍್ಯಾಂಕ್‌ ವಿಜೇತ ವರುಣ್ ಗೌಡಗೆ ಸನ್ಮಾನ

ಕೋಲಾರ: ಯುಪಿಎಸ್ಸಿ ಪರೀಕ್ಷೆಯಲ್ಲಿ 462 ನೇ ರ‍್ಯಾಂಕ್‌ ಪಡದ ತಾಲೂಕಿನ ತ್ಯಾವನಹಳ್ಳಿ...