ವಿಜಯಪುರ | ವಿಕಲಚೇತನರಿಗೆ ಯೋಜನೆಗಳ ಲಾಭ ತಲುಪಿಸಲು ಡಿಸಿ ಆನಂದ ಸೂಚನೆ

Date:

ವಿಕಲಚೇತನರ ಏಳಿಗೆಗಾಗಿ ಸರ್ಕಾರ ಹಲವು ಯೋಜನೆ ಜಾರಿಗೆ ತಂದಿದ್ದು, ಯೋಜನೆಯ ಲಾಭ ಅರ್ಹರಿಗೆ ತಲುಪಿಸಲು ಅಧಿಕಾರಿಗಳು ಕ್ರಮ ವಹಿಸಬೇಕು. ಅರ್ಹರು ಇಂತಹ ಯೋಜನೆಗಳ ಮಾಹಿತಿ ಪಡೆದು ಸದುಪಯೋಗ ಪಡೆದುಕೊಳ್ಳಬೇಕು ಎಂದು ವಿಜಯಪುರ ಜಿಲ್ಲಾಧಿಕಾರಿ ಡಾ. ಆನಂದ ಕೆ ಹೇಳಿದರು.

ವಿಜಯಪುರ ನಗರದ ಜಿಲ್ಲಾಧಿಕಾರಿಗಳ ಕಚೇರಿ ಸಭಾಂಗಣದಲ್ಲಿ ನಡೆದ ವಿಕಲಚೇತನರ ಕುಂದುಕೊರತ ಸಭೆಯಲ್ಲಿ ಮಾತನಾಡಿದ ಅವರು, “ವಿಕಲಚೇತನರ ಕುಂದು ಕೊರತೆ ಸಭೆ ಕುರಿತು ತಾಲೂಕು ಮಟ್ಟದಲ್ಲಿ ಸಭೆ ನಡೆಸಿ ಅವರ ಸಮಸ್ಯೆಗಳಿಗೆ ಅಧಿಕಾರಿಗಳು ಸ್ಪಂದಿಸಬೇಕು. ಸರ್ಕಾರಿ ಕಚೇರಿ, ಆಸ್ಪತ್ರೆ, ಬ್ಯಾಂಕ್ ಎಟಿಎಂಗಳಲ್ಲಿ ಹ್ಯಾಂಪ್ ಮತ್ತು ರ್ಯಾಲಿ ಅಳವಡಿಸಬೇಕು. ಜಿಲ್ಲೆಯಲ್ಲಿ ಬೆನ್ನು ಉರಿ ಅಪಘಾತಕ್ಕೆ ಒಳಗಾದ ವಿಕಲಚೇತನರಿಗೆ ಮೆಡಿಕಲ್ ಕಿಟ್ ವಿತರಿಸಲು ಅವಕಾಶವಿದ್ದು, ಅವಶ್ಯಕತೆ ಇರುವ ಹಾಗೂ ಯಾರು ಕೈ ಬಿಟ್ಟು ಹೋಗದಂತೆ ಕಿಟ್‌ಗಳನ್ನು ಒದಗಿಸಬೇಕು. ಈ ಮಾಹಿತಿ ನೀಡಬೇಕು” ಎಂದು ಸೂಚಿಸಿದರು.

“ಕೃಷಿ ಮತ್ತು ತೋಟಗಾರಿಕೆ ಇಲಾಖೆಯಲ್ಲಿರುವ ವಿವಿಧ ಯೋಜನೆಗಳಡಿ ಅರ್ಹ ವಿಕಲ ಚೇತನರು ಸಲ್ಲಿಸುವ ಅರ್ಜಿಗಳಿಗೆ ಮೊದಲಾದ್ಯತೆ ನೀಡಬೇಕು. ಗ್ರಾಮ ಪಂಚಾಯತಿ ಮಟ್ಟದಲ್ಲಿ ನರೇಗಾ ಯೋಜನೆಯಡಿ ಉದ್ಯೋಗ ಬಯಸುವವರಿಗೆ ಸ್ಥಳೀಯವಾಗಿ ಜಾಬ್ ಕಾರ್ಡ್ ಮಾಡಿ, ಉದ್ಯೋಗ ನೀಡಲು ಕ್ರಮವಹಿಸಬೇಕು. 15ನೇ ಹಣಕಾಸು ಯೋಜನೆಯಡಿ ಸಾಮೂಹಿಕ ಫಲಾನುಭವಿಗಳ ಆಯ್ಕೆಗೆ ಬಳಕೆಯಾಗುವಂತೆ ನೋಡಿಕೊಳ್ಳಬೇಕು. ವೈಯಕ್ತಿಕ ಫಲಾನುಭವಿಗಳ ಆಯ್ಕೆಗೆ ಕುಂದು ಕೊರತೆ ಸಭೆಯಲ್ಲಿ ವಿಕಲಚೇತನರು ಮನವಿ ಮಾಡಿದ್ದು, ಇದರ ಸಾಧ್ಯತೆಗಳನ್ನು ಪರಿಶೀಲಿಸಿ ಮಾಹಿತಿ ನೀಡಬೇಕು” ಎಂದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ಇದನ್ನೂ ಓದಿ: ವಿಜಯಪುರ | ಮಹಿಳೆ ಆತ್ಮರಕ್ಷಣೆ ಕಲೆ ಕಲಿಯುವುದು ಅನಿವಾರ್ಯ: ಪ್ರೊ. ನಾಮದೇವಗೌಡ

“ಕಲ್ಯಾಣ ಕರ್ನಾಟಕ ಸಾರಿಗೆ ಬಸ್ನಲ್ಲಿ ವಿಕಲಚೇತನರಿಗೆ ನಿಗದಿಪಡಿಸಿರುವ ಆಸನಗಳನ್ನು ಅವರಿಗೇ ಬಳಕೆಯಾಗುವಂತೆ ನೋಡಿಕೊಳ್ಳಲು ನಿರ್ವಾಹಕರಿಗೆ ಸುತ್ತೋಲೆ ಹೊರಡಿಸಬೇಕು. ಪಂಚಾಯತ್ ಮಟ್ಟದಲ್ಲಿ ಜಾರಿಯಾಗುವ ವಸತಿ ಯೋಜನೆಗಳಲ್ಲಿ ವಸತಿ ರಹಿತ ಅರ್ಹ ವಿಕಲ ಚೇತನರನ್ನು ಪರಿಗಣಿಸಬೇಕು. ವಿಕಲಚೇತನರಿಗೆ ಮೀಸಲಿಟ್ಟ ಶೇ. 5ರಷ್ಟು ಅನುದಾನ ಬಳಕೆ ಮೂಲಕ ಸ್ವಾವಲಂಬಿ ಬದುಕಿಗೆ ಪ್ರೋತ್ಸಾಹಿಸಬೇಕು. ಗ್ರಾಮ ಪಂಚಾಯತಿ, ಸ್ಥಳೀಯ ಸಂಸ್ಥೆಗಳು ಹಾಗೂ ಪಾಲಿಕೆ ಅನುದಾನ ಕುರಿತು ಸಮಗ್ರ ಮಾಹಿತಿಯನ್ನು 15 ದಿನದಲ್ಲಿ ಸಲ್ಲಿಸಬೇಕು” ಎಂದು ಅಧಿಕಾರಿಗಳಿಗೆ ಸೂಚಿಸಿದರು.

ಸಭೆಯಲ್ಲಿ ನಗರಾಭಿವೃದ್ಧಿ ಕೋಶದ ಯೋಜನಾ ನಿರ್ದೇಶಕ ಭದ್ರದ್ದೀನ್ ಸೌದಾಗರ, ಆಹಾರ ಇಲಾಖೆ ಉಪ ನಿರ್ದೇಶಕ ವಿನಯ ಕುಮಾರ ಪಾಟೀಲ, ಪಾಲಿಕೆ ಉಪ ಆಯುಕ್ತ ಮಹಾವೀರ ಬೋರಣ್ಣವರ, ಪ್ರಾದೇಶಿಕ ಸಾರಿಗೆ ಇಲಾಖೆ ಅಧಿಕಾರಿ ವಾಸಿಂ ಬಾಬಾ ಮುದ್ದೇಬಿಹಾಳ, ಜಿಲ್ಲಾ ವಿಕಲಚೇತನರ ಹಾಗೂ ಹಿರಿಯ ನಾಗರಿಕರ ಸಬಲೀಕರಣ ಇಲಾಖೆ ಅಧಿಕಾರಿ ಜಗದೀಶ ಕೆ ಸೇರಿದಂತೆ ಜಿಲ್ಲಾ ಮಟ್ಟದ ಅಧಿಕಾರಿಗಳು ಹಾಗೂ ವಿಕಲಚೇತನರ ಕ್ಷೇತ್ರದಲ್ಲಿ ಕಾರ್ಯ ನಿರ್ವಹಿಸುತ್ತಿರುವ ಸೇವಾ ಸಂಸ್ಥೆ ಮುಖ್ಯಸ್ಥರು ಉಪಸ್ಥಿತರಿದ್ದರು.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಸಿಂಧನೂರು | ರೀಲ್ಸ್ ಮಾಡಲು ಹೋದ ಯುವಕ ನೀರು ಪಾಲು

ರೀಲ್ಸ್ ಮಾಡುವ ಉದ್ದೇಶದಿಂದ ಸ್ನೇಹಿತರಿಗೆ ವಿಡಿಯೋ ಮಾಡಲು ಹೇಳಿ ಈಜಲು ನದಿಗೆ...

ಗದಗ | ಆದ್ಯ ವಚನಕಾರ ದೇವರ ದಾಸಿಮಯ್ಯ: ರಾಘವೇಂದ್ರ ಕೊಪ್ಪಳ

"ಆದ್ಯ ವಚನಕಾರ ನೇಕಾರ ಸಂತ ದೇವರ ದಾಸಿಮಯ್ಯನವರು 10 ನೇ ಶತಮಾನದಲ್ಲಿ...

ಮಾರ್ಚ್ 25ರಂದು ಬೆಂಗಳೂರಿನ ಫ್ರೀಡಂ ಪಾರ್ಕ್ನಲ್ಲಿ ಬಲಗೈ ಜಾತಿಗಳ ಬೃಹತ್ ಹೋರಾಟ

ಬಾಗೇಪಲ್ಲಿ:-ಕರ್ನಾಟಕ ರಾಜ್ಯ ಬಲಗೈ ಜಾತಿಗಳ ಮಹಾ ಒಕ್ಕೂಟದ ವತಿಯಿಂದ ಒಳ ಮೀಸಲಾತಿ...

ಯುಪಿಎಸ್ಸಿ ರ‍್ಯಾಂಕ್‌ ವಿಜೇತ ವರುಣ್ ಗೌಡಗೆ ಸನ್ಮಾನ

ಕೋಲಾರ: ಯುಪಿಎಸ್ಸಿ ಪರೀಕ್ಷೆಯಲ್ಲಿ 462 ನೇ ರ‍್ಯಾಂಕ್‌ ಪಡದ ತಾಲೂಕಿನ ತ್ಯಾವನಹಳ್ಳಿ...