ವಿಜಯಪುರ | ಲಿಂಗಾಯತ ಸಮಾಜಕ್ಕೆ ಪ್ರವರ್ಗ 2ಎ ಮೀಸಲಾತಿಗೆ ಆಗ್ರಹ; ಸೆ.22ರಂದು ವಕೀಲರ ಸಮಾವೇಶ

Date:

ಲಿಂಗಾಯತ ಸಮಾಜಕ್ಕೆ ಪ್ರವರ್ಗ 2ಎ ಲಿಂಗಾಯತ ಉಪ ಸಮಾಜಗಳಿಗೆ ಒಬಿಸಿ ಮೀಸಲಾತಿಗಾಗಿ ಕಾನೂನಾತ್ಮಕ ಹೋರಾಟ ರೂಪಿಸುವ ಸಂಬಂಧ ಚರ್ಚಿಸಲು ಬೆಳಗಾವಿ ಗಾಂಧಿ ಭವನದಲ್ಲಿ ಸೆಪ್ಟೆಂಬರ್ 22ರ ಬೆಳಿಗ್ಗೆ 10ಕ್ಕೆ ವಕೀಲರ ಸಮಾವೇಶ ಸಂಘಟಿಸಲಾಗಿದೆ ಎಂದು ಕೂಡಲಸಂಗಮ ಪಂಚಮಸಾಲಿ ಪೀಠದ ಜಗದ್ಗುರು ಬಸವ ಮೃತ್ಯುಂಜಯ ಸ್ವಾಮೀಜಿ ಹೇಳಿದರು.

ವಿಜಯಪುರ ನಗರದಲ್ಲಿ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, “ಈ ಸಮಾವೇಶದಲ್ಲಿ ರಾಜ್ಯದ ವಿವಿಧ ಜಿಲ್ಲೆಗಳಿಂದ ಸಾವಿರಾರು ಮಂದಿ ವಕೀಲರು ಪಾಲ್ಗೊಂಡು ಮೀಸಲಾತಿ ಪಡೆಯಲು ಮುಂದೆ ಯಾವ ರೀತಿ ಹೋರಾಟ ನಡೆಸಬೇಕು ಎಂಬುದರ ಬಗ್ಗೆ ತೀರ್ಮಾನ ಕೈಗೊಳ್ಳಲಾಗುವುದು” ಎಂದರು.

“ಪಂಚಮಸಾಲಿ ಸಮಾಜದ ಮಕ್ಕಳ ಭವಿಷ್ಯಕ್ಕಾಗಿ, ಪ್ರತಿಭಾನ್ವಿತರ ಅವಕಾಶಕ್ಕಾಗಿ ಪ್ರವರ್ಗ 2ಎ ಮೀಸಲಾತಿ ಕಲ್ಪಿಸಬೇಕಾಗಿರುವುದು ಅತ್ಯಂತ ಅಗತ್ಯವಾಗಿದೆ. ಹೀಗಾಗಿ ಕಳೆದ ಹಲವು ವರ್ಷಗಳಿಂದ ಈ ಬಗ್ಗೆ ಸುದೀರ್ಘ ಹೋರಾಟ ನಡೆಸಲಾಗುತ್ತಿದೆ” ಎಂದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

“ಪಂಚಮಸಾಲಿ ಮಕ್ಕಳ ಭವಿಷ್ಯಕ್ಕಾಗಿ ಪ್ರತಿಭಾನ್ವಿತರ ಅವಕಾಶಕ್ಕಾಗಿ ಪ್ರವರ್ಗ 2ಎ ಪಾದಯಾತ್ರೆ, ಹೆದ್ದಾರಿಯಲ್ಲಿ ಇಷ್ಟಲಿಂಗ ಪೂಜೆಯ ಗಮನ ಸೆಳೆಯುವುದು ಸೇರಿದಂತೆ ವಿವಿಧ ಹೋರಾಟಗಳನ್ನು ಕೈಗೊಳ್ಳಲಾಗಿತ್ತು. ಸಮುದಾಯದ ಶಾಸಕರು ಈ ಬಗ್ಗೆ ಧ್ವನಿ ಎತ್ತಲು ಸಭಾಧ್ಯಕ್ಷರಿಗೆ ಅವಕಾಶ ಕೋರಿದರೂ ಅವಕಾಶ ದೊರಕಲಿಲ್ಲ. ಶಾಸಕ ಬಸನಗೌಡ ಪಾಟೀಲ ಯತ್ನಾಳ್ ಹೊರತುಪಡಿಸಿ ಉಳಿದ ಶಾಸಕರು ಈ ಬಗ್ಗೆ ಪ್ರಬಲವಾಗಿ ಧ್ವನಿ ಎತ್ತಲಿಲ್ಲ. ನಮ್ಮ ಸಮುದಾಯದ ಶಾಸಕರು ಇನ್ನೂ ಪ್ರಬಲ ಹಾಗೂ ಪರಿಣಾಮಕಾರಿಯಾದ ಧ್ವನಿ ಮೊಳಗಿಸಬಹುದಿತ್ತು.‌ ಕಾನೂನಾತ್ಮಕ ಹೋರಾಟದ ಮೂಲಕ ಹಕ್ಕನ್ನು ಪಡೆದುಕೊಳ್ಳಲು ತೀರ್ಮಾ ಕೈಗೊಳ್ಳಲಾಗಿದೆ” ಎಂದರು.

ಈ ಸುದ್ದಿ ಓದಿದ್ದೀರಾ? ಕಲಬುರಗಿ | ಹೈದರಾಬಾದ್ ಕರ್ನಾಟಕ ವಿಮೋಚನೆಗೆ ಹೋರಾಟಗಾರರ ಶ್ರಮವಿದೆ: ತಹಶೀಲ್ದಾರ್ ನಾಗಯ್ಯ ಹಿರೇಮಠ

ಜಿಲ್ಲಾ ವಕೀಲರ ಸಂಘದ ಅಧ್ಯಕ್ಷ ಬಿ ಎಂ ಪಾಟಿಲ, ಈರಣ್ಣ ಚಾಗಶೆಟ್ಟಿ, ವಕೀಲರಾದ ಶ್ರೀಶೈಲ್ ಮುಳಜಿ, ಬಿ ಎಂ ಪೊಲೀಸ್ ಪಾಟೀಲ್, ಜಿಲ್ಲಾ ಪಂಚಮಸಾಲಿ ಸಮಾಜದ ಕಾರ್ಯದರ್ಶಿ ನಿಂಗನಗೌಡ ಸೊಲ್ಲಾಪುರ, ನಗರ ಘಟಕದ ಅಧ್ಯಕ್ಷ ಶ್ರೀಶೈಲ್ ಬುಕ್ಕಣ್ಣಿ, ಜಿಲ್ಲಾ ಮಾಧ್ಯಮ ವಕ್ತಾರ ದಾನೇಶ್ ಅವಟಿ ಇದ್ದರು.

WhatsApp Image 2025 11 17 at 3.21.17 PM
ಈ ದಿನ ಡೆಸ್ಕ್
+ posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಸಿಂಧನೂರು | ರೀಲ್ಸ್ ಮಾಡಲು ಹೋದ ಯುವಕ ನೀರು ಪಾಲು

ರೀಲ್ಸ್ ಮಾಡುವ ಉದ್ದೇಶದಿಂದ ಸ್ನೇಹಿತರಿಗೆ ವಿಡಿಯೋ ಮಾಡಲು ಹೇಳಿ ಈಜಲು ನದಿಗೆ...

ಗದಗ | ಆದ್ಯ ವಚನಕಾರ ದೇವರ ದಾಸಿಮಯ್ಯ: ರಾಘವೇಂದ್ರ ಕೊಪ್ಪಳ

"ಆದ್ಯ ವಚನಕಾರ ನೇಕಾರ ಸಂತ ದೇವರ ದಾಸಿಮಯ್ಯನವರು 10 ನೇ ಶತಮಾನದಲ್ಲಿ...

ಮಾರ್ಚ್ 25ರಂದು ಬೆಂಗಳೂರಿನ ಫ್ರೀಡಂ ಪಾರ್ಕ್ನಲ್ಲಿ ಬಲಗೈ ಜಾತಿಗಳ ಬೃಹತ್ ಹೋರಾಟ

ಬಾಗೇಪಲ್ಲಿ:-ಕರ್ನಾಟಕ ರಾಜ್ಯ ಬಲಗೈ ಜಾತಿಗಳ ಮಹಾ ಒಕ್ಕೂಟದ ವತಿಯಿಂದ ಒಳ ಮೀಸಲಾತಿ...

ಯುಪಿಎಸ್ಸಿ ರ‍್ಯಾಂಕ್‌ ವಿಜೇತ ವರುಣ್ ಗೌಡಗೆ ಸನ್ಮಾನ

ಕೋಲಾರ: ಯುಪಿಎಸ್ಸಿ ಪರೀಕ್ಷೆಯಲ್ಲಿ 462 ನೇ ರ‍್ಯಾಂಕ್‌ ಪಡದ ತಾಲೂಕಿನ ತ್ಯಾವನಹಳ್ಳಿ...