ಸರ್ಕಾರಿ ವೈದ್ಯಕೀಯ ಕಾಲೇಜು ಸ್ಥಾಪನೆಗೆ ಆಗ್ರಹಿಸಿ ವಿಜಯಪುರ ನಗರದ ಡಾ. ಬಿ ಆರ್ ಅಂಬೇಡ್ಕರ್ ವೃತ್ತದಲ್ಲಿ ನಡೆಯುತ್ತಿರುವ ಅನಿರ್ದಿಷ್ಟಾವಧಿ ಧರಣಿ ಸತ್ಯಾಗ್ರಹ 30ನೇ ದಿನಕ್ಕೆ ಕಾಲಿಟ್ಟಿದೆ.
ಹೋರಾಟಕ್ಕೆ ಬೆಂಬಲ ಸೂಚಿಸಿ ಮಾತನಾಡಿದ ದಲಿತ ಸಂಘರ್ಷ ಸಮಿತಿ ರಾಜ್ಯ ಸಂಘಟನಾ ಸಹ ಸಂಚಾಲಕ ರಮೇಶ ಆಸಂಗಿ, “ಬಡ ಮತ್ತು ಹಿಂದುಳಿದ ಮಕ್ಕಳು ಕಲಿಯಲು ಸರ್ಕಾರಿ ಎಚ್ಚರಿಕೆ ವೈದ್ಯಕೀಯ ಕಾಲೇಜಿನ ಅತ್ಯವಶ್ಯವಿದೆ. ಸರ್ಕಾರ ಯಾವುದೇ ಕಾರಣಕ್ಕೂ ಖಾಸಗಿಯವರಿಗೆ ಅವಕಾಶ ಮಾಡಿಕೊಡಬಾರದು. ಇಲ್ಲಿನ ಜಿಲ್ಲಾಸ್ಪತ್ರೆಯಲ್ಲಿ ಎಲ್ಲ ದೃಷ್ಟಿಕೋನದಿಂದಲೂ ಸಾಕಷ್ಟು ಅವಕಾಶವಿದ್ದು, ಕೂಡಲೇ ಸರ್ಕಾರ ಎಚ್ಚೆತ್ತು ಸಂಪೂರ್ಣ ಸರ್ಕಾರಿ ವೈದ್ಯಕೀಯ ಕಾಲೇಜು ಆರಂಭಿಸದಿದ್ದಲ್ಲಿ ಮುಂದಿನ ದಿನಗಳಲ್ಲಿ ಉಗ್ರ ಹೋರಾಟ ಹಮ್ಮಿಕೊಳ್ಳಲಾಗುವುದು” ಎಂದು ಎಚ್ಚರಿಸಿದರು.
ಇದನ್ನೂ ಓದಿ: ವಿಜಯಪುರ | ಬೆಳೆಹಾನಿ ಪರಿಹಾರಕ್ಕೆ ರೈತ ಸಂಘಟನೆಗಳ ಆಗ್ರಹ
ಈ ವೇಳೆ ಚಂದ್ರಕಾಂತ ಸಿಂಗೆ, ಚನ್ನು ಕಟ್ಟಿಮನಿ, ಶರಣು ಶಿಂದೆ, ಅಶೋಕ ಛಲವಾದಿ, ಪರಶುರಾಮ ದಿಂಡವಾರ, ವಿನಾಯಕ ಗುಣಸಾಗರ, ಪ್ರಕಾಶ ಗುಡಿಮನಿ, ಶ್ರೀನಿವಾಸ ಓಲೆಕಾರ, ರವಿ ಅಲಹಳ್ಳಿ, ಮಹೇಶ ಜವಳಿಗಿ, ಹೋರಾಟ ಸಮಿತಿಯ ಅರವಿಂದ ಕುಲಕರ್ಣಿ, ಭಗವಾನ ರೆಡ್ಡಿ, ಅಕ್ರಂ ಮಾಶಾಳಕರ, ಅಣ್ಣರಾಯ ಈಳಗೇರ, ಸಿ.ಬಿ. ಪಾಟೀಲ, ವಿ.ಎ. ಪಾಟೀಲ, ಅಬ್ದುಲರೆಹಮಾನ್ ನಾಸಿರ, ಚಂದ್ರಶೇಖರ ಘಂಟೆಪ್ಪಗೋಳ, ಲಲಿತಾ ಬಿಜ್ಜರಗಿ, ಭರತಕುಮಾರ ಎಚ್.ಟಿ., ವಿದ್ಯಾವತಿ ಅಂಕಲಗಿ, ಕೆ.ಎಫ್. ಅಂಕಲಗಿ, ಸುರೇಶ ಬಿಜಾಪುರ, ಶ್ರೀನಾಥ ಪೂಜಾರಿ, ಲಕ್ಷಣ ಹಂದ್ರಾಳ, ಭೋಗೇಶ ಸೋಲಾಪುರ, ಬಾಬು ಬಿಜಾಪುರ, ಅವಿನಾಶ ಐಹೊಳೆ ಮತ್ತಿತರರಿದ್ದರು.





