ವಿಜಯಪುರ | ಇಂಗಳಗಿ-ಚಟ್ಟರಕಿ ಗ್ರಾಮ, ಜಮೀನುಗಳಿಗೆ ತೆರಳಲು ರಸ್ತೆ ಸಂಪರ್ಕ ಕಲ್ಪಿಸುವಂತೆ ಆಗ್ರಹ

Date:

ವಿಜಯಪುರ ಜಿಲ್ಲೆಯ ದೇವರಹಿಪ್ಪರಗಿ ತಾಲೂಕಿನ ಇಂಗಳಗಿ-ಚಟ್ಟರಕಿ ಗ್ರಾಮಗಳಿಗೆ ಓಡಾಡಲು ಹಾಗೂ ಜಮೀನುಗಳಿಗೆ ತೆರಳಲು ರಸ್ತೆ ಸಂಪರ್ಕ ಕಲ್ಪಿಸಿಕೊಡುವಂತೆ ಆಗ್ರಹಿಸಿ ಇಂಗಳಗಿ ಗ್ರಾಮಸ್ಥರು ತಹಶೀಲ್ದಾರ್ ಪ್ರಕಾಶ ಸಿಂದಗಿಯವರಿಗೆ ಮನವಿ ಮಾಡಿದರು.

ಪಟ್ಟಣದ ತಹಶೀಲ್ದಾರ್ ಕಚೇರಿಗೆ ಆಗಮಿಸಿದ ರೈತರು “ತಮ್ಮ ಗ್ರಾಮದಿಂದ ಚಟ್ಟರಕಿಗೆ ತೆರಳಲು ಹಾಗೂ ಸುಮಾರು 150 ಜಮೀನುಗಳಿಗೆ ತರಳಲು ಸಂಪರ್ಕ ಕಲ್ಪಿಸುವ ರಸ್ತೆಯನ್ನು ಪುನಃ ದೊರಕಿಸಿಕೊಡಬೇಕು” ಎಂದು ಅಗ್ರಹಿಸಿದರು.

ಈ ಸಂದರ್ಭದಲ್ಲಿ ದಲಿತ ಸಂಘರ್ಷ ಸಮಿತಿ ಬೆಳಗಾವಿ ವಿಭಾಗೀಯ ಸಂಚಾಲಕ ರಾವುತ್ ತಳಕೇರಿ ಮಾತನಾಡಿ, “ತಾಲೂಕಿನಲ್ಲಿ ರೈತರೇ ರೈತರಿಗೆ ಸಹಕಾರ ನೀಡುತ್ತಿಲ್ಲ. ಈಗ ಇಂಗಳಗಿ ಗ್ರಾಮದ ರೈತರೊಬ್ಬರು ತಮ್ಮ ಜಮೀನುಗಳ ಮೂಲಕ ತೆರಳುವ ರಸ್ತೆಯನ್ನು ಬಂದ್‌ ಮಾಡಿ ಯಾರೂ ತೆರಳದಂತೆ ಮಾಡಿದ್ದಾರೆ” ಎಂದು ಹೇಳಿದರು.

‌”ಈ ರಸ್ತೆ ಸಾಕಷ್ಟು ವರ್ಷಗಳಿಂದ ಬಳಕೆಯಲ್ಲಿದ್ದು, ಗ್ರಾಮದ ಬಹುತೇಕರು ತಮ್ಮ ಜಮೀನುಗಳಿಗೆ ತೆರಳಲು ಇದೇ ರಸ್ತೆಯನ್ನು ಬಳಕೆ ಮಾಡುತ್ತಿದ್ದರು. ಈಗ ಏಕಾಏಕಿ ರಸ್ತೆ ಬಂದ್ ಮಾಡಿ ಇಲ್ಲಿ ರಸ್ತೆಯೇ ಇಲ್ಲ ಎನ್ನುತ್ತಿದ್ದಾರೆ. ಇನ್ನು ಗ್ರಾಮದ ನಕಾಶೆಯಲ್ಲಿಯೂ ಈ ರಸ್ತೆಯನ್ನು ಸ್ಪಷ್ಟವಾಗಿ ತೋರಿಸಲಾಗಿದೆ. ರಸ್ತೆ ಇಲ್ಲವೆಂದರೆ ಹೇಗೆ? ಆದ್ದರಿಂದ ತಾವುಗಳೇ ಖುದ್ದಾಗಿ ಸ್ಥಳ, ನಕಾಶೆ ಪರಿಶೀಲನೆ ಮಾಡಿ ರಸ್ತೆ ದೊರಕಿಸಿಕೊಡಬೇಕು” ಎಂದು ತಹಶೀಲ್ದಾರರಲ್ಲಿ ಮನವಿ ಮಾಡಿದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ಈ ಸುದ್ದಿ ಓದಿದ್ದೀರಾ? ಬೀದರ್‌ | ಮೂಢ ಸಂಪ್ರದಾಯ ತಡೆಗೆ ದಲಿತ ಪ್ಯಾಂಥರ್‌ ಸಂಘಟನೆ ಆಗ್ರಹ

‌”ಜಿಲ್ಲೆಯ ಬಹುತೇಕ ಗ್ರಾಮಗಳಲ್ಲಿ ಜಮೀನುಗಳ ರಸ್ತೆ ಸಮಸ್ಯೆಗಳು ದಿನದಿಂದ ದಿನಕ್ಕೆ ಹೆಚ್ಚಾಗುತ್ತಿವೆ. ಕೆಲವು ರೈತರ ಅಸಹಕಾರ ನೀತಿಗಳಿಂದ ನ್ಯಾಯಾಲಯಗಳ ಮೆಟ್ಟಿಲೇರುತ್ತಿವೆ. ಒಂದಡೆ ಮುಖ್ಯಮಂತ್ರಿಗಳು ಇದರ ಜವಾಬ್ದಾರಿಯನ್ನು ಆಯಾ ತಾಲೂಕಿನ ತಹಶೀಲ್ದಾರರಿಗೆ ನೀಡಿದ್ದರೂ ಕೂಡಾ ಪ್ರಕರಣ ಬಗೆಹರಿಯುತ್ತಿಲ್ಲ” ಎಂದರು.

‌ಗ್ರಾಮದ ರೈತರ ಮನವಿಗೆ ಸ್ಪಂದಿಸಿದ ತಹಶೀಲ್ದಾರ್ ಈ ಕುರಿತು ಅಗತ್ಯ ಕ್ರಮ ಕೈಗೊಳ್ಳಲಾಗುವುದೆಂದು ಭರವಸೆ ನೀಡಿದರು.

‌ಯಮನೋರಿ ಸತಿಹಾಳ, ಆನಂದ ಕೊಣ್ಣೋರು, ಚನ್ನಬಸಪ್ಪ ಬಿರಾದಾರ, ರವಿ ಮಂಗಳೂರು, ಕಲ್ಲು ರಾವುರ್, ಶ್ರೀಶೈಲ್ ಸಾತಿಹಾಳ, ಸಿದ್ದನಗೌಡ ಗೊಡ್ಯಾಳ, ಬಸವರಾಜ ಬಿರಾದಾರ, ಬಸಪ್ಪ ಹರಿಜನ, ಶರನಗೌಡ ಅಂಬಳನೂರ್, ಕಾಶೀನಾಥ್ ಮಂಗಳೂರು ಹಾಗೂ ಸಿದ್ದನಗೌಡ ಕೊಣ್ಣೂರ ಇದ್ದರು.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಸಿಂಧನೂರು | ರೀಲ್ಸ್ ಮಾಡಲು ಹೋದ ಯುವಕ ನೀರು ಪಾಲು

ರೀಲ್ಸ್ ಮಾಡುವ ಉದ್ದೇಶದಿಂದ ಸ್ನೇಹಿತರಿಗೆ ವಿಡಿಯೋ ಮಾಡಲು ಹೇಳಿ ಈಜಲು ನದಿಗೆ...

ಗದಗ | ಆದ್ಯ ವಚನಕಾರ ದೇವರ ದಾಸಿಮಯ್ಯ: ರಾಘವೇಂದ್ರ ಕೊಪ್ಪಳ

"ಆದ್ಯ ವಚನಕಾರ ನೇಕಾರ ಸಂತ ದೇವರ ದಾಸಿಮಯ್ಯನವರು 10 ನೇ ಶತಮಾನದಲ್ಲಿ...

ಮಾರ್ಚ್ 25ರಂದು ಬೆಂಗಳೂರಿನ ಫ್ರೀಡಂ ಪಾರ್ಕ್ನಲ್ಲಿ ಬಲಗೈ ಜಾತಿಗಳ ಬೃಹತ್ ಹೋರಾಟ

ಬಾಗೇಪಲ್ಲಿ:-ಕರ್ನಾಟಕ ರಾಜ್ಯ ಬಲಗೈ ಜಾತಿಗಳ ಮಹಾ ಒಕ್ಕೂಟದ ವತಿಯಿಂದ ಒಳ ಮೀಸಲಾತಿ...

ಯುಪಿಎಸ್ಸಿ ರ‍್ಯಾಂಕ್‌ ವಿಜೇತ ವರುಣ್ ಗೌಡಗೆ ಸನ್ಮಾನ

ಕೋಲಾರ: ಯುಪಿಎಸ್ಸಿ ಪರೀಕ್ಷೆಯಲ್ಲಿ 462 ನೇ ರ‍್ಯಾಂಕ್‌ ಪಡದ ತಾಲೂಕಿನ ತ್ಯಾವನಹಳ್ಳಿ...