ವಿಜಯಪುರ | ಆಲಮಟ್ಟಿ ಜಲಾಶಯದ ನೀರು ಸಂಗ್ರಹ ಹೆಚ್ಚಳಕ್ಕೆ ಆಗ್ರಹ; ಜೂ.30ರಂದು ಬೃಹತ್‌ ರೈತ ಹೋರಾಟ

Date:

ಆಲಮಟ್ಟಿ ಜಲಾಶಯದಲ್ಲಿ 519.60 ಮೀಟರ್‌ನಿಂದ 524.256 ಮೀಟರ್‌ಗೆ ನೀರು ಸಂಗ್ರಹಿಸಲು ಗೇಟ್ ಅಳವಡಿಸಬೇಕೆಂದು ಆಗ್ರಹಿಸಿ ಜೂ.30ರಂದು ವಿಜಯಪುರ ಜಿಲ್ಲೆಯ ನಿಡಗುಂದಿಯಲ್ಲಿ ಬೃಹತ್ ಹೋರಾಟ ನಡೆಸಲು ರೈತ ಸಂಘಟನೆಗಳು ನಿರ್ಧರಿಸಿವೆ.

ವಿಜಯಪುರ ಜಿಲ್ಲಾ ಕನ್ನಡ ಸಾಹಿತ್ಯ ಪರಿಷತ್ ಭವನದಲ್ಲಿ ರೈತ ಸಂಘಟನೆಗಳು ಪ್ರಮುಖರು ಜಂಟಿ ಸುದ್ದಿಗೋಷ್ಠಿ ನಡೆಸಿ, ಆಲಮಟ್ಟಿ ಡ್ಯಾಮ್ ಎತ್ತರಿಸಲು ರಾಜ್ಯ ಹಾಗೂ ಕೇಂದ್ರ ಸರ್ಕಾರ ದೃಢ ನಿರ್ಧಾರ ಕೈಗೊಳ್ಳಬೇಕು ಎಂದು ಆಗ್ರಹಿಸಿದರು.

ರೈತ ಹೋರಾಟ ಸಮಿತಿ ಮುಖಂಡ ಅರವಿಂದ ಕುಲಕರ್ಣಿ ಹಾಗೂ ವಿಜಯ ಪೂಜಾರಿ ಮಾತನಾಡಿ, “ಆಲಮಟ್ಟಿ ಡ್ಯಾಮ್ ಎತ್ತರಿಸಿದರೆ ಹಿನ್ನೀರಿನಿಂದ ಮಹಾರಾಷ್ಟ್ರದ ಸಾಂಗ್ಲಿ, ಸತಾರಾ, ಮಿರಾಜ್ ಭಾಗದಲ್ಲಿ ಪ್ರವಾಹ ಉಂಟಾಗುತ್ತದೆಂದು ತಪ್ಪಾಗಿ ಅರ್ಥೈಸಿಕೊಂಡಿದ್ದು, ಉದ್ದೇಶಪೂರ್ವಕವಾಗಿ ವಿರೋಧಿಸುತ್ತಿದೆ. ಆದರೆ, 2019ನೇ ಸಾಲಿನಲ್ಲಿ ಮಹಾರಾಷ್ಟ್ರದಲ್ಲಿ ಪ್ರವಾಹ ಬಂದಾಗ ಆಲಮಟ್ಟಿ ಡ್ಯಾಂನಲ್ಲಿ 519.60 ಮೀಟರ್‌ಗೆ ನೀರು ನಿಲ್ಲಿಸಿದಾಗ ಹಿನ್ನೀರಿನಿಂದಲೇ ಪ್ರವಾಹ ಉಂಟಾಗಿದೆಯೆಂದು ಬೊಬ್ಬೆ ಹೊಡೆದಿದ್ದರು. ಅದೇ ವೇಳೆ ಮಹಾರಾಷ್ಟ್ರ ಸರ್ಕಾರವೇ ತಜ್ಞರ ಸಮಿತಿಯಿಂದ ಅಧ್ಯಯನ ಮಾಡಿಸಿದ್ದು, ಮಹಾರಾಷ್ಟ್ರದಲ್ಲಿನ ಪ್ರವಾಹಕ್ಕೆ ಆಲಮಟ್ಟಿ ಹಿನ್ನೀರು ಕಾರಣವಲ್ಲವೆಂದು ಸಮಿತಿ ವರದಿ ಸಲ್ಲಿಸಿದೆ. ಆದರೆ ಈಗ ತಕರಾರು ತೆಗೆಯುತ್ತಿದ್ದು, ಅಲ್ಲಿಯ ರೈತರನ್ನು ಎತ್ತಿಕಟ್ಟಿದೆ” ಎಂದು ಆರೋಪಿಸಿದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

“ರಾಜ್ಯ ಸರ್ಕಾರವು ಮಹಾರಾಷ್ಟ್ರದ ಕುತಂತ್ರಕ್ಕೆ ಸೊಪ್ಪು ಹಾಕದೆ ಉತ್ತರ ಕರ್ನಾಟಕದ ರೈತರ ಹಿತ ಕಾಪಾಡಲು ನ್ಯಾಯಾಧೀಕರಣ ತೀರ್ಪಿನಂತೆ ಕ್ರಮ ಕೈಗೊಳ್ಳಬೇಕು. ತಕ್ಷಣ ತೀರ್ಪಿನ ಕುರಿತಾಗಿ ಅಂತಿಮ ಅಧಿಸೂಚನೆ ಹೊರಡಿಸಲು ದಿಟ್ಟ ಹೆಜ್ಜೆ ಇಡಬೇಕು” ಎಂದು ಅರವಿಂದ ಕುಲಕರ್ಣಿ ಒತ್ತಾಯಿಸಿದರು.

ಈ ಸುದ್ದಿ ಓದಿದ್ದೀರಾ? ಬೆಳಗಾವಿ | ಗೊಬ್ಬರವನ್ನು ರೈತರಿಗೆ ವಿತರಿಸದೇ ಸ್ವತಃ ಅಧಿಕಾರಿಗಳೇ ಕಳ್ಳತನ ಮಾಡಿದ್ದಾರೆ ರೈತರ ಆರೋಪ

ಇದೇ ಸಂದರ್ಭದಲ್ಲಿ ರೈತ ಮುಖಂಡರು ಆಲಮಟ್ಟಿ ಡ್ಯಾಮ್ ಎತ್ತರದ ಬೇಡಿಕೆ ಆಗುವ ಬೃಹತ್ ಹೋರಾಟದ ಕುರಿತು ಕರಪತ್ರವನ್ನು ಬಿಡುಗಡೆಗೊಳಿಸಿದರು. ರೈತರ ಸಾಲವಾಗಿ ಹೋರಾಟದಲ್ಲಿ ಉತ್ತರ ಕರ್ನಾಟಕದ ಎಲ್ಲ ರೈತಪರ ಸಂಘಟನೆಗಳು, ದಲಿತ ಪರ ಸಂಘಟನೆಗಳು, ಕನ್ನಡಪರ ಸಂಘಟನೆಗಳು ಹಾಗೂ ಮಠಾಧೀಶರು ಸೇರಿದಂತೆ ಎಲ್ಲರೂ ಪಾಲ್ಗೊಳ್ಳಬೇಕೆಂದು ಮನವಿ ಮಾಡಿದರು.

ಪತ್ರಿಕಾಗೋಷ್ಠಿಯಲ್ಲಿ ಶಂಕರ ಈರೇಗೌಡರ, ಶಾರದಾ ಕಾಳಮ್ಮನವರ, ಸುಜಾತ ಬಂಡಿವಡ್ಡರ, ಗುಡುಮ ವಾಲಿಕಾರ, ಮಂಜುಳಾ ಅನುಮದ, ನಿಂಗವ್ವ ಸಿಂಗಾನವರ, ಆರ್ ಕೆ ಕಲಬುರಗಿ, ಬಸವರಾಜ ಗೋನಾಳ ಇದ್ದರು.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಸಿಂಧನೂರು | ರೀಲ್ಸ್ ಮಾಡಲು ಹೋದ ಯುವಕ ನೀರು ಪಾಲು

ರೀಲ್ಸ್ ಮಾಡುವ ಉದ್ದೇಶದಿಂದ ಸ್ನೇಹಿತರಿಗೆ ವಿಡಿಯೋ ಮಾಡಲು ಹೇಳಿ ಈಜಲು ನದಿಗೆ...

ಗದಗ | ಆದ್ಯ ವಚನಕಾರ ದೇವರ ದಾಸಿಮಯ್ಯ: ರಾಘವೇಂದ್ರ ಕೊಪ್ಪಳ

"ಆದ್ಯ ವಚನಕಾರ ನೇಕಾರ ಸಂತ ದೇವರ ದಾಸಿಮಯ್ಯನವರು 10 ನೇ ಶತಮಾನದಲ್ಲಿ...

ಮಾರ್ಚ್ 25ರಂದು ಬೆಂಗಳೂರಿನ ಫ್ರೀಡಂ ಪಾರ್ಕ್ನಲ್ಲಿ ಬಲಗೈ ಜಾತಿಗಳ ಬೃಹತ್ ಹೋರಾಟ

ಬಾಗೇಪಲ್ಲಿ:-ಕರ್ನಾಟಕ ರಾಜ್ಯ ಬಲಗೈ ಜಾತಿಗಳ ಮಹಾ ಒಕ್ಕೂಟದ ವತಿಯಿಂದ ಒಳ ಮೀಸಲಾತಿ...

ಯುಪಿಎಸ್ಸಿ ರ‍್ಯಾಂಕ್‌ ವಿಜೇತ ವರುಣ್ ಗೌಡಗೆ ಸನ್ಮಾನ

ಕೋಲಾರ: ಯುಪಿಎಸ್ಸಿ ಪರೀಕ್ಷೆಯಲ್ಲಿ 462 ನೇ ರ‍್ಯಾಂಕ್‌ ಪಡದ ತಾಲೂಕಿನ ತ್ಯಾವನಹಳ್ಳಿ...